Homeಮುಖಪುಟಶೃಂಗಸಭೆ: ಮೋದಿ ಭೇಟಿ ವಿರೋಧಿಸಿ ಅನಿವಾಸಿ ಭಾರತೀಯರ ಪ್ರತಿಭಟನೆ

ಶೃಂಗಸಭೆ: ಮೋದಿ ಭೇಟಿ ವಿರೋಧಿಸಿ ಅನಿವಾಸಿ ಭಾರತೀಯರ ಪ್ರತಿಭಟನೆ

- Advertisement -
- Advertisement -

ಜಾಗತಿಕ ತಾಪಮಾನ ತಡೆಗಾಗಿ ಗ್ಲಾಸ್ಗೋದಲ್ಲಿ ನಡೆದ ಸಿಒಪಿ26 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಂದರ್ಭದಲ್ಲಿ ಯುನೈಟೆಡ್‌ ಕಿಮ್‌ಡಮ್‌‌ (ಯುಕೆ)ನಲ್ಲಿರುವ ದೊಡ್ಡ ಸಂಖ್ಯೆಯ ಭಾರತೀಯರು ಐತಿಹಾಸಿಕ ರೈತ ಚಳವಳಿಯನ್ನು ಬೆಂಬಲಿಸಿ, ಮೋದಿಯವರನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.

“ಭಾರತೀಯ ರೈತರ ಹೋರಾಟವೇ ನಮ್ಮ ಹೋರಾಟ” ಎಂಬ ಪ್ಲೆಕಾರ್ಡ್‌ಗಳನ್ನು ಪ್ರದರ್ಶಿಸಲಾಯಿತು. “ನೂರಾರು ಹೋರಾಟಗಾರರನ್ನು ಮೋದಿ ಕೊಂದಿದ್ದಾರೆ” ಎಂದು ಆರೋಪಿಸಿ, ಭಾರತೀಯ ಮೂಲದ ನಿವಾಸಿಗಳು ಪ್ರತಿಭಟನೆ ನಡೆಸಿದ್ದು, ‘ಸ್ಕಾಟ್‌ಲ್ಯಾಂಡ್‌ಗೆ ಮೋದಿ ಬರಬಾರದು’ ಆಗ್ರಹಿಸಿದ್ದಾರೆ.

ಕೃಷಿಯನ್ನು ಕಾರ್ಪೊರೇಟ್‌ ಕೈಗೆ ನೀಡುತ್ತಿರುವುದನ್ನು ವಿರೋಧಿಸಿ ರೈತರು ಹೋರಾಟ ಮಾಡುತ್ತಿದ್ದಾರೆ. ಎಂಎಸ್‌ಪಿ ನಿಗದಿಪಡಿಸಬೇಕೆಂದು ಹೋರಾಡುತ್ತಿದ್ದಾರೆ.

ವಿವಿಧ ದೇಶಗಳಲ್ಲಿರುವ ಭಾರತೀಯರು ರೈತ ಹೋರಾಟವನ್ನು ಬೆಂಬಲಿಸುತ್ತಿರುವುದನ್ನು ಸಂಯುಕ್ತ ಕಿಸಾನ್‌ ಮೋರ್ಚಾ ಶ್ಲಾಘಿಸಿದೆ. ಇದು ಸರ್ಕಾರದ ಮೇಲೆ ಒತ್ತಡ ತರಲು ಸಹಕರಿಸಲಿದೆ. ಹೆಚ್ಚಿನ ಸಮಯ ವ್ಯರ್ಥ ಮಾಡದೆ ರೈತರ ಬೇಡಿಕೆಯನ್ನು ಸರ್ಕಾರ ಸ್ವೀಕರಿಸಬೇಕು ಎಂದು ಎಸ್‌ಕೆಎಂ ಆಗ್ರಹಿಸಿದೆ.

ಇದನ್ನೂ ಓದಿರಿ: ರೈತ ಹೋರಾಟ: ಪ್ರತಿಭಟನಾ ಸ್ಥಳವನ್ನು ತೊರೆಯುವುದಿಲ್ಲ ಎಂದ ನಿಹಾಂಗ್ ಸದಸ್ಯರು

ರೈತರ ಹೋರಾಟವನ್ನು ತಡೆಯಲು ಸರ್ಕಾರ ಇನ್ನಿಲ್ಲದಂತೆ ಪ್ರಯತ್ನಿಸುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ರೈತರ ಮೇಲೆ ಆಗುತ್ತಿರುವ ಕ್ರೌರ್ಯವನ್ನು ಕಂಡು ಕಾಣದಂತೆ ಇದ್ದಾರೆ.

ಉತ್ತರ ಪ್ರದೇಶದ ಲಖಿಂಪುರ್‌ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರ ಅವರ ಪುತ್ರ ಆಶೀಶ್‌ನನ್ನು ಬಂಧಿಸಲಾಗಿದೆ. ಈ ಘಟನೆಯನ್ನೇ ನೆಪ ಮಾಡಿಕೊಂಡು ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ಬಲವಂತವಾಗಿ ಹೊರಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ.

“ದೆಹಲಿ ಗಡಿಗಳಿಂದ ಪ್ರತಿಭಟನಾಕಾರರನ್ನು ಬಲವಂತವಾಗಿ ಹೊರಹಾಕಲು ಪ್ರಯತ್ನಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಒಕ್ಕೂಟ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.

ರೈತರನ್ನು ಗಡಿಗಳಿಂದ ಹೊರ ಹಾಕಲು ಪ್ರಯತ್ನಿಸಿದರೆ, ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು “ಗಲ್ಲಾ ಮಂಡಿಗಳನ್ನಾಗಿ” (ಧಾನ್ಯ ಮಾರುಕಟ್ಟೆಗಳು) ಆಗಿ ಪರಿವರ್ತಿಸಬೇಕಾಗುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್‌ ಟಿಕಾಯತ್ ಹೇಳಿದ್ದಾರೆ.

ಹೋರಾಟಕ್ಕೆ ಒಂದು ವರ್ಷಗಳಾಗಿದ್ದು, ಸುದೀರ್ಘ ಹೋರಾಟದ ಫಲವಾಗಿ ರೈತರಿಗೆ ವಿಶ್ವದ ಮೂಲೆಮೂಲೆಗಳಿಂದ ಬೆಂಬಲಗಳು ವ್ಯಕ್ತವಾಗುತ್ತಿವೆ. ಮೋದಿಯವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿಯೂ ಅಲ್ಲಿನ ಭಾರತೀಯರು ಪ್ರತಿಭಟನೆ ನಡೆಸಿದ್ದರು.


ಇದನ್ನೂ ಓದಿರಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...