Homeಚಳವಳಿದಿಲ್ಲಿಯಲ್ಲೊಂದು ಹಾಡಿ… ಸುತ್ತೀ ಸುತ್ತೀ ಸಂಘರ್ಷದ ತಾಣಕ್ಕೆ - ನೂರ್‌ ಶ್ರೀಧರ್‌

ದಿಲ್ಲಿಯಲ್ಲೊಂದು ಹಾಡಿ… ಸುತ್ತೀ ಸುತ್ತೀ ಸಂಘರ್ಷದ ತಾಣಕ್ಕೆ – ನೂರ್‌ ಶ್ರೀಧರ್‌

ಇದನ್ನು "ಹೋರಾಟದ ಹಾಡಿ” ಎನ್ನಬಹುದು. ಹಸಿದು ಬಂದ ಹೊಟ್ಟೆಗೆ ಲಂಗರಿನಲ್ಲಿ ಸಾಲಾಗಿ ಕೂರಿಸಿ ಊಟ ಹಾಕಿದರು. ಕೊಟ್ಟ ರೊಟ್ಟಿಯನ್ನು ಎರಡೂ ಕೈಗಳಿಂದ ಸ್ವೀಕರಿಸಲು ಹೇಳುತ್ತಿದ್ದರು.

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಸೇರಿಕೊಳ್ಳಲು ಕರ್ನಾಟಕದಿಂದ ಹೊರಟ ಹೋರಾಟಗಾರ ನೂರ್‌ ಶ್ರೀಧರ್‌ ಅವರು ಆಂದೋಲನದ ಬಗ್ಗೆ ತಮ್ಮ ಅನುಭವಗಳನ್ನು ಬರೆದಿದ್ದಾರೆ.

ನಮ್ಮ ತಂಡ [ನೂರ್ ಶ್ರೀಧರ್, ಕುಮಾರ್ ಸಮತಳ, ಚಾರ್ವಾಕ ರಾಘು, ಮರ್ಸಿ ಮಿಷನ್ ತನ್ವೀರ್] ಬೆಂಗಳೂರಿನಿಂದ ಪಯಣ ಮಾಡಿ, ದೆಹಲಿಯ ಕರ್ನಾಟಕ ಸಂಘ ಹೋಗಿ ಸೇರಿಕೊಳ್ಳುವ ಹೊತ್ತಿಗೆ 10 ಗಂಟೆ. ಎರಡು ತಂಡಗಳಲ್ಲಿ ಐಕ್ಯ ಹೋರಾಟದ ಒಡನಾಡಿಗಳು ಈಗಾಗಲೇ ಬಂದು ಸೇರಿದ್ದರು. ಪ್ರಕಾಶ್ ಕಮ್ಮರಡಿ, ಬಡಗಲಪುರ ನಾಗೇಂದ್ರ, ಗುರುಪ್ರಸಾದ್ ಕೆರಗೋಡು, ಚಾಮರಸ ಪಾಟೀಲ್, ಎಸ್. ಆರ್. ಹಿರೇಮಠ, ಶಹನಾಜ್ ದೀದಿ, ಬಿ.ಆರ್. ಪಾಟೀಲ್, ಕಾಳಪ್ಪ, ನಾರಯಣ ಸ್ವಾಮಿ, ಗೋಪಾಲ್, ಜಗದೀಶ್, ಎಸ್‌ಯುಸಿಐನ ನಾಗಮ್ಮ ಮತ್ತು ಮತ್ತೊಬ್ಬ ಸಂಗಾತಿ ಹಾಜರಿದ್ದರು. ದೆಹಲಿಯ ನಮ್ಮ ಆಪ್ತರಾದ ಉಮಾಪತಿ, ಬಿಟ್ಟು, ಅಮಿತ್, ಸಂತೋಷ್, ಸುರೀಂಧರ್, ಶ್ಯಾಂಭೀರ್, ಸಂಜ್ಯೋತ್ ಮುಂತಾದವರು ನಮ್ಮ ಜೊತೆಗೂಡಿದ್ದರು.

11 ಕ್ಕೆ ಪತ್ರಿಕಾ ಗೋಷ್ಟಿ ಕರೆಯಲಾಗಿತ್ತು. ಟಿವಿ ಮಾಧ್ಯಮದವರು ಒಳ್ಳೆ ಸಂಖ್ಯೆಯಲ್ಲೇ ಬಂದಿದ್ದರು. ಆತ್ಮೀಯವಾಗಿ ನಡೆದುಕೊಂಡರು. ಎಷ್ಟು ಕವರ್ ಆಗಿದೆಯೋ ನಮಗೆ ಗಮನಿಸಲು ಆಗಿಲ್ಲ. ನಾವು ನಮ್ಮ ಭೇಟಿಯ ಉದ್ದೇಶ ದೆಹಲಿಯಲ್ಲಿ ನಡೆಯುತ್ತಿರುವ ಚಾರಿತ್ರಿಕ ಹೋರಾಟಕ್ಕೆ ಕರ್ನಾಟಕದ ಹೋರಾಟ ನಿರತ ಜನತೆಯ ಬೆಂಬಲ ಸೂಚಿಸುವುದು, ನಾವೂ ಜೊತೆಗಿದ್ದೇವೆ ಎಂಬ ಸಂದೇಶ ರವಾನಿಸುವುದು ಮತ್ತು ಮುಂದಾಳತ್ವದ ಜೊತೆ ಮುಂದಿನ ಹೋರಾಟದ ರೂಪರೇಷೆಗಳ ಕುರಿತು ಚರ್ಚಿಸುವುದು ಮತ್ತು ದೆಹಲಿಯ ಜೊತೆ ಕರ್ನಾಟಕದ ಚಳವಳಿಯ ಬಂಧವನ್ನು ಬಲಪಡಿಸಿಕೊಳ್ಳುವುದು ಎಂಬುದನ್ನು ವಿವರಿಸಿದೆವು. ಅಲ್ಲಿಗೆ 1 ಗಂಟೆ.

ಇದನ್ನೂ ಓದಿ: ಕನಿಷ್ಠ ಕಾಮನ್ ಸೆನ್ಸ್ ಇಲ್ಲದ ಪ್ರಧಾನಿ ಮೋದಿ – ದೆಹಲಿಯಲ್ಲಿ ರೈತ ಹೋರಾಟಗಾರ ಬಡಗಲಪುರ ನಾಗೇಂದ್ರ ಆಕ್ರೋಶ

ಮೊದಲ ದಿನ ಜೈಪುರ ರಸ್ತೆಯಲ್ಲಿನ ಶಹಜಹಾನ್ ಪುರದ ಹೋರಾಟದ ತಾಣಕ್ಕೆ ಭೇಟಿ ನೀಡಲು ತೀರ್ಮಾನಿಸಿದ್ದೆವು. ಅದು ನಾವು ಉಳಿದುಕೊಂಡಿದ್ದ ಕರ್ನಾಟಕ ಸಂಘದಿಂದ 80 ಕಿಮೀ. ಹೋದ ಹೋದಂತೆ ಟ್ರಾಫಿಕ್ ಹೆಚ್ಚಾಗುತ್ತಾ ಹೋಯಿತು. ಕೊನೆ 30 ಕೀಮಿ ದೂರವನ್ನು ಹೈವೇಯಲ್ಲಿ ಚಲಿಸಲು ಸಾಧ್ಯವೇ ಇರಲಿಲ್ಲ. ಪೂರ್ತಿ ಜ್ಯಾಮ್. ಹೈವೇಯ ಎಡಕ್ಕೆ ಬಲಕ್ಕೆ ಸುತ್ತಿಬಳಸಿ ಹೇಗೇಗೋ ಮಾಡಿ, ಊಟವೂ ಮಾಡದೆ, ಹೋರಾಟದ ತಾಣಕ್ಕೆ ತಲುಪುವ ಹೊತ್ತಿಗೆ ಸಂಜೆ 6 ಗಂಟೆ. ಸಂಗಾತಿ ಕಪಿಲ್ ನಮ್ಮನ್ನು ಅಲ್ಲಿ ಬರಮಾಡಿಕೊಂಡು ಕರೆದೊಯ್ದರು.

ಆಹಾ ಎಂತಹ ನೋಟ….!

ನಮ್ಮ ಜನ ಹೈವೇ ಮೇಲೆ ಹಾಡಿ ಕಟ್ಟಿದ್ದರು. ಹೈವೆಯ ಮಧ್ಯದಲ್ಲಿ ಎರಡೂ ಕಡೆ ಟೆಂಟುಗಳು. ಮಧ್ಯದಲ್ಲಿ ನಡೆಯಲು ಮಾತ್ರ ಸಣ್ಣ ಓಣಿ, ಅಲ್ಲಲ್ಲಿ ಅನ್ನ ದಾಸೋಹದ ಲಂಗರುಗಳು, 24x 7 ಚಹಾ ಕೆಟಲ್‌ಗಳು, ದವಾಖಾನೆ, ಅಗತ್ಯಗಳನ್ನು ಒದಗಿಸುವ ಬಿಡಾರ, ಸಣ್ಣ ಸಣ್ಣ ಸಭಾಂಗಣಗಳು, ದೊಡ್ಡ ವೇದಿಕೆ. ಇದನ್ನು ಹಳ್ಳಿಯೂ ಎನ್ನದೆ ಹಾಡಿ ಎನ್ನಬೇಕು. ಏಕೆಂದರೆ ಇಲ್ಲಿ ಒಂದೊಂದು ತಂಡಕ್ಕೂ ಪ್ರತ್ಯೇಕ ಟೆಂಟುಗಳಿದ್ದರೂ ಊಟ, ಚಹಾ, ದವಾಖಾನೆ, ಸಭೆ, ಸಭಾಂಗಣ ಎಲ್ಲವೂ ಸಾಮೂಹಿಕ, ಎಲ್ಲವೂ ಸ್ವಯಂಪ್ರೇರಿತ. ಎಲ್ಲರೂ ಅವರವರ ಪಾಲಿಗೆ ತಲ್ಲೀನರು. ಯಾರೋ ಯಾರಿಗೋ ಹೇಳಿ ಮಾಡಿಸುತ್ತಿಲ್ಲ. ಅವರವರೇ ಕೆಲಸ ಹಂಚಿಕೊಂಡು, ಕೆಲಸ ಹಾಕಿಕೊಂಡು, ಸಂತಸ ಮತ್ತು ಉತ್ಸಾಹದ ಜೊತೆ ಮಾಡುತ್ತಾ ಹೋಗುತ್ತಿದ್ದಾರೆ.

ಒಂದು ಉದಾಹರಣೆ ಹೇಳಬೇಕೆಂದರೆ ಎಂಎಲ್‌ಎ ಆಗಿರುವ ಒಬ್ಬ ಯುವತಿ ಹಲವರಲ್ಲಿ ಒಬ್ಬರಾಗಿ ಬೀದಿಯಲ್ಲಿ ಕೂತು ತಮ್ಮ ಪಾಡಿಗೆ ತಾವು ರೊಟ್ಟಿ ಲಟ್ಟಿಸುತ್ತಿದ್ದಾರೆ. ಇದನ್ನು ಹಾಡಿ ಅನ್ನದೆ ಇನ್ನೇನನ್ನಲಿ. “ಹೋರಾಟದ ಹಾಡಿ” ಎನ್ನಬಹುದು. ಹಸಿದು ಬಂದ ಹೊಟ್ಟೆಗೆ ಲಂಗರಿನಲ್ಲಿ ಸಾಲಾಗಿ ಕೂರಿಸಿ ಊಟ ಹಾಕಿದರು. ಕೊಟ್ಟ ರೊಟ್ಟಿಯನ್ನು ಎರಡೂ ಕೈಗಳಿಂದ ಸ್ವೀಕರಿಸಲು ಹೇಳುತ್ತಿದ್ದರು. ನಾವೂ ರೈತರು ಕೊಟ್ಟ ರೊಟ್ಟಿಯನ್ನು ಕಣ್ಣಿಗೆ ಒತ್ತಿಕೊಂಡು ಹೊಟ್ಟೆ ತುಂಬ ಉಂಡು ನಾಯಕತ್ವದ ಜೊತೆ ಮಾತಿಗೆ ಕೂತೆವು.

ಇದನ್ನೂ ಓದಿ: ಮೋದಿಯವರು ನಮ್ಮನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ: ಹೋರಾಟ ನಿರತ ರೈತರ ಆರೋಪ

ಈ ಹೋರಾಟದ ತಾಣದ ಮುಂದಾಳತ್ವ ವಹಿಸಿರುವ ಸ್ವರಾಜಿನ ಕಾಮ್ರೇಡ್ ದಿಲಿಪ್ ಮತ್ತು ರಿಜ್ವಾನ್ ಚೌಧರಿ ಜೊತೆ ನಮ್ಮ ನಿಯೋಗದ ಮಾತುಕತೆ ಶುರುವಾಯಿತು. [ವಾಸ್ತವದಲ್ಲಿ ಈ ತಾಣದ ಒಟ್ಟು ಉಸ್ತುವಾರಿ ಯೋಗೇಂದ್ರ ಯಾದವ್ ಅವರದು. ಅವರ ತಂದೆ ತೀರಿಕೊಂಡಿರುವುದರಿಂದ ಅವರು ಹಾಜರಿರಲಿಲ್ಲ]. ನಮ್ಮ ಕಡೆಯಿಂದ ಇಲ್ಲಿ ನಡೆಯುತ್ತಿರುವ ಹೋರಾಟವನ್ನು ಮತ್ತು ಬಂದಿರುವ ಉದ್ದೇಶವನ್ನು ವಿವರಿಸಿದೆವು. ಅವರು ಅಲ್ಲಿ ನಡಿಯುತ್ತಿರುವ ವಿದ್ಯಾಮಾನಗಳನ್ನು ಬಹಳ ಸರಳವಾಗಿ ಮತ್ತು ಸಂಕ್ಷಿಪ್ತವಾಗಿ ಕಟ್ಟಿಕೊಟ್ಟರು. ಅದರ ಸಾರ ಹೀಗಿದೆ….

  • ದೆಹಲಿಯನ್ನು ರೈತರು 7 ಹಾದಿಗಳಲ್ಲಿ ಸುತ್ತಿಗಟ್ಟಿದ್ದಾರೆ. ಶಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಲಕ್ಷ ಲಕ್ಷ ಸಂಖ್ಯೆಗಳಲ್ಲಿದ್ದಾರೆ. ಮಿಕ್ಕ ಕಡೆ ಸಹಸ್ರಾರು ಸಂಖ್ಯೆಗಳಲ್ಲಿ.
  • ಪಂಜಾಬಿ ರೈತರು ಅತಿದೊಡ್ಡ ಸಂಖ್ಯೆಯಲ್ಲಿ ಹೋರಾಟಕ್ಕೆ ಇಳಿದಿದ್ದರಿಂದ ಹೋರಾಟ ಬಿರುಸು ಪಡೆದುಕೊಂಡಿತು. ಆದರೆ ಇತರೆ ರೈತರ ಪಾಲ್ಗೊಳ್ಳುವಿಕೆಯೂ ಹೆಚ್ಚುತ್ತಿದೆ. ಉದಾಹರಣೆಗೆ ಮೊದಲು ರಾಜಸ್ಥಾನದ ಒಂದೆರಡು ಜಿಲ್ಲೆಗಳು ಮಾತ್ರ ಸ್ಪಂದಿಸಿದವು. ಇಂದು ಬಹುತೇಕ ಜಿಲ್ಲೆಗಳ ರೈತರು ಜೊತೆಗೂಡಿದ್ದಾರೆ. ವಿಶೇವಾಗಿ ಮೇವಾಡ ಭಾಗದ ರೈತರಲ್ಲಿ ದೊಡ್ಡ ಜಾಗೃತಿ ಮೂಡಿದೆ.
  • ಪೋಲೀಸರು ಹಾಕಿರುವ ತಡೆಗಳನ್ನು ಮುರಿದು ಮುನ್ನುಗುವುದು ಅಸಾಧ್ಯವಾದದ್ದಲ್ಲ ಆದರೆ ನಾವು ಅದನ್ನು ಮಾಡುತ್ತಿಲ್ಲ. ಅವರು ತಡೆದಿರುವಲ್ಲೇ ನಿಂತು ಹೋರಾಟವನ್ನು ಸಧೃಡೀಕರಿಸುತ್ತಾ ಹೋಗುವುದು ನಮ್ಮ ಗುರಿ. ಅವರು ಸಮಯ ಎಳೆಯುತ್ತಿದ್ದಾರೆ. ನಾವು ದೇಶವ್ಯಾಪಿ ರೈತರನ್ನು ಸಂಘಟಿಸಿಕೊಳ್ಳಲು ಈ ಸಮಯವನ್ನು ಬಳಸಿಕೊಳ್ಳುತ್ತಿದ್ದೇವೆ. ದೀರ್ಘ ಹೋರಾಟಕ್ಕೆ ಸಜ್ಜಾಗುತ್ತಿದ್ದೇವೆ.
  • ಈ ಹೋರಾಟ ರೈತರ ಹೋರಾಟವಾಗಿ ಪ್ರಾರಂಭವಾಗಿದ್ದರೂ ಕೇವಲ ಅವರ ಹೋರಾಟವಾಗಿಲ್ಲ. ದೇಶದ ಎಲ್ಲಾ ಜನವಿಭಾಗಗಳ ಹೋರಾಟವಾಗಿದೆ. ಎಲ್ಲಾ ಜನವರ್ಗಗಳಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ. ಸಾರಾಂಶದಲ್ಲಿ ಇದು ಫ್ಯಾಸಿಸಂ ವಿರುದ್ಧದ ಹೋರಾಟವಾಗಿದೆ. ಇದು ರೈತ ಹೋರಾಟವಾಗಿ ಪ್ರಾರಂಭವಾಗಿದ್ದರೂ ಅಷ್ಟರಿಂದಲೇ ಕೊನೆಗೊಳ್ಳುವುದಿಲ್ಲ.

  • ದಕ್ಷಿಣದಿಂದಲೂ ಜನ ಬರಲು ಪ್ರಾರಂಭಿಸಿದ್ದಾರೆ. ಇಂದು ಮಹರಾಷ್ಟ್ರದಿಂದ ಒಂದುವರೆ ಸಾವಿರದಷ್ಟು ಜನ ಹೋರಾಟಕ್ಕೆ ಬಂದು ಸೇರಿಕೊಂಡಿದ್ದಾರೆ. ಕರ್ನಾಟಕದಿಂದ ವಿವಿಧ ಸಂಘಟನೆಗಳನ್ನು ಪ್ರತಿನಿಧಿಸಿ ತಾವು ಬಂದಿದ್ದೀರಿ. ಇದಕ್ಕೆ ಬಹಳ ಮಹತ್ವವಿದೆ. ದೇಶಕ್ಕೆ ಈ ಭೇಟಿ ಒಳ್ಳೆ ಸಂದೇಶ ನೀಡಲಿದೆ. ನಾಳೆ ಬಹಿರಂಗ ಸಭೆಯಲ್ಲಿ ಮಾತನಾಡಿ. ಕರ್ನಾಟಕ ಎದ್ದು ನಿಂತರೆ ಈ ಹೋರಾಟ ಹೊಸ ತಿರುವನ್ನೇ ಪಡೆದುಕೊಳ್ಳುತ್ತದೆ.

ಮಾತು ಮುಗಿಯಲು ಸಾಧ್ಯವಿರಲಿಲ್ಲ…ಆದರೆ ಮುಂದಿನ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಹೊಡಲೇಬೇಕಿತ್ತು. ಆತ್ಮೀಯ ಬೀಳ್ಕೊಡುಗೆ ಸ್ವೀಕರಿಸಿ, ಜೊತೆಗೂಡಿ ಘೋಷಣೆಗಳನ್ನು ಹಾಕಿ, ಸಮೃದ್ಧಿಯ ಭಾವದೊಂದಿಗೆ ’ಹಾಡಿ’ ಬಿಟ್ಟು ಮತ್ತೆ ದಿಲ್ಲಿಗೆ ಹೊರಟೆವು. ಮರಳುವ ಹೊತ್ತಿಗೆ 11.30, ಮಲಗುವ ಹೊತ್ತಿಗೆ 2 ಗಂಟೆ.

ಇಂದು 9 ಕ್ಕೆ ಹೊರಡಬೇಕು… ಹೋರಾಟದ ಮತ್ತೊಂದು ಮುಖ್ಯ ತಾಣವಾದ ಟಿಕ್ರಿಗೆ. ಇಂದು ಕಂಡದ್ದು ನಾಳೆಗೆ!

ಇದನ್ನೂ ಓದಿ: ರೈತ ಹೋರಾಟದಲ್ಲಿ ಖಲೀಸ್ತಾನಿ ಕರಪತ್ರ‌ ಹಂಚಿಕೆ: RSS‌ ಕಾರ್ಯಕರ್ತ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...