Homeಆರೋಗ್ಯಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ - ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

ಫ್ಯಾಕ್ಟ್ ಚೆಕ್: ಕರುಳು ‘ಕಿವುಚುವ’ ವಿಡಿಯೋ – ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸಾ?

- Advertisement -
- Advertisement -

ವೈದ್ಯರೊಬ್ಬರು ವ್ಯಕ್ತಿಯೊಬ್ಬನ ಸಣ್ಣಕರುಳಿನ ಆಪರೇಷನ್ ಮಾಡುವ ವಿಡಿಯೋ ಈಗ ಮತ್ತೆ (2015ರಿಂದಲೂ ಆಗಾಗ ಆಗುತ್ತಲೇ ಇದೆ) ವೈರಲ್ ಆಗಿದೆ. ಅದರ ಪ್ರಕಾರ, ವೈದ್ಯರು ಆ ವ್ಯಕ್ತಿಯ ಸಣ್ಣಕರುಳಿನಿಂದ ಜೀರ್ಣವಾಗದ ನ್ಯೂಡಲ್ಸ್ ತೆಗೆದಿದ್ದಾರೆ. ನ್ಯೂಡಲ್ಸ್ ಜೀರ್ಣವಾಗಲ್ಲ, ತಿನ್ನಬೇಡಿ…..’ ಎಂಬೆಲ್ಲ ಪುಕ್ಕಟೆ ವೈದ್ಯಕೀಯ ಸಲಹೆಯೂ ಇದರೊಂದಿಗೆ ಓಡಾಡುತ್ತ ಪೋಷಕರ ಕರುಳು ಚುರ್ ಎನ್ನುವಂತೆ ಮಾಡುತ್ತಿದೆ.

ವಿಡಿಯೋ ನೋಡಿ

ಇದನ್ನು ಮನವರಿಕೆ ಮಾಡಲು, ‘ಅಪೊಲೊ ಹಾಸ್ಪಿಟಲ್‍ನ ಶಸ್ತ್ರಚಿಕಿತ್ಸಕ ಡಾ. ಹರ್ಷ ಶುಕ್ಲಾ ಈ ಸರ್ಜರಿ ಮಾಡಿದ್ದಾರೆ’ ಎಂಬ ಸಾಲೂ ಇದೆ.
ಮಿಥ್ಯ: ನ್ಯೂಡಲ್ಸ್ ಜೀರ್ಣವಾಗುವುದಿಲ್ಲ ಎಂಬುದೇ ತಪ್ಪು ಕಲ್ಪನೆ. ಇಲ್ಲಿರುವ ವಿಡಿಯೋ ಶಸ್ತ್ರಚಿಕಿತ್ಸೆಯ ವಿಡಿಯೊವೇ. ಆದರೆ ವೈದ್ಯರು ಹೊಟ್ಟೆಯಿಂದ ಹೊರತೆಗೆದಿದ್ದು ನ್ಯೂಡಲ್ಸ್ ಅಲ್ಲ.

ಸತ್ಯ: ಇಲ್ಲಿರುವ ವಿಡಿಯೋ 2015ರಿಂದಲೇ ಆಗಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಈಗ ವ್ಯಾಟ್ಸಾಪ್‍ನಲ್ಲಿ ಮತ್ತೆ ವೈರಲ್ ಆಗಿದೆ. ಇಲ್ಲಿ ಇದನ್ನು ನೂರಾರು ಜನ ಹಿಂದೆಮುಂದೆ ನೋಡದೇ ಇದನ್ನು ಹರಡುತ್ತಿದ್ದರೆ, ಕೆಲವರು ಮಕ್ಕಳಿಗೆ ನ್ಯೂಡಲ್ಸ್ ನಂತಹ ಫುಡ್ ಅಪಾಯಕಾರಿ ಎಂಬ ಕಾಳಜಿಯಿಂದ ವೈರಲ್ ಮಾಡುತ್ತಿದ್ದಾರೆ. ಜಂಕ್‍ಫುಡ್ ಅಪಾಯ ಎನ್ನುವುದು ಸತ್ಯ ಸರಿ ಹೌದು. ಆದರೆ ನೂಡಲ್ಸ್ ಜೀರ್ಣವಾಗೋಲ್ಲ ಎಂಬ ಅವೈಜ್ಞಾನಿಕ ಮಾಹಿತಿಯ ಬಗ್ಗೆ ಅರಿವು ಮೂಡಿಸಲು, ಸಣ್ಣ ಕರುಳಿನಿಂದ ವೈದ್ಯರು ತೆಗೆದದ್ದು ನೂಡಲ್ಸ್ ಅಲ್ಲ, ಅವು ರೌಂಡ್‍ವಾಮ್ರ್ಸ್ ಎಂಬುದನ್ನು ತಿಳಿಸಲು ಈ ಬರಹ ಹಾಕುತ್ತಿದ್ದೇವೆ.

ಅಲ್ಟ್ ನ್ಯೂಸ್ ಈ ಕುರಿತಂತೆ ಫ್ಯಾಕ್ಟ್ ಚೆಕ್ ಮಾಡಿದಾಗ ಸಿಕ್ಕ ಸತ್ಯವಿದು: 2015, ಅಗಸ್ಟ್ 24ರಂದು ಈ ವಿಡಿಯೋವನ್ನು ಯುಟ್ಯೂಬ್‍ಗೆ ಅಪ್‍ಲೋಡ್ ಮಾಡಿದ್ದ ಡಾ. ಪರೇಶ್ ರೂಪಾರೆಲ್, ‘ಸಣ್ಣಕರುಳಿನಲ್ಲಿದ್ದ ಬಹುವಿಧದ ರೌಂಡ್ ವಾಮ್ರ್ಸ್, ಸರ್ಜರಿ ಮೂಲಕ ಹೊರತೆಗೆಯಲಾಯಿತು…’ ಎಂದು ಕ್ಯಾಪ್ಸನ್ ಹಾಕಿದ್ದರು. ಇದೇ ವಿಡಿಯೋವನ್ನು 2015ರಿಂದಲೇ ವೈರಲ್ ಮಾಡುತ್ತಿರುವವರು, ‘ಸಣ್ಣ ಕರುಳಿನಿಂದ ನ್ಯೂಡಲ್ಸ್ ಹೊರತೆಗೆಯಲಾಗಿದೆ. ನ್ಯೂಡಲ್ಸ್ ಜೀರ್ಣವಾಗಲ್ಲ. ಮಕ್ಕಳಿಗೆ ನ್ಯೂಡಲ್ಸ್ ಕೊಡಬೇಡಿ’ ಎಮದು ಪ್ರಸಾರ ಮಾಡುತ್ತಿದ್ದಾರೆ.

ಆದರೆ ಇದು ಅಸತ್ಯ, ಅದು ನ್ಯೂಡಲ್ಸ್ ಅಲ್ಲ, ರೌಂಡ್‍ವಾಮ್ರ್ಸ್ ಎಂದು ಸರ್ಜರಿ ಮಾಡಿದ ವೈದ್ಯರಷ್ಟೇ ಅಲ್ಲದೇ ವಿವಿಧ ತಜ್ಞ ವೈದ್ಯರು ಕೂಡ ನೂಡಲ್ಸ್ ಸುಲಭವಾಗಿ ಜೀರ್ಣ ಆಗುತ್ತವೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಹಲವಾರು ಪೋರ್ಟಲ್‍ಗಳು ಇದನ್ನೇ ಸಾಬೀತು ಮಾಡಿದ್ದರೂ ಈ ವಿಡಿಯೋ ತಪ್ಪು ಕ್ಯಾಪ್ಸನ್‍ಗಳೊಂದಿಗೆ ಪ್ರಸಾರವಾಗುತ್ತಲೇ ಇದೆ.

ತಜ್ಞವೈದ್ಯ ಡಾ. ಯೋಗೇಶ್ ಹರ್ವಾನಿ (ನೊಬಲ್ ಗ್ಯಾಸ್ಟ್ರೊ ಆಸ್ಪತ್ರೆ, ಅಹಮದಾಬಾದ್) ಪ್ರಕಾರ, ಸಣ್ಣ ಕರುಳಿನಲ್ಲಿ ಹುಳಗಳು ಕಾಣಿಸಿಕೊಳ್ಳುವುದು ಒಂದು ಸೋಂಕು. ಇದು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸರಿಯಾಗಿ ಬೇಯದ ಆಹಾರ ಸೇವನೆಯಿಂದ ದೊಡ್ಡವರಲ್ಲೂ, ಸ್ವಚ್ಚತೆಯಿಲ್ಲದ ಮಣ್ಣಿನಲ್ಲಿ ಆಟವಾಡಿ ಕೈತೊಳೆಯದೇ ಊಟ ಮಾಡುವ ಮಕ್ಕಳಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತದೆ. ಇದು ಕರುಳಿನಲ್ಲಿ ಅಡಚಣೆ ಉಂಟು ಮಾಡುತ್ತದೆ’ ಎಂದು ವಿವರಿಸಿದ್ದಾರೆ.
( ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...