Homeಕರ್ನಾಟಕ'ಆಹಾರ ಅಸಮಾನತೆ' ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ...

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

'ಅಂಬೇಡ್ಕರ್ ಚೌಡಾರ್ ಕೆರೆ ನೀರು ಕುಡಿದಂಗಾಯಿತು' ಎಂದ ಹೋರಾಟಗಾರರು

- Advertisement -
- Advertisement -

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಶಸ್ವಿಯಾಗಿ ‘ಮಾಂಸಾಹಾರ’ ವಿತರಿಸುವ ಮೂಲಕ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸಮಾನ ಮನಸ್ಕರು ಹೊಸ ಇತಿಹಾಸ ಬರೆದರು.

ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಮಾಂಸಾಹಾರ ವಿತರಿಸಲಾಗಿದೆ. ‘ಆಹಾರ ಕ್ರಾಂತಿ’ಯ ಭಾಗವಾಗಿ ಒಂದೆಡೆ ಹೋರಾಟಗಾರರು ಬಾಡೂಟ ಹಂಚಿದರೆ, ಮತ್ತೊಂದೆಡೆ ಒತ್ತಡಕ್ಕೆ ಮಣಿದ ಸರ್ಕಾರ ಅಧಿಕೃತವಾಗಿ ಮೊಟ್ಟೆ ವಿತರಿಸುವ ಮೂಲಕ ‘ಆಹಾರ ಅಸಮಾನತೆ’ಯನ್ನು ಮುರಿಯಿತು. ಈ ಮೂಲಕ ಮಂಡ್ಯದ ಸಮ್ಮೇಳನ ಹೊಸ ಇತಿಹಾಸ ಬರೆಯಿತು.

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಸಮ್ಮೇಳನದ ನಿಯಮಗಳನ್ನು ಬಿಡುಗಡೆ ಮಾಡಿದಾಗ ಅದರಲ್ಲಿ ತಂಬಾಕು, ಮದ್ಯದ ಜೊತೆ ಮಾಂಸಾಹಾರವನ್ನು ನಿಷೇಧಿಸಿ, ಬಹುಜನರ ಆಹಾರವನ್ನು ಕೀಳಾಗಿ ಕಂಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕಸಾಪ ತನ್ನ ನಿಯಮವನ್ನು ಮಾರ್ಪಡಿಸುವಂತೆ ಆಗ್ರಹಿಸಲಾಗಿತ್ತು.

ಕಸಾಪ ಮಾಂಸಾಹಾರ ನಿಷೇಧಿಸಿ ನಿಯಮ ಪ್ರಕಟಿಸಿದ ಮರುದಿನವೇ ಮಂಡ್ಯದಲ್ಲಿ ಬಾಡೂಟ ಬಳಗದವರು ಸಭೆ ನಡೆಸಿ ಸರ್ಕಾರ ಈ ಬಾರಿ ಸಮ್ಮೇಳನದಲ್ಲಿ ಮಾಂಸಾಹಾರ ನೀಡಲೇಬೇಕು. ಇಲ್ಲದಿದ್ದರೆ, ನಾವೇ ಕುರಿ, ಕೋಳಿ ಸಂಗ್ರಹಿಸಿ ಬಾಡೂಟ ಹಂಚುತ್ತೀವಿ ಎಂದು ಸವಾಲು ಹಾಕಿದ್ದರು.

ಸರ್ಕಾರ ಸಮ್ಮೇಳನ ಪ್ರಾರಂಭವಾಗುವವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೂ, ಪ್ರಗತಿಪರ ಮತ್ತು ಸಮಾನ ಮನಸ್ಕರು ತಾವು ಹೇಳಿದಂತೆ ಕುರಿ, ಕೋಳಿ ಸಂಗ್ರಹಕ್ಕೆ ಕರೆ ಕೊಟ್ಟರು.

ಸಮ್ಮೇಳನದ ಹಿಂದಿನ ದಿನ (ಡಿ.19ರಂದು) ಮಂಡ್ಯದ ಹಳೆ ಬೂದನೂರು ಗ್ರಾಮದಲ್ಲಿ ‘ಮನೆಗೊಂದು ಕೋಳಿ, ಊರಿಗೊಂದು ಕುರಿ’ ಹೆಸರಿನಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ ನೀಡಲಾಯಿತು. ‘ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಅಭಿಯಾನದ ಮೂಲಕ ಕುರಿ, ಕೋಳಿ ಸಂಗ್ರಹಿಸಿ ಸಮ್ಮೇಳನದ ಕಡೆಯ ದಿನವಾದ ನಿನ್ನೆ (ಡಿ.22) ಮಾಂಸಾಹಾರ ವಿತರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಅವರು, “ಸುಮಾರು 500 ಜನರಿಗೆ 800 ಮೊಟ್ಟೆ, ಕೋಳಿ ಸಾರು, ಮುದ್ದೆ ಸೇರಿದಂತೆ ಮಂಡ್ಯ ಶೈಲಿಯ ಮಾಂಸಾಹಾರವನ್ನು ವಿತರಿಸಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಸರ್ಕಾರ ಕೂಡ ಕಡೆಯ ಕ್ಷಣದಲ್ಲಿ ಅಧಿಕೃತವಾಗಿ ಮೊಟ್ಟೆ ವಿತರಿಸಿದೆ. ಈ ಮೂಲಕ ಹೊಸ ಇತಿಹಾಸ ಬರೆದಿದ್ದೇವೆ” ಎಂದಿದ್ದಾರೆ.

“ಮಾಂಸಾಹಾರ ವಿತರಣೆಗೆ ಮಂಡ್ಯದ ಶೇ.90ರಷ್ಟು ಜನರ ಬೆಂಬಲ ಇತ್ತು. ನಾವು ಮಾಂಸಾಹಾರ ವಿತರಿಸಿರುವುದು ಕೇವಲ ಜನರ ಸಂತೃಪ್ತಿಗಲ್ಲ. ಇದೊಂದು ಸಾಮಾಜಿಕ ಮಹತ್ವ ಸಾರಿದ ಹೋರಾಟ. ಈ ಮೂಲಕ ನಾವು 100 ವರ್ಷಗಳ ಆಹಾರ ಅಸಮಾನತೆಯನ್ನು ತೊಡೆದು ಹಾಕಿದ್ದೇವೆ. ಇದು ‘ಅಂಬೇಡ್ಕರ್ ಅವರು ಚೌಡಾರ್ ಕೆರೆ ನೀರು ಕುಡಿದಂತಾಗಿದೆ’ ಎಂದು ಹೇಳಿದ್ದಾರೆ.

“ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. ಅಲ್ಲೂ ಆಹಾರ ಅಸಮಾನತೆಯ ವಿರುದ್ದದ ಅಭಿಯಾನವನ್ನು ಮುಂದುವರೆಸುವಂತೆ ಅಲ್ಲಿನ ಪ್ರಗತಿಪರರು ಮತ್ತು ಸಮಾನ ಮನಸ್ಕರಿಗೆ ನಾವು ಪತ್ರ ಬರೆದು ಮನವಿ ಮಾಡುತ್ತೇವೆ. ಮಾಂಸಾಹಾರ ನಿಷೇಧಿಸುವ ಮೂಲಕ ಸರ್ಕಾರವೇ ಮುಂದೆ ನಿಂತು ‘ಆಹಾರ ಅಸಮಾನತೆ, ಅಸ್ಪೃಶ್ಯತೆ ಆಚರಿಸಬಾರದು. ಮುಂದಿನ ಸಮ್ಮೇಳನದಲ್ಲಾದರೂ ಸರಿಯಾದ ರೀತಿಯಲ್ಲಿ ಮಾಂಸಾಹಾರ ವಿತರಿಸಬೇಕು ಎಂದು ಕೃಷ್ಣೇಗೌಡ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಕ್ಕೆ ನಮ್ಮ ಬಳಿ ಸಾಕ್ಷಿ ಇದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...