Homeಕರ್ನಾಟಕಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌...

ಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌…

- Advertisement -
- Advertisement -

ನಕ್ಸಲೀಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹಲವಾರು ಸುಳ್ಳುಕೇಸುಗಳಲ್ಲಿ ಸಿಕ್ಕಿಕೊಂಡು ಭೂಗತರಾಗಿದ್ದವರು ನೂರ್‌ ಶ್ರೀಧರ್‌. 2013-14ರ ಅವಧಿಯಲ್ಲಿ ದೊರೆಸ್ವಾಮಿ, ಗೌರಿಲಂಕೇಶ್‌ ಮತ್ತು ದಿವಗಂತ ಎ.ಕೆ ಸುಬ್ಬಯ್ಯನವರ ಪ್ರಯತ್ನದ ಫಲವಾಗಿ ಸರ್ಕಾರದ ಜೊತೆಗಿನ ಮಾತುಕತೆಯಂತೆ ಮುಖ್ಯವಾಹಿನಿಗೆ ಮರಳಿದ್ದ ನೂರ್ ಶ್ರೀಧರ್‌ ಮೇಲಿದ್ದ ಎಲ್ಲಾ ಕೇಸುಗಳು ಐದು ವರ್ಷಗಳ ನಂತರ ಖುಲಾಸೆಗೊಂಡಿದ್ದು ಅವರೀಗ ದೋಷಮುಕ್ತರಾಗಿದ್ದಾರೆ.

2014ರ ಡಿಸೆಂಬರ್ 08ರಂದು ತಮ್ಮ ಸಹ ಹೋರಾಟಗಾರ ಸಿರಿಮನೆ ನಾಗರಾಜುರವರೊಡನೆ ಮುಖ್ಯವಾಹಿನಿಗೆ ಮರಳಿದ್ದ ಅವರು ಒಂದು ತಿಂಗಳ ಕಾಲ ಜೈಲಿನಲ್ಲಿದ್ದು 2015ರ ಜನವರಿ 15 ರಂದು ಬಂಧಮುಕ್ತರಾಗಿದ್ದರು. ಅದಾದ ನಾಲ್ಕೂವರೆ ವರ್ಷಗಳ ನಂತರ ಇಂದು ದೋಷಮುಕ್ತರೆಂದು ಕೋರ್ಟ್‌ ಹೇಳಿದೆ. ನೂರ್‌ ಶ್ರೀಧರ್‌ರವರಿಗೆ ಸಾಮಾಜಿಕ ಮನ್ನಣೆ ಈಗಾಗಲೇ ಸಿಕ್ಕಿತ್ತು. ಇಂದಿನಿಂದ ಅವರಿಗೆ ಕಾನೂನಿನ ಮನ್ನಣೆಯು ಸಿಕ್ಕಿದೆ.

ಚಿಕ್ಕಮಗಳೂರು ಕೋರ್ಟ್‌‌ನಲ್ಲಿ ಅವರ ಮೇಲೆ ಇದ್ದ 02 ಕೇಸುಗಳು ಒಂದು ವರ್ಷದ ಹಿಂದೆಯೇ ಮುಗಿದಿದ್ದವು. ನಂತರ ಉಡುಪಿ ಕೋರ್ಟ್‌‌ನಲ್ಲಿದ್ದ 02 ಕೇಸುಗಳಲ್ಲಿ ಒಂದು ಆರು ತಿಂಗಳ ಹಿಂದೆ ಮುಗಿದಿದ್ದು ಈಗ ಕೊನೆಯ ಕೇಸ್‌ ಕೂಡ ಮುಗಿದಿದ್ದರಿಂದ ಅವರು ನಿರಾಳರಾಗಿದ್ದಾರೆ.

ಇವರು ಯಾವುದೇ ಅಪರಾಧಗಳಲ್ಲಿ ಪಾಲ್ಗೊಂಡಿಲ್ಲ, ಆ ರೀತಿಯ ಯಾವುದೇ ಸಾಕ್ಷಿಗಳ ಇಲ್ಲವೆಂದು ಕೋರ್ಟ್‌ ತೀರ್ಪು ನೀಡಿದೆ. ನೂರ್‌ ಶ್ರೀಧರ್‌ರವರೊಂದಿಗೆ ಆನಂತರ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ್‌ 07 ಕೇಸುಗಳಲ್ಲಿ ಇದುವರೆಗೂ 05 ಕೇಸುಗಳಲ್ಲಿ ದೋಷಮುಕ್ತರಾಗಿದ್ದಾರೆ. ಇಂದು 03 ಪ್ರಕರಣಗಳಲ್ಲಿ ಅವರನ್ನು ದೋಷಮುಕ್ತರೆಂದು ಕೋರ್ಟ್‌ ಘೋಷಿಸಿದೆ.

ವಿದ್ಯಾರ್ಥಿ ದಿಸೆಯಿಂದಲೂ ಹೋರಾಟನಿರತರಾಗಿದ್ದ ನೂರ್‌ ಶ್ರೀಧರ್‌ರವರು, ಮುಖ್ಯವಾಹಿನಿಗೆ ಬಂದನಂತರ ಭೂಮಿ ವಸತಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ದಿಡ್ಡಳ್ಳಿ ಆದಿವಾಸಿಗಳ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್ಲಾ ಜನಪರ ಚಳವಳಿಗಳ ಜೊತೆ ಸಾವಯವ ಸಂಬಂಧ ಹೊಂದಿದ್ದಾರೆ.

ನಕ್ಸಲೈಟ್‌ ಚಳವಳಿಯ ಮೂಲಕ ಭೂಗತರಾಗಿದ್ದ ಹೋರಾಟಗಾರನ ಮೇಲಿನ ಎಲ್ಲಾ ಕೇಸುಗಳು ಖುಲಾಸೆಯಾಗಿ ಬಂಧಮುಕ್ತರಾಗಿರುವ ಸಂದರ್ಭದಲ್ಲಿಯೇ ಮುಖ್ಯವಾಹಿನಿ ಚಳವಳಿಯಲ್ಲಿದ್ದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ಹಳೆಯ ಸುಳ್ಳು ಕೇಸಿನಲ್ಲಿ ರಾಯಚೂರು ಪೊಲೀಸರು ಬಂಧಿಸಿರುವುದು ವಿಪರ್ಯಾಸವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರು ಆದಷ್ಟು ಬೇಗ ಬಿಡುಗಡೆ ಆಗಬೇಕು. ಈ ನಿಟ್ಟಿನಲ್ಲಿ ವಿಚಾರವಂತರು ಮತ್ತು ಸಾಮಾಜಿಕ ಹೋರಾಟಗಾರರು ನಿರಂತರ ಪ್ರಯತ್ನ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...