Homeಕರ್ನಾಟಕ'ಆಹಾರ ಅಸಮಾನತೆ' ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ...

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

'ಅಂಬೇಡ್ಕರ್ ಚೌಡಾರ್ ಕೆರೆ ನೀರು ಕುಡಿದಂಗಾಯಿತು' ಎಂದ ಹೋರಾಟಗಾರರು

- Advertisement -
- Advertisement -

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಶಸ್ವಿಯಾಗಿ ‘ಮಾಂಸಾಹಾರ’ ವಿತರಿಸುವ ಮೂಲಕ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸಮಾನ ಮನಸ್ಕರು ಹೊಸ ಇತಿಹಾಸ ಬರೆದರು.

ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಮಾಂಸಾಹಾರ ವಿತರಿಸಲಾಗಿದೆ. ‘ಆಹಾರ ಕ್ರಾಂತಿ’ಯ ಭಾಗವಾಗಿ ಒಂದೆಡೆ ಹೋರಾಟಗಾರರು ಬಾಡೂಟ ಹಂಚಿದರೆ, ಮತ್ತೊಂದೆಡೆ ಒತ್ತಡಕ್ಕೆ ಮಣಿದ ಸರ್ಕಾರ ಅಧಿಕೃತವಾಗಿ ಮೊಟ್ಟೆ ವಿತರಿಸುವ ಮೂಲಕ ‘ಆಹಾರ ಅಸಮಾನತೆ’ಯನ್ನು ಮುರಿಯಿತು. ಈ ಮೂಲಕ ಮಂಡ್ಯದ ಸಮ್ಮೇಳನ ಹೊಸ ಇತಿಹಾಸ ಬರೆಯಿತು.

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಸಮ್ಮೇಳನದ ನಿಯಮಗಳನ್ನು ಬಿಡುಗಡೆ ಮಾಡಿದಾಗ ಅದರಲ್ಲಿ ತಂಬಾಕು, ಮದ್ಯದ ಜೊತೆ ಮಾಂಸಾಹಾರವನ್ನು ನಿಷೇಧಿಸಿ, ಬಹುಜನರ ಆಹಾರವನ್ನು ಕೀಳಾಗಿ ಕಂಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕಸಾಪ ತನ್ನ ನಿಯಮವನ್ನು ಮಾರ್ಪಡಿಸುವಂತೆ ಆಗ್ರಹಿಸಲಾಗಿತ್ತು.

ಕಸಾಪ ಮಾಂಸಾಹಾರ ನಿಷೇಧಿಸಿ ನಿಯಮ ಪ್ರಕಟಿಸಿದ ಮರುದಿನವೇ ಮಂಡ್ಯದಲ್ಲಿ ಬಾಡೂಟ ಬಳಗದವರು ಸಭೆ ನಡೆಸಿ ಸರ್ಕಾರ ಈ ಬಾರಿ ಸಮ್ಮೇಳನದಲ್ಲಿ ಮಾಂಸಾಹಾರ ನೀಡಲೇಬೇಕು. ಇಲ್ಲದಿದ್ದರೆ, ನಾವೇ ಕುರಿ, ಕೋಳಿ ಸಂಗ್ರಹಿಸಿ ಬಾಡೂಟ ಹಂಚುತ್ತೀವಿ ಎಂದು ಸವಾಲು ಹಾಕಿದ್ದರು.

ಸರ್ಕಾರ ಸಮ್ಮೇಳನ ಪ್ರಾರಂಭವಾಗುವವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೂ, ಪ್ರಗತಿಪರ ಮತ್ತು ಸಮಾನ ಮನಸ್ಕರು ತಾವು ಹೇಳಿದಂತೆ ಕುರಿ, ಕೋಳಿ ಸಂಗ್ರಹಕ್ಕೆ ಕರೆ ಕೊಟ್ಟರು.

ಸಮ್ಮೇಳನದ ಹಿಂದಿನ ದಿನ (ಡಿ.19ರಂದು) ಮಂಡ್ಯದ ಹಳೆ ಬೂದನೂರು ಗ್ರಾಮದಲ್ಲಿ ‘ಮನೆಗೊಂದು ಕೋಳಿ, ಊರಿಗೊಂದು ಕುರಿ’ ಹೆಸರಿನಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ ನೀಡಲಾಯಿತು. ‘ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಅಭಿಯಾನದ ಮೂಲಕ ಕುರಿ, ಕೋಳಿ ಸಂಗ್ರಹಿಸಿ ಸಮ್ಮೇಳನದ ಕಡೆಯ ದಿನವಾದ ನಿನ್ನೆ (ಡಿ.22) ಮಾಂಸಾಹಾರ ವಿತರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಅವರು, “ಸುಮಾರು 500 ಜನರಿಗೆ 800 ಮೊಟ್ಟೆ, ಕೋಳಿ ಸಾರು, ಮುದ್ದೆ ಸೇರಿದಂತೆ ಮಂಡ್ಯ ಶೈಲಿಯ ಮಾಂಸಾಹಾರವನ್ನು ವಿತರಿಸಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಸರ್ಕಾರ ಕೂಡ ಕಡೆಯ ಕ್ಷಣದಲ್ಲಿ ಅಧಿಕೃತವಾಗಿ ಮೊಟ್ಟೆ ವಿತರಿಸಿದೆ. ಈ ಮೂಲಕ ಹೊಸ ಇತಿಹಾಸ ಬರೆದಿದ್ದೇವೆ” ಎಂದಿದ್ದಾರೆ.

“ಮಾಂಸಾಹಾರ ವಿತರಣೆಗೆ ಮಂಡ್ಯದ ಶೇ.90ರಷ್ಟು ಜನರ ಬೆಂಬಲ ಇತ್ತು. ನಾವು ಮಾಂಸಾಹಾರ ವಿತರಿಸಿರುವುದು ಕೇವಲ ಜನರ ಸಂತೃಪ್ತಿಗಲ್ಲ. ಇದೊಂದು ಸಾಮಾಜಿಕ ಮಹತ್ವ ಸಾರಿದ ಹೋರಾಟ. ಈ ಮೂಲಕ ನಾವು 100 ವರ್ಷಗಳ ಆಹಾರ ಅಸಮಾನತೆಯನ್ನು ತೊಡೆದು ಹಾಕಿದ್ದೇವೆ. ಇದು ‘ಅಂಬೇಡ್ಕರ್ ಅವರು ಚೌಡಾರ್ ಕೆರೆ ನೀರು ಕುಡಿದಂತಾಗಿದೆ’ ಎಂದು ಹೇಳಿದ್ದಾರೆ.

“ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. ಅಲ್ಲೂ ಆಹಾರ ಅಸಮಾನತೆಯ ವಿರುದ್ದದ ಅಭಿಯಾನವನ್ನು ಮುಂದುವರೆಸುವಂತೆ ಅಲ್ಲಿನ ಪ್ರಗತಿಪರರು ಮತ್ತು ಸಮಾನ ಮನಸ್ಕರಿಗೆ ನಾವು ಪತ್ರ ಬರೆದು ಮನವಿ ಮಾಡುತ್ತೇವೆ. ಮಾಂಸಾಹಾರ ನಿಷೇಧಿಸುವ ಮೂಲಕ ಸರ್ಕಾರವೇ ಮುಂದೆ ನಿಂತು ‘ಆಹಾರ ಅಸಮಾನತೆ, ಅಸ್ಪೃಶ್ಯತೆ ಆಚರಿಸಬಾರದು. ಮುಂದಿನ ಸಮ್ಮೇಳನದಲ್ಲಾದರೂ ಸರಿಯಾದ ರೀತಿಯಲ್ಲಿ ಮಾಂಸಾಹಾರ ವಿತರಿಸಬೇಕು ಎಂದು ಕೃಷ್ಣೇಗೌಡ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಕ್ಕೆ ನಮ್ಮ ಬಳಿ ಸಾಕ್ಷಿ ಇದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...