Homeಮುಖಪುಟಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ 'ಈ ಪಕ್ಷಗಳ ಬೆಂಬಲಿತರ' ಸಾಧನೆ ಎಷ್ಟು?

ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ಸ್ವರಾಜ್‌ ಇಂಡಿಯಾ, SDPI, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಚುನಾಯಿತರಾದ ಮಾಹಿತಿ ಇಲ್ಲಿದೆ.

- Advertisement -
- Advertisement -

ಗ್ರಾಮೀಣ ಅಭಿವೃದ್ದಿಯ ಕನಸುಗಳೊಂದಿಗೆ ಗ್ರಾಮ ಪಂಚಾಯ್ತಿ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಎಂಬ ಮುಖ್ಯವಾಹಿನಿಯಲ್ಲಿರುವ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳು ಇಷ್ಟು ಸ್ಥಾನಗಳಲ್ಲಿ ಚುನಾಯಿತರಾಗಿದ್ದಾರೆ ಎಂದು ಘೋಷಿಸಿಕೊಂಡಿದ್ದಾರೆ. ಈ ಮೂರು ಪಕ್ಷಗಳಲ್ಲದೆ ಇತರ ಪಕ್ಷಗಳು ಸಹ ತಳಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು ಅದರ ವರದಿ ಇಲ್ಲಿದೆ.

ಸ್ವರಾಜ್‌ ಇಂಡಿಯಾ, ಎಸ್.ಡಿ.ಪಿ.ಐ, ಸಿಪಿಐ(ಎಂ), ಸಿಪಿಐ, ಬಹುಜನ ಸಮಾಜ ಪಕ್ಷ, ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ, ಆಮ್‌ ಆದ್ಮಿ ಪಕ್ಷ ಸೇರಿ ಹಲವು ಪಕ್ಷಗಳ ಬೆಂಬಲಿಗರು ಹಲವಾರು ಕಡೆ ಚುನಾಯಿತರಾಗಿದ್ದಾರೆ.

ಸ್ವರಾಜ್‌ ಇಂಡಿಯಾ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಗಳು ಸ್ವರಾಜ್ ಇಂಡಿಯಾ ರಾಜಕೀಯ ಪಕ್ಷವಾಗಿ ಒಗ್ಗೂಡಿ ಚುನಾವಣೆ ಎದುರಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ‌ರವರು ಮಾತನಾಡಿ “ನಾವು ಒಟ್ಟು 3000ಕ್ಕೂ ಹೆಚ್ಚು ಜನರನ್ನು ಬೆಂಬಲಿಸಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಣಕ್ಕಿಳಿಸಿದೆವು. 1800ಕ್ಕೂ ಅಧಿಕ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಜನ ಆಯ್ಕೆಯಾಗಿದ್ದಾರೆಂದು” ಮಾಹಿತಿ ನೀಡಿದ್ದಾರೆ. ಅಲ್ಲದೇ ಪಾಂಡವಪುರ ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯ್ತಿಗಳಲ್ಲಿ ನಮ್ಮ ಅಭ್ಯರ್ಥಿಗಳೆ ಅಧಿಕಾರ ಹಿಡಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಎಸ್.ಡಿ.ಪಿ.ಐ

2015ರ ಗ್ರಾಮ ಪಂಚಾಯತ್ ಚುನಾವಣೆಗೆ ಹೋಲಿಸಿದರೆ ಅದಕ್ಕಿಂತ ಈ ಬಾರಿ 300 ಪಟ್ಟು ಅಧಿಕ ಸ್ಥಾನಗಳಲ್ಲಿ SDPI ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ ರಾಜ್ಯಧ್ಯಕ್ಷರಾದ ಇಲ್ಯಾಸ್‌ ತುಂಬೆಯವರು. ನಾನುಗೌರಿ ಜೊತೆ ಮಾತನಾಡಿದ ಅವರು, “ಒಟ್ಟು ರಾಜ್ಯದಾದ್ಯಂತ ನಮ್ಮ 221 ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಮೂರು ಗ್ರಾಮ ಪಂಚಾಯ್ತಿಗಳಲ್ಲಿ ನಾವು ಸ್ಪಷ್ಟ ಬಹುಮತ ಪಡೆದಿದ್ದೇವೆ. 10 ಗ್ರಾಮ ಪಂಚಾಯ್ತಿಗಳಲ್ಲಿ ಅಧ್ಯಕ್ಷರು ಯಾರಾಗಬೇಕು ಎಂದು ನಿರ್ಧರಿಸುವ ಸ್ಥಾನದಲ್ಲಿ SDPI ಇದೆ” ಎಂದಿದ್ದಾರೆ.

ಒಟ್ಟು ಜಯಗಳಿಸಿದವರಲ್ಲಿ ಶೇ.50ಕ್ಕಿಂತ ಹೆಚ್ಚು ಮಹಿಳೆಯರರಾಗಿದ್ದರೆ ಶೇ.20 ರಷ್ಟು ದಲಿತರು ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚಿನ ಗೆಲುವು ಸಾಧಿಸಿದ್ದೇವೆ. ಜಿಲ್ಲೆಯಲ್ಲಿ 485 ಕಡೆಗಳಲ್ಲಿ ಸ್ಪರ್ಧಿಸಿದ್ದು, 171 ಜನ ಜಯಶೀಲರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಳ್ಳೂರು, ಸಜೀಪ ನಡು ಮತ್ತು ಸಜೀಪ ಮುನ್ನೂರು ಗ್ರಾಮ ಪಂಚಾಯಿತಿಗಳು SDPI ತೆಕ್ಕೆಗೆ ಬಂದಿವೆ.

ಸಿಪಿಐ(ಎಂ)

ಭಾರತೀಯ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪಕ್ಷವು ಈ ಚುನಾವಣೆಯಲ್ಲಿ ಗಮನಾರ್ಹ ಸಾಧನೆಗೈದಿದೆ. ರಾಜ್ಯದ 20 ಜಿಲ್ಲೆಗಳ 70 ತಾಲೂಕುಗಳಲ್ಲಿ 726 ಅಭ್ಯರ್ಥಿಗಳು ಸಿಪಿಐ(ಎಂ) ಪಕ್ಷ ಮತ್ತು DYFI, SFI ಬೆಂಬಲದಿಂದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ 231 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಬಸವರಾಜು ಮಾಹಿತಿ ನೀಡಿದ್ದಾರೆ.

“ಈಗಾಗಲೇ ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನ ಮೂರು ಗ್ರಾಮ ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬಂದಿದೆ. ಅಲ್ಲಿನ ಇನ್ನೂ ಎರಡು ಗ್ರಾಮ ಪಂಚಾಯತ್‌ಗಳಲ್ಲಿ ಪಕ್ಷದ ಬೆಂಬಲಿತ ಸದಸ್ಯರು ಗೆದ್ದಿದ್ದಾರೆ. ಅವುಗಳೂ ಇತರ ಮಿತ್ರಪಕ್ಷಗಳ ಸಹಾಯದಿಂದ ನಮ್ಮ ತೆಕ್ಕೆಗೆ ಬರಲಿದೆ. ಗುಲ್ಬರ್ಗ ಜಿಲ್ಲೆಯ ಚಿಂಚೊಳಿ ಮತ್ತು ಅಳಂದ ತಾಲೂಕುಗಳ ಗ್ರಾಮಗಳಲ್ಲಿ ನಮ್ಮ ಮಿತ್ರಪಕ್ಷಗಳ ಸದಸ್ಯರ ಸಹಾಯದಿಂದ ಇನ್ನೂ ನಾಲ್ಕು ಪಂಚಾಯತ್‌ಗಳು ನಮ್ಮ ತೆಕ್ಕೆಗೆ ಬರಲಿದೆ” ಎಂದು ಅವರು ಹೇಳಿದ್ದಾರೆ.

ಸಿಪಿಐ

ಸಿಪಿಐ ಬೆಂಬಲಿತರು 350 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಅದರಲ್ಲಿ 88 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಅಲ್ಲದೆ ತರಿಕೆರೆ ತಾಲೂಕಿನ ಸಂತೆಊರು ಗ್ರಾಮ ಪಂಚಾಯತ್‌‌ನಲ್ಲಿ 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಪಡೆದು ಗ್ರಾಮಪಂಚಾಯತ್‌‌ ತೆಕ್ಕೆಗೆ ಪಡೆದಿದ್ದಾರೆ. ಅಲ್ಲದೆ ಬಂಟ್ವಾಳದ ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ಮೂರು ಸ್ಥಾನಗಳನ್ನು ಪಡೆದಿದ್ದು ಉಪಾಧಕ್ಷಸ್ಥಾನ ಒಳಿದು ಬರಲಿದೆ. ಇದಲ್ಲದೆ ತುಮಕೂರನ ಶಿರಾ ತಾಲೂಕಿನಲ್ಲಿ 17 ಸ್ಥಾನಗಳಲ್ಲಿ ಗೆದ್ದಿದ್ದಾರೆ.

ನಮ್ಮ ಪಕ್ಷದ ಪ್ರಭಾವವಿರುವ ಚಿಕ್ಕಮಗಳೂರಿನ ಕೆಲವು ಗ್ರಾಮ ಪಂಚಾಯತ್‌ನಲ್ಲಿ ಚುನಾವಣೆ ನಡೆದಿಲ್ಲ, ಇಲ್ಲವೆಂದರೆ ಅಲ್ಲೂ ಒಂದಷ್ಟು ಸ್ಥಾನಗಳು ಪಡೆಯುತ್ತಿದ್ದೆವು ಎಂದು ಪಕ್ಷದ ಮುಖಂಡರಾದ ಶಿವರಾಜ್ ಬಿರದಾರ್‌ ತಿಳಿಸಿದ್ದಾರೆ.

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾ

ವೆಲ್ಫೇರ್‌ ಪಾರ್ಟಿ ಆಫ್ ಇಂಡಿಯಾವು ಕರ್ನಾಟಕದ 10 ಜಿಲ್ಲೆಗಳಲ್ಲಿ 125 ಗ್ರಾಮ ಪಂಚಾಯಿತಿ ಸ್ಥಾನಗಳ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅವರಲ್ಲಿ 43 ಜನ ಜಯಗಳಿಸಿದ್ದಾರೆ ಎಂದು ಮಾಹಿತಿ ದೊರಕಿದೆ.

ಆಮ್ ಆದ್ಮಿ ಪಕ್ಷ

ಆಮ್ ಆದ್ಮಿ ಪಕ್ಷದಿಂದ 600 ಅಭ್ಯರ್ಥಿಗಳನ್ನು ಬೆಂಬಲಿಸಿದ್ದು, ಅದರಲ್ಲಿ 286 ಜನ ಚುನಾಯಿತರಾಗಿದ್ದಾರೆ. ಆಮ್ ಆದ್ಮಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೈದರಾಬಾದ್ ಕರ್ನಾಟಕ ಭಾಗ ಬೀದರ್, ಕಲ್ಬುರ್ಗಿ, ಬಾಗಲಕೋಟೆ, ವಿಜಯಪುರ, ಕೋಲಾರ ಉತ್ತರ ಕನ್ನಡ ಭಾಗದಲ್ಲಿ ಹೆಚ್ಚು ಜಯಗಳಿಸಿದ್ದಾರೆ.

ಈ ದೇಶದ ಕಾನೂನಿಗೆ ಗೌರವ ಕೊಟ್ಟ ಆಮ್ ಆದ್ಮಿ ಪಕ್ಷ ಎಲ್ಲಿಯೂ ಸಹ ಪಕ್ಷದ ಅಭ್ಯರ್ಥಿಗಳ ಎಂದು ಪ್ರಚಾರ ಮಾಡಲಿಲ್ಲ, ಆದರೆ ಗೆದ್ದಿರುವ ಎಲ್ಲಾ ಅಭ್ಯರ್ಥಿಗಳು ಆಮ್ ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರು ಎಂಬುದು ನಮ್ಮ ಹೆಮ್ಮೆಯಾಗಿದೆ. ಗ್ರಾಮ ಮಟ್ಟದಲ್ಲಿ ಬದಲಾವಣೆ ತರುತ್ತಾರೆ ಎನ್ನುವ ಭರವಸೆ ಇದೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ತಿಳಿಸಿದರು.

ಬಿಎಸ್‌ಪಿ

ಬಹುಜನನ ಸಮಾಜ ಪಕ್ಷವು ರಾಜ್ಯದ್ಯಂತ ಸುಮಾರು 525 ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿತ್ತು. ಅದರಲ್ಲಿ ಇದುವರೆಗೂ 236 ಜನ ಚುನಾಯಿತರಾಗಿದ್ದರೆಂದು ಬಿಎಸ್‌ಪಿ ಮುಖಂಡರಾದ ಕೃಷ್ಣಮೂರ್ತಿಯವರು ಮಾಹಿತಿ ನೀಡಿದ್ದಾರೆ.

ಅಲ್ಲದೆ SUCI, ಕರ್ನಾಟಕ ರಾಷ್ಟ್ರ ಸಮಿತಿ, ಸಿಪಿಐ (ಎಂಎಲ್ ಲಿಬರೇಷನ್), ಸಿಪಿಐ (ಎಂಎಲ್ ರೆಡ್‌ಸ್ಟಾರ್) ಪಕ್ಷಗಳು ಸಹ ಹಲವು ಅಭ್ಯರ್ಥಿಗಳನ್ನು ಬೆಂಬಲಿಸಿದ್ದವು. ಅವುಗಳ ಮಾಹಿತಿ ಪಡೆಯಲು ಸಂಪರ್ಕಿಸಿತ್ತಾದರೂ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಸಂಪರ್ಕ ಸಿಕ್ಕ ನಂತರ ಈ ವರದಿಯನ್ನು ಅಪ್‌ಡೇಟ್‌ ಮಾಡಲಾಗುವುದು.


ಇದನ್ನೂ ಓದಿ: ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....