Homeಆರೋಗ್ಯಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ - ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

ಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ – ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

- Advertisement -
- Advertisement -

ವೈದ್ಯರೊಬ್ಬರು ವ್ಯಕ್ತಿಯೊಬ್ಬನ ಸಣ್ಣಕರುಳಿನ ಆಪರೇಷನ್ ಮಾಡುವ ವಿಡಿಯೋ ಈಗ ಮತ್ತೆ (2015ರಿಂದಲೂ ಆಗಾಗ ಆಗುತ್ತಲೇ ಇದೆ) ವೈರಲ್ ಆಗಿದೆ. ಅದರ ಪ್ರಕಾರ, ವೈದ್ಯರು ಆ ವ್ಯಕ್ತಿಯ ಸಣ್ಣಕರುಳಿನಿಂದ ಜೀರ್ಣವಾಗದ ನ್ಯೂಡಲ್ಸ್ ತೆಗೆದಿದ್ದಾರೆ. ನ್ಯೂಡಲ್ಸ್ ಜೀರ್ಣವಾಗಲ್ಲ, ತಿನ್ನಬೇಡಿ…..’ ಎಂಬೆಲ್ಲ ಪುಕ್ಕಟೆ ವೈದ್ಯಕೀಯ ಸಲಹೆಯೂ ಇದರೊಂದಿಗೆ ಓಡಾಡುತ್ತ ಪೋಷಕರ ಕರುಳು ಚುರ್ ಎನ್ನುವಂತೆ ಮಾಡುತ್ತಿದೆ.

ವಿಡಿಯೋ ನೋಡಿ

ಇದನ್ನು ಮನವರಿಕೆ ಮಾಡಲು, ‘ಅಪೊಲೊ ಹಾಸ್ಪಿಟಲ್‍ನ ಶಸ್ತ್ರಚಿಕಿತ್ಸಕ ಡಾ. ಹರ್ಷ ಶುಕ್ಲಾ ಈ ಸರ್ಜರಿ ಮಾಡಿದ್ದಾರೆ’ ಎಂಬ ಸಾಲೂ ಇದೆ.
ಮಿಥ್ಯ: ನ್ಯೂಡಲ್ಸ್ ಜೀರ್ಣವಾಗುವುದಿಲ್ಲ ಎಂಬುದೇ ತಪ್ಪು ಕಲ್ಪನೆ. ಇಲ್ಲಿರುವ ವಿಡಿಯೋ ಶಸ್ತ್ರಚಿಕಿತ್ಸೆಯ ವಿಡಿಯೊವೇ. ಆದರೆ ವೈದ್ಯರು ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸ್ ಅಲ್ಲ.

ಸತ್ಯ: ಇಲ್ಲಿರುವ ವಿಡಿಯೋ 2015ರಿಂದಲೇ ಆಗಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈಗ ವ್ಯಾಟ್ಸಾಪ್‍ನಲ್ಲಿ ಮತ್ತೆ ವೈರಲ್ ಆಗಿದೆ. ಇಲ್ಲಿ ಇದನ್ನು ನೂರಾರು ಜನ ಹಿಂದೆಮುಂದೆ ನೋಡದೇ ಇದನ್ನು ಹರಡುತ್ತಿದ್ದರೆ, ಕೆಲವರು ಮಕ್ಕಳಿಗೆ ನ್ಯೂಡಲ್ಸ್ ನಂತಹ ಫುಡ್ ಅಪಾಯಕಾರಿ ಎಂಬ ಕಾಳಜಿಯಿಂದ ವೈರಲ್ ಮಾಡುತ್ತಿದ್ದಾರೆ. ಜಂಕ್‍ಫುಡ್ ಅಪಾಯ ಎನ್ನುವುದು ಸತ್ಯ ಸರಿ ಹೌದು. ಆದರೆ ನೂಡಲ್ಸ್ ಜೀರ್ಣವಾಗೋಲ್ಲ ಎಂಬ ಅವೈಜ್ಞಾನಿಕ ಮಾಹಿತಿಯ ಬಗ್ಗೆ ಅರಿವು ಮೂಡಿಸಲು, ಸಣ್ಣ ಕರುಳಿನಿಂದ ವೈದ್ಯರು ತೆಗೆದದ್ದು ನೂಡಲ್ಸ್ ಅಲ್ಲ, ಅವು ರೌಂಡ್‍ವಾಮ್ರ್ಸ್ ಎಂಬುದನ್ನು ತಿಳಿಸಲು ಈ ಬರಹ ಹಾಕುತ್ತಿದ್ದೇವೆ.

ಅಲ್ಟ್ ನ್ಯೂಸ್ ಈ ಕುರಿತಂತೆ ಫ್ಯಾಕ್ಟ್ ಚೆಕ್ ಮಾಡಿದಾಗ ಸಿಕ್ಕ ಸತ್ಯವಿದು: 2015, ಅಗಸ್ಟ್ 24ರಂದು ಈ ವಿಡಿಯೋವನ್ನು ಯುಟ್ಯೂಬ್‍ಗೆ ಅಪ್‍ಲೋಡ್ ಮಾಡಿದ್ದ ಡಾ. ಪರೇಶ್ ರೂಪಾರೆಲ್, ‘ಸಣ್ಣಕರುಳಿನಲ್ಲಿದ್ದ ಬಹುವಿಧದ ರೌಂಡ್ ವಾಮ್ರ್ಸ್, ಸರ್ಜರಿ ಮೂಲಕ ಹೊರತೆಗೆಯಲಾಯಿತು…’ ಎಂದು ಕ್ಯಾಪ್ಸನ್ ಹಾಕಿದ್ದರು. ಇದೇ ವಿಡಿಯೋವನ್ನು 2015ರಿಂದಲೇ ವೈರಲ್ ಮಾಡುತ್ತಿರುವವರು, ‘ಸಣ್ಣ ಕರುಳಿನಿಂದ ನ್ಯೂಡಲ್ಸ್ ಹೊರತೆಗೆಯಲಾಗಿದೆ. ನ್ಯೂಡಲ್ಸ್ ಜೀರ್ಣವಾಗಲ್ಲ. ಮಕ್ಕಳಿಗೆ ನ್ಯೂಡಲ್ಸ್ ಕೊಡಬೇಡಿ’ ಎಮದು ಪ್ರಸಾರ ಮಾಡುತ್ತಿದ್ದಾರೆ.

ಆದರೆ ಇದು ಅಸತ್ಯ, ಅದು ನ್ಯೂಡಲ್ಸ್ ಅಲ್ಲ, ರೌಂಡ್‍ವಾಮ್ರ್ಸ್ ಎಂದು ಸರ್ಜರಿ ಮಾಡಿದ ವೈದ್ಯರಷ್ಟೇ ಅಲ್ಲದೇ ವಿವಿಧ ತಜ್ಞ ವೈದ್ಯರು ಕೂಡ ನೂಡಲ್ಸ್ ಸುಲಭವಾಗಿ ಜೀರ್ಣ ಆಗುತ್ತವೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಹಲವಾರು ಪೋರ್ಟಲ್‍ಗಳು ಇದನ್ನೇ ಸಾಬೀತು ಮಾಡಿದ್ದರೂ ಈ ವಿಡಿಯೋ ತಪ್ಪು ಕ್ಯಾಪ್ಸನ್‍ಗಳೊಂದಿಗೆ ಪ್ರಸಾರವಾಗುತ್ತಲೇ ಇದೆ.

ತಜ್ಞವೈದ್ಯ ಡಾ. ಯೋಗೇಶ್ ಹರ್ವಾನಿ (ನೊಬಲ್ ಗ್ಯಾಸ್ಟ್ರೊ ಆಸ್ಪತ್ರೆ, ಅಹಮದಾಬಾದ್) ಪ್ರಕಾರ, ಸಣ್ಣ ಕರುಳಿನಲ್ಲಿ ಹುಳಗಳು ಕಾಣಿಸಿಕೊಳ್ಳುವುದು ಒಂದು ಸೋಂಕು. ಇದು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸರಿಯಾಗಿ ಬೇಯದ ಆಹಾರ ಸೇವನೆಯಿಂದ ದೊಡ್ಡವರಲ್ಲೂ, ಸ್ವಚ್ಚತೆಯಿಲ್ಲದ ಮಣ್ಣಿನಲ್ಲಿ ಆಟವಾಡಿ ಕೈತೊಳೆಯದೇ ಊಟ ಮಾಡುವ ಮಕ್ಕಳಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತದೆ. ಇದು ಕರುಳಿನಲ್ಲಿ ಅಡಚಣೆ ಉಂಟು ಮಾಡುತ್ತದೆ’ ಎಂದು ವಿವರಿಸಿದ್ದಾರೆ.
( ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...