Homeಆರೋಗ್ಯಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ - ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

ಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ – ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

- Advertisement -
- Advertisement -

ವೈದ್ಯರೊಬ್ಬರು ವ್ಯಕ್ತಿಯೊಬ್ಬನ ಸಣ್ಣಕರುಳಿನ ಆಪರೇಷನ್ ಮಾಡುವ ವಿಡಿಯೋ ಈಗ ಮತ್ತೆ (2015ರಿಂದಲೂ ಆಗಾಗ ಆಗುತ್ತಲೇ ಇದೆ) ವೈರಲ್ ಆಗಿದೆ. ಅದರ ಪ್ರಕಾರ, ವೈದ್ಯರು ಆ ವ್ಯಕ್ತಿಯ ಸಣ್ಣಕರುಳಿನಿಂದ ಜೀರ್ಣವಾಗದ ನ್ಯೂಡಲ್ಸ್ ತೆಗೆದಿದ್ದಾರೆ. ನ್ಯೂಡಲ್ಸ್ ಜೀರ್ಣವಾಗಲ್ಲ, ತಿನ್ನಬೇಡಿ…..’ ಎಂಬೆಲ್ಲ ಪುಕ್ಕಟೆ ವೈದ್ಯಕೀಯ ಸಲಹೆಯೂ ಇದರೊಂದಿಗೆ ಓಡಾಡುತ್ತ ಪೋಷಕರ ಕರುಳು ಚುರ್ ಎನ್ನುವಂತೆ ಮಾಡುತ್ತಿದೆ.

ವಿಡಿಯೋ ನೋಡಿ

ಇದನ್ನು ಮನವರಿಕೆ ಮಾಡಲು, ‘ಅಪೊಲೊ ಹಾಸ್ಪಿಟಲ್‍ನ ಶಸ್ತ್ರಚಿಕಿತ್ಸಕ ಡಾ. ಹರ್ಷ ಶುಕ್ಲಾ ಈ ಸರ್ಜರಿ ಮಾಡಿದ್ದಾರೆ’ ಎಂಬ ಸಾಲೂ ಇದೆ.
ಮಿಥ್ಯ: ನ್ಯೂಡಲ್ಸ್ ಜೀರ್ಣವಾಗುವುದಿಲ್ಲ ಎಂಬುದೇ ತಪ್ಪು ಕಲ್ಪನೆ. ಇಲ್ಲಿರುವ ವಿಡಿಯೋ ಶಸ್ತ್ರಚಿಕಿತ್ಸೆಯ ವಿಡಿಯೊವೇ. ಆದರೆ ವೈದ್ಯರು ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸ್ ಅಲ್ಲ.

ಸತ್ಯ: ಇಲ್ಲಿರುವ ವಿಡಿಯೋ 2015ರಿಂದಲೇ ಆಗಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈಗ ವ್ಯಾಟ್ಸಾಪ್‍ನಲ್ಲಿ ಮತ್ತೆ ವೈರಲ್ ಆಗಿದೆ. ಇಲ್ಲಿ ಇದನ್ನು ನೂರಾರು ಜನ ಹಿಂದೆಮುಂದೆ ನೋಡದೇ ಇದನ್ನು ಹರಡುತ್ತಿದ್ದರೆ, ಕೆಲವರು ಮಕ್ಕಳಿಗೆ ನ್ಯೂಡಲ್ಸ್ ನಂತಹ ಫುಡ್ ಅಪಾಯಕಾರಿ ಎಂಬ ಕಾಳಜಿಯಿಂದ ವೈರಲ್ ಮಾಡುತ್ತಿದ್ದಾರೆ. ಜಂಕ್‍ಫುಡ್ ಅಪಾಯ ಎನ್ನುವುದು ಸತ್ಯ ಸರಿ ಹೌದು. ಆದರೆ ನೂಡಲ್ಸ್ ಜೀರ್ಣವಾಗೋಲ್ಲ ಎಂಬ ಅವೈಜ್ಞಾನಿಕ ಮಾಹಿತಿಯ ಬಗ್ಗೆ ಅರಿವು ಮೂಡಿಸಲು, ಸಣ್ಣ ಕರುಳಿನಿಂದ ವೈದ್ಯರು ತೆಗೆದದ್ದು ನೂಡಲ್ಸ್ ಅಲ್ಲ, ಅವು ರೌಂಡ್‍ವಾಮ್ರ್ಸ್ ಎಂಬುದನ್ನು ತಿಳಿಸಲು ಈ ಬರಹ ಹಾಕುತ್ತಿದ್ದೇವೆ.

ಅಲ್ಟ್ ನ್ಯೂಸ್ ಈ ಕುರಿತಂತೆ ಫ್ಯಾಕ್ಟ್ ಚೆಕ್ ಮಾಡಿದಾಗ ಸಿಕ್ಕ ಸತ್ಯವಿದು: 2015, ಅಗಸ್ಟ್ 24ರಂದು ಈ ವಿಡಿಯೋವನ್ನು ಯುಟ್ಯೂಬ್‍ಗೆ ಅಪ್‍ಲೋಡ್ ಮಾಡಿದ್ದ ಡಾ. ಪರೇಶ್ ರೂಪಾರೆಲ್, ‘ಸಣ್ಣಕರುಳಿನಲ್ಲಿದ್ದ ಬಹುವಿಧದ ರೌಂಡ್ ವಾಮ್ರ್ಸ್, ಸರ್ಜರಿ ಮೂಲಕ ಹೊರತೆಗೆಯಲಾಯಿತು…’ ಎಂದು ಕ್ಯಾಪ್ಸನ್ ಹಾಕಿದ್ದರು. ಇದೇ ವಿಡಿಯೋವನ್ನು 2015ರಿಂದಲೇ ವೈರಲ್ ಮಾಡುತ್ತಿರುವವರು, ‘ಸಣ್ಣ ಕರುಳಿನಿಂದ ನ್ಯೂಡಲ್ಸ್ ಹೊರತೆಗೆಯಲಾಗಿದೆ. ನ್ಯೂಡಲ್ಸ್ ಜೀರ್ಣವಾಗಲ್ಲ. ಮಕ್ಕಳಿಗೆ ನ್ಯೂಡಲ್ಸ್ ಕೊಡಬೇಡಿ’ ಎಮದು ಪ್ರಸಾರ ಮಾಡುತ್ತಿದ್ದಾರೆ.

ಆದರೆ ಇದು ಅಸತ್ಯ, ಅದು ನ್ಯೂಡಲ್ಸ್ ಅಲ್ಲ, ರೌಂಡ್‍ವಾಮ್ರ್ಸ್ ಎಂದು ಸರ್ಜರಿ ಮಾಡಿದ ವೈದ್ಯರಷ್ಟೇ ಅಲ್ಲದೇ ವಿವಿಧ ತಜ್ಞ ವೈದ್ಯರು ಕೂಡ ನೂಡಲ್ಸ್ ಸುಲಭವಾಗಿ ಜೀರ್ಣ ಆಗುತ್ತವೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಹಲವಾರು ಪೋರ್ಟಲ್‍ಗಳು ಇದನ್ನೇ ಸಾಬೀತು ಮಾಡಿದ್ದರೂ ಈ ವಿಡಿಯೋ ತಪ್ಪು ಕ್ಯಾಪ್ಸನ್‍ಗಳೊಂದಿಗೆ ಪ್ರಸಾರವಾಗುತ್ತಲೇ ಇದೆ.

ತಜ್ಞವೈದ್ಯ ಡಾ. ಯೋಗೇಶ್ ಹರ್ವಾನಿ (ನೊಬಲ್ ಗ್ಯಾಸ್ಟ್ರೊ ಆಸ್ಪತ್ರೆ, ಅಹಮದಾಬಾದ್) ಪ್ರಕಾರ, ಸಣ್ಣ ಕರುಳಿನಲ್ಲಿ ಹುಳಗಳು ಕಾಣಿಸಿಕೊಳ್ಳುವುದು ಒಂದು ಸೋಂಕು. ಇದು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸರಿಯಾಗಿ ಬೇಯದ ಆಹಾರ ಸೇವನೆಯಿಂದ ದೊಡ್ಡವರಲ್ಲೂ, ಸ್ವಚ್ಚತೆಯಿಲ್ಲದ ಮಣ್ಣಿನಲ್ಲಿ ಆಟವಾಡಿ ಕೈತೊಳೆಯದೇ ಊಟ ಮಾಡುವ ಮಕ್ಕಳಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತದೆ. ಇದು ಕರುಳಿನಲ್ಲಿ ಅಡಚಣೆ ಉಂಟು ಮಾಡುತ್ತದೆ’ ಎಂದು ವಿವರಿಸಿದ್ದಾರೆ.
( ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....