Homeಕರ್ನಾಟಕ'ಆಹಾರ ಅಸಮಾನತೆ' ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ...

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

'ಅಂಬೇಡ್ಕರ್ ಚೌಡಾರ್ ಕೆರೆ ನೀರು ಕುಡಿದಂಗಾಯಿತು' ಎಂದ ಹೋರಾಟಗಾರರು

- Advertisement -
- Advertisement -

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಶಸ್ವಿಯಾಗಿ ‘ಮಾಂಸಾಹಾರ’ ವಿತರಿಸುವ ಮೂಲಕ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸಮಾನ ಮನಸ್ಕರು ಹೊಸ ಇತಿಹಾಸ ಬರೆದರು.

ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಮಾಂಸಾಹಾರ ವಿತರಿಸಲಾಗಿದೆ. ‘ಆಹಾರ ಕ್ರಾಂತಿ’ಯ ಭಾಗವಾಗಿ ಒಂದೆಡೆ ಹೋರಾಟಗಾರರು ಬಾಡೂಟ ಹಂಚಿದರೆ, ಮತ್ತೊಂದೆಡೆ ಒತ್ತಡಕ್ಕೆ ಮಣಿದ ಸರ್ಕಾರ ಅಧಿಕೃತವಾಗಿ ಮೊಟ್ಟೆ ವಿತರಿಸುವ ಮೂಲಕ ‘ಆಹಾರ ಅಸಮಾನತೆ’ಯನ್ನು ಮುರಿಯಿತು. ಈ ಮೂಲಕ ಮಂಡ್ಯದ ಸಮ್ಮೇಳನ ಹೊಸ ಇತಿಹಾಸ ಬರೆಯಿತು.

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಸಮ್ಮೇಳನದ ನಿಯಮಗಳನ್ನು ಬಿಡುಗಡೆ ಮಾಡಿದಾಗ ಅದರಲ್ಲಿ ತಂಬಾಕು, ಮದ್ಯದ ಜೊತೆ ಮಾಂಸಾಹಾರವನ್ನು ನಿಷೇಧಿಸಿ, ಬಹುಜನರ ಆಹಾರವನ್ನು ಕೀಳಾಗಿ ಕಂಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕಸಾಪ ತನ್ನ ನಿಯಮವನ್ನು ಮಾರ್ಪಡಿಸುವಂತೆ ಆಗ್ರಹಿಸಲಾಗಿತ್ತು.

ಕಸಾಪ ಮಾಂಸಾಹಾರ ನಿಷೇಧಿಸಿ ನಿಯಮ ಪ್ರಕಟಿಸಿದ ಮರುದಿನವೇ ಮಂಡ್ಯದಲ್ಲಿ ಬಾಡೂಟ ಬಳಗದವರು ಸಭೆ ನಡೆಸಿ ಸರ್ಕಾರ ಈ ಬಾರಿ ಸಮ್ಮೇಳನದಲ್ಲಿ ಮಾಂಸಾಹಾರ ನೀಡಲೇಬೇಕು. ಇಲ್ಲದಿದ್ದರೆ, ನಾವೇ ಕುರಿ, ಕೋಳಿ ಸಂಗ್ರಹಿಸಿ ಬಾಡೂಟ ಹಂಚುತ್ತೀವಿ ಎಂದು ಸವಾಲು ಹಾಕಿದ್ದರು.

ಸರ್ಕಾರ ಸಮ್ಮೇಳನ ಪ್ರಾರಂಭವಾಗುವವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೂ, ಪ್ರಗತಿಪರ ಮತ್ತು ಸಮಾನ ಮನಸ್ಕರು ತಾವು ಹೇಳಿದಂತೆ ಕುರಿ, ಕೋಳಿ ಸಂಗ್ರಹಕ್ಕೆ ಕರೆ ಕೊಟ್ಟರು.

ಸಮ್ಮೇಳನದ ಹಿಂದಿನ ದಿನ (ಡಿ.19ರಂದು) ಮಂಡ್ಯದ ಹಳೆ ಬೂದನೂರು ಗ್ರಾಮದಲ್ಲಿ ‘ಮನೆಗೊಂದು ಕೋಳಿ, ಊರಿಗೊಂದು ಕುರಿ’ ಹೆಸರಿನಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ ನೀಡಲಾಯಿತು. ‘ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಅಭಿಯಾನದ ಮೂಲಕ ಕುರಿ, ಕೋಳಿ ಸಂಗ್ರಹಿಸಿ ಸಮ್ಮೇಳನದ ಕಡೆಯ ದಿನವಾದ ನಿನ್ನೆ (ಡಿ.22) ಮಾಂಸಾಹಾರ ವಿತರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಅವರು, “ಸುಮಾರು 500 ಜನರಿಗೆ 800 ಮೊಟ್ಟೆ, ಕೋಳಿ ಸಾರು, ಮುದ್ದೆ ಸೇರಿದಂತೆ ಮಂಡ್ಯ ಶೈಲಿಯ ಮಾಂಸಾಹಾರವನ್ನು ವಿತರಿಸಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಸರ್ಕಾರ ಕೂಡ ಕಡೆಯ ಕ್ಷಣದಲ್ಲಿ ಅಧಿಕೃತವಾಗಿ ಮೊಟ್ಟೆ ವಿತರಿಸಿದೆ. ಈ ಮೂಲಕ ಹೊಸ ಇತಿಹಾಸ ಬರೆದಿದ್ದೇವೆ” ಎಂದಿದ್ದಾರೆ.

“ಮಾಂಸಾಹಾರ ವಿತರಣೆಗೆ ಮಂಡ್ಯದ ಶೇ.90ರಷ್ಟು ಜನರ ಬೆಂಬಲ ಇತ್ತು. ನಾವು ಮಾಂಸಾಹಾರ ವಿತರಿಸಿರುವುದು ಕೇವಲ ಜನರ ಸಂತೃಪ್ತಿಗಲ್ಲ. ಇದೊಂದು ಸಾಮಾಜಿಕ ಮಹತ್ವ ಸಾರಿದ ಹೋರಾಟ. ಈ ಮೂಲಕ ನಾವು 100 ವರ್ಷಗಳ ಆಹಾರ ಅಸಮಾನತೆಯನ್ನು ತೊಡೆದು ಹಾಕಿದ್ದೇವೆ. ಇದು ‘ಅಂಬೇಡ್ಕರ್ ಅವರು ಚೌಡಾರ್ ಕೆರೆ ನೀರು ಕುಡಿದಂತಾಗಿದೆ’ ಎಂದು ಹೇಳಿದ್ದಾರೆ.

“ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. ಅಲ್ಲೂ ಆಹಾರ ಅಸಮಾನತೆಯ ವಿರುದ್ದದ ಅಭಿಯಾನವನ್ನು ಮುಂದುವರೆಸುವಂತೆ ಅಲ್ಲಿನ ಪ್ರಗತಿಪರರು ಮತ್ತು ಸಮಾನ ಮನಸ್ಕರಿಗೆ ನಾವು ಪತ್ರ ಬರೆದು ಮನವಿ ಮಾಡುತ್ತೇವೆ. ಮಾಂಸಾಹಾರ ನಿಷೇಧಿಸುವ ಮೂಲಕ ಸರ್ಕಾರವೇ ಮುಂದೆ ನಿಂತು ‘ಆಹಾರ ಅಸಮಾನತೆ, ಅಸ್ಪೃಶ್ಯತೆ ಆಚರಿಸಬಾರದು. ಮುಂದಿನ ಸಮ್ಮೇಳನದಲ್ಲಾದರೂ ಸರಿಯಾದ ರೀತಿಯಲ್ಲಿ ಮಾಂಸಾಹಾರ ವಿತರಿಸಬೇಕು ಎಂದು ಕೃಷ್ಣೇಗೌಡ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಕ್ಕೆ ನಮ್ಮ ಬಳಿ ಸಾಕ್ಷಿ ಇದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...