Homeಕರ್ನಾಟಕ'ಆಹಾರ ಅಸಮಾನತೆ' ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ...

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

'ಅಂಬೇಡ್ಕರ್ ಚೌಡಾರ್ ಕೆರೆ ನೀರು ಕುಡಿದಂಗಾಯಿತು' ಎಂದ ಹೋರಾಟಗಾರರು

- Advertisement -
- Advertisement -

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಶಸ್ವಿಯಾಗಿ ‘ಮಾಂಸಾಹಾರ’ ವಿತರಿಸುವ ಮೂಲಕ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸಮಾನ ಮನಸ್ಕರು ಹೊಸ ಇತಿಹಾಸ ಬರೆದರು.

ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಮಾಂಸಾಹಾರ ವಿತರಿಸಲಾಗಿದೆ. ‘ಆಹಾರ ಕ್ರಾಂತಿ’ಯ ಭಾಗವಾಗಿ ಒಂದೆಡೆ ಹೋರಾಟಗಾರರು ಬಾಡೂಟ ಹಂಚಿದರೆ, ಮತ್ತೊಂದೆಡೆ ಒತ್ತಡಕ್ಕೆ ಮಣಿದ ಸರ್ಕಾರ ಅಧಿಕೃತವಾಗಿ ಮೊಟ್ಟೆ ವಿತರಿಸುವ ಮೂಲಕ ‘ಆಹಾರ ಅಸಮಾನತೆ’ಯನ್ನು ಮುರಿಯಿತು. ಈ ಮೂಲಕ ಮಂಡ್ಯದ ಸಮ್ಮೇಳನ ಹೊಸ ಇತಿಹಾಸ ಬರೆಯಿತು.

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಸಮ್ಮೇಳನದ ನಿಯಮಗಳನ್ನು ಬಿಡುಗಡೆ ಮಾಡಿದಾಗ ಅದರಲ್ಲಿ ತಂಬಾಕು, ಮದ್ಯದ ಜೊತೆ ಮಾಂಸಾಹಾರವನ್ನು ನಿಷೇಧಿಸಿ, ಬಹುಜನರ ಆಹಾರವನ್ನು ಕೀಳಾಗಿ ಕಂಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕಸಾಪ ತನ್ನ ನಿಯಮವನ್ನು ಮಾರ್ಪಡಿಸುವಂತೆ ಆಗ್ರಹಿಸಲಾಗಿತ್ತು.

ಕಸಾಪ ಮಾಂಸಾಹಾರ ನಿಷೇಧಿಸಿ ನಿಯಮ ಪ್ರಕಟಿಸಿದ ಮರುದಿನವೇ ಮಂಡ್ಯದಲ್ಲಿ ಬಾಡೂಟ ಬಳಗದವರು ಸಭೆ ನಡೆಸಿ ಸರ್ಕಾರ ಈ ಬಾರಿ ಸಮ್ಮೇಳನದಲ್ಲಿ ಮಾಂಸಾಹಾರ ನೀಡಲೇಬೇಕು. ಇಲ್ಲದಿದ್ದರೆ, ನಾವೇ ಕುರಿ, ಕೋಳಿ ಸಂಗ್ರಹಿಸಿ ಬಾಡೂಟ ಹಂಚುತ್ತೀವಿ ಎಂದು ಸವಾಲು ಹಾಕಿದ್ದರು.

ಸರ್ಕಾರ ಸಮ್ಮೇಳನ ಪ್ರಾರಂಭವಾಗುವವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೂ, ಪ್ರಗತಿಪರ ಮತ್ತು ಸಮಾನ ಮನಸ್ಕರು ತಾವು ಹೇಳಿದಂತೆ ಕುರಿ, ಕೋಳಿ ಸಂಗ್ರಹಕ್ಕೆ ಕರೆ ಕೊಟ್ಟರು.

ಸಮ್ಮೇಳನದ ಹಿಂದಿನ ದಿನ (ಡಿ.19ರಂದು) ಮಂಡ್ಯದ ಹಳೆ ಬೂದನೂರು ಗ್ರಾಮದಲ್ಲಿ ‘ಮನೆಗೊಂದು ಕೋಳಿ, ಊರಿಗೊಂದು ಕುರಿ’ ಹೆಸರಿನಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ ನೀಡಲಾಯಿತು. ‘ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಅಭಿಯಾನದ ಮೂಲಕ ಕುರಿ, ಕೋಳಿ ಸಂಗ್ರಹಿಸಿ ಸಮ್ಮೇಳನದ ಕಡೆಯ ದಿನವಾದ ನಿನ್ನೆ (ಡಿ.22) ಮಾಂಸಾಹಾರ ವಿತರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಅವರು, “ಸುಮಾರು 500 ಜನರಿಗೆ 800 ಮೊಟ್ಟೆ, ಕೋಳಿ ಸಾರು, ಮುದ್ದೆ ಸೇರಿದಂತೆ ಮಂಡ್ಯ ಶೈಲಿಯ ಮಾಂಸಾಹಾರವನ್ನು ವಿತರಿಸಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಸರ್ಕಾರ ಕೂಡ ಕಡೆಯ ಕ್ಷಣದಲ್ಲಿ ಅಧಿಕೃತವಾಗಿ ಮೊಟ್ಟೆ ವಿತರಿಸಿದೆ. ಈ ಮೂಲಕ ಹೊಸ ಇತಿಹಾಸ ಬರೆದಿದ್ದೇವೆ” ಎಂದಿದ್ದಾರೆ.

“ಮಾಂಸಾಹಾರ ವಿತರಣೆಗೆ ಮಂಡ್ಯದ ಶೇ.90ರಷ್ಟು ಜನರ ಬೆಂಬಲ ಇತ್ತು. ನಾವು ಮಾಂಸಾಹಾರ ವಿತರಿಸಿರುವುದು ಕೇವಲ ಜನರ ಸಂತೃಪ್ತಿಗಲ್ಲ. ಇದೊಂದು ಸಾಮಾಜಿಕ ಮಹತ್ವ ಸಾರಿದ ಹೋರಾಟ. ಈ ಮೂಲಕ ನಾವು 100 ವರ್ಷಗಳ ಆಹಾರ ಅಸಮಾನತೆಯನ್ನು ತೊಡೆದು ಹಾಕಿದ್ದೇವೆ. ಇದು ‘ಅಂಬೇಡ್ಕರ್ ಅವರು ಚೌಡಾರ್ ಕೆರೆ ನೀರು ಕುಡಿದಂತಾಗಿದೆ’ ಎಂದು ಹೇಳಿದ್ದಾರೆ.

“ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. ಅಲ್ಲೂ ಆಹಾರ ಅಸಮಾನತೆಯ ವಿರುದ್ದದ ಅಭಿಯಾನವನ್ನು ಮುಂದುವರೆಸುವಂತೆ ಅಲ್ಲಿನ ಪ್ರಗತಿಪರರು ಮತ್ತು ಸಮಾನ ಮನಸ್ಕರಿಗೆ ನಾವು ಪತ್ರ ಬರೆದು ಮನವಿ ಮಾಡುತ್ತೇವೆ. ಮಾಂಸಾಹಾರ ನಿಷೇಧಿಸುವ ಮೂಲಕ ಸರ್ಕಾರವೇ ಮುಂದೆ ನಿಂತು ‘ಆಹಾರ ಅಸಮಾನತೆ, ಅಸ್ಪೃಶ್ಯತೆ ಆಚರಿಸಬಾರದು. ಮುಂದಿನ ಸಮ್ಮೇಳನದಲ್ಲಾದರೂ ಸರಿಯಾದ ರೀತಿಯಲ್ಲಿ ಮಾಂಸಾಹಾರ ವಿತರಿಸಬೇಕು ಎಂದು ಕೃಷ್ಣೇಗೌಡ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಕ್ಕೆ ನಮ್ಮ ಬಳಿ ಸಾಕ್ಷಿ ಇದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...