Homeಆರೋಗ್ಯಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ - ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

ಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ – ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

- Advertisement -
- Advertisement -

ವೈದ್ಯರೊಬ್ಬರು ವ್ಯಕ್ತಿಯೊಬ್ಬನ ಸಣ್ಣಕರುಳಿನ ಆಪರೇಷನ್ ಮಾಡುವ ವಿಡಿಯೋ ಈಗ ಮತ್ತೆ (2015ರಿಂದಲೂ ಆಗಾಗ ಆಗುತ್ತಲೇ ಇದೆ) ವೈರಲ್ ಆಗಿದೆ. ಅದರ ಪ್ರಕಾರ, ವೈದ್ಯರು ಆ ವ್ಯಕ್ತಿಯ ಸಣ್ಣಕರುಳಿನಿಂದ ಜೀರ್ಣವಾಗದ ನ್ಯೂಡಲ್ಸ್ ತೆಗೆದಿದ್ದಾರೆ. ನ್ಯೂಡಲ್ಸ್ ಜೀರ್ಣವಾಗಲ್ಲ, ತಿನ್ನಬೇಡಿ…..’ ಎಂಬೆಲ್ಲ ಪುಕ್ಕಟೆ ವೈದ್ಯಕೀಯ ಸಲಹೆಯೂ ಇದರೊಂದಿಗೆ ಓಡಾಡುತ್ತ ಪೋಷಕರ ಕರುಳು ಚುರ್ ಎನ್ನುವಂತೆ ಮಾಡುತ್ತಿದೆ.

ವಿಡಿಯೋ ನೋಡಿ

ಇದನ್ನು ಮನವರಿಕೆ ಮಾಡಲು, ‘ಅಪೊಲೊ ಹಾಸ್ಪಿಟಲ್‍ನ ಶಸ್ತ್ರಚಿಕಿತ್ಸಕ ಡಾ. ಹರ್ಷ ಶುಕ್ಲಾ ಈ ಸರ್ಜರಿ ಮಾಡಿದ್ದಾರೆ’ ಎಂಬ ಸಾಲೂ ಇದೆ.
ಮಿಥ್ಯ: ನ್ಯೂಡಲ್ಸ್ ಜೀರ್ಣವಾಗುವುದಿಲ್ಲ ಎಂಬುದೇ ತಪ್ಪು ಕಲ್ಪನೆ. ಇಲ್ಲಿರುವ ವಿಡಿಯೋ ಶಸ್ತ್ರಚಿಕಿತ್ಸೆಯ ವಿಡಿಯೊವೇ. ಆದರೆ ವೈದ್ಯರು ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸ್ ಅಲ್ಲ.

ಸತ್ಯ: ಇಲ್ಲಿರುವ ವಿಡಿಯೋ 2015ರಿಂದಲೇ ಆಗಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈಗ ವ್ಯಾಟ್ಸಾಪ್‍ನಲ್ಲಿ ಮತ್ತೆ ವೈರಲ್ ಆಗಿದೆ. ಇಲ್ಲಿ ಇದನ್ನು ನೂರಾರು ಜನ ಹಿಂದೆಮುಂದೆ ನೋಡದೇ ಇದನ್ನು ಹರಡುತ್ತಿದ್ದರೆ, ಕೆಲವರು ಮಕ್ಕಳಿಗೆ ನ್ಯೂಡಲ್ಸ್ ನಂತಹ ಫುಡ್ ಅಪಾಯಕಾರಿ ಎಂಬ ಕಾಳಜಿಯಿಂದ ವೈರಲ್ ಮಾಡುತ್ತಿದ್ದಾರೆ. ಜಂಕ್‍ಫುಡ್ ಅಪಾಯ ಎನ್ನುವುದು ಸತ್ಯ ಸರಿ ಹೌದು. ಆದರೆ ನೂಡಲ್ಸ್ ಜೀರ್ಣವಾಗೋಲ್ಲ ಎಂಬ ಅವೈಜ್ಞಾನಿಕ ಮಾಹಿತಿಯ ಬಗ್ಗೆ ಅರಿವು ಮೂಡಿಸಲು, ಸಣ್ಣ ಕರುಳಿನಿಂದ ವೈದ್ಯರು ತೆಗೆದದ್ದು ನೂಡಲ್ಸ್ ಅಲ್ಲ, ಅವು ರೌಂಡ್‍ವಾಮ್ರ್ಸ್ ಎಂಬುದನ್ನು ತಿಳಿಸಲು ಈ ಬರಹ ಹಾಕುತ್ತಿದ್ದೇವೆ.

ಅಲ್ಟ್ ನ್ಯೂಸ್ ಈ ಕುರಿತಂತೆ ಫ್ಯಾಕ್ಟ್ ಚೆಕ್ ಮಾಡಿದಾಗ ಸಿಕ್ಕ ಸತ್ಯವಿದು: 2015, ಅಗಸ್ಟ್ 24ರಂದು ಈ ವಿಡಿಯೋವನ್ನು ಯುಟ್ಯೂಬ್‍ಗೆ ಅಪ್‍ಲೋಡ್ ಮಾಡಿದ್ದ ಡಾ. ಪರೇಶ್ ರೂಪಾರೆಲ್, ‘ಸಣ್ಣಕರುಳಿನಲ್ಲಿದ್ದ ಬಹುವಿಧದ ರೌಂಡ್ ವಾಮ್ರ್ಸ್, ಸರ್ಜರಿ ಮೂಲಕ ಹೊರತೆಗೆಯಲಾಯಿತು…’ ಎಂದು ಕ್ಯಾಪ್ಸನ್ ಹಾಕಿದ್ದರು. ಇದೇ ವಿಡಿಯೋವನ್ನು 2015ರಿಂದಲೇ ವೈರಲ್ ಮಾಡುತ್ತಿರುವವರು, ‘ಸಣ್ಣ ಕರುಳಿನಿಂದ ನ್ಯೂಡಲ್ಸ್ ಹೊರತೆಗೆಯಲಾಗಿದೆ. ನ್ಯೂಡಲ್ಸ್ ಜೀರ್ಣವಾಗಲ್ಲ. ಮಕ್ಕಳಿಗೆ ನ್ಯೂಡಲ್ಸ್ ಕೊಡಬೇಡಿ’ ಎಮದು ಪ್ರಸಾರ ಮಾಡುತ್ತಿದ್ದಾರೆ.

ಆದರೆ ಇದು ಅಸತ್ಯ, ಅದು ನ್ಯೂಡಲ್ಸ್ ಅಲ್ಲ, ರೌಂಡ್‍ವಾಮ್ರ್ಸ್ ಎಂದು ಸರ್ಜರಿ ಮಾಡಿದ ವೈದ್ಯರಷ್ಟೇ ಅಲ್ಲದೇ ವಿವಿಧ ತಜ್ಞ ವೈದ್ಯರು ಕೂಡ ನೂಡಲ್ಸ್ ಸುಲಭವಾಗಿ ಜೀರ್ಣ ಆಗುತ್ತವೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಹಲವಾರು ಪೋರ್ಟಲ್‍ಗಳು ಇದನ್ನೇ ಸಾಬೀತು ಮಾಡಿದ್ದರೂ ಈ ವಿಡಿಯೋ ತಪ್ಪು ಕ್ಯಾಪ್ಸನ್‍ಗಳೊಂದಿಗೆ ಪ್ರಸಾರವಾಗುತ್ತಲೇ ಇದೆ.

ತಜ್ಞವೈದ್ಯ ಡಾ. ಯೋಗೇಶ್ ಹರ್ವಾನಿ (ನೊಬಲ್ ಗ್ಯಾಸ್ಟ್ರೊ ಆಸ್ಪತ್ರೆ, ಅಹಮದಾಬಾದ್) ಪ್ರಕಾರ, ಸಣ್ಣ ಕರುಳಿನಲ್ಲಿ ಹುಳಗಳು ಕಾಣಿಸಿಕೊಳ್ಳುವುದು ಒಂದು ಸೋಂಕು. ಇದು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸರಿಯಾಗಿ ಬೇಯದ ಆಹಾರ ಸೇವನೆಯಿಂದ ದೊಡ್ಡವರಲ್ಲೂ, ಸ್ವಚ್ಚತೆಯಿಲ್ಲದ ಮಣ್ಣಿನಲ್ಲಿ ಆಟವಾಡಿ ಕೈತೊಳೆಯದೇ ಊಟ ಮಾಡುವ ಮಕ್ಕಳಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತದೆ. ಇದು ಕರುಳಿನಲ್ಲಿ ಅಡಚಣೆ ಉಂಟು ಮಾಡುತ್ತದೆ’ ಎಂದು ವಿವರಿಸಿದ್ದಾರೆ.
( ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...