Homeಆರೋಗ್ಯಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ - ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

ಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ – ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

- Advertisement -
- Advertisement -

ವೈದ್ಯರೊಬ್ಬರು ವ್ಯಕ್ತಿಯೊಬ್ಬನ ಸಣ್ಣಕರುಳಿನ ಆಪರೇಷನ್ ಮಾಡುವ ವಿಡಿಯೋ ಈಗ ಮತ್ತೆ (2015ರಿಂದಲೂ ಆಗಾಗ ಆಗುತ್ತಲೇ ಇದೆ) ವೈರಲ್ ಆಗಿದೆ. ಅದರ ಪ್ರಕಾರ, ವೈದ್ಯರು ಆ ವ್ಯಕ್ತಿಯ ಸಣ್ಣಕರುಳಿನಿಂದ ಜೀರ್ಣವಾಗದ ನ್ಯೂಡಲ್ಸ್ ತೆಗೆದಿದ್ದಾರೆ. ನ್ಯೂಡಲ್ಸ್ ಜೀರ್ಣವಾಗಲ್ಲ, ತಿನ್ನಬೇಡಿ…..’ ಎಂಬೆಲ್ಲ ಪುಕ್ಕಟೆ ವೈದ್ಯಕೀಯ ಸಲಹೆಯೂ ಇದರೊಂದಿಗೆ ಓಡಾಡುತ್ತ ಪೋಷಕರ ಕರುಳು ಚುರ್ ಎನ್ನುವಂತೆ ಮಾಡುತ್ತಿದೆ.

ವಿಡಿಯೋ ನೋಡಿ

ಇದನ್ನು ಮನವರಿಕೆ ಮಾಡಲು, ‘ಅಪೊಲೊ ಹಾಸ್ಪಿಟಲ್‍ನ ಶಸ್ತ್ರಚಿಕಿತ್ಸಕ ಡಾ. ಹರ್ಷ ಶುಕ್ಲಾ ಈ ಸರ್ಜರಿ ಮಾಡಿದ್ದಾರೆ’ ಎಂಬ ಸಾಲೂ ಇದೆ.
ಮಿಥ್ಯ: ನ್ಯೂಡಲ್ಸ್ ಜೀರ್ಣವಾಗುವುದಿಲ್ಲ ಎಂಬುದೇ ತಪ್ಪು ಕಲ್ಪನೆ. ಇಲ್ಲಿರುವ ವಿಡಿಯೋ ಶಸ್ತ್ರಚಿಕಿತ್ಸೆಯ ವಿಡಿಯೊವೇ. ಆದರೆ ವೈದ್ಯರು ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸ್ ಅಲ್ಲ.

ಸತ್ಯ: ಇಲ್ಲಿರುವ ವಿಡಿಯೋ 2015ರಿಂದಲೇ ಆಗಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈಗ ವ್ಯಾಟ್ಸಾಪ್‍ನಲ್ಲಿ ಮತ್ತೆ ವೈರಲ್ ಆಗಿದೆ. ಇಲ್ಲಿ ಇದನ್ನು ನೂರಾರು ಜನ ಹಿಂದೆಮುಂದೆ ನೋಡದೇ ಇದನ್ನು ಹರಡುತ್ತಿದ್ದರೆ, ಕೆಲವರು ಮಕ್ಕಳಿಗೆ ನ್ಯೂಡಲ್ಸ್ ನಂತಹ ಫುಡ್ ಅಪಾಯಕಾರಿ ಎಂಬ ಕಾಳಜಿಯಿಂದ ವೈರಲ್ ಮಾಡುತ್ತಿದ್ದಾರೆ. ಜಂಕ್‍ಫುಡ್ ಅಪಾಯ ಎನ್ನುವುದು ಸತ್ಯ ಸರಿ ಹೌದು. ಆದರೆ ನೂಡಲ್ಸ್ ಜೀರ್ಣವಾಗೋಲ್ಲ ಎಂಬ ಅವೈಜ್ಞಾನಿಕ ಮಾಹಿತಿಯ ಬಗ್ಗೆ ಅರಿವು ಮೂಡಿಸಲು, ಸಣ್ಣ ಕರುಳಿನಿಂದ ವೈದ್ಯರು ತೆಗೆದದ್ದು ನೂಡಲ್ಸ್ ಅಲ್ಲ, ಅವು ರೌಂಡ್‍ವಾಮ್ರ್ಸ್ ಎಂಬುದನ್ನು ತಿಳಿಸಲು ಈ ಬರಹ ಹಾಕುತ್ತಿದ್ದೇವೆ.

ಅಲ್ಟ್ ನ್ಯೂಸ್ ಈ ಕುರಿತಂತೆ ಫ್ಯಾಕ್ಟ್ ಚೆಕ್ ಮಾಡಿದಾಗ ಸಿಕ್ಕ ಸತ್ಯವಿದು: 2015, ಅಗಸ್ಟ್ 24ರಂದು ಈ ವಿಡಿಯೋವನ್ನು ಯುಟ್ಯೂಬ್‍ಗೆ ಅಪ್‍ಲೋಡ್ ಮಾಡಿದ್ದ ಡಾ. ಪರೇಶ್ ರೂಪಾರೆಲ್, ‘ಸಣ್ಣಕರುಳಿನಲ್ಲಿದ್ದ ಬಹುವಿಧದ ರೌಂಡ್ ವಾಮ್ರ್ಸ್, ಸರ್ಜರಿ ಮೂಲಕ ಹೊರತೆಗೆಯಲಾಯಿತು…’ ಎಂದು ಕ್ಯಾಪ್ಸನ್ ಹಾಕಿದ್ದರು. ಇದೇ ವಿಡಿಯೋವನ್ನು 2015ರಿಂದಲೇ ವೈರಲ್ ಮಾಡುತ್ತಿರುವವರು, ‘ಸಣ್ಣ ಕರುಳಿನಿಂದ ನ್ಯೂಡಲ್ಸ್ ಹೊರತೆಗೆಯಲಾಗಿದೆ. ನ್ಯೂಡಲ್ಸ್ ಜೀರ್ಣವಾಗಲ್ಲ. ಮಕ್ಕಳಿಗೆ ನ್ಯೂಡಲ್ಸ್ ಕೊಡಬೇಡಿ’ ಎಮದು ಪ್ರಸಾರ ಮಾಡುತ್ತಿದ್ದಾರೆ.

ಆದರೆ ಇದು ಅಸತ್ಯ, ಅದು ನ್ಯೂಡಲ್ಸ್ ಅಲ್ಲ, ರೌಂಡ್‍ವಾಮ್ರ್ಸ್ ಎಂದು ಸರ್ಜರಿ ಮಾಡಿದ ವೈದ್ಯರಷ್ಟೇ ಅಲ್ಲದೇ ವಿವಿಧ ತಜ್ಞ ವೈದ್ಯರು ಕೂಡ ನೂಡಲ್ಸ್ ಸುಲಭವಾಗಿ ಜೀರ್ಣ ಆಗುತ್ತವೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಹಲವಾರು ಪೋರ್ಟಲ್‍ಗಳು ಇದನ್ನೇ ಸಾಬೀತು ಮಾಡಿದ್ದರೂ ಈ ವಿಡಿಯೋ ತಪ್ಪು ಕ್ಯಾಪ್ಸನ್‍ಗಳೊಂದಿಗೆ ಪ್ರಸಾರವಾಗುತ್ತಲೇ ಇದೆ.

ತಜ್ಞವೈದ್ಯ ಡಾ. ಯೋಗೇಶ್ ಹರ್ವಾನಿ (ನೊಬಲ್ ಗ್ಯಾಸ್ಟ್ರೊ ಆಸ್ಪತ್ರೆ, ಅಹಮದಾಬಾದ್) ಪ್ರಕಾರ, ಸಣ್ಣ ಕರುಳಿನಲ್ಲಿ ಹುಳಗಳು ಕಾಣಿಸಿಕೊಳ್ಳುವುದು ಒಂದು ಸೋಂಕು. ಇದು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸರಿಯಾಗಿ ಬೇಯದ ಆಹಾರ ಸೇವನೆಯಿಂದ ದೊಡ್ಡವರಲ್ಲೂ, ಸ್ವಚ್ಚತೆಯಿಲ್ಲದ ಮಣ್ಣಿನಲ್ಲಿ ಆಟವಾಡಿ ಕೈತೊಳೆಯದೇ ಊಟ ಮಾಡುವ ಮಕ್ಕಳಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತದೆ. ಇದು ಕರುಳಿನಲ್ಲಿ ಅಡಚಣೆ ಉಂಟು ಮಾಡುತ್ತದೆ’ ಎಂದು ವಿವರಿಸಿದ್ದಾರೆ.
( ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...