Homeಆರೋಗ್ಯಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ - ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

ಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ – ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

- Advertisement -
- Advertisement -

ವೈದ್ಯರೊಬ್ಬರು ವ್ಯಕ್ತಿಯೊಬ್ಬನ ಸಣ್ಣಕರುಳಿನ ಆಪರೇಷನ್ ಮಾಡುವ ವಿಡಿಯೋ ಈಗ ಮತ್ತೆ (2015ರಿಂದಲೂ ಆಗಾಗ ಆಗುತ್ತಲೇ ಇದೆ) ವೈರಲ್ ಆಗಿದೆ. ಅದರ ಪ್ರಕಾರ, ವೈದ್ಯರು ಆ ವ್ಯಕ್ತಿಯ ಸಣ್ಣಕರುಳಿನಿಂದ ಜೀರ್ಣವಾಗದ ನ್ಯೂಡಲ್ಸ್ ತೆಗೆದಿದ್ದಾರೆ. ನ್ಯೂಡಲ್ಸ್ ಜೀರ್ಣವಾಗಲ್ಲ, ತಿನ್ನಬೇಡಿ…..’ ಎಂಬೆಲ್ಲ ಪುಕ್ಕಟೆ ವೈದ್ಯಕೀಯ ಸಲಹೆಯೂ ಇದರೊಂದಿಗೆ ಓಡಾಡುತ್ತ ಪೋಷಕರ ಕರುಳು ಚುರ್ ಎನ್ನುವಂತೆ ಮಾಡುತ್ತಿದೆ.

ವಿಡಿಯೋ ನೋಡಿ

ಇದನ್ನು ಮನವರಿಕೆ ಮಾಡಲು, ‘ಅಪೊಲೊ ಹಾಸ್ಪಿಟಲ್‍ನ ಶಸ್ತ್ರಚಿಕಿತ್ಸಕ ಡಾ. ಹರ್ಷ ಶುಕ್ಲಾ ಈ ಸರ್ಜರಿ ಮಾಡಿದ್ದಾರೆ’ ಎಂಬ ಸಾಲೂ ಇದೆ.
ಮಿಥ್ಯ: ನ್ಯೂಡಲ್ಸ್ ಜೀರ್ಣವಾಗುವುದಿಲ್ಲ ಎಂಬುದೇ ತಪ್ಪು ಕಲ್ಪನೆ. ಇಲ್ಲಿರುವ ವಿಡಿಯೋ ಶಸ್ತ್ರಚಿಕಿತ್ಸೆಯ ವಿಡಿಯೊವೇ. ಆದರೆ ವೈದ್ಯರು ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸ್ ಅಲ್ಲ.

ಸತ್ಯ: ಇಲ್ಲಿರುವ ವಿಡಿಯೋ 2015ರಿಂದಲೇ ಆಗಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈಗ ವ್ಯಾಟ್ಸಾಪ್‍ನಲ್ಲಿ ಮತ್ತೆ ವೈರಲ್ ಆಗಿದೆ. ಇಲ್ಲಿ ಇದನ್ನು ನೂರಾರು ಜನ ಹಿಂದೆಮುಂದೆ ನೋಡದೇ ಇದನ್ನು ಹರಡುತ್ತಿದ್ದರೆ, ಕೆಲವರು ಮಕ್ಕಳಿಗೆ ನ್ಯೂಡಲ್ಸ್ ನಂತಹ ಫುಡ್ ಅಪಾಯಕಾರಿ ಎಂಬ ಕಾಳಜಿಯಿಂದ ವೈರಲ್ ಮಾಡುತ್ತಿದ್ದಾರೆ. ಜಂಕ್‍ಫುಡ್ ಅಪಾಯ ಎನ್ನುವುದು ಸತ್ಯ ಸರಿ ಹೌದು. ಆದರೆ ನೂಡಲ್ಸ್ ಜೀರ್ಣವಾಗೋಲ್ಲ ಎಂಬ ಅವೈಜ್ಞಾನಿಕ ಮಾಹಿತಿಯ ಬಗ್ಗೆ ಅರಿವು ಮೂಡಿಸಲು, ಸಣ್ಣ ಕರುಳಿನಿಂದ ವೈದ್ಯರು ತೆಗೆದದ್ದು ನೂಡಲ್ಸ್ ಅಲ್ಲ, ಅವು ರೌಂಡ್‍ವಾಮ್ರ್ಸ್ ಎಂಬುದನ್ನು ತಿಳಿಸಲು ಈ ಬರಹ ಹಾಕುತ್ತಿದ್ದೇವೆ.

ಅಲ್ಟ್ ನ್ಯೂಸ್ ಈ ಕುರಿತಂತೆ ಫ್ಯಾಕ್ಟ್ ಚೆಕ್ ಮಾಡಿದಾಗ ಸಿಕ್ಕ ಸತ್ಯವಿದು: 2015, ಅಗಸ್ಟ್ 24ರಂದು ಈ ವಿಡಿಯೋವನ್ನು ಯುಟ್ಯೂಬ್‍ಗೆ ಅಪ್‍ಲೋಡ್ ಮಾಡಿದ್ದ ಡಾ. ಪರೇಶ್ ರೂಪಾರೆಲ್, ‘ಸಣ್ಣಕರುಳಿನಲ್ಲಿದ್ದ ಬಹುವಿಧದ ರೌಂಡ್ ವಾಮ್ರ್ಸ್, ಸರ್ಜರಿ ಮೂಲಕ ಹೊರತೆಗೆಯಲಾಯಿತು…’ ಎಂದು ಕ್ಯಾಪ್ಸನ್ ಹಾಕಿದ್ದರು. ಇದೇ ವಿಡಿಯೋವನ್ನು 2015ರಿಂದಲೇ ವೈರಲ್ ಮಾಡುತ್ತಿರುವವರು, ‘ಸಣ್ಣ ಕರುಳಿನಿಂದ ನ್ಯೂಡಲ್ಸ್ ಹೊರತೆಗೆಯಲಾಗಿದೆ. ನ್ಯೂಡಲ್ಸ್ ಜೀರ್ಣವಾಗಲ್ಲ. ಮಕ್ಕಳಿಗೆ ನ್ಯೂಡಲ್ಸ್ ಕೊಡಬೇಡಿ’ ಎಮದು ಪ್ರಸಾರ ಮಾಡುತ್ತಿದ್ದಾರೆ.

ಆದರೆ ಇದು ಅಸತ್ಯ, ಅದು ನ್ಯೂಡಲ್ಸ್ ಅಲ್ಲ, ರೌಂಡ್‍ವಾಮ್ರ್ಸ್ ಎಂದು ಸರ್ಜರಿ ಮಾಡಿದ ವೈದ್ಯರಷ್ಟೇ ಅಲ್ಲದೇ ವಿವಿಧ ತಜ್ಞ ವೈದ್ಯರು ಕೂಡ ನೂಡಲ್ಸ್ ಸುಲಭವಾಗಿ ಜೀರ್ಣ ಆಗುತ್ತವೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಹಲವಾರು ಪೋರ್ಟಲ್‍ಗಳು ಇದನ್ನೇ ಸಾಬೀತು ಮಾಡಿದ್ದರೂ ಈ ವಿಡಿಯೋ ತಪ್ಪು ಕ್ಯಾಪ್ಸನ್‍ಗಳೊಂದಿಗೆ ಪ್ರಸಾರವಾಗುತ್ತಲೇ ಇದೆ.

ತಜ್ಞವೈದ್ಯ ಡಾ. ಯೋಗೇಶ್ ಹರ್ವಾನಿ (ನೊಬಲ್ ಗ್ಯಾಸ್ಟ್ರೊ ಆಸ್ಪತ್ರೆ, ಅಹಮದಾಬಾದ್) ಪ್ರಕಾರ, ಸಣ್ಣ ಕರುಳಿನಲ್ಲಿ ಹುಳಗಳು ಕಾಣಿಸಿಕೊಳ್ಳುವುದು ಒಂದು ಸೋಂಕು. ಇದು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸರಿಯಾಗಿ ಬೇಯದ ಆಹಾರ ಸೇವನೆಯಿಂದ ದೊಡ್ಡವರಲ್ಲೂ, ಸ್ವಚ್ಚತೆಯಿಲ್ಲದ ಮಣ್ಣಿನಲ್ಲಿ ಆಟವಾಡಿ ಕೈತೊಳೆಯದೇ ಊಟ ಮಾಡುವ ಮಕ್ಕಳಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತದೆ. ಇದು ಕರುಳಿನಲ್ಲಿ ಅಡಚಣೆ ಉಂಟು ಮಾಡುತ್ತದೆ’ ಎಂದು ವಿವರಿಸಿದ್ದಾರೆ.
( ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...