Homeಎಚ್.ಎಸ್.ದೊರೆಸ್ವಾಮಿಕರ್ನಾಟಕಕ್ಕೆ ಎದುರಾಗಿರುವ ಸವಾಲನ್ನು ನಿಭಾಯಿಸುವರೇ ಸಿದ್ದರಾಮಯ್ಯ ಮತ್ತು ದೇವೇಗೌಡರು?

ಕರ್ನಾಟಕಕ್ಕೆ ಎದುರಾಗಿರುವ ಸವಾಲನ್ನು ನಿಭಾಯಿಸುವರೇ ಸಿದ್ದರಾಮಯ್ಯ ಮತ್ತು ದೇವೇಗೌಡರು?

- Advertisement -
- Advertisement -

ಕರ್ನಾಟಕಕ್ಕೊಂದು ಸವಾಲು ಎದುರಾಗಿದೆ- ಇದನ್ನು ಎಲ್ಲರೂ ಗಮನಿಸಬೇಕು. ಕಾಂಗ್ರೆಸ್ಸು ಒಡೆದ ಮನೆಯಾಗಿದೆ. ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ. ಕೋಲಾರದ ಮುನಿಯಪ್ಪನವರ ನಾಯಕತ್ವ ಕೋಲಾರಕ್ಕೆ ಸೀಮಿತವಾಗಿತ್ತು. ಈಗ ಅದೂ ಇಲ್ಲವಾಗಿದೆ. ಅಲ್ಲೂ ಅವರಿಗೆ ಎದುರಾಳಿಗಳು ಹುಟ್ಟಿಕೊಂಡು ಅವರ ವರ್ಚಸ್ಸು ಕಡಿಮೆಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರು ಹಿರಿಯ ಮತ್ತು ದೊಡ್ಡ ನಾಯಕರಾದರೂ, ಅವರ ಪ್ರಭಾವ ಹೈದರಾಬಾದ್ ಕರ್ನಾಟಕಕ್ಕೆ ಸೀಮಿತವಾಗಿತ್ತು. ಅವರು ನಾಯಕತ್ವ ವಿಸ್ತಾರಗೊಳಿಸುವ ಸಾಮಥ್ರ್ಯ ಹೊಂದಿದ್ದಾರೆ. ಎಚ್.ಕೆ.ಪಾಟೀಲರು ಉತ್ತರ ಕರ್ನಾಟಕದ ಎತ್ತರಕ್ಕೆ ಬೆಳೆದ ನಾಯಕರು. ಸಾರ್ವಜನಿಕ ಜೀವನವನ್ನು ಚೊಕ್ಕವಾಗಿ ಇಟ್ಟುಕೊಂಡಿದ್ದಾರೆ. ಸಹಕಾರಿಗಳು, ಸಾಮಾಜಿಕ ಕಳಕಳಿಯುಳ್ಳ ಉತ್ತಮ ಸಮಾಜ ಸೇವಕರು. ಅವರ ಬಗ್ಗೆ ಅಪಾರವಾದ ಗೌರವ ಇದೆ. ರಾಜಕೀಯದಲ್ಲಿ ಅವರಿನ್ನೂ ದೊಡ್ಡ ಹೆಜ್ಜೆಗಳನ್ನು ಹಾಕಿಲ್ಲ. ಪಾರ್ಲಿಮೆಂಟ್ ಚುನಾವಣೆ ಸಮಯದಲ್ಲಿ ಚುನಾವಣೆ ನಡೆಸುವ ದೊಡ್ಡ ಜವಾಬ್ದಾರಿಯನ್ನು ಪಾಟೀಲರಿಗೆ ವಹಿಸಲಾಗಿತ್ತು. ಅದನ್ನು ನಿಭಾಯಿಸುವುದರಲ್ಲಿ ಅವರು ಫಲಕಾರಿಯಾಗಿಲ್ಲ.

ಪರಮೇಶ್ವರರು ಬುದ್ಧಿವಂತರು, ರಾಜಕೀಯ ಬಲ್ಲವರು. ಅವರು ತಮ್ಮ ತಂದೆಯವರ ಮೂಸೆಯಲ್ಲಿ ಬೆಳೆದವರು. ಆದರೆ ಅವರಿಗೆ Dashing ಸ್ವಭಾವ ಇಲ್ಲ. ಸಂಘಟನೆ ಮಾಡುವ ಅನುಭವವಿಲ್ಲ. ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 3-4 ಸಾರಿ ಕಾಂಗ್ರೆಸ್ ಜಯಗಳಿಸಿರುವುದು ನಿಜ. ಅದು ಅವರ ಅದೃಷ್ಟ ಎಂದು ಹೇಳಬಹುದೇ ಹೊರತು ಅವರ ರಾಜಕೀಯ ಕೌಶಲದಿಂದ ಆದ ಗೆಲುವು ಎಂದು ಹೇಳಲು ಪುರಾವೆಗಳಿಲ್ಲ.

ಇನ್ನುಳಿದಂತೆ ಹಾಳೂರಿಗೆ ಉಳಿದವನೇ ಒಡೆಯ ಎಂಬ ಸಿದ್ದರಾಮಯ್ಯನವರು. ಸಿದ್ದರಾಮಯ್ಯನವರು ಮೇಲೆ ಹೇಳಿದ ಎಲ್ಲ ನಾಯಕರಿಗಿಂತ ಭಿನ್ನ. ಆಡಳಿತದ ಅನುಭವವುಳ್ಳವರು. ನಾಯಕತ್ವದ ಲಕ್ಷಣ ಉಳ್ಳವರು, ರಾಮಕೃಷ್ಣ ಹೆಗ್ಡೆ, ದೇವೇಗೌಡರ ಮೂಸೆಯಲ್ಲಿ ಬೆಳೆದು ಬಂದವರು. ಸ್ವಲ್ಪ ಮಟ್ಟಿಗೆ ಮೈನಾರಿಟಿಗಳಲ್ಲಿ ಮೈನಾರಿಟಿಗಳಾದ ದೇವರಾಜ ಅರಸರಂತೆ ಅಲ್ಪಸಂಖ್ಯಾತರ ಏಳ್ಗೆಯ ಬಗೆಗೆ ಗಮನ ಹರಿಸುವವರು. ಮೇಲೆ ಹೇಳಿದ ಎಲ್ಲ ನಾಯಕರಿಗಿಂತ ಹೆಚ್ಚಿನ ವರ್ಚಸ್ಸಿನ ವ್ಯಕ್ತಿ ಸಿದ್ದರಾಮಯ್ಯ. ಆದರೆ ಇವರು ಕೊನೆಯ ಪಕ್ಷ ರಾಮಕೃಷ್ಣ ಹೆಗ್ಡೆ, ದೇವರಾಜ ಅರಸರು, ದೇವೇಗೌಡರಷ್ಟು ದಕ್ಷ ಹೋರಾಟಗಾರರಲ್ಲ ಎಂಬುದು ಕಟುಸತ್ಯ. ಆದ್ದರಿಂದ ಸಿದ್ದರಾಮಯ್ಯ ಮೊದಲುಗೊಂಡು ಇತರ ನಾಯಕರು ತಮ್ಮ Ego ಬಿಟ್ಟು ಸಾಮೂಹಿಕ ನಾಯಕತ್ವ ವಹಿಸಿಕೊಂಡರೆ ಮಾತ್ರ ಕರ್ನಾಟಕ ಕಾಂಗ್ರೆಸ್‍ಗೆ ಭವಿಷ್ಯ ಇರುವುದು. ಇವರು ಸ್ಥಾನಮಾನಗಳನ್ನು ನ್ಯಾಯಯುತವಾಗಿ ಹಂಚಿಕೊಂಡು, ಒಟ್ಟಾಗಿ ನಿಂತು ಸಂಘರ್ಷಕ್ಕೆ ಇಳಿದರೆ ಮಾತ್ರ ಮೋದಿ ಮತ್ತು ಶಾರವರ onslaughtನ್ನು ಎದುರಿಸಲು ಸಾಧ್ಯವಾದೀತು.

ನನ್ನ ದೃಷ್ಟಿಯಲ್ಲಿ ಮೋದಿ ಈಗ ಕರ್ನಾಟಕವನ್ನು ಬಿಜೆಪಿ ವಶಮಾಡಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ. ಅವರು ಲಿಂಗಾಯತ, ಒಕ್ಕಲಿಗರ ಎರಡು ರಾಜಕೀಯ ಬಲಗಳನ್ನು ಕರ್ನಾಟಕದಲ್ಲಿ ಗುರುತಿಸಿದ್ದಾರೆ. ಈ ಎರಡು ಬಣಗಳನ್ನು ಒಡೆದರೆ ತನ್ನ ಗುರಿ ಸಾಧನೆಯಾದೀತೆಂದು ನಂಬಿದ್ದಾರೆ. ಇಂಗ್ಲಿಷರ ಒಡೆದು ಆಳುವ ನೀತಿಯನ್ನು ಕರಗತ ಮಾಡಿಕೊಂಡಿರುವ ಶಾ ಮತ್ತು ಮೋದಿ ಕರ್ನಾಟಕದಲ್ಲಿ ಪರಿಣಾಮಕಾರಿಯಾಗಿ ಈ ಪ್ರಯೋಗ ಮಾಡಲು ತೀರ್ಮಾನಿಸಿರುವಂತಿದೆ. ಯಡಿಯೂರಪ್ಪನವರನ್ನು ಬಹಳಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯಲು ಅವರು ಬಿಡುವುದಿಲ್ಲ. ಅವರ ರಾಜೀನಾಮೆ ಪಡೆದು, ರಾಷ್ಟ್ರಾಧ್ಯಕ್ಷರ ಆಡಳಿತ ಹೇರಿ ಆರು ತಿಂಗಳೊಳಗೆ ಚುನಾವಣೆ ನಡೆಸುವ ನಿರ್ಧಾರ ಅವರದು. ಈ ಪ್ರಯೋಗಕ್ಕೆ ಇದು ಸಕಾಲ ಎಂಬುದು ಅವರ ಲೆಕ್ಕಾಚಾರ.

ಲಿಂಗಾಯತರಿಗೆ ಶಾಸನಸಭೆಗೆ ಸಾಕಷ್ಟು ಸೀಟು ಕೊಟ್ಟಿಲ್ಲ. ಮಂತ್ರಿ ಪದವಿ ಕೊಟ್ಟಿಲ್ಲ ಎಂದು ಹಲವು ಲಿಂಗಾಯತ ಮಠಗಳೂ ಡಿಮ್ಯಾಂಡಿಡುವುದು ಸರ್ವೇ ಸಾಮಾನ್ಯ ವಿಷಯ. ಇಷ್ಟರ ಮಟ್ಟಿಗೆ ಲಿಂಗಾಯತ ಮಠಗಳು ರಾಜಕೀಯಕ್ಕೆ ಕೈ ಹಾಕುವುದನ್ನು ಅನೇಕ ಸಾರಿ ಕಂಡಿದ್ದೇವೆ. ಈ ವಿಚಾರ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವೇದ್ಯವೇ ಸರಿ. ಅವರೆಡೆಗೆ ಲಿಂಗಾಯಿತ ಮಠಗಳಿಗೆ ಒಲವಿರುವುದು ಎಲ್ಲರಿಗೂ ತಿಳಿದ ವಿಚಾರ.

ಈಗ ಮೋದಿಯ strategy ಒಕ್ಕಲಿಗ ಲಿಂಗಾಯತರನ್ನು ಬೇರ್ಪಡಿಸುವುದೇ ಆಗಿದೆ. ಲಿಂಗಾಯತರನ್ನು ಒಲಿಸಿಕೊಳ್ಳಲು ಲಿಂಗಾಯತ ಮಠಗಳ ಸಹಾಯ ಪಡೆಯುವುದು, ಒಕ್ಕಲಿಗ ನಾಯಕರನ್ನು ಮೂಲೆ ಗುಂಪು ಮಾಡುವುದು ಮೋದಿ-ಶಾ ಲೆಕ್ಕಾಚಾರ. ಕರ್ನಾಟಕದಲ್ಲಿ ಇರುವ ಪ್ರಭಾವಶಾಲಿ ಜಾತಿಗಳು ಇವೆರಡೇ. ಇವರನ್ನು ಒಡೆದರೆ ನಮ್ಮ ಪತಾಕೆ ಹಾರಿಸಬಹುದು ಎಂಬುದು ಮೋದಿ ಅವರ ಅಂಬೋಣ.

ಕರ್ನಾಟಕದಲ್ಲಿ ಒಕ್ಕಲಿಗರನ್ನು ಒಂದುಗೂಡಿಸುವ ರಾಜಕೀಯ ಶಕ್ತಿಯಾಗಿದ್ದವರು ಎಂದರೆ ದೇವೇಗೌಡರು, ಕುಮಾರಸ್ವಾಮಿಯವರು. ಮನೆತನದ ರಾಜಕೀಯಕ್ಕೆ ಬದ್ಧ ದೇವೇಗೌಡರನ್ನೂ ಇದುವರೆಗೂ ಒಕ್ಕಲಿಗರು ಪ್ರಶ್ನಿಸಿದ್ದಿಲ್ಲ. ಈ ಸಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸಿದ 7 ಸ್ಥಾನಗಳಲ್ಲಿ 3ನ್ನು ದೇವೇಗೌಡರು ತಮ್ಮ ಮನೆಗೆ ಕೊಂಡೊಯ್ದರು. ಅವುಗಳಲ್ಲಿ ಒಂದನ್ನು ಗೆದ್ದು ಎರಡರಲ್ಲಿ ಸೋತರು. ಈಗ ಒಕ್ಕಲಿಗರು ದೇವೇಗೌಡರನ್ನು ಬಹಿರಂಗವಾಗಿ ಟೀಕೆ ಮಾಡಲು ಆರಂಭ ಮಾಡಿದ್ದಾರೆ. ಅವರ ವರ್ಚಸ್ಸು ಕುಗ್ಗುತ್ತಿದೆ. ಈ ಸುಸಂದರ್ಭವನ್ನು ಬಳಸಿಕೊಂಡು ಒಕ್ಕಲಿಗರ ಪ್ರಾಬಲ್ಯವನ್ನು ಕಡಿಮೆ ಮಾಡುವ ಹುನ್ನಾರ ಮಾಡಲೇಬೇಕೆಂದು ಮೋದಿ ತೀರ್ಮಾನಿಸಿದ್ದಾರೆ. ದೇವೇಗೌಡರಿಗೆ ಅದಕ್ಕಿಂತ ಮುಖ್ಯವಾಗಿ, ಒಕ್ಕಲಿಗ ಜನಾಂಗಕ್ಕೇ ಇದು ಒಂದು ಸವಾಲು.

ಆ ಸಮುದಾಯದ ಅಸ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಒಕ್ಕಲಿಗ ಜನಾಂಗ ಇದನ್ನು ಅರ್ಥ ಮಾಡಿಕೊಳ್ಳಬೇಕು. ನಾನು ಜಾತಿವಾದಿಯಾಗಿಲ್ಲ. ಜಾತಿ ಪದ್ಧತಿ ರದ್ದಾಗಬೇಕೆನ್ನುವವನು ನಾನು. ಆದರೆ ಒಂದು ಬಣವನ್ನೇ ನಾಶ ಮಾಡುವುದಕ್ಕೆ ಅಥವಾ ನಿರ್ವೀಯರನ್ನಾಗಿ ಮಾಡುವುದಕ್ಕೆ ನಾನು ಕಡು ವಿರೋಧಿ. ಆದ್ದರಿಂದ ನನ್ನದು ಈ ನಿಲುವು.

ಒಕ್ಕಲಿಗರು ಮೈ ಕೊಡವಿಕೊಂಡು ಎದ್ದು ಮೋದಿಯವರ ಈ ಸವಾಲನ್ನು ಎದುರಿಸಲು ಸೆಡ್ಡು ಹೊಡೆಯಬೇಕು. ಕೂಡಲೇ ಒಕ್ಕಲಿಗ ನಾಯಕರು, ಲಿಂಗಾಯತ ಮಠಗಳ ಸಂಪರ್ಕ ಮಾಡಿ, ನಾವು ಹಿಂದಿನಂತೆಯೇ ಸಾಮರಸ್ಯದಿಂದ ಬಾಳುವ ಸಂಕಲ್ಪ ಮಾಡೋಣವೆಂದು ಪಕ್ಷ ಭೇದ ಮರೆತು ಮನವರಿಕೆ ಮಾಡಿಕೊಡಬೇಕು. ‘ಆಲಸ್ಯಂ ಅಮೃತಂ ವಿಷಂ’.

ಸಿದ್ದರಾಮಯ್ಯನವರಿಗೂ, ದೇವೇಗೌಡರು ಮತ್ತು ಕುಮಾರಸ್ವಾಮಿ ಅವರಿಗೂ ಸಖ್ಯ ಕಡಿಮೆಯಾಗುತ್ತಿದೆ. ಇದು ಮುಂದುವರೆದರೆ ಕರ್ನಾಟಕ ಕಾಂಗ್ರೆಸ್ಸು ನೆಲ ಕಚ್ಚುವುದು ಹಾಗೂ ದೇವೇಗೌಡರ ವರ್ಚಸ್ಸು ಇಳಿಮುಖವಾಗುವ ಸಾಧ್ಯತೆಗಳಿವೆ. ಆ ಉಭಯರೂ ಈಗಿನ ರಾಜಕೀಯ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗ್ರಹಿಸಿ, ಒಬ್ಬರಿಗೊಬ್ಬರು ಸ್ನೇಹಹಸ್ತ ನೀಡಬೇಕು. ಕಾಂಗ್ರೆಸ್ ಮತ್ತು ದೇವೇಗೌಡರ ಪಕ್ಷ ಎರಡೂ ತನ್ನ ಎಡವಟ್ಟುಗಳನ್ನು ಮನಗಂಡು, ಹೊಸ ಒಡಂಬಡಿಕೆ ಮಾಡಿಕೊಂಡು ಕೂಡಿ ಹೋರಾಡಬೇಕು. ನಿನ್ನದು ಎರಡು ಕಣ್ಣು ಹೋಗುವುದಾದರೆ, ನನ್ನದು ಒಂದು ಕಣ್ಣು ಹೋದರು ಸರಿ ಎಂದು ಸಿದ್ದರಾಮಯ್ಯ ಮೊದಲುಗೊಂಡು ಎಲ್ಲರೂ ತೀರ್ಮಾನಕ್ಕೆ ಬಂದಿದ್ದರೆ, ಮೋದಿಯವರ ಕೈಗೆ ಕರ್ನಾಟಕವನ್ನು ನೀವೇ ಕರೆದು ಒಪ್ಪಿಸಿದಂತೆ ಆಗುತ್ತದೆ. ಹೀಗೆ ನೀವಿಬ್ಬರು ಅವಿವೇಕಿಗಳಂತೆ ವರ್ತಿಸಿದರೆ, ಜನ ನಿಮ್ಮನ್ನು ಸುಮ್ಮನೆ ಬಿಡೊಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...