Homeಕರ್ನಾಟಕಧರ್ಮ ಮತ್ತು ಹಿಂದುತ್ವ ಪ್ರತಿಪಾದಕರು

ಧರ್ಮ ಮತ್ತು ಹಿಂದುತ್ವ ಪ್ರತಿಪಾದಕರು

- Advertisement -
- Advertisement -

ನೂರರ ನೋಟ- 40

| ಎಚ್.ಎಸ್ ದೊರೆಸ್ವಾಮಿ |

ಹಿಂದುತ್ವ ಪ್ರತಿಪಾದಕ ಉತ್ತರ ಪ್ರದೇಶದ ಮುಖ್ಯಮಂತ್ರಿ, ದಕ್ಷಿಣ ಕನ್ನಡ ಜಿಲ್ಲೆಯ ತಲೆಕೆಟ್ಟ ಹಿಂದುತ್ವ ಪ್ರತಿಪಾದಕರು ಗೋವಿನ ಹೆಸರಲ್ಲಿ ಮತೀಯ ದ್ವೇಷ ಸಾಧಿಸುವುದಕ್ಕಾಗಿ ಆಗಾಗ ಕೋಮುದಂಗೆ ಮಾಡಿಸುತ್ತಾರೆ; ಕೊಲೆ ಆಗುವಂತೆ ಮಾಡುತ್ತಾರೆ. ‘ಧರ್ಮವನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಧರ್ಮೋರಕ್ಷತಿ ರಕ್ಷಿತಃ ಧರ್ಮವನ್ನು ರಕ್ಷಿಸುವವರನ್ನು ಧರ್ಮ ಕಾಪಾಡುತ್ತದೆ. ಆದ್ದರಿಂದ ಧರ್ಮವನ್ನು ರಕ್ಷಿಸಲು ಹೋರಾಡಬೇಕು. ಧರ್ಮಕ್ಕೆ ಹೋರಾಡದಿದ್ದರೆ ನಮ್ಮ ಸಮಾಜ ಎಲ್ಲಿ ಉಳಿಯುತ್ತದೆ’ ಎಂದು ಹಿಂದೂ ಮತಾಂಧರು, ಮುಸ್ಲಿಂ ಮತಾಂಧರು ವಾದಿಸುತ್ತಾರೆ.

ಈ ಧರ್ಮಾಂಧರಿಗೆ ಧರ್ಮ ರಕ್ಷಣೆ ತಮ್ಮ ಕರ್ತವ್ಯ ಎಂದು ಅನಿಸಿದಾಗ ಗೂಂಡಾಗಳನ್ನು ಸಾಕಿಕೊಳ್ಳುತ್ತಾರೆ. ಈ ಪಡೆ ಶಾಂತಿಕಾಲದಲ್ಲಿ ತಮ್ಮ ಶಕ್ತಿಯನ್ನು ವೃದ್ಧಿಸಿಕೊಳ್ಳುವುದರಲ್ಲಿ ತೊಡಗುತ್ತಾರೆ ಮತ್ತು ಹೋರಾಡುವ ಸಂದರ್ಭ ಬಂದಾಗ ತಮ್ಮ ನಿಲುವನ್ನು ಒಪ್ಪದ ಜನರ ಮೇಲೆ ಬಿದ್ದು ಅವರನ್ನು ಕೊಲೆಮಾಡುವರು. ಹಣಕ್ಕಾಗಿ ಕೊಲೆಮಾಡಲು ಸುಪಾರಿ ಸ್ವೀಕರಿಸುವವರಿಗೂ ಈ ಮತಾಂಧರು ಸಾಕಿಕೊಂಡಿರುವ ಗೂಂಡಾಗಳಿಗೂ ಏನು ವ್ಯತ್ಯಾಸ? ಧರ್ಮಕ್ಕೂ ಈ ಗೂಂಡಾಗಳಿಗೂ ಯಾವ ನಂಟು? ಗೂಂಡಾಗಳಿಗೊಂದು ಧರ್ಮವಿದೆಯೇ? ಸಿದ್ಧಾಂತವಿದೆಯೇ? ಹಿಂದುತ್ವ ಪ್ರತಿಪಾದಕರು ತಾವೇ ಗೂಂಡಾಗಳಾಗಿರುವುದರಿಂದ ಸಂದರ್ಭ ಸಿಕ್ಕರೆ ಇವರು ಸಮಸ್ತ ಅಧಿಕಾರವನ್ನು ಕರವಶ ಮಾಡಿಕೊಂಡು ವಿಜೃಂಭಿಸುವರು. ತಾತ್ಪರ್ಯವಿಷ್ಟೇ. ಯಾರು ಧರ್ಮ ರಕ್ಷಣೆಗಾಗಿ ಗೂಂಡಾಗಳನ್ನು ಬೆಳೆಸುವರೋ-ಬಳಸುವರೋ ಅವರು ಧರ್ಮವನ್ನು ಹೇಗೆ ಪ್ರತಿಪಾದಿಸುತ್ತಾರೆ?

ಭೀಮನ ಗದೆಯಾಗಲೀ, ಅರ್ಜುನನ ಗಾಂಡೀವವಾಗಲೀ ಧರ್ಮವನ್ನು ರಕ್ಷಿಸುವ ಸಾಧನವಾಗಲಾರದು. ಧರ್ಮದಿಂದ ನಡೆದುಕೊಂಡಿದ್ದರಿಂದ ಅವರು ಹೊತ್ತಿದ್ದ ಅಯುಧಗಳಿಗೆ ಕೀರ್ತಿ ಬಂತು. ಹಾಗಿಲ್ಲವಾದರೆ ಭೀಮ ಅರ್ಜುನರು ಕೊಲೆಗಡುಕರು ಅನ್ನಿಸಿಕೊಳ್ಳುತ್ತಿದ್ದರು.

ಹಿಂದುತ್ವ ಪ್ರತಿಪಾದಕರು ಯಾರ ಕೈಯಲ್ಲಿ ಗದೆ ಇದೆಯೋ ಅವರಿಗೇ ಜಯ ಎಂದು ಭಾವಿಸುತ್ತಾರೆ. ಧರ್ಮ ಅವರಿಗೆ ಒಂದು ಕೋಣವಿದ್ದಂತೆ. ಯಾರು ಅಪಮಾರ್ಗದಲ್ಲಿ ಗೆಲ್ಲುವರೋ ಅವರು ಧರ್ಮಿಷ್ಟರು, ಅವರದು ಕೋಣ. ಧರ್ಮದ ರಕ್ಷಣೆ ಎಂದರೆ ಧರ್ಮಿಷ್ಟರಾಗಿ ನಡೆದುಕೊಳ್ಳುವುದು.

ಹಿಂದೂ ಮತಾಂಧರು, ಮುಸ್ಲಿಮ್ ಮತಾಂಧರು, ಕ್ರಿಶ್ಚಿಯನ್ ಮತಾಂಧರು ಧರ್ಮ ಎಂದರೆ, ಹಿಂದೂ ಧರ್ಮ, ಕ್ರಿಶ್ಚಿಯನ್ ಧರ್ಮ, ಇಸ್ಲಾಂ ಧರ್ಮ ಎಂದು ಅರ್ಥೈಸುತ್ತಾರೆ. ಇವೆಲ್ಲ ಹೊಡೆದಾಡುವ ಧರ್ಮಗಳು. ಬಡಿದಾಡುವ ಧರ್ಮಗಳು ಧರ್ಮವೇ ಅಲ್ಲ. ಯಾವ ಧರ್ಮವು ಪರಸ್ಪರ ಹೊಡೆದಾಡಲು ಹೇಳಿಲ್ಲ. ಶಾಂತಿಯನ್ನು ಬೋಧಿಸುತ್ತದೆ. ಆದರೆ ಈ ಧರ್ಮಾಂಧರು ಧರ್ಮವನ್ನು ಬಳಸಿಕೊಂಡು ಕೋಮು ಸಂಘರ್ಷದ ಕೆಲಸವನ್ನೇ ಮಾಡುತ್ತಾರೆ. ಕ್ರಿಶ್ಚಿಯನ್ ಜನಾಂಗದವರು ಮಾಡಿರುವಷ್ಟು ಯುದ್ಧವನ್ನು ಬೇರಾವ ಜನಾಂಗವೂ ಮಾಡಿಲ್ಲ.

ಎಲ್ಲಾ ಮತಗಳ ಹೊಂದಾಣಿಕೆಯೇ ಧರ್ಮ. ಪರಸ್ಪರ ಬಡಿದಾಡುವ ಧರ್ಮ ಧರ್ಮವೇ ಅಲ್ಲ. ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಮುಂತಾದ ಎಲ್ಲಾ ಧರ್ಮಗಳ ಅನುಯಾಯಿಗಳು ‘ಧರ್ಮ’ ಪದವನ್ನು ತಮ್ಮ ವಾದಕ್ಕೆ ಅನುಗುಣವಾಗಿ ದುರುಪಯೋಗ ಪಡಿಸಿಕೊಳ್ಳುತ್ತಾರೆ.

ಸತ್ಯಂವದ, ಧರ್ಮಂಚರ ಎಂದು ನಮ್ಮ ಉಪನಿಷತ್ತು ಹೇಳುತ್ತದೆ. ಸತ್ಯವನ್ನು ನುಡಿ ಧರ್ಮವನ್ನು ಆಚರಣೆ ಮಾಡು ಎಂದು ಇದರ ಅರ್ಥ. ‘ಧರ್ಮ’ ಒಂದು ಧರ್ಮಕ್ಕೆ ಸೀಮಿತವಾದುದಲ್ಲ. ಅದು ವಿಶ್ವ ಧರ್ಮವನ್ನು ಪ್ರತಿಪಾದಿಸುತ್ತದೆ. ಎಲ್ಲಾ ಧರ್ಮಗಳೂ ಅಂಗೀಕರಿಸಬೇಕಾದ ಧರ್ಮ ಅದು, ವಿಶ್ವಧರ್ಮ. ಯಾರನ್ನೂ ದ್ವೇಷಿಸಲು ಹೇಳುವುದಿಲ್ಲ. ಯಾವ ಧರ್ಮವನ್ನೂ ಅದು ಅಲ್ಲಗಳೆಯುವುದಿಲ್ಲ. ಧರ್ಮದ ಹೆಸರಿನಲ್ಲಿ ಇತರ ಧರ್ಮಗಳ ಮೇಲೆ ದಾಳಿಮಾಡಲು ದ್ವೇಷ ಬುದ್ಧಿಯಿಂದ ನಡೆದುಕೊಳ್ಳಲು ಹೇಳುವುದಿಲ್ಲ. ಶ್ರೀರಾಮಕೃಷ್ಣ ಪರಮಹಂಸರು ವಿಶ್ವ ಧರ್ಮ ಪರಿಪಾಲಕರು. ಎಲ್ಲಾ ಮತಗಳಲ್ಲಿರುವ ಉತ್ತಮ ವಿಚಾರಗಳನ್ನು ಹಿಂದೂ ಧರ್ಮ ಅಳವಡಿಸಿಕೊಳ್ಳಬೇಕೆಂದು ಅವರು ಬಯಸಿ, ಸರ್ವಧರ್ಮ ಸಮನ್ವಯದ ಮಾತನಾಡಿದ್ದರು. ಇತರ ಮತಗಳ ಸಂಸ್ಥಾಪಕರು ಪ್ರತಿಪಾದಿಸಿದ ಉತ್ತಮ ಅಂಶಗಳನ್ನು ಹಿಂದೂ ಧರ್ಮಕ್ಕೆ ಜೋಡಿಸಿದರು. ಹಿಂದೂ ಧರ್ಮದಲ್ಲಿ ಪ್ರತಿಪಾದಿಸದಿರುವ ಅನೇಕ ಒಳ್ಳೆಯ ಅಂಶಗಳು ಇತರ ಧರ್ಮಗಳಲ್ಲಿರುವುದನ್ನು ಅರಿತು ಅವನ್ನು ಹಿಂದೂ ಧರ್ಮಕ್ಕೆ ಅಳವಡಿಸಲು ಮುಂದಾದರು. ಪೂಜ್ಯ ವಿನೋಬಾ ಭಾವೆಯವರು ಬೈಬಲ್ ಕುರಾನ್‍ಗಳಲ್ಲಿರುವ ಮೌಲಿಕ ತತ್ವಗಳನ್ನು ಆಯ್ದು ಕಲೆ ಹಾಕಿ ‘ಎಸೆನ್ಸ್ ಆಫ್ ಇಸ್ಲಾಂ, ಎಸೆನ್ಸ್ ಆಫ್ ಕ್ರಿಶ್ಚಿಯಾನಿಟಿ’ ಶೀರ್ಷಿಕೆಯು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಮತ ಧರ್ಮಗಳ ಹೊಂದಾಣಿಕೆಯ ಕೆಲಸ ಇದು.

ಹಿಂದೂ ಮತಾಂಧ ಸಂಸ್ಥೆಗಳವರು ಈ ಲೋಕ ಕಲ್ಯಾಣದ ಕೆಲಸ ಮಾಡುವ ಬದಲು, ಮತಧರ್ಮಗಳನ್ನು ಒಡೆಯುವ, ಆ ಮೂಲಕ ಮುಗ್ಧ ಹಿಂದೂಗಳ ಭಾವನೆಗಳನ್ನು ಕೆರಳಿಸಿ ಅನ್ಯ ಧರ್ಮೀಯರನ್ನು ಶತ್ರುಗಳಂತೆ ಕಾಣಲು ಕೈ ಜೋಡಿಸುತ್ತಾರೆ. ಕೃಷ್ಣ ಗೋಕುಲಕ್ಕೆ ಬೆಂಕಿ ಬಿದ್ದಾಗ ಗೋವರ್ಧನ ಪರ್ವತವನ್ನು ಮೇಲೆತ್ತಿ ಅದರ ತಳಗೆ ಗೋಕುಲದವರನ್ನೆಲ್ಲಾ ಇಟ್ಟು ಕಾಪಾಡಿದನಂತೆ. ಆದರೆ ಹಿಂದೂತ್ವ ಪ್ರತಿಪಾದಕರು ಸಮಾಜಕ್ಕೆ ಸಂದರ್ಭ ಒದಗಿದಾಗಲೆಲ್ಲ ಬೆಂಕಿ ಹಾಕುವ ತಯಾರಿಯಲ್ಲಿರುವವರೇ!

ಎಲ್ಲಾ ಮತ ಧರ್ಮಗಳಲ್ಲಿ ಕೆಲವು ಲೋಪ ದೋಷಗಳು ಇದ್ದೇ ಇವೆ. ಹಿಂದೂ ಧರ್ಮ ಇದಕ್ಕೆ ಹೊರತಲ್ಲ. ಹಿಂದೂ ಧರ್ಮದಲ್ಲಿ ಜಾತೀಯತೆ, ಶ್ರೇಣೀಕೃತ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ಹೆಣ್ಣಿನ ಬಗೆಗೆ ತಾರತಮ್ಯ, ಹೀಗೆ ಹತ್ತಾರು ಲೋಪದೋಷಗಳಿವೆ.

ಅದರ ಜೊತೆಗೆ ಹಿಂದೂ ಮತಾಂಧತೆ, ಅನ್ಯ ಧರ್ಮೀಯರ ವಿಚಾರದಲ್ಲಿ ಕ್ರೌರ್ಯ, ಅಸಹನೆ, ವೈಚಾರಿಕ ಭಿನ್ನಾಭಿಪ್ರಾಯ ಉಳ್ಳವರನ್ನು, ಹಿಂದುತ್ವ ಪ್ರತಿಪಾದಕರನ್ನು ಪ್ರಶ್ನಿಸುವವರನ್ನು ವ್ಯವಸ್ಥಿತವಾಗಿ ಕೊಲೆ ಮಾಡುವುದು, ಸೆರೆಮನೆಗೆ ದೂಡುವುದು, ಖಟ್ಲೆಗಳನ್ನು ಹಾಕುವುದು ಅವ್ಯಾಹತವಾಗಿ ನಡೆದಿದೆ. ಇಷ್ಟೆಲ್ಲಾ ಅನಾಹುತ ಹಿಂದುತ್ವ ಪ್ರತಿಪಾದಕರಿಂದ ಮೇಲಿಂದ ಮೇಲೆ ನಡೆಯುತ್ತಿದ್ದರೂ, ಪ್ರಧಾನಿ ಮೋದಿಯವರು ಒಂದು ಸಾರಿಯೂ ಈ ಕುರಿತು ಪ್ರಸ್ತಾಪಿಸಿದ್ದೇ ಇಲ್ಲ. ಇಷ್ಟೇ ಅಲ್ಲ, ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಅವರೂ ಅಮಿತ್ ಷಾರವರು ಕೂಡಿಕೊಂಡು ವ್ಯವಸ್ಥಿತವಾಗಿ ಮುಸ್ಲಿಮರ ಸಾಲ್ಗೊಲೆ ಮಾಡಿಸಿದ್ದೂ ಜಗಜ್ಜಾಹೀರಾಗಿದೆ. ಬೇಲಿಯೇ ಎದ್ದು ಹೊಲ ಮೇಯುವ ಪರಿಸ್ಥಿತಿ ಸೃಷ್ಟಿಯಾಗಿದೆ.

ಈ ಎಲ್ಲ ಪಿಡುಗುಗಳಿಂದ ಹಿಂದೂ ಮತವನ್ನು ಪಾರು ಮಾಡಲೇಬೇಕಾದ್ದು ಮತದಾರರ ಆದ್ಯ ಕರ್ತವ್ಯವಾಗಿದೆ. ಆಸ್ಟ್ರೇಲಿಯಾ ಪ್ರಜೆಯೊಬ್ಬ ನ್ಯೂಜಿಲೆಂಡಿನಲ್ಲಿ ನೌಕರಿ ಮಾಡುತ್ತಿದ್ದು, ಕಳೆದ ಶುಕ್ರವಾರ 2 ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ 50 ಮುಸ್ಲಿಂ ಮುಗ್ಧರನ್ನು ಬಂದೂಕಿನಿಂದ ಹೊಡೆದು ಕೊಂದಿದ್ದಾನೆ. ಅವನು ಇವರನ್ನು ಏಕೆ ಕೊಂದನೆಂಬುದಕ್ಕೆ, ಬಿಳಿಯರಿಗೆ ಮಾತ್ರ ಈ ದೇಶ ಇರುವುದು ಎಂದು ಹೇಳಿದ್ದಾನೆ.

ಭಾರತದಲ್ಲಿ ಆರ್‍ಎಸ್‍ಎಸ್, ಬಿಜೆಪಿ, ಮೋದಿ ಹೇಳುವುದೂ ಇದನ್ನೇ. ಭಾರತ ಹಿಂದೂಗಳ ರಾಷ್ಟ್ರ, ಇಲ್ಲಿ ಬೇರೆಯವರಿಗೆ ಇರಲು ಅವಕಾಶವಿಲ್ಲ, ಇದ್ದರೂ ಅವರು 2ನೇ ದರ್ಜೆಯ ಪ್ರಜೆಗಳಾಗಿ ಇರಬೇಕು.

ಈ ವಿಚಿತ್ರ ನಿಲುವಿನ ಕೊಲೆಗಡುಕ ಜನ ಅಲ್ಲೊಬ್ಬರು ಇಲ್ಲೊಬ್ಬರು ಇದ್ದರೆ, ಭಾರತದಲ್ಲಿ ಇಂತಹ ತಲೆ ಕೆಟ್ಟವರ ಸಂಘಟನೆಗಳೇ ಇವೆ. ರಾಜಕೀಯದಲ್ಲಿ ವಿಷ ಸೇರಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...