Homeಕರ್ನಾಟಕ'ಆಹಾರ ಅಸಮಾನತೆ' ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ...

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

'ಅಂಬೇಡ್ಕರ್ ಚೌಡಾರ್ ಕೆರೆ ನೀರು ಕುಡಿದಂಗಾಯಿತು' ಎಂದ ಹೋರಾಟಗಾರರು

- Advertisement -
- Advertisement -

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಶಸ್ವಿಯಾಗಿ ‘ಮಾಂಸಾಹಾರ’ ವಿತರಿಸುವ ಮೂಲಕ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸಮಾನ ಮನಸ್ಕರು ಹೊಸ ಇತಿಹಾಸ ಬರೆದರು.

ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಮಾಂಸಾಹಾರ ವಿತರಿಸಲಾಗಿದೆ. ‘ಆಹಾರ ಕ್ರಾಂತಿ’ಯ ಭಾಗವಾಗಿ ಒಂದೆಡೆ ಹೋರಾಟಗಾರರು ಬಾಡೂಟ ಹಂಚಿದರೆ, ಮತ್ತೊಂದೆಡೆ ಒತ್ತಡಕ್ಕೆ ಮಣಿದ ಸರ್ಕಾರ ಅಧಿಕೃತವಾಗಿ ಮೊಟ್ಟೆ ವಿತರಿಸುವ ಮೂಲಕ ‘ಆಹಾರ ಅಸಮಾನತೆ’ಯನ್ನು ಮುರಿಯಿತು. ಈ ಮೂಲಕ ಮಂಡ್ಯದ ಸಮ್ಮೇಳನ ಹೊಸ ಇತಿಹಾಸ ಬರೆಯಿತು.

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಸಮ್ಮೇಳನದ ನಿಯಮಗಳನ್ನು ಬಿಡುಗಡೆ ಮಾಡಿದಾಗ ಅದರಲ್ಲಿ ತಂಬಾಕು, ಮದ್ಯದ ಜೊತೆ ಮಾಂಸಾಹಾರವನ್ನು ನಿಷೇಧಿಸಿ, ಬಹುಜನರ ಆಹಾರವನ್ನು ಕೀಳಾಗಿ ಕಂಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕಸಾಪ ತನ್ನ ನಿಯಮವನ್ನು ಮಾರ್ಪಡಿಸುವಂತೆ ಆಗ್ರಹಿಸಲಾಗಿತ್ತು.

ಕಸಾಪ ಮಾಂಸಾಹಾರ ನಿಷೇಧಿಸಿ ನಿಯಮ ಪ್ರಕಟಿಸಿದ ಮರುದಿನವೇ ಮಂಡ್ಯದಲ್ಲಿ ಬಾಡೂಟ ಬಳಗದವರು ಸಭೆ ನಡೆಸಿ ಸರ್ಕಾರ ಈ ಬಾರಿ ಸಮ್ಮೇಳನದಲ್ಲಿ ಮಾಂಸಾಹಾರ ನೀಡಲೇಬೇಕು. ಇಲ್ಲದಿದ್ದರೆ, ನಾವೇ ಕುರಿ, ಕೋಳಿ ಸಂಗ್ರಹಿಸಿ ಬಾಡೂಟ ಹಂಚುತ್ತೀವಿ ಎಂದು ಸವಾಲು ಹಾಕಿದ್ದರು.

ಸರ್ಕಾರ ಸಮ್ಮೇಳನ ಪ್ರಾರಂಭವಾಗುವವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೂ, ಪ್ರಗತಿಪರ ಮತ್ತು ಸಮಾನ ಮನಸ್ಕರು ತಾವು ಹೇಳಿದಂತೆ ಕುರಿ, ಕೋಳಿ ಸಂಗ್ರಹಕ್ಕೆ ಕರೆ ಕೊಟ್ಟರು.

ಸಮ್ಮೇಳನದ ಹಿಂದಿನ ದಿನ (ಡಿ.19ರಂದು) ಮಂಡ್ಯದ ಹಳೆ ಬೂದನೂರು ಗ್ರಾಮದಲ್ಲಿ ‘ಮನೆಗೊಂದು ಕೋಳಿ, ಊರಿಗೊಂದು ಕುರಿ’ ಹೆಸರಿನಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ ನೀಡಲಾಯಿತು. ‘ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಅಭಿಯಾನದ ಮೂಲಕ ಕುರಿ, ಕೋಳಿ ಸಂಗ್ರಹಿಸಿ ಸಮ್ಮೇಳನದ ಕಡೆಯ ದಿನವಾದ ನಿನ್ನೆ (ಡಿ.22) ಮಾಂಸಾಹಾರ ವಿತರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಅವರು, “ಸುಮಾರು 500 ಜನರಿಗೆ 800 ಮೊಟ್ಟೆ, ಕೋಳಿ ಸಾರು, ಮುದ್ದೆ ಸೇರಿದಂತೆ ಮಂಡ್ಯ ಶೈಲಿಯ ಮಾಂಸಾಹಾರವನ್ನು ವಿತರಿಸಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಸರ್ಕಾರ ಕೂಡ ಕಡೆಯ ಕ್ಷಣದಲ್ಲಿ ಅಧಿಕೃತವಾಗಿ ಮೊಟ್ಟೆ ವಿತರಿಸಿದೆ. ಈ ಮೂಲಕ ಹೊಸ ಇತಿಹಾಸ ಬರೆದಿದ್ದೇವೆ” ಎಂದಿದ್ದಾರೆ.

“ಮಾಂಸಾಹಾರ ವಿತರಣೆಗೆ ಮಂಡ್ಯದ ಶೇ.90ರಷ್ಟು ಜನರ ಬೆಂಬಲ ಇತ್ತು. ನಾವು ಮಾಂಸಾಹಾರ ವಿತರಿಸಿರುವುದು ಕೇವಲ ಜನರ ಸಂತೃಪ್ತಿಗಲ್ಲ. ಇದೊಂದು ಸಾಮಾಜಿಕ ಮಹತ್ವ ಸಾರಿದ ಹೋರಾಟ. ಈ ಮೂಲಕ ನಾವು 100 ವರ್ಷಗಳ ಆಹಾರ ಅಸಮಾನತೆಯನ್ನು ತೊಡೆದು ಹಾಕಿದ್ದೇವೆ. ಇದು ‘ಅಂಬೇಡ್ಕರ್ ಅವರು ಚೌಡಾರ್ ಕೆರೆ ನೀರು ಕುಡಿದಂತಾಗಿದೆ’ ಎಂದು ಹೇಳಿದ್ದಾರೆ.

“ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. ಅಲ್ಲೂ ಆಹಾರ ಅಸಮಾನತೆಯ ವಿರುದ್ದದ ಅಭಿಯಾನವನ್ನು ಮುಂದುವರೆಸುವಂತೆ ಅಲ್ಲಿನ ಪ್ರಗತಿಪರರು ಮತ್ತು ಸಮಾನ ಮನಸ್ಕರಿಗೆ ನಾವು ಪತ್ರ ಬರೆದು ಮನವಿ ಮಾಡುತ್ತೇವೆ. ಮಾಂಸಾಹಾರ ನಿಷೇಧಿಸುವ ಮೂಲಕ ಸರ್ಕಾರವೇ ಮುಂದೆ ನಿಂತು ‘ಆಹಾರ ಅಸಮಾನತೆ, ಅಸ್ಪೃಶ್ಯತೆ ಆಚರಿಸಬಾರದು. ಮುಂದಿನ ಸಮ್ಮೇಳನದಲ್ಲಾದರೂ ಸರಿಯಾದ ರೀತಿಯಲ್ಲಿ ಮಾಂಸಾಹಾರ ವಿತರಿಸಬೇಕು ಎಂದು ಕೃಷ್ಣೇಗೌಡ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಕ್ಕೆ ನಮ್ಮ ಬಳಿ ಸಾಕ್ಷಿ ಇದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...