Homeಕರ್ನಾಟಕಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌...

ಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌…

- Advertisement -
- Advertisement -

ನಕ್ಸಲೀಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹಲವಾರು ಸುಳ್ಳುಕೇಸುಗಳಲ್ಲಿ ಸಿಕ್ಕಿಕೊಂಡು ಭೂಗತರಾಗಿದ್ದವರು ನೂರ್‌ ಶ್ರೀಧರ್‌. 2013-14ರ ಅವಧಿಯಲ್ಲಿ ದೊರೆಸ್ವಾಮಿ, ಗೌರಿಲಂಕೇಶ್‌ ಮತ್ತು ದಿವಗಂತ ಎ.ಕೆ ಸುಬ್ಬಯ್ಯನವರ ಪ್ರಯತ್ನದ ಫಲವಾಗಿ ಸರ್ಕಾರದ ಜೊತೆಗಿನ ಮಾತುಕತೆಯಂತೆ ಮುಖ್ಯವಾಹಿನಿಗೆ ಮರಳಿದ್ದ ನೂರ್ ಶ್ರೀಧರ್‌ ಮೇಲಿದ್ದ ಎಲ್ಲಾ ಕೇಸುಗಳು ಐದು ವರ್ಷಗಳ ನಂತರ ಖುಲಾಸೆಗೊಂಡಿದ್ದು ಅವರೀಗ ದೋಷಮುಕ್ತರಾಗಿದ್ದಾರೆ.

2014ರ ಡಿಸೆಂಬರ್ 08ರಂದು ತಮ್ಮ ಸಹ ಹೋರಾಟಗಾರ ಸಿರಿಮನೆ ನಾಗರಾಜುರವರೊಡನೆ ಮುಖ್ಯವಾಹಿನಿಗೆ ಮರಳಿದ್ದ ಅವರು ಒಂದು ತಿಂಗಳ ಕಾಲ ಜೈಲಿನಲ್ಲಿದ್ದು 2015ರ ಜನವರಿ 15 ರಂದು ಬಂಧಮುಕ್ತರಾಗಿದ್ದರು. ಅದಾದ ನಾಲ್ಕೂವರೆ ವರ್ಷಗಳ ನಂತರ ಇಂದು ದೋಷಮುಕ್ತರೆಂದು ಕೋರ್ಟ್‌ ಹೇಳಿದೆ. ನೂರ್‌ ಶ್ರೀಧರ್‌ರವರಿಗೆ ಸಾಮಾಜಿಕ ಮನ್ನಣೆ ಈಗಾಗಲೇ ಸಿಕ್ಕಿತ್ತು. ಇಂದಿನಿಂದ ಅವರಿಗೆ ಕಾನೂನಿನ ಮನ್ನಣೆಯು ಸಿಕ್ಕಿದೆ.

ಚಿಕ್ಕಮಗಳೂರು ಕೋರ್ಟ್‌‌ನಲ್ಲಿ ಅವರ ಮೇಲೆ ಇದ್ದ 02 ಕೇಸುಗಳು ಒಂದು ವರ್ಷದ ಹಿಂದೆಯೇ ಮುಗಿದಿದ್ದವು. ನಂತರ ಉಡುಪಿ ಕೋರ್ಟ್‌‌ನಲ್ಲಿದ್ದ 02 ಕೇಸುಗಳಲ್ಲಿ ಒಂದು ಆರು ತಿಂಗಳ ಹಿಂದೆ ಮುಗಿದಿದ್ದು ಈಗ ಕೊನೆಯ ಕೇಸ್‌ ಕೂಡ ಮುಗಿದಿದ್ದರಿಂದ ಅವರು ನಿರಾಳರಾಗಿದ್ದಾರೆ.

ಇವರು ಯಾವುದೇ ಅಪರಾಧಗಳಲ್ಲಿ ಪಾಲ್ಗೊಂಡಿಲ್ಲ, ಆ ರೀತಿಯ ಯಾವುದೇ ಸಾಕ್ಷಿಗಳ ಇಲ್ಲವೆಂದು ಕೋರ್ಟ್‌ ತೀರ್ಪು ನೀಡಿದೆ. ನೂರ್‌ ಶ್ರೀಧರ್‌ರವರೊಂದಿಗೆ ಆನಂತರ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ್‌ 07 ಕೇಸುಗಳಲ್ಲಿ ಇದುವರೆಗೂ 05 ಕೇಸುಗಳಲ್ಲಿ ದೋಷಮುಕ್ತರಾಗಿದ್ದಾರೆ. ಇಂದು 03 ಪ್ರಕರಣಗಳಲ್ಲಿ ಅವರನ್ನು ದೋಷಮುಕ್ತರೆಂದು ಕೋರ್ಟ್‌ ಘೋಷಿಸಿದೆ.

ವಿದ್ಯಾರ್ಥಿ ದಿಸೆಯಿಂದಲೂ ಹೋರಾಟನಿರತರಾಗಿದ್ದ ನೂರ್‌ ಶ್ರೀಧರ್‌ರವರು, ಮುಖ್ಯವಾಹಿನಿಗೆ ಬಂದನಂತರ ಭೂಮಿ ವಸತಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ದಿಡ್ಡಳ್ಳಿ ಆದಿವಾಸಿಗಳ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್ಲಾ ಜನಪರ ಚಳವಳಿಗಳ ಜೊತೆ ಸಾವಯವ ಸಂಬಂಧ ಹೊಂದಿದ್ದಾರೆ.

ನಕ್ಸಲೈಟ್‌ ಚಳವಳಿಯ ಮೂಲಕ ಭೂಗತರಾಗಿದ್ದ ಹೋರಾಟಗಾರನ ಮೇಲಿನ ಎಲ್ಲಾ ಕೇಸುಗಳು ಖುಲಾಸೆಯಾಗಿ ಬಂಧಮುಕ್ತರಾಗಿರುವ ಸಂದರ್ಭದಲ್ಲಿಯೇ ಮುಖ್ಯವಾಹಿನಿ ಚಳವಳಿಯಲ್ಲಿದ್ದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ಹಳೆಯ ಸುಳ್ಳು ಕೇಸಿನಲ್ಲಿ ರಾಯಚೂರು ಪೊಲೀಸರು ಬಂಧಿಸಿರುವುದು ವಿಪರ್ಯಾಸವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರು ಆದಷ್ಟು ಬೇಗ ಬಿಡುಗಡೆ ಆಗಬೇಕು. ಈ ನಿಟ್ಟಿನಲ್ಲಿ ವಿಚಾರವಂತರು ಮತ್ತು ಸಾಮಾಜಿಕ ಹೋರಾಟಗಾರರು ನಿರಂತರ ಪ್ರಯತ್ನ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...