Homeಕರ್ನಾಟಕ'ಆಹಾರ ಅಸಮಾನತೆ' ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ...

‘ಆಹಾರ ಅಸಮಾನತೆ’ ತೊಡೆದು ಹಾಕಿದ ಮಂಡ್ಯದ ಸಾಹಿತ್ಯ ಸಮ್ಮೇಳನ : 100 ವರ್ಷಗಳಲ್ಲಿ ಮೊದಲ ಬಾರಿಗೆ ಮಾಂಸಾಹಾರ ವಿತರಣೆ

'ಅಂಬೇಡ್ಕರ್ ಚೌಡಾರ್ ಕೆರೆ ನೀರು ಕುಡಿದಂಗಾಯಿತು' ಎಂದ ಹೋರಾಟಗಾರರು

- Advertisement -
- Advertisement -

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಯಶಸ್ವಿಯಾಗಿ ‘ಮಾಂಸಾಹಾರ’ ವಿತರಿಸುವ ಮೂಲಕ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸಮಾನ ಮನಸ್ಕರು ಹೊಸ ಇತಿಹಾಸ ಬರೆದರು.

ನೂರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಮಾಂಸಾಹಾರ ವಿತರಿಸಲಾಗಿದೆ. ‘ಆಹಾರ ಕ್ರಾಂತಿ’ಯ ಭಾಗವಾಗಿ ಒಂದೆಡೆ ಹೋರಾಟಗಾರರು ಬಾಡೂಟ ಹಂಚಿದರೆ, ಮತ್ತೊಂದೆಡೆ ಒತ್ತಡಕ್ಕೆ ಮಣಿದ ಸರ್ಕಾರ ಅಧಿಕೃತವಾಗಿ ಮೊಟ್ಟೆ ವಿತರಿಸುವ ಮೂಲಕ ‘ಆಹಾರ ಅಸಮಾನತೆ’ಯನ್ನು ಮುರಿಯಿತು. ಈ ಮೂಲಕ ಮಂಡ್ಯದ ಸಮ್ಮೇಳನ ಹೊಸ ಇತಿಹಾಸ ಬರೆಯಿತು.

ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಸಮ್ಮೇಳನದ ನಿಯಮಗಳನ್ನು ಬಿಡುಗಡೆ ಮಾಡಿದಾಗ ಅದರಲ್ಲಿ ತಂಬಾಕು, ಮದ್ಯದ ಜೊತೆ ಮಾಂಸಾಹಾರವನ್ನು ನಿಷೇಧಿಸಿ, ಬಹುಜನರ ಆಹಾರವನ್ನು ಕೀಳಾಗಿ ಕಂಡಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕಸಾಪ ತನ್ನ ನಿಯಮವನ್ನು ಮಾರ್ಪಡಿಸುವಂತೆ ಆಗ್ರಹಿಸಲಾಗಿತ್ತು.

ಕಸಾಪ ಮಾಂಸಾಹಾರ ನಿಷೇಧಿಸಿ ನಿಯಮ ಪ್ರಕಟಿಸಿದ ಮರುದಿನವೇ ಮಂಡ್ಯದಲ್ಲಿ ಬಾಡೂಟ ಬಳಗದವರು ಸಭೆ ನಡೆಸಿ ಸರ್ಕಾರ ಈ ಬಾರಿ ಸಮ್ಮೇಳನದಲ್ಲಿ ಮಾಂಸಾಹಾರ ನೀಡಲೇಬೇಕು. ಇಲ್ಲದಿದ್ದರೆ, ನಾವೇ ಕುರಿ, ಕೋಳಿ ಸಂಗ್ರಹಿಸಿ ಬಾಡೂಟ ಹಂಚುತ್ತೀವಿ ಎಂದು ಸವಾಲು ಹಾಕಿದ್ದರು.

ಸರ್ಕಾರ ಸಮ್ಮೇಳನ ಪ್ರಾರಂಭವಾಗುವವರೆಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೂ, ಪ್ರಗತಿಪರ ಮತ್ತು ಸಮಾನ ಮನಸ್ಕರು ತಾವು ಹೇಳಿದಂತೆ ಕುರಿ, ಕೋಳಿ ಸಂಗ್ರಹಕ್ಕೆ ಕರೆ ಕೊಟ್ಟರು.

ಸಮ್ಮೇಳನದ ಹಿಂದಿನ ದಿನ (ಡಿ.19ರಂದು) ಮಂಡ್ಯದ ಹಳೆ ಬೂದನೂರು ಗ್ರಾಮದಲ್ಲಿ ‘ಮನೆಗೊಂದು ಕೋಳಿ, ಊರಿಗೊಂದು ಕುರಿ’ ಹೆಸರಿನಲ್ಲಿ ಕುರಿ, ಕೋಳಿ ಸಂಗ್ರಹಕ್ಕೆ ಚಾಲನೆ ನೀಡಲಾಯಿತು. ‘ಅಂದು ವಿಚಾರ ಕ್ರಾಂತಿ, ಇಂದು ಆಹಾರ ಕ್ರಾಂತಿ’ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಅಭಿಯಾನದ ಮೂಲಕ ಕುರಿ, ಕೋಳಿ ಸಂಗ್ರಹಿಸಿ ಸಮ್ಮೇಳನದ ಕಡೆಯ ದಿನವಾದ ನಿನ್ನೆ (ಡಿ.22) ಮಾಂಸಾಹಾರ ವಿತರಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಸಿಪಿಐ(ಎಂ) ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಅವರು, “ಸುಮಾರು 500 ಜನರಿಗೆ 800 ಮೊಟ್ಟೆ, ಕೋಳಿ ಸಾರು, ಮುದ್ದೆ ಸೇರಿದಂತೆ ಮಂಡ್ಯ ಶೈಲಿಯ ಮಾಂಸಾಹಾರವನ್ನು ವಿತರಿಸಿದ್ದೇವೆ. ನಮ್ಮ ಒತ್ತಡಕ್ಕೆ ಮಣಿದು ಸರ್ಕಾರ ಕೂಡ ಕಡೆಯ ಕ್ಷಣದಲ್ಲಿ ಅಧಿಕೃತವಾಗಿ ಮೊಟ್ಟೆ ವಿತರಿಸಿದೆ. ಈ ಮೂಲಕ ಹೊಸ ಇತಿಹಾಸ ಬರೆದಿದ್ದೇವೆ” ಎಂದಿದ್ದಾರೆ.

“ಮಾಂಸಾಹಾರ ವಿತರಣೆಗೆ ಮಂಡ್ಯದ ಶೇ.90ರಷ್ಟು ಜನರ ಬೆಂಬಲ ಇತ್ತು. ನಾವು ಮಾಂಸಾಹಾರ ವಿತರಿಸಿರುವುದು ಕೇವಲ ಜನರ ಸಂತೃಪ್ತಿಗಲ್ಲ. ಇದೊಂದು ಸಾಮಾಜಿಕ ಮಹತ್ವ ಸಾರಿದ ಹೋರಾಟ. ಈ ಮೂಲಕ ನಾವು 100 ವರ್ಷಗಳ ಆಹಾರ ಅಸಮಾನತೆಯನ್ನು ತೊಡೆದು ಹಾಕಿದ್ದೇವೆ. ಇದು ‘ಅಂಬೇಡ್ಕರ್ ಅವರು ಚೌಡಾರ್ ಕೆರೆ ನೀರು ಕುಡಿದಂತಾಗಿದೆ’ ಎಂದು ಹೇಳಿದ್ದಾರೆ.

“ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. ಅಲ್ಲೂ ಆಹಾರ ಅಸಮಾನತೆಯ ವಿರುದ್ದದ ಅಭಿಯಾನವನ್ನು ಮುಂದುವರೆಸುವಂತೆ ಅಲ್ಲಿನ ಪ್ರಗತಿಪರರು ಮತ್ತು ಸಮಾನ ಮನಸ್ಕರಿಗೆ ನಾವು ಪತ್ರ ಬರೆದು ಮನವಿ ಮಾಡುತ್ತೇವೆ. ಮಾಂಸಾಹಾರ ನಿಷೇಧಿಸುವ ಮೂಲಕ ಸರ್ಕಾರವೇ ಮುಂದೆ ನಿಂತು ‘ಆಹಾರ ಅಸಮಾನತೆ, ಅಸ್ಪೃಶ್ಯತೆ ಆಚರಿಸಬಾರದು. ಮುಂದಿನ ಸಮ್ಮೇಳನದಲ್ಲಾದರೂ ಸರಿಯಾದ ರೀತಿಯಲ್ಲಿ ಮಾಂಸಾಹಾರ ವಿತರಿಸಬೇಕು ಎಂದು ಕೃಷ್ಣೇಗೌಡ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸಿ.ಟಿ. ರವಿ ಅಶ್ಲೀಲ ಪದ ಬಳಸಿದ್ದಕ್ಕೆ ನಮ್ಮ ಬಳಿ ಸಾಕ್ಷಿ ಇದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...