Homeಎಚ್.ಎಸ್.ದೊರೆಸ್ವಾಮಿಕರ್ನಾಟಕಕ್ಕೆ ಎದುರಾಗಿರುವ ಸವಾಲನ್ನು ನಿಭಾಯಿಸುವರೇ ಸಿದ್ದರಾಮಯ್ಯ ಮತ್ತು ದೇವೇಗೌಡರು?

ಕರ್ನಾಟಕಕ್ಕೆ ಎದುರಾಗಿರುವ ಸವಾಲನ್ನು ನಿಭಾಯಿಸುವರೇ ಸಿದ್ದರಾಮಯ್ಯ ಮತ್ತು ದೇವೇಗೌಡರು?

- Advertisement -
- Advertisement -

ಕರ್ನಾಟಕಕ್ಕೊಂದು ಸವಾಲು ಎದುರಾಗಿದೆ- ಇದನ್ನು ಎಲ್ಲರೂ ಗಮನಿಸಬೇಕು. ಕಾಂಗ್ರೆಸ್ಸು ಒಡೆದ ಮನೆಯಾಗಿದೆ. ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ. ಕೋಲಾರದ ಮುನಿಯಪ್ಪನವರ ನಾಯಕತ್ವ ಕೋಲಾರಕ್ಕೆ ಸೀಮಿತವಾಗಿತ್ತು. ಈಗ ಅದೂ ಇಲ್ಲವಾಗಿದೆ. ಅಲ್ಲೂ ಅವರಿಗೆ ಎದುರಾಳಿಗಳು ಹುಟ್ಟಿಕೊಂಡು ಅವರ ವರ್ಚಸ್ಸು ಕಡಿಮೆಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರು ಹಿರಿಯ ಮತ್ತು ದೊಡ್ಡ ನಾಯಕರಾದರೂ, ಅವರ ಪ್ರಭಾವ ಹೈದರಾಬಾದ್ ಕರ್ನಾಟಕಕ್ಕೆ ಸೀಮಿತವಾಗಿತ್ತು. ಅವರು ನಾಯಕತ್ವ ವಿಸ್ತಾರಗೊಳಿಸುವ ಸಾಮಥ್ರ್ಯ ಹೊಂದಿದ್ದಾರೆ. ಎಚ್.ಕೆ.ಪಾಟೀಲರು ಉತ್ತರ ಕರ್ನಾಟಕದ ಎತ್ತರಕ್ಕೆ ಬೆಳೆದ ನಾಯಕರು. ಸಾರ್ವಜನಿಕ ಜೀವನವನ್ನು ಚೊಕ್ಕವಾಗಿ ಇಟ್ಟುಕೊಂಡಿದ್ದಾರೆ. ಸಹಕಾರಿಗಳು, ಸಾಮಾಜಿಕ ಕಳಕಳಿಯುಳ್ಳ ಉತ್ತಮ ಸಮಾಜ ಸೇವಕರು. ಅವರ ಬಗ್ಗೆ ಅಪಾರವಾದ ಗೌರವ ಇದೆ. ರಾಜಕೀಯದಲ್ಲಿ ಅವರಿನ್ನೂ ದೊಡ್ಡ ಹೆಜ್ಜೆಗಳನ್ನು ಹಾಕಿಲ್ಲ. ಪಾರ್ಲಿಮೆಂಟ್ ಚುನಾವಣೆ ಸಮಯದಲ್ಲಿ ಚುನಾವಣೆ ನಡೆಸುವ ದೊಡ್ಡ ಜವಾಬ್ದಾರಿಯನ್ನು ಪಾಟೀಲರಿಗೆ ವಹಿಸಲಾಗಿತ್ತು. ಅದನ್ನು ನಿಭಾಯಿಸುವುದರಲ್ಲಿ ಅವರು ಫಲಕಾರಿಯಾಗಿಲ್ಲ.

ಪರಮೇಶ್ವರರು ಬುದ್ಧಿವಂತರು, ರಾಜಕೀಯ ಬಲ್ಲವರು. ಅವರು ತಮ್ಮ ತಂದೆಯವರ ಮೂಸೆಯಲ್ಲಿ ಬೆಳೆದವರು. ಆದರೆ ಅವರಿಗೆ Dashing ಸ್ವಭಾವ ಇಲ್ಲ. ಸಂಘಟನೆ ಮಾಡುವ ಅನುಭವವಿಲ್ಲ. ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 3-4 ಸಾರಿ ಕಾಂಗ್ರೆಸ್ ಜಯಗಳಿಸಿರುವುದು ನಿಜ. ಅದು ಅವರ ಅದೃಷ್ಟ ಎಂದು ಹೇಳಬಹುದೇ ಹೊರತು ಅವರ ರಾಜಕೀಯ ಕೌಶಲದಿಂದ ಆದ ಗೆಲುವು ಎಂದು ಹೇಳಲು ಪುರಾವೆಗಳಿಲ್ಲ.

ಇನ್ನುಳಿದಂತೆ ಹಾಳೂರಿಗೆ ಉಳಿದವನೇ ಒಡೆಯ ಎಂಬ ಸಿದ್ದರಾಮಯ್ಯನವರು. ಸಿದ್ದರಾಮಯ್ಯನವರು ಮೇಲೆ ಹೇಳಿದ ಎಲ್ಲ ನಾಯಕರಿಗಿಂತ ಭಿನ್ನ. ಆಡಳಿತದ ಅನುಭವವುಳ್ಳವರು. ನಾಯಕತ್ವದ ಲಕ್ಷಣ ಉಳ್ಳವರು, ರಾಮಕೃಷ್ಣ ಹೆಗ್ಡೆ, ದೇವೇಗೌಡರ ಮೂಸೆಯಲ್ಲಿ ಬೆಳೆದು ಬಂದವರು. ಸ್ವಲ್ಪ ಮಟ್ಟಿಗೆ ಮೈನಾರಿಟಿಗಳಲ್ಲಿ ಮೈನಾರಿಟಿಗಳಾದ ದೇವರಾಜ ಅರಸರಂತೆ ಅಲ್ಪಸಂಖ್ಯಾತರ ಏಳ್ಗೆಯ ಬಗೆಗೆ ಗಮನ ಹರಿಸುವವರು. ಮೇಲೆ ಹೇಳಿದ ಎಲ್ಲ ನಾಯಕರಿಗಿಂತ ಹೆಚ್ಚಿನ ವರ್ಚಸ್ಸಿನ ವ್ಯಕ್ತಿ ಸಿದ್ದರಾಮಯ್ಯ. ಆದರೆ ಇವರು ಕೊನೆಯ ಪಕ್ಷ ರಾಮಕೃಷ್ಣ ಹೆಗ್ಡೆ, ದೇವರಾಜ ಅರಸರು, ದೇವೇಗೌಡರಷ್ಟು ದಕ್ಷ ಹೋರಾಟಗಾರರಲ್ಲ ಎಂಬುದು ಕಟುಸತ್ಯ. ಆದ್ದರಿಂದ ಸಿದ್ದರಾಮಯ್ಯ ಮೊದಲುಗೊಂಡು ಇತರ ನಾಯಕರು ತಮ್ಮ Ego ಬಿಟ್ಟು ಸಾಮೂಹಿಕ ನಾಯಕತ್ವ ವಹಿಸಿಕೊಂಡರೆ ಮಾತ್ರ ಕರ್ನಾಟಕ ಕಾಂಗ್ರೆಸ್‍ಗೆ ಭವಿಷ್ಯ ಇರುವುದು. ಇವರು ಸ್ಥಾನಮಾನಗಳನ್ನು ನ್ಯಾಯಯುತವಾಗಿ ಹಂಚಿಕೊಂಡು, ಒಟ್ಟಾಗಿ ನಿಂತು ಸಂಘರ್ಷಕ್ಕೆ ಇಳಿದರೆ ಮಾತ್ರ ಮೋದಿ ಮತ್ತು ಶಾರವರ onslaughtನ್ನು ಎದುರಿಸಲು ಸಾಧ್ಯವಾದೀತು.

ನನ್ನ ದೃಷ್ಟಿಯಲ್ಲಿ ಮೋದಿ ಈಗ ಕರ್ನಾಟಕವನ್ನು ಬಿಜೆಪಿ ವಶಮಾಡಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ. ಅವರು ಲಿಂಗಾಯತ, ಒಕ್ಕಲಿಗರ ಎರಡು ರಾಜಕೀಯ ಬಲಗಳನ್ನು ಕರ್ನಾಟಕದಲ್ಲಿ ಗುರುತಿಸಿದ್ದಾರೆ. ಈ ಎರಡು ಬಣಗಳನ್ನು ಒಡೆದರೆ ತನ್ನ ಗುರಿ ಸಾಧನೆಯಾದೀತೆಂದು ನಂಬಿದ್ದಾರೆ. ಇಂಗ್ಲಿಷರ ಒಡೆದು ಆಳುವ ನೀತಿಯನ್ನು ಕರಗತ ಮಾಡಿಕೊಂಡಿರುವ ಶಾ ಮತ್ತು ಮೋದಿ ಕರ್ನಾಟಕದಲ್ಲಿ ಪರಿಣಾಮಕಾರಿಯಾಗಿ ಈ ಪ್ರಯೋಗ ಮಾಡಲು ತೀರ್ಮಾನಿಸಿರುವಂತಿದೆ. ಯಡಿಯೂರಪ್ಪನವರನ್ನು ಬಹಳಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯಲು ಅವರು ಬಿಡುವುದಿಲ್ಲ. ಅವರ ರಾಜೀನಾಮೆ ಪಡೆದು, ರಾಷ್ಟ್ರಾಧ್ಯಕ್ಷರ ಆಡಳಿತ ಹೇರಿ ಆರು ತಿಂಗಳೊಳಗೆ ಚುನಾವಣೆ ನಡೆಸುವ ನಿರ್ಧಾರ ಅವರದು. ಈ ಪ್ರಯೋಗಕ್ಕೆ ಇದು ಸಕಾಲ ಎಂಬುದು ಅವರ ಲೆಕ್ಕಾಚಾರ.

ಲಿಂಗಾಯತರಿಗೆ ಶಾಸನಸಭೆಗೆ ಸಾಕಷ್ಟು ಸೀಟು ಕೊಟ್ಟಿಲ್ಲ. ಮಂತ್ರಿ ಪದವಿ ಕೊಟ್ಟಿಲ್ಲ ಎಂದು ಹಲವು ಲಿಂಗಾಯತ ಮಠಗಳೂ ಡಿಮ್ಯಾಂಡಿಡುವುದು ಸರ್ವೇ ಸಾಮಾನ್ಯ ವಿಷಯ. ಇಷ್ಟರ ಮಟ್ಟಿಗೆ ಲಿಂಗಾಯತ ಮಠಗಳು ರಾಜಕೀಯಕ್ಕೆ ಕೈ ಹಾಕುವುದನ್ನು ಅನೇಕ ಸಾರಿ ಕಂಡಿದ್ದೇವೆ. ಈ ವಿಚಾರ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವೇದ್ಯವೇ ಸರಿ. ಅವರೆಡೆಗೆ ಲಿಂಗಾಯಿತ ಮಠಗಳಿಗೆ ಒಲವಿರುವುದು ಎಲ್ಲರಿಗೂ ತಿಳಿದ ವಿಚಾರ.

ಈಗ ಮೋದಿಯ strategy ಒಕ್ಕಲಿಗ ಲಿಂಗಾಯತರನ್ನು ಬೇರ್ಪಡಿಸುವುದೇ ಆಗಿದೆ. ಲಿಂಗಾಯತರನ್ನು ಒಲಿಸಿಕೊಳ್ಳಲು ಲಿಂಗಾಯತ ಮಠಗಳ ಸಹಾಯ ಪಡೆಯುವುದು, ಒಕ್ಕಲಿಗ ನಾಯಕರನ್ನು ಮೂಲೆ ಗುಂಪು ಮಾಡುವುದು ಮೋದಿ-ಶಾ ಲೆಕ್ಕಾಚಾರ. ಕರ್ನಾಟಕದಲ್ಲಿ ಇರುವ ಪ್ರಭಾವಶಾಲಿ ಜಾತಿಗಳು ಇವೆರಡೇ. ಇವರನ್ನು ಒಡೆದರೆ ನಮ್ಮ ಪತಾಕೆ ಹಾರಿಸಬಹುದು ಎಂಬುದು ಮೋದಿ ಅವರ ಅಂಬೋಣ.

ಕರ್ನಾಟಕದಲ್ಲಿ ಒಕ್ಕಲಿಗರನ್ನು ಒಂದುಗೂಡಿಸುವ ರಾಜಕೀಯ ಶಕ್ತಿಯಾಗಿದ್ದವರು ಎಂದರೆ ದೇವೇಗೌಡರು, ಕುಮಾರಸ್ವಾಮಿಯವರು. ಮನೆತನದ ರಾಜಕೀಯಕ್ಕೆ ಬದ್ಧ ದೇವೇಗೌಡರನ್ನೂ ಇದುವರೆಗೂ ಒಕ್ಕಲಿಗರು ಪ್ರಶ್ನಿಸಿದ್ದಿಲ್ಲ. ಈ ಸಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸಿದ 7 ಸ್ಥಾನಗಳಲ್ಲಿ 3ನ್ನು ದೇವೇಗೌಡರು ತಮ್ಮ ಮನೆಗೆ ಕೊಂಡೊಯ್ದರು. ಅವುಗಳಲ್ಲಿ ಒಂದನ್ನು ಗೆದ್ದು ಎರಡರಲ್ಲಿ ಸೋತರು. ಈಗ ಒಕ್ಕಲಿಗರು ದೇವೇಗೌಡರನ್ನು ಬಹಿರಂಗವಾಗಿ ಟೀಕೆ ಮಾಡಲು ಆರಂಭ ಮಾಡಿದ್ದಾರೆ. ಅವರ ವರ್ಚಸ್ಸು ಕುಗ್ಗುತ್ತಿದೆ. ಈ ಸುಸಂದರ್ಭವನ್ನು ಬಳಸಿಕೊಂಡು ಒಕ್ಕಲಿಗರ ಪ್ರಾಬಲ್ಯವನ್ನು ಕಡಿಮೆ ಮಾಡುವ ಹುನ್ನಾರ ಮಾಡಲೇಬೇಕೆಂದು ಮೋದಿ ತೀರ್ಮಾನಿಸಿದ್ದಾರೆ. ದೇವೇಗೌಡರಿಗೆ ಅದಕ್ಕಿಂತ ಮುಖ್ಯವಾಗಿ, ಒಕ್ಕಲಿಗ ಜನಾಂಗಕ್ಕೇ ಇದು ಒಂದು ಸವಾಲು.

ಆ ಸಮುದಾಯದ ಅಸ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಒಕ್ಕಲಿಗ ಜನಾಂಗ ಇದನ್ನು ಅರ್ಥ ಮಾಡಿಕೊಳ್ಳಬೇಕು. ನಾನು ಜಾತಿವಾದಿಯಾಗಿಲ್ಲ. ಜಾತಿ ಪದ್ಧತಿ ರದ್ದಾಗಬೇಕೆನ್ನುವವನು ನಾನು. ಆದರೆ ಒಂದು ಬಣವನ್ನೇ ನಾಶ ಮಾಡುವುದಕ್ಕೆ ಅಥವಾ ನಿರ್ವೀಯರನ್ನಾಗಿ ಮಾಡುವುದಕ್ಕೆ ನಾನು ಕಡು ವಿರೋಧಿ. ಆದ್ದರಿಂದ ನನ್ನದು ಈ ನಿಲುವು.

ಒಕ್ಕಲಿಗರು ಮೈ ಕೊಡವಿಕೊಂಡು ಎದ್ದು ಮೋದಿಯವರ ಈ ಸವಾಲನ್ನು ಎದುರಿಸಲು ಸೆಡ್ಡು ಹೊಡೆಯಬೇಕು. ಕೂಡಲೇ ಒಕ್ಕಲಿಗ ನಾಯಕರು, ಲಿಂಗಾಯತ ಮಠಗಳ ಸಂಪರ್ಕ ಮಾಡಿ, ನಾವು ಹಿಂದಿನಂತೆಯೇ ಸಾಮರಸ್ಯದಿಂದ ಬಾಳುವ ಸಂಕಲ್ಪ ಮಾಡೋಣವೆಂದು ಪಕ್ಷ ಭೇದ ಮರೆತು ಮನವರಿಕೆ ಮಾಡಿಕೊಡಬೇಕು. ‘ಆಲಸ್ಯಂ ಅಮೃತಂ ವಿಷಂ’.

ಸಿದ್ದರಾಮಯ್ಯನವರಿಗೂ, ದೇವೇಗೌಡರು ಮತ್ತು ಕುಮಾರಸ್ವಾಮಿ ಅವರಿಗೂ ಸಖ್ಯ ಕಡಿಮೆಯಾಗುತ್ತಿದೆ. ಇದು ಮುಂದುವರೆದರೆ ಕರ್ನಾಟಕ ಕಾಂಗ್ರೆಸ್ಸು ನೆಲ ಕಚ್ಚುವುದು ಹಾಗೂ ದೇವೇಗೌಡರ ವರ್ಚಸ್ಸು ಇಳಿಮುಖವಾಗುವ ಸಾಧ್ಯತೆಗಳಿವೆ. ಆ ಉಭಯರೂ ಈಗಿನ ರಾಜಕೀಯ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗ್ರಹಿಸಿ, ಒಬ್ಬರಿಗೊಬ್ಬರು ಸ್ನೇಹಹಸ್ತ ನೀಡಬೇಕು. ಕಾಂಗ್ರೆಸ್ ಮತ್ತು ದೇವೇಗೌಡರ ಪಕ್ಷ ಎರಡೂ ತನ್ನ ಎಡವಟ್ಟುಗಳನ್ನು ಮನಗಂಡು, ಹೊಸ ಒಡಂಬಡಿಕೆ ಮಾಡಿಕೊಂಡು ಕೂಡಿ ಹೋರಾಡಬೇಕು. ನಿನ್ನದು ಎರಡು ಕಣ್ಣು ಹೋಗುವುದಾದರೆ, ನನ್ನದು ಒಂದು ಕಣ್ಣು ಹೋದರು ಸರಿ ಎಂದು ಸಿದ್ದರಾಮಯ್ಯ ಮೊದಲುಗೊಂಡು ಎಲ್ಲರೂ ತೀರ್ಮಾನಕ್ಕೆ ಬಂದಿದ್ದರೆ, ಮೋದಿಯವರ ಕೈಗೆ ಕರ್ನಾಟಕವನ್ನು ನೀವೇ ಕರೆದು ಒಪ್ಪಿಸಿದಂತೆ ಆಗುತ್ತದೆ. ಹೀಗೆ ನೀವಿಬ್ಬರು ಅವಿವೇಕಿಗಳಂತೆ ವರ್ತಿಸಿದರೆ, ಜನ ನಿಮ್ಮನ್ನು ಸುಮ್ಮನೆ ಬಿಡೊಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...