ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದನ್ನು ವಿರೋಧಿಸಿ ‘ಮನೆಗೊಂದು ಕೋಳಿ, ಊರಿಗೊಂದು ಕುರಿ’ ಸಂಗ್ರಹ ಅಭಿಯಾನಕ್ಕೆ ಇಂದು (ಡಿ.19) ಚಾಲನೆ ನೀಡಲಾಗಿದೆ.
‘ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಎಂಬ ಘೋಷಣೆಯಡಿ ಮಂಡ್ಯದ ಹಳೆ ಬೂದನೂರಿನಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವಿ ಅವರು ಕೋಳಿ ಸಂಗ್ರಹಕ್ಕೆ ಚಾಲನೆ ನೀಡಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದನ್ನು ವಿರೋಧಿಸಿ 'ಮನೆಗೊಂದು ಕೋಳಿ, ಊರಿಗೊಂದು ಕುರಿ' ಸಂಗ್ರಹ ಅಭಿಯಾನಕ್ಕೆ ಮಂಡ್ಯದಲ್ಲಿ ಚಾಲನೆ ನೀಡಲಾಗಿದೆ. pic.twitter.com/AU0rvPbQzG
— Naanu Gauri (@naanugauri) December 19, 2024
ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಕರುನಾಡು ಸೇವಕರ ಸಂಘಟನೆಯ ಎಂ.ಬಿ.ನಾಗಣ್ಣಗೌಡ ಅವರು, “ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ಬಡಿಸಲು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಕುರಿ, ಕೋಳಿ ಸಂಗ್ರಹಿಸುವಂತೆ ಕರೆ ನೀಡಿದ್ದೇವೆ. ಸಾಹಿತ್ಯ ಸಮ್ಮೇಳನ ನಡೆಯುವ ಸ್ಥಳದಿಂದ 1 ಕಿ.ಮೀ ದೂರದಲ್ಲಿರುವ ಮಂಡ್ಯದ ಹಳೆ ಬೂದನೂರಿನಲ್ಲಿ ಕುರಿ, ಕೋಳಿ ಸಂಗ್ರಹ ಪ್ರಾರಂಭಿಸಿದ್ದೇವೆ ಎಂದು ಹೇಳಿದ್ದಾರೆ.
ರಾಜ್ಯದಾದ್ಯಂತ ಸಮಾನ ಮನಸ್ಕರು ಕುರಿ, ಕೋಳಿ ಕೊಡುತ್ತೇವೆ ಎಂದು ಮುಂದೆ ಬಂದಿದ್ದಾರೆ. ಸುಮಾರು 5-6 ಟನ್ ಕೋಳಿ ಸಂಗ್ರಹವಾಗುವ ನಿರೀಕ್ಷೆಯಿದೆ. ಇದರಿಂದ 50 ಸಾವಿರದಿಂದ 1 ಲಕ್ಷ ಜನರಿಗೆ ಮಾಂಸಾಹಾರ ನೀಡಬಹುದು ಎಂದು ತಿಳಿಸಿದ್ದಾರೆ.

ಸರ್ಕಾರದವರು ಸಾಹಿತ್ಯ ಸಮ್ಮೇಳನದ ಆಹಾರ ಸಮಿತಿ ಮೂಲಕ ಮಾಂಸಾಹಾರ ನೀಡಲು ಮುಂದೆ ಬಂದರೆ ನಾವು ಸಂಗ್ರಹಿಸಿರುವ ಸಾಮಾಗ್ರಿಗಳನ್ನು ಅವರಿಗೆ ನೀಡುತ್ತೇವೆ. ಇಲ್ಲದಿದ್ದರೆ ನಾವೇ ಮಾಂಸಾಹಾರ ತಯಾರಿಸಿ ಸಾಹಿತ್ಯ ಸಮ್ಮೇಳನದ ಮೈದಾನದಲ್ಲೇ ವಿತರಿಸುತ್ತೇವೆ ಎಂದು .ನಾಗಣ್ಣಗೌಡ ಹೇಳಿದ್ದಾರೆ.
ಇದನ್ನೂ ಓದಿ : “ಲೈಂಗಿಕ ಕಿರುಕುಳ ನೀಡಿರುವುದನ್ನು ಸ್ವತಃ ಯಡಿಯೂರಪ್ಪ ಒಪ್ಪಿದ್ದಾರೆ” : ಹೈಕೋರ್ಟ್ನಲ್ಲಿ ಸರ್ಕಾರದ ವಾದ


