Homeಕರ್ನಾಟಕಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌...

ಎಲ್ಲಾ ಕೇಸುಗಳಿಂದ ದೋಷಮುಕ್ತರಾದ ಹೋರಾಟಗಾರ ನೂರ್‌ ಶ್ರೀಧರ್‌…

- Advertisement -
- Advertisement -

ನಕ್ಸಲೀಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಹಲವಾರು ಸುಳ್ಳುಕೇಸುಗಳಲ್ಲಿ ಸಿಕ್ಕಿಕೊಂಡು ಭೂಗತರಾಗಿದ್ದವರು ನೂರ್‌ ಶ್ರೀಧರ್‌. 2013-14ರ ಅವಧಿಯಲ್ಲಿ ದೊರೆಸ್ವಾಮಿ, ಗೌರಿಲಂಕೇಶ್‌ ಮತ್ತು ದಿವಗಂತ ಎ.ಕೆ ಸುಬ್ಬಯ್ಯನವರ ಪ್ರಯತ್ನದ ಫಲವಾಗಿ ಸರ್ಕಾರದ ಜೊತೆಗಿನ ಮಾತುಕತೆಯಂತೆ ಮುಖ್ಯವಾಹಿನಿಗೆ ಮರಳಿದ್ದ ನೂರ್ ಶ್ರೀಧರ್‌ ಮೇಲಿದ್ದ ಎಲ್ಲಾ ಕೇಸುಗಳು ಐದು ವರ್ಷಗಳ ನಂತರ ಖುಲಾಸೆಗೊಂಡಿದ್ದು ಅವರೀಗ ದೋಷಮುಕ್ತರಾಗಿದ್ದಾರೆ.

2014ರ ಡಿಸೆಂಬರ್ 08ರಂದು ತಮ್ಮ ಸಹ ಹೋರಾಟಗಾರ ಸಿರಿಮನೆ ನಾಗರಾಜುರವರೊಡನೆ ಮುಖ್ಯವಾಹಿನಿಗೆ ಮರಳಿದ್ದ ಅವರು ಒಂದು ತಿಂಗಳ ಕಾಲ ಜೈಲಿನಲ್ಲಿದ್ದು 2015ರ ಜನವರಿ 15 ರಂದು ಬಂಧಮುಕ್ತರಾಗಿದ್ದರು. ಅದಾದ ನಾಲ್ಕೂವರೆ ವರ್ಷಗಳ ನಂತರ ಇಂದು ದೋಷಮುಕ್ತರೆಂದು ಕೋರ್ಟ್‌ ಹೇಳಿದೆ. ನೂರ್‌ ಶ್ರೀಧರ್‌ರವರಿಗೆ ಸಾಮಾಜಿಕ ಮನ್ನಣೆ ಈಗಾಗಲೇ ಸಿಕ್ಕಿತ್ತು. ಇಂದಿನಿಂದ ಅವರಿಗೆ ಕಾನೂನಿನ ಮನ್ನಣೆಯು ಸಿಕ್ಕಿದೆ.

ಚಿಕ್ಕಮಗಳೂರು ಕೋರ್ಟ್‌‌ನಲ್ಲಿ ಅವರ ಮೇಲೆ ಇದ್ದ 02 ಕೇಸುಗಳು ಒಂದು ವರ್ಷದ ಹಿಂದೆಯೇ ಮುಗಿದಿದ್ದವು. ನಂತರ ಉಡುಪಿ ಕೋರ್ಟ್‌‌ನಲ್ಲಿದ್ದ 02 ಕೇಸುಗಳಲ್ಲಿ ಒಂದು ಆರು ತಿಂಗಳ ಹಿಂದೆ ಮುಗಿದಿದ್ದು ಈಗ ಕೊನೆಯ ಕೇಸ್‌ ಕೂಡ ಮುಗಿದಿದ್ದರಿಂದ ಅವರು ನಿರಾಳರಾಗಿದ್ದಾರೆ.

ಇವರು ಯಾವುದೇ ಅಪರಾಧಗಳಲ್ಲಿ ಪಾಲ್ಗೊಂಡಿಲ್ಲ, ಆ ರೀತಿಯ ಯಾವುದೇ ಸಾಕ್ಷಿಗಳ ಇಲ್ಲವೆಂದು ಕೋರ್ಟ್‌ ತೀರ್ಪು ನೀಡಿದೆ. ನೂರ್‌ ಶ್ರೀಧರ್‌ರವರೊಂದಿಗೆ ಆನಂತರ ಮುಖ್ಯವಾಹಿನಿಗೆ ಬಂದಿದ್ದ ಪದ್ಮನಾಭ್‌ 07 ಕೇಸುಗಳಲ್ಲಿ ಇದುವರೆಗೂ 05 ಕೇಸುಗಳಲ್ಲಿ ದೋಷಮುಕ್ತರಾಗಿದ್ದಾರೆ. ಇಂದು 03 ಪ್ರಕರಣಗಳಲ್ಲಿ ಅವರನ್ನು ದೋಷಮುಕ್ತರೆಂದು ಕೋರ್ಟ್‌ ಘೋಷಿಸಿದೆ.

ವಿದ್ಯಾರ್ಥಿ ದಿಸೆಯಿಂದಲೂ ಹೋರಾಟನಿರತರಾಗಿದ್ದ ನೂರ್‌ ಶ್ರೀಧರ್‌ರವರು, ಮುಖ್ಯವಾಹಿನಿಗೆ ಬಂದನಂತರ ಭೂಮಿ ವಸತಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ದಿಡ್ಡಳ್ಳಿ ಆದಿವಾಸಿಗಳ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್ಲಾ ಜನಪರ ಚಳವಳಿಗಳ ಜೊತೆ ಸಾವಯವ ಸಂಬಂಧ ಹೊಂದಿದ್ದಾರೆ.

ನಕ್ಸಲೈಟ್‌ ಚಳವಳಿಯ ಮೂಲಕ ಭೂಗತರಾಗಿದ್ದ ಹೋರಾಟಗಾರನ ಮೇಲಿನ ಎಲ್ಲಾ ಕೇಸುಗಳು ಖುಲಾಸೆಯಾಗಿ ಬಂಧಮುಕ್ತರಾಗಿರುವ ಸಂದರ್ಭದಲ್ಲಿಯೇ ಮುಖ್ಯವಾಹಿನಿ ಚಳವಳಿಯಲ್ಲಿದ್ದ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ಹಳೆಯ ಸುಳ್ಳು ಕೇಸಿನಲ್ಲಿ ರಾಯಚೂರು ಪೊಲೀಸರು ಬಂಧಿಸಿರುವುದು ವಿಪರ್ಯಾಸವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರು ಆದಷ್ಟು ಬೇಗ ಬಿಡುಗಡೆ ಆಗಬೇಕು. ಈ ನಿಟ್ಟಿನಲ್ಲಿ ವಿಚಾರವಂತರು ಮತ್ತು ಸಾಮಾಜಿಕ ಹೋರಾಟಗಾರರು ನಿರಂತರ ಪ್ರಯತ್ನ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...