Homeಮುಖಪುಟಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಭೂಮಿ ನೀಡಲು ಮುಂದಾದ ಅನಿವಾಸಿ ಭಾರತೀಯ

ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಭೂಮಿ ನೀಡಲು ಮುಂದಾದ ಅನಿವಾಸಿ ಭಾರತೀಯ

- Advertisement -
- Advertisement -

ಪಂಜಾಬ್‌ನ ಶಹೀದ್‌ ಭಗತ್‌ಸಿಂಗ್ ನಗರ ಜಿಲ್ಲೆಯಲ್ಲಿರುವ ಅನಿವಾಸಿ ಭಾರತೀಯರೊಬ್ಬರು, ಕರಾಳ ಕೃಷಿ ಕಾನೂನುಗಳ ವಿರುದ್ಧ ಒಂದು ವರ್ಷಕ್ಕೂ ಅಧಿಕ ಸಮಯದಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ ಮಡಿದ ಹುತಾತ್ಮ ರೈತರ ಸ್ಮಾರಕ ಭೂಮಿ ನೀಡಲು ಮುಂದಾಗಿದ್ದಾರೆ.

‘ನರೋವಾ ಪಂಜಾಬ್’ ಎಂಬ ಎನ್‌ಜಿಒ ನಡೆಸುತ್ತಿರುವ ಅಮೆರಿಕಾ ಮೂಲದ ಬರ್ಜಿಂದರ್‌ ಸಿಂಗ್‌ ಹುಸೇನ್‌ಪುರ್‌ ಶುಕ್ರವಾರ ಈ ಕುರಿತು ಮುಖ್ಯಮಂತ್ರಿ ಚರಂಜಿತ್‌ ಸಿಂಗ್‌ ಅವರಿಗೆ ಪತ್ರ ಬರೆದಿದ್ದಾರೆ. ‘ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ಮತ್ತು ಎಂಎಸ್‌ಪಿ ಜಾರಿಗಾಗಿ ದೆಹಲಿ ಗಡಿಗಳಲ್ಲಿ ರೈತರು ಮತ್ತು ಕಾರ್ಮಿಕರು ನಡೆಸುತ್ತಿರುವ ಹೋರಾಟ ಅಭೂತಪೂರ್ವವಾಗಿದೆ. ದೇಶದೆಲ್ಲಡೆ ಮಾತ್ರವಲ್ಲದೇ ಪ್ರಪಂಚದಾದ್ಯಂತ ಈ ಹೋರಾಟಕ್ಕೆ ಬೆಂಬಲ ಹರಿದುಬಂದಿದೆ. ಈ ಪ್ರತಿಭಟನೆಯಲ್ಲಿ ಈವರೆಗೆ ಸುಮಾರು 700ಕ್ಕೂ ಹೆಚ್ಚು ರೈತರು ಮತ್ತು ಕಾರ್ಮಿಕರು ಪ್ರಾಣ ತ್ಯಾಗ ಮಾಡಿದ್ದಾರೆ’ ಎಂದು ಹೇಳಿದ್ದಾರೆ.

‘ಈ ಐತಿಹಾಸಿಕ, ಮಹಾನ್‌ ಹೋರಾಟ ಮತ್ತು ತ್ಯಾಗವನ್ನು ಸ್ಮರಿಸಲು, ಅನನ್ಯವಾದ ಹಾಗೂ ವಿಶ್ವ ದರ್ಜೆಯ ಸ್ಮಾರಕವನ್ನು ನಿರ್ಮಿಸುವ ಅಗತ್ಯವಿದೆ ಎಂದಿರುವ ಬರ್ಜಿಂದರ್ ಪತ್ರದಲ್ಲಿ, ’ ಸಿಖ್‌, ಪಂಜಾಬಿ ಮತ್ತು ರೈತರ ಹೆಸರಿನಲ್ಲಿ ಸ್ಮಾರಕವನ್ನು ನಿರ್ಮಿಸಲು, ನಾನು ಶಹೀದ್‌ ಭಗತ್‌ಸಿಂಗ್‌ ನಗರ ಜಿಲ್ಲೆಯಲ್ಲಿನ ನನ್ನ ಭೂಮಿಯನ್ನು ನೀಡುತ್ತೇನೆ’ ಎಂದು ವಿನಂತಿಸಿಕೊಂಡಿದ್ದಾರೆ.

ನವೆಂಬರ್ 19, ಗುರುನಾನಕ್ ದೇವ್ ಜಯಂತಿಯಂದು ಕೇಂದ್ರ ಸರ್ಕಾರವು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿತ್ತು. ಅದೇ ದಿನ ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ ಮೃತಪಟ್ಟ ರೈತರಿಗಾಗಿ ಸ್ಮಾರಕವನ್ನು ನಿರ್ಮಿಸುವುದಾಗಿ ಪಂಜಾಬ್ ಸಿಎಂ ಚನ್ನಿ ಘೋಷಿಸಿದ್ದರು.

ಹುತಾತ್ಮ ರೈತರ ಕುಟುಂಬಕ್ಕೆ ತೆಲಂಗಾಣ ಮತ್ತು ಪಂಜಾಬ್ ಸರ್ಕಾರಗಳು ಪರಿಹಾರ ಘೋಷಿಸಿವೆ. ಆದರೆ ಕೇಂದ್ರ ಸರ್ಕಾರ ಹುತಾತ್ಮ ರೈತರ ಕುರಿತು ತಮಗೆ ಮಾಹಿತಿಯಿಲ್ಲ ಎಂದು ಉಡಾಫೆ ತೋರಿದೆ. ಇದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದು 600ಕ್ಕೂ ಹೆಚ್ಚು ರೈತರ ದಾಖಲಾತಿಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ನೀವು ಇದಕ್ಕಾಗಿ ಸಾವಿರಾರು ಕೋಡಿ ರೂ ಖರ್ಚು ಮಾಡಬೇಕಿಲ್ಲ, ಕನಿಷ್ಠ ಒಂದು ಸಂತಾಪ ಸೂಚಿಸಿ ಎಂದು ಪ್ರಧಾನಿಗೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...