Homeಕರ್ನಾಟಕಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌...

ಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌…

- Advertisement -
- Advertisement -

ನಕ್ಸಲೀಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹಲವಾರು ಸುಳ್ಳುಕೇಸುಗಳಲ್ಲಿ ಸಿಕ್ಕಿಕೊಂಡು ಭೂಗತರಾಗಿದ್ದವರು ನೂರ್‌ ಶ್ರೀಧರ್‌. 2013-14ರ ಅವಧಿಯಲ್ಲಿ ದೊರೆಸ್ವಾಮಿ, ಗೌರಿಲಂಕೇಶ್‌ ಮತ್ತು ದಿವಗಂತ ಎ.ಕೆ ಸುಬ್ಬಯ್ಯನವರ ಪ್ರಯತ್ನದ ಫಲವಾಗಿ ಸರ್ಕಾರದ ಜೊತೆಗಿನ ಮಾತುಕತೆಯಂತೆ ಮುಖ್ಯವಾಹಿನಿಗೆ ಮರಳಿದ್ದ ನೂರ್ ಶ್ರೀಧರ್‌ ಮೇಲಿದ್ದ ಎಲ್ಲಾ ಕೇಸುಗಳು ಐದು ವರ್ಷಗಳ ನಂತರ ಖುಲಾಸೆಗೊಂಡಿದ್ದು ಅವರೀಗ ದೋಷಮುಕ್ತರಾಗಿದ್ದಾರೆ.

2014ರ ಡಿಸೆಂಬರ್ 08ರಂದು ತಮ್ಮ ಸಹ ಹೋರಾಟಗಾರ ಸಿರಿಮನೆ ನಾಗರಾಜುರವರೊಡನೆ ಮುಖ್ಯವಾಹಿನಿಗೆ ಮರಳಿದ್ದ ಅವರು ಒಂದು ತಿಂಗಳ ಕಾಲ ಜೈಲಿನಲ್ಲಿದ್ದು 2015ರ ಜನವರಿ 15 ರಂದು ಬಂಧಮುಕ್ತರಾಗಿದ್ದರು. ಅದಾದ ನಾಲ್ಕೂವರೆ ವರ್ಷಗಳ ನಂತರ ಇಂದು ದೋಷಮುಕ್ತರೆಂದು ಕೋರ್ಟ್‌ ಹೇಳಿದೆ. ನೂರ್‌ ಶ್ರೀಧರ್‌ರವರಿಗೆ ಸಾಮಾಜಿಕ ಮನ್ನಣೆ ಈಗಾಗಲೇ ಸಿಕ್ಕಿತ್ತು. ಇಂದಿನಿಂದ ಅವರಿಗೆ ಕಾನೂನಿನ ಮನ್ನಣೆಯು ಸಿಕ್ಕಿದೆ.

ಚಿಕ್ಕಮಗಳೂರು ಕೋರ್ಟ್‌‌ನಲ್ಲಿ ಅವರ ಮೇಲೆ ಇದ್ದ 02 ಕೇಸುಗಳು ಒಂದು ವರ್ಷದ ಹಿಂದೆಯೇ ಮುಗಿದಿದ್ದವು. ನಂತರ ಉಡುಪಿ ಕೋರ್ಟ್‌‌ನಲ್ಲಿದ್ದ 02 ಕೇಸುಗಳಲ್ಲಿ ಒಂದು ಆರು ತಿಂಗಳ ಹಿಂದೆ ಮುಗಿದಿದ್ದು ಈಗ ಕೊನೆಯ ಕೇಸ್‌ ಕೂಡ ಮುಗಿದಿದ್ದರಿಂದ ಅವರು ನಿರಾಳರಾಗಿದ್ದಾರೆ.

ಇವರು ಯಾವುದೇ ಅಪರಾಧಗಳಲ್ಲಿ ಪಾಲ್ಗೊಂಡಿಲ್ಲ, ಆ ರೀತಿಯ ಯಾವುದೇ ಸಾಕ್ಷಿಗಳ ಇಲ್ಲವೆಂದು ಕೋರ್ಟ್‌ ತೀರ್ಪು ನೀಡಿದೆ. ನೂರ್‌ ಶ್ರೀಧರ್‌ರವರೊಂದಿಗೆ ಆನಂತರ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ್‌ 07 ಕೇಸುಗಳಲ್ಲಿ ಇದುವರೆಗೂ 05 ಕೇಸುಗಳಲ್ಲಿ ದೋಷಮುಕ್ತರಾಗಿದ್ದಾರೆ. ಇಂದು 03 ಪ್ರಕರಣಗಳಲ್ಲಿ ಅವರನ್ನು ದೋಷಮುಕ್ತರೆಂದು ಕೋರ್ಟ್‌ ಘೋಷಿಸಿದೆ.

ವಿದ್ಯಾರ್ಥಿ ದಿಸೆಯಿಂದಲೂ ಹೋರಾಟನಿರತರಾಗಿದ್ದ ನೂರ್‌ ಶ್ರೀಧರ್‌ರವರು, ಮುಖ್ಯವಾಹಿನಿಗೆ ಬಂದನಂತರ ಭೂಮಿ ವಸತಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ದಿಡ್ಡಳ್ಳಿ ಆದಿವಾಸಿಗಳ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್ಲಾ ಜನಪರ ಚಳವಳಿಗಳ ಜೊತೆ ಸಾವಯವ ಸಂಬಂಧ ಹೊಂದಿದ್ದಾರೆ.

ನಕ್ಸಲೈಟ್‌ ಚಳವಳಿಯ ಮೂಲಕ ಭೂಗತರಾಗಿದ್ದ ಹೋರಾಟಗಾರನ ಮೇಲಿನ ಎಲ್ಲಾ ಕೇಸುಗಳು ಖುಲಾಸೆಯಾಗಿ ಬಂಧಮುಕ್ತರಾಗಿರುವ ಸಂದರ್ಭದಲ್ಲಿಯೇ ಮುಖ್ಯವಾಹಿನಿ ಚಳವಳಿಯಲ್ಲಿದ್ದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ಹಳೆಯ ಸುಳ್ಳು ಕೇಸಿನಲ್ಲಿ ರಾಯಚೂರು ಪೊಲೀಸರು ಬಂಧಿಸಿರುವುದು ವಿಪರ್ಯಾಸವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರು ಆದಷ್ಟು ಬೇಗ ಬಿಡುಗಡೆ ಆಗಬೇಕು. ಈ ನಿಟ್ಟಿನಲ್ಲಿ ವಿಚಾರವಂತರು ಮತ್ತು ಸಾಮಾಜಿಕ ಹೋರಾಟಗಾರರು ನಿರಂತರ ಪ್ರಯತ್ನ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...