Homeಕರ್ನಾಟಕ'ಆಹಾರ ಅಸಮಾನತೆ' ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ...

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

'ಅಂಬೇಡ್ಕರ್ ಚೌಡಾರ್ ಕೆರೆ ನೀರು ಕುಡಿದಂಗಾಯಿತು' ಎಂದ ಹೋರಾಟಗಾರರು

- Advertisement -
- Advertisement -

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಶಸ್ವಿಯಾಗಿ ‘ಮಾಂಸಾಹಾರ’ ವಿತರಿಸುವ ಮೂಲಕ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸಮಾನ ಮನಸ್ಕರು ಹೊಸ ಇತಿಹಾಸ ಬರೆದರು.

ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಮಾಂಸಾಹಾರ ವಿತರಿಸಲಾಗಿದೆ. ‘ಆಹಾರ ಕ್ರಾಂತಿ’ಯ ಭಾಗವಾಗಿ ಒಂದೆಡೆ ಹೋರಾಟಗಾರರು ಬಾಡೂಟ ಹಂಚಿದರೆ, ಮತ್ತೊಂದೆಡೆ ಒತ್ತಡಕ್ಕೆ ಮಣಿದ ಸರ್ಕಾರ ಅಧಿಕೃತವಾಗಿ ಮೊಟ್ಟೆ ವಿತರಿಸುವ ಮೂಲಕ ‘ಆಹಾರ ಅಸಮಾನತೆ’ಯನ್ನು ಮುರಿಯಿತು. ಈ ಮೂಲಕ ಮಂಡ್ಯದ ಸಮ್ಮೇಳನ ಹೊಸ ಇತಿಹಾಸ ಬರೆಯಿತು.

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಸಮ್ಮೇಳನದ ನಿಯಮಗಳನ್ನು ಬಿಡುಗಡೆ ಮಾಡಿದಾಗ ಅದರಲ್ಲಿ ತಂಬಾಕು, ಮದ್ಯದ ಜೊತೆ ಮಾಂಸಾಹಾರವನ್ನು ನಿಷೇಧಿಸಿ, ಬಹುಜನರ ಆಹಾರವನ್ನು ಕೀಳಾಗಿ ಕಂಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕಸಾಪ ತನ್ನ ನಿಯಮವನ್ನು ಮಾರ್ಪಡಿಸುವಂತೆ ಆಗ್ರಹಿಸಲಾಗಿತ್ತು.

ಕಸಾಪ ಮಾಂಸಾಹಾರ ನಿಷೇಧಿಸಿ ನಿಯಮ ಪ್ರಕಟಿಸಿದ ಮರುದಿನವೇ ಮಂಡ್ಯದಲ್ಲಿ ಬಾಡೂಟ ಬಳಗದವರು ಸಭೆ ನಡೆಸಿ ಸರ್ಕಾರ ಈ ಬಾರಿ ಸಮ್ಮೇಳನದಲ್ಲಿ ಮಾಂಸಾಹಾರ ನೀಡಲೇಬೇಕು. ಇಲ್ಲದಿದ್ದರೆ, ನಾವೇ ಕುರಿ, ಕೋಳಿ ಸಂಗ್ರಹಿಸಿ ಬಾಡೂಟ ಹಂಚುತ್ತೀವಿ ಎಂದು ಸವಾಲು ಹಾಕಿದ್ದರು.

ಸರ್ಕಾರ ಸಮ್ಮೇಳನ ಪ್ರಾರಂಭವಾಗುವವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೂ, ಪ್ರಗತಿಪರ ಮತ್ತು ಸಮಾನ ಮನಸ್ಕರು ತಾವು ಹೇಳಿದಂತೆ ಕುರಿ, ಕೋಳಿ ಸಂಗ್ರಹಕ್ಕೆ ಕರೆ ಕೊಟ್ಟರು.

ಸಮ್ಮೇಳನದ ಹಿಂದಿನ ದಿನ (ಡಿ.19ರಂದು) ಮಂಡ್ಯದ ಹಳೆ ಬೂದನೂರು ಗ್ರಾಮದಲ್ಲಿ ‘ಮನೆಗೊಂದು ಕೋಳಿ, ಊರಿಗೊಂದು ಕುರಿ’ ಹೆಸರಿನಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ ನೀಡಲಾಯಿತು. ‘ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಅಭಿಯಾನದ ಮೂಲಕ ಕುರಿ, ಕೋಳಿ ಸಂಗ್ರಹಿಸಿ ಸಮ್ಮೇಳನದ ಕಡೆಯ ದಿನವಾದ ನಿನ್ನೆ (ಡಿ.22) ಮಾಂಸಾಹಾರ ವಿತರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಅವರು, “ಸುಮಾರು 500 ಜನರಿಗೆ 800 ಮೊಟ್ಟೆ, ಕೋಳಿ ಸಾರು, ಮುದ್ದೆ ಸೇರಿದಂತೆ ಮಂಡ್ಯ ಶೈಲಿಯ ಮಾಂಸಾಹಾರವನ್ನು ವಿತರಿಸಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಸರ್ಕಾರ ಕೂಡ ಕಡೆಯ ಕ್ಷಣದಲ್ಲಿ ಅಧಿಕೃತವಾಗಿ ಮೊಟ್ಟೆ ವಿತರಿಸಿದೆ. ಈ ಮೂಲಕ ಹೊಸ ಇತಿಹಾಸ ಬರೆದಿದ್ದೇವೆ” ಎಂದಿದ್ದಾರೆ.

“ಮಾಂಸಾಹಾರ ವಿತರಣೆಗೆ ಮಂಡ್ಯದ ಶೇ.90ರಷ್ಟು ಜನರ ಬೆಂಬಲ ಇತ್ತು. ನಾವು ಮಾಂಸಾಹಾರ ವಿತರಿಸಿರುವುದು ಕೇವಲ ಜನರ ಸಂತೃಪ್ತಿಗಲ್ಲ. ಇದೊಂದು ಸಾಮಾಜಿಕ ಮಹತ್ವ ಸಾರಿದ ಹೋರಾಟ. ಈ ಮೂಲಕ ನಾವು 100 ವರ್ಷಗಳ ಆಹಾರ ಅಸಮಾನತೆಯನ್ನು ತೊಡೆದು ಹಾಕಿದ್ದೇವೆ. ಇದು ‘ಅಂಬೇಡ್ಕರ್ ಅವರು ಚೌಡಾರ್ ಕೆರೆ ನೀರು ಕುಡಿದಂತಾಗಿದೆ’ ಎಂದು ಹೇಳಿದ್ದಾರೆ.

“ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. ಅಲ್ಲೂ ಆಹಾರ ಅಸಮಾನತೆಯ ವಿರುದ್ದದ ಅಭಿಯಾನವನ್ನು ಮುಂದುವರೆಸುವಂತೆ ಅಲ್ಲಿನ ಪ್ರಗತಿಪರರು ಮತ್ತು ಸಮಾನ ಮನಸ್ಕರಿಗೆ ನಾವು ಪತ್ರ ಬರೆದು ಮನವಿ ಮಾಡುತ್ತೇವೆ. ಮಾಂಸಾಹಾರ ನಿಷೇಧಿಸುವ ಮೂಲಕ ಸರ್ಕಾರವೇ ಮುಂದೆ ನಿಂತು ‘ಆಹಾರ ಅಸಮಾನತೆ, ಅಸ್ಪೃಶ್ಯತೆ ಆಚರಿಸಬಾರದು. ಮುಂದಿನ ಸಮ್ಮೇಳನದಲ್ಲಾದರೂ ಸರಿಯಾದ ರೀತಿಯಲ್ಲಿ ಮಾಂಸಾಹಾರ ವಿತರಿಸಬೇಕು ಎಂದು ಕೃಷ್ಣೇಗೌಡ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಕ್ಕೆ ನಮ್ಮ ಬಳಿ ಸಾಕ್ಷಿ ಇದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...