Homeಕರ್ನಾಟಕ'ಆಹಾರ ಅಸಮಾನತೆ' ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ...

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

'ಅಂಬೇಡ್ಕರ್ ಚೌಡಾರ್ ಕೆರೆ ನೀರು ಕುಡಿದಂಗಾಯಿತು' ಎಂದ ಹೋರಾಟಗಾರರು

- Advertisement -
- Advertisement -

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಶಸ್ವಿಯಾಗಿ ‘ಮಾಂಸಾಹಾರ’ ವಿತರಿಸುವ ಮೂಲಕ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸಮಾನ ಮನಸ್ಕರು ಹೊಸ ಇತಿಹಾಸ ಬರೆದರು.

ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಮಾಂಸಾಹಾರ ವಿತರಿಸಲಾಗಿದೆ. ‘ಆಹಾರ ಕ್ರಾಂತಿ’ಯ ಭಾಗವಾಗಿ ಒಂದೆಡೆ ಹೋರಾಟಗಾರರು ಬಾಡೂಟ ಹಂಚಿದರೆ, ಮತ್ತೊಂದೆಡೆ ಒತ್ತಡಕ್ಕೆ ಮಣಿದ ಸರ್ಕಾರ ಅಧಿಕೃತವಾಗಿ ಮೊಟ್ಟೆ ವಿತರಿಸುವ ಮೂಲಕ ‘ಆಹಾರ ಅಸಮಾನತೆ’ಯನ್ನು ಮುರಿಯಿತು. ಈ ಮೂಲಕ ಮಂಡ್ಯದ ಸಮ್ಮೇಳನ ಹೊಸ ಇತಿಹಾಸ ಬರೆಯಿತು.

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಸಮ್ಮೇಳನದ ನಿಯಮಗಳನ್ನು ಬಿಡುಗಡೆ ಮಾಡಿದಾಗ ಅದರಲ್ಲಿ ತಂಬಾಕು, ಮದ್ಯದ ಜೊತೆ ಮಾಂಸಾಹಾರವನ್ನು ನಿಷೇಧಿಸಿ, ಬಹುಜನರ ಆಹಾರವನ್ನು ಕೀಳಾಗಿ ಕಂಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕಸಾಪ ತನ್ನ ನಿಯಮವನ್ನು ಮಾರ್ಪಡಿಸುವಂತೆ ಆಗ್ರಹಿಸಲಾಗಿತ್ತು.

ಕಸಾಪ ಮಾಂಸಾಹಾರ ನಿಷೇಧಿಸಿ ನಿಯಮ ಪ್ರಕಟಿಸಿದ ಮರುದಿನವೇ ಮಂಡ್ಯದಲ್ಲಿ ಬಾಡೂಟ ಬಳಗದವರು ಸಭೆ ನಡೆಸಿ ಸರ್ಕಾರ ಈ ಬಾರಿ ಸಮ್ಮೇಳನದಲ್ಲಿ ಮಾಂಸಾಹಾರ ನೀಡಲೇಬೇಕು. ಇಲ್ಲದಿದ್ದರೆ, ನಾವೇ ಕುರಿ, ಕೋಳಿ ಸಂಗ್ರಹಿಸಿ ಬಾಡೂಟ ಹಂಚುತ್ತೀವಿ ಎಂದು ಸವಾಲು ಹಾಕಿದ್ದರು.

ಸರ್ಕಾರ ಸಮ್ಮೇಳನ ಪ್ರಾರಂಭವಾಗುವವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೂ, ಪ್ರಗತಿಪರ ಮತ್ತು ಸಮಾನ ಮನಸ್ಕರು ತಾವು ಹೇಳಿದಂತೆ ಕುರಿ, ಕೋಳಿ ಸಂಗ್ರಹಕ್ಕೆ ಕರೆ ಕೊಟ್ಟರು.

ಸಮ್ಮೇಳನದ ಹಿಂದಿನ ದಿನ (ಡಿ.19ರಂದು) ಮಂಡ್ಯದ ಹಳೆ ಬೂದನೂರು ಗ್ರಾಮದಲ್ಲಿ ‘ಮನೆಗೊಂದು ಕೋಳಿ, ಊರಿಗೊಂದು ಕುರಿ’ ಹೆಸರಿನಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ ನೀಡಲಾಯಿತು. ‘ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಅಭಿಯಾನದ ಮೂಲಕ ಕುರಿ, ಕೋಳಿ ಸಂಗ್ರಹಿಸಿ ಸಮ್ಮೇಳನದ ಕಡೆಯ ದಿನವಾದ ನಿನ್ನೆ (ಡಿ.22) ಮಾಂಸಾಹಾರ ವಿತರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಅವರು, “ಸುಮಾರು 500 ಜನರಿಗೆ 800 ಮೊಟ್ಟೆ, ಕೋಳಿ ಸಾರು, ಮುದ್ದೆ ಸೇರಿದಂತೆ ಮಂಡ್ಯ ಶೈಲಿಯ ಮಾಂಸಾಹಾರವನ್ನು ವಿತರಿಸಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಸರ್ಕಾರ ಕೂಡ ಕಡೆಯ ಕ್ಷಣದಲ್ಲಿ ಅಧಿಕೃತವಾಗಿ ಮೊಟ್ಟೆ ವಿತರಿಸಿದೆ. ಈ ಮೂಲಕ ಹೊಸ ಇತಿಹಾಸ ಬರೆದಿದ್ದೇವೆ” ಎಂದಿದ್ದಾರೆ.

“ಮಾಂಸಾಹಾರ ವಿತರಣೆಗೆ ಮಂಡ್ಯದ ಶೇ.90ರಷ್ಟು ಜನರ ಬೆಂಬಲ ಇತ್ತು. ನಾವು ಮಾಂಸಾಹಾರ ವಿತರಿಸಿರುವುದು ಕೇವಲ ಜನರ ಸಂತೃಪ್ತಿಗಲ್ಲ. ಇದೊಂದು ಸಾಮಾಜಿಕ ಮಹತ್ವ ಸಾರಿದ ಹೋರಾಟ. ಈ ಮೂಲಕ ನಾವು 100 ವರ್ಷಗಳ ಆಹಾರ ಅಸಮಾನತೆಯನ್ನು ತೊಡೆದು ಹಾಕಿದ್ದೇವೆ. ಇದು ‘ಅಂಬೇಡ್ಕರ್ ಅವರು ಚೌಡಾರ್ ಕೆರೆ ನೀರು ಕುಡಿದಂತಾಗಿದೆ’ ಎಂದು ಹೇಳಿದ್ದಾರೆ.

“ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. ಅಲ್ಲೂ ಆಹಾರ ಅಸಮಾನತೆಯ ವಿರುದ್ದದ ಅಭಿಯಾನವನ್ನು ಮುಂದುವರೆಸುವಂತೆ ಅಲ್ಲಿನ ಪ್ರಗತಿಪರರು ಮತ್ತು ಸಮಾನ ಮನಸ್ಕರಿಗೆ ನಾವು ಪತ್ರ ಬರೆದು ಮನವಿ ಮಾಡುತ್ತೇವೆ. ಮಾಂಸಾಹಾರ ನಿಷೇಧಿಸುವ ಮೂಲಕ ಸರ್ಕಾರವೇ ಮುಂದೆ ನಿಂತು ‘ಆಹಾರ ಅಸಮಾನತೆ, ಅಸ್ಪೃಶ್ಯತೆ ಆಚರಿಸಬಾರದು. ಮುಂದಿನ ಸಮ್ಮೇಳನದಲ್ಲಾದರೂ ಸರಿಯಾದ ರೀತಿಯಲ್ಲಿ ಮಾಂಸಾಹಾರ ವಿತರಿಸಬೇಕು ಎಂದು ಕೃಷ್ಣೇಗೌಡ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಕ್ಕೆ ನಮ್ಮ ಬಳಿ ಸಾಕ್ಷಿ ಇದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...