Homeಮುಖಪುಟಶೃಂಗಸಭೆ: ಮೋದಿ ಭೇಟಿ ವಿರೋಧಿಸಿ ಅನಿವಾಸಿ ಭಾರತೀಯರ ಪ್ರತಿಭಟನೆ

ಶೃಂಗಸಭೆ: ಮೋದಿ ಭೇಟಿ ವಿರೋಧಿಸಿ ಅನಿವಾಸಿ ಭಾರತೀಯರ ಪ್ರತಿಭಟನೆ

- Advertisement -
- Advertisement -

ಜಾಗತಿಕ ತಾಪಮಾನ ತಡೆಗಾಗಿ ಗ್ಲಾಸ್ಗೋದಲ್ಲಿ ನಡೆದ ಸಿಒಪಿ26 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಂದರ್ಭದಲ್ಲಿ ಯುನೈಟೆಡ್‌ ಕಿಮ್‌ಡಮ್‌‌ (ಯುಕೆ)ನಲ್ಲಿರುವ ದೊಡ್ಡ ಸಂಖ್ಯೆಯ ಭಾರತೀಯರು ಐತಿಹಾಸಿಕ ರೈತ ಚಳವಳಿಯನ್ನು ಬೆಂಬಲಿಸಿ, ಮೋದಿಯವರನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.

“ಭಾರತೀಯ ರೈತರ ಹೋರಾಟವೇ ನಮ್ಮ ಹೋರಾಟ” ಎಂಬ ಪ್ಲೆಕಾರ್ಡ್‌ಗಳನ್ನು ಪ್ರದರ್ಶಿಸಲಾಯಿತು. “ನೂರಾರು ಹೋರಾಟಗಾರರನ್ನು ಮೋದಿ ಕೊಂದಿದ್ದಾರೆ” ಎಂದು ಆರೋಪಿಸಿ, ಭಾರತೀಯ ಮೂಲದ ನಿವಾಸಿಗಳು ಪ್ರತಿಭಟನೆ ನಡೆಸಿದ್ದು, ‘ಸ್ಕಾಟ್‌ಲ್ಯಾಂಡ್‌ಗೆ ಮೋದಿ ಬರಬಾರದು’ ಆಗ್ರಹಿಸಿದ್ದಾರೆ.

ಕೃಷಿಯನ್ನು ಕಾರ್ಪೊರೇಟ್‌ ಕೈಗೆ ನೀಡುತ್ತಿರುವುದನ್ನು ವಿರೋಧಿಸಿ ರೈತರು ಹೋರಾಟ ಮಾಡುತ್ತಿದ್ದಾರೆ. ಎಂಎಸ್‌ಪಿ ನಿಗದಿಪಡಿಸಬೇಕೆಂದು ಹೋರಾಡುತ್ತಿದ್ದಾರೆ.

ವಿವಿಧ ದೇಶಗಳಲ್ಲಿರುವ ಭಾರತೀಯರು ರೈತ ಹೋರಾಟವನ್ನು ಬೆಂಬಲಿಸುತ್ತಿರುವುದನ್ನು ಸಂಯುಕ್ತ ಕಿಸಾನ್‌ ಮೋರ್ಚಾ ಶ್ಲಾಘಿಸಿದೆ. ಇದು ಸರ್ಕಾರದ ಮೇಲೆ ಒತ್ತಡ ತರಲು ಸಹಕರಿಸಲಿದೆ. ಹೆಚ್ಚಿನ ಸಮಯ ವ್ಯರ್ಥ ಮಾಡದೆ ರೈತರ ಬೇಡಿಕೆಯನ್ನು ಸರ್ಕಾರ ಸ್ವೀಕರಿಸಬೇಕು ಎಂದು ಎಸ್‌ಕೆಎಂ ಆಗ್ರಹಿಸಿದೆ.

ಇದನ್ನೂ ಓದಿರಿ: ರೈತ ಹೋರಾಟ: ಪ್ರತಿಭಟನಾ ಸ್ಥಳವನ್ನು ತೊರೆಯುವುದಿಲ್ಲ ಎಂದ ನಿಹಾಂಗ್ ಸದಸ್ಯರು

ರೈತರ ಹೋರಾಟವನ್ನು ತಡೆಯಲು ಸರ್ಕಾರ ಇನ್ನಿಲ್ಲದಂತೆ ಪ್ರಯತ್ನಿಸುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ರೈತರ ಮೇಲೆ ಆಗುತ್ತಿರುವ ಕ್ರೌರ್ಯವನ್ನು ಕಂಡು ಕಾಣದಂತೆ ಇದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್‌ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರ ಅವರ ಪುತ್ರ ಆಶೀಶ್‌ನನ್ನು ಬಂಧಿಸಲಾಗಿದೆ. ಈ ಘಟನೆಯನ್ನೇ ನೆಪ ಮಾಡಿಕೊಂಡು ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ಬಲವಂತವಾಗಿ ಹೊರಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ.

“ದೆಹಲಿ ಗಡಿಗಳಿಂದ ಪ್ರತಿಭಟನಾಕಾರರನ್ನು ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಒಕ್ಕೂಟ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.

ರೈತರನ್ನು ಗಡಿಗಳಿಂದ ಹೊರ ಹಾಕಲು ಪ್ರಯತ್ನಿಸಿದರೆ, ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು “ಗಲ್ಲಾ ಮಂಡಿಗಳನ್ನಾಗಿ” (ಧಾನ್ಯ ಮಾರುಕಟ್ಟೆಗಳು) ಆಗಿ ಪರಿವರ್ತಿಸಬೇಕಾಗುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್‌ ಟಿಕಾಯತ್ ಹೇಳಿದ್ದಾರೆ.

ಹೋರಾಟಕ್ಕೆ ಒಂದು ವರ್ಷಗಳಾಗಿದ್ದು, ಸುದೀರ್ಘ ಹೋರಾಟದ ಫಲವಾಗಿ ರೈತರಿಗೆ ವಿಶ್ವದ ಮೂಲೆಮೂಲೆಗಳಿಂದ ಬೆಂಬಲಗಳು ವ್ಯಕ್ತವಾಗುತ್ತಿವೆ. ಮೋದಿಯವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಅಲ್ಲಿನ ಭಾರತೀಯರು ಪ್ರತಿಭಟನೆ ನಡೆಸಿದ್ದರು.


ಇದನ್ನೂ ಓದಿರಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...