Homeಕರ್ನಾಟಕಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌...

ಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌…

- Advertisement -
- Advertisement -

ನಕ್ಸಲೀಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹಲವಾರು ಸುಳ್ಳುಕೇಸುಗಳಲ್ಲಿ ಸಿಕ್ಕಿಕೊಂಡು ಭೂಗತರಾಗಿದ್ದವರು ನೂರ್‌ ಶ್ರೀಧರ್‌. 2013-14ರ ಅವಧಿಯಲ್ಲಿ ದೊರೆಸ್ವಾಮಿ, ಗೌರಿಲಂಕೇಶ್‌ ಮತ್ತು ದಿವಗಂತ ಎ.ಕೆ ಸುಬ್ಬಯ್ಯನವರ ಪ್ರಯತ್ನದ ಫಲವಾಗಿ ಸರ್ಕಾರದ ಜೊತೆಗಿನ ಮಾತುಕತೆಯಂತೆ ಮುಖ್ಯವಾಹಿನಿಗೆ ಮರಳಿದ್ದ ನೂರ್ ಶ್ರೀಧರ್‌ ಮೇಲಿದ್ದ ಎಲ್ಲಾ ಕೇಸುಗಳು ಐದು ವರ್ಷಗಳ ನಂತರ ಖುಲಾಸೆಗೊಂಡಿದ್ದು ಅವರೀಗ ದೋಷಮುಕ್ತರಾಗಿದ್ದಾರೆ.

2014ರ ಡಿಸೆಂಬರ್ 08ರಂದು ತಮ್ಮ ಸಹ ಹೋರಾಟಗಾರ ಸಿರಿಮನೆ ನಾಗರಾಜುರವರೊಡನೆ ಮುಖ್ಯವಾಹಿನಿಗೆ ಮರಳಿದ್ದ ಅವರು ಒಂದು ತಿಂಗಳ ಕಾಲ ಜೈಲಿನಲ್ಲಿದ್ದು 2015ರ ಜನವರಿ 15 ರಂದು ಬಂಧಮುಕ್ತರಾಗಿದ್ದರು. ಅದಾದ ನಾಲ್ಕೂವರೆ ವರ್ಷಗಳ ನಂತರ ಇಂದು ದೋಷಮುಕ್ತರೆಂದು ಕೋರ್ಟ್‌ ಹೇಳಿದೆ. ನೂರ್‌ ಶ್ರೀಧರ್‌ರವರಿಗೆ ಸಾಮಾಜಿಕ ಮನ್ನಣೆ ಈಗಾಗಲೇ ಸಿಕ್ಕಿತ್ತು. ಇಂದಿನಿಂದ ಅವರಿಗೆ ಕಾನೂನಿನ ಮನ್ನಣೆಯು ಸಿಕ್ಕಿದೆ.

ಚಿಕ್ಕಮಗಳೂರು ಕೋರ್ಟ್‌‌ನಲ್ಲಿ ಅವರ ಮೇಲೆ ಇದ್ದ 02 ಕೇಸುಗಳು ಒಂದು ವರ್ಷದ ಹಿಂದೆಯೇ ಮುಗಿದಿದ್ದವು. ನಂತರ ಉಡುಪಿ ಕೋರ್ಟ್‌‌ನಲ್ಲಿದ್ದ 02 ಕೇಸುಗಳಲ್ಲಿ ಒಂದು ಆರು ತಿಂಗಳ ಹಿಂದೆ ಮುಗಿದಿದ್ದು ಈಗ ಕೊನೆಯ ಕೇಸ್‌ ಕೂಡ ಮುಗಿದಿದ್ದರಿಂದ ಅವರು ನಿರಾಳರಾಗಿದ್ದಾರೆ.

ಇವರು ಯಾವುದೇ ಅಪರಾಧಗಳಲ್ಲಿ ಪಾಲ್ಗೊಂಡಿಲ್ಲ, ಆ ರೀತಿಯ ಯಾವುದೇ ಸಾಕ್ಷಿಗಳ ಇಲ್ಲವೆಂದು ಕೋರ್ಟ್‌ ತೀರ್ಪು ನೀಡಿದೆ. ನೂರ್‌ ಶ್ರೀಧರ್‌ರವರೊಂದಿಗೆ ಆನಂತರ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ್‌ 07 ಕೇಸುಗಳಲ್ಲಿ ಇದುವರೆಗೂ 05 ಕೇಸುಗಳಲ್ಲಿ ದೋಷಮುಕ್ತರಾಗಿದ್ದಾರೆ. ಇಂದು 03 ಪ್ರಕರಣಗಳಲ್ಲಿ ಅವರನ್ನು ದೋಷಮುಕ್ತರೆಂದು ಕೋರ್ಟ್‌ ಘೋಷಿಸಿದೆ.

ವಿದ್ಯಾರ್ಥಿ ದಿಸೆಯಿಂದಲೂ ಹೋರಾಟನಿರತರಾಗಿದ್ದ ನೂರ್‌ ಶ್ರೀಧರ್‌ರವರು, ಮುಖ್ಯವಾಹಿನಿಗೆ ಬಂದನಂತರ ಭೂಮಿ ವಸತಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ದಿಡ್ಡಳ್ಳಿ ಆದಿವಾಸಿಗಳ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್ಲಾ ಜನಪರ ಚಳವಳಿಗಳ ಜೊತೆ ಸಾವಯವ ಸಂಬಂಧ ಹೊಂದಿದ್ದಾರೆ.

ನಕ್ಸಲೈಟ್‌ ಚಳವಳಿಯ ಮೂಲಕ ಭೂಗತರಾಗಿದ್ದ ಹೋರಾಟಗಾರನ ಮೇಲಿನ ಎಲ್ಲಾ ಕೇಸುಗಳು ಖುಲಾಸೆಯಾಗಿ ಬಂಧಮುಕ್ತರಾಗಿರುವ ಸಂದರ್ಭದಲ್ಲಿಯೇ ಮುಖ್ಯವಾಹಿನಿ ಚಳವಳಿಯಲ್ಲಿದ್ದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ಹಳೆಯ ಸುಳ್ಳು ಕೇಸಿನಲ್ಲಿ ರಾಯಚೂರು ಪೊಲೀಸರು ಬಂಧಿಸಿರುವುದು ವಿಪರ್ಯಾಸವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರು ಆದಷ್ಟು ಬೇಗ ಬಿಡುಗಡೆ ಆಗಬೇಕು. ಈ ನಿಟ್ಟಿನಲ್ಲಿ ವಿಚಾರವಂತರು ಮತ್ತು ಸಾಮಾಜಿಕ ಹೋರಾಟಗಾರರು ನಿರಂತರ ಪ್ರಯತ್ನ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...