Homeಕರ್ನಾಟಕಧರ್ಮ ಮತ್ತು ಹಿಂದುತ್ವ ಪ್ರತಿಪಾದಕರು

ಧರ್ಮ ಮತ್ತು ಹಿಂದುತ್ವ ಪ್ರತಿಪಾದಕರು

- Advertisement -
- Advertisement -

ನೂರರ ನೋಟ- 40

| ಎಚ್.ಎಸ್ ದೊರೆಸ್ವಾಮಿ |

ಹಿಂದುತ್ವ ಪ್ರತಿಪಾದಕ ಉತ್ತರ ಪ್ರದೇಶದ ಮುಖ್ಯಮಂತ್ರಿ, ದಕ್ಷಿಣ ಕನ್ನಡ ಜಿಲ್ಲೆಯ ತಲೆಕೆಟ್ಟ ಹಿಂದುತ್ವ ಪ್ರತಿಪಾದಕರು ಗೋವಿನ ಹೆಸರಲ್ಲಿ ಮತೀಯ ದ್ವೇಷ ಸಾಧಿಸುವುದಕ್ಕಾಗಿ ಆಗಾಗ ಕೋಮುದಂಗೆ ಮಾಡಿಸುತ್ತಾರೆ; ಕೊಲೆ ಆಗುವಂತೆ ಮಾಡುತ್ತಾರೆ. ‘ಧರ್ಮವನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಧರ್ಮೋರಕ್ಷತಿ ರಕ್ಷಿತಃ ಧರ್ಮವನ್ನು ರಕ್ಷಿಸುವವರನ್ನು ಧರ್ಮ ಕಾಪಾಡುತ್ತದೆ. ಆದ್ದರಿಂದ ಧರ್ಮವನ್ನು ರಕ್ಷಿಸಲು ಹೋರಾಡಬೇಕು. ಧರ್ಮಕ್ಕೆ ಹೋರಾಡದಿದ್ದರೆ ನಮ್ಮ ಸಮಾಜ ಎಲ್ಲಿ ಉಳಿಯುತ್ತದೆ’ ಎಂದು ಹಿಂದೂ ಮತಾಂಧರು, ಮುಸ್ಲಿಂ ಮತಾಂಧರು ವಾದಿಸುತ್ತಾರೆ.

ಈ ಧರ್ಮಾಂಧರಿಗೆ ಧರ್ಮ ರಕ್ಷಣೆ ತಮ್ಮ ಕರ್ತವ್ಯ ಎಂದು ಅನಿಸಿದಾಗ ಗೂಂಡಾಗಳನ್ನು ಸಾಕಿಕೊಳ್ಳುತ್ತಾರೆ. ಈ ಪಡೆ ಶಾಂತಿಕಾಲದಲ್ಲಿ ತಮ್ಮ ಶಕ್ತಿಯನ್ನು ವೃದ್ಧಿಸಿಕೊಳ್ಳುವುದರಲ್ಲಿ ತೊಡಗುತ್ತಾರೆ ಮತ್ತು ಹೋರಾಡುವ ಸಂದರ್ಭ ಬಂದಾಗ ತಮ್ಮ ನಿಲುವನ್ನು ಒಪ್ಪದ ಜನರ ಮೇಲೆ ಬಿದ್ದು ಅವರನ್ನು ಕೊಲೆಮಾಡುವರು. ಹಣಕ್ಕಾಗಿ ಕೊಲೆಮಾಡಲು ಸುಪಾರಿ ಸ್ವೀಕರಿಸುವವರಿಗೂ ಈ ಮತಾಂಧರು ಸಾಕಿಕೊಂಡಿರುವ ಗೂಂಡಾಗಳಿಗೂ ಏನು ವ್ಯತ್ಯಾಸ? ಧರ್ಮಕ್ಕೂ ಈ ಗೂಂಡಾಗಳಿಗೂ ಯಾವ ನಂಟು? ಗೂಂಡಾಗಳಿಗೊಂದು ಧರ್ಮವಿದೆಯೇ? ಸಿದ್ಧಾಂತವಿದೆಯೇ? ಹಿಂದುತ್ವ ಪ್ರತಿಪಾದಕರು ತಾವೇ ಗೂಂಡಾಗಳಾಗಿರುವುದರಿಂದ ಸಂದರ್ಭ ಸಿಕ್ಕರೆ ಇವರು ಸಮಸ್ತ ಅಧಿಕಾರವನ್ನು ಕರವಶ ಮಾಡಿಕೊಂಡು ವಿಜೃಂಭಿಸುವರು. ತಾತ್ಪರ್ಯವಿಷ್ಟೇ. ಯಾರು ಧರ್ಮ ರಕ್ಷಣೆಗಾಗಿ ಗೂಂಡಾಗಳನ್ನು ಬೆಳೆಸುವರೋ-ಬಳಸುವರೋ ಅವರು ಧರ್ಮವನ್ನು ಹೇಗೆ ಪ್ರತಿಪಾದಿಸುತ್ತಾರೆ?

ಭೀಮನ ಗದೆಯಾಗಲೀ, ಅರ್ಜುನನ ಗಾಂಡೀವವಾಗಲೀ ಧರ್ಮವನ್ನು ರಕ್ಷಿಸುವ ಸಾಧನವಾಗಲಾರದು. ಧರ್ಮದಿಂದ ನಡೆದುಕೊಂಡಿದ್ದರಿಂದ ಅವರು ಹೊತ್ತಿದ್ದ ಅಯುಧಗಳಿಗೆ ಕೀರ್ತಿ ಬಂತು. ಹಾಗಿಲ್ಲವಾದರೆ ಭೀಮ ಅರ್ಜುನರು ಕೊಲೆಗಡುಕರು ಅನ್ನಿಸಿಕೊಳ್ಳುತ್ತಿದ್ದರು.

ಹಿಂದುತ್ವ ಪ್ರತಿಪಾದಕರು ಯಾರ ಕೈಯಲ್ಲಿ ಗದೆ ಇದೆಯೋ ಅವರಿಗೇ ಜಯ ಎಂದು ಭಾವಿಸುತ್ತಾರೆ. ಧರ್ಮ ಅವರಿಗೆ ಒಂದು ಕೋಣವಿದ್ದಂತೆ. ಯಾರು ಅಪಮಾರ್ಗದಲ್ಲಿ ಗೆಲ್ಲುವರೋ ಅವರು ಧರ್ಮಿಷ್ಟರು, ಅವರದು ಕೋಣ. ಧರ್ಮದ ರಕ್ಷಣೆ ಎಂದರೆ ಧರ್ಮಿಷ್ಟರಾಗಿ ನಡೆದುಕೊಳ್ಳುವುದು.

ಹಿಂದೂ ಮತಾಂಧರು, ಮುಸ್ಲಿಮ್ ಮತಾಂಧರು, ಕ್ರಿಶ್ಚಿಯನ್ ಮತಾಂಧರು ಧರ್ಮ ಎಂದರೆ, ಹಿಂದೂ ಧರ್ಮ, ಕ್ರಿಶ್ಚಿಯನ್ ಧರ್ಮ, ಇಸ್ಲಾಂ ಧರ್ಮ ಎಂದು ಅರ್ಥೈಸುತ್ತಾರೆ. ಇವೆಲ್ಲ ಹೊಡೆದಾಡುವ ಧರ್ಮಗಳು. ಬಡಿದಾಡುವ ಧರ್ಮಗಳು ಧರ್ಮವೇ ಅಲ್ಲ. ಯಾವ ಧರ್ಮವು ಪರಸ್ಪರ ಹೊಡೆದಾಡಲು ಹೇಳಿಲ್ಲ. ಶಾಂತಿಯನ್ನು ಬೋಧಿಸುತ್ತದೆ. ಆದರೆ ಈ ಧರ್ಮಾಂಧರು ಧರ್ಮವನ್ನು ಬಳಸಿಕೊಂಡು ಕೋಮು ಸಂಘರ್ಷದ ಕೆಲಸವನ್ನೇ ಮಾಡುತ್ತಾರೆ. ಕ್ರಿಶ್ಚಿಯನ್ ಜನಾಂಗದವರು ಮಾಡಿರುವಷ್ಟು ಯುದ್ಧವನ್ನು ಬೇರಾವ ಜನಾಂಗವೂ ಮಾಡಿಲ್ಲ.

ಎಲ್ಲಾ ಮತಗಳ ಹೊಂದಾಣಿಕೆಯೇ ಧರ್ಮ. ಪರಸ್ಪರ ಬಡಿದಾಡುವ ಧರ್ಮ ಧರ್ಮವೇ ಅಲ್ಲ. ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಮುಂತಾದ ಎಲ್ಲಾ ಧರ್ಮಗಳ ಅನುಯಾಯಿಗಳು ‘ಧರ್ಮ’ ಪದವನ್ನು ತಮ್ಮ ವಾದಕ್ಕೆ ಅನುಗುಣವಾಗಿ ದುರುಪಯೋಗ ಪಡಿಸಿಕೊಳ್ಳುತ್ತಾರೆ.

ಸತ್ಯಂವದ, ಧರ್ಮಂಚರ ಎಂದು ನಮ್ಮ ಉಪನಿಷತ್ತು ಹೇಳುತ್ತದೆ. ಸತ್ಯವನ್ನು ನುಡಿ ಧರ್ಮವನ್ನು ಆಚರಣೆ ಮಾಡು ಎಂದು ಇದರ ಅರ್ಥ. ‘ಧರ್ಮ’ ಒಂದು ಧರ್ಮಕ್ಕೆ ಸೀಮಿತವಾದುದಲ್ಲ. ಅದು ವಿಶ್ವ ಧರ್ಮವನ್ನು ಪ್ರತಿಪಾದಿಸುತ್ತದೆ. ಎಲ್ಲಾ ಧರ್ಮಗಳೂ ಅಂಗೀಕರಿಸಬೇಕಾದ ಧರ್ಮ ಅದು, ವಿಶ್ವಧರ್ಮ. ಯಾರನ್ನೂ ದ್ವೇಷಿಸಲು ಹೇಳುವುದಿಲ್ಲ. ಯಾವ ಧರ್ಮವನ್ನೂ ಅದು ಅಲ್ಲಗಳೆಯುವುದಿಲ್ಲ. ಧರ್ಮದ ಹೆಸರಿನಲ್ಲಿ ಇತರ ಧರ್ಮಗಳ ಮೇಲೆ ದಾಳಿಮಾಡಲು ದ್ವೇಷ ಬುದ್ಧಿಯಿಂದ ನಡೆದುಕೊಳ್ಳಲು ಹೇಳುವುದಿಲ್ಲ. ಶ್ರೀರಾಮಕೃಷ್ಣ ಪರಮಹಂಸರು ವಿಶ್ವ ಧರ್ಮ ಪರಿಪಾಲಕರು. ಎಲ್ಲಾ ಮತಗಳಲ್ಲಿರುವ ಉತ್ತಮ ವಿಚಾರಗಳನ್ನು ಹಿಂದೂ ಧರ್ಮ ಅಳವಡಿಸಿಕೊಳ್ಳಬೇಕೆಂದು ಅವರು ಬಯಸಿ, ಸರ್ವಧರ್ಮ ಸಮನ್ವಯದ ಮಾತನಾಡಿದ್ದರು. ಇತರ ಮತಗಳ ಸಂಸ್ಥಾಪಕರು ಪ್ರತಿಪಾದಿಸಿದ ಉತ್ತಮ ಅಂಶಗಳನ್ನು ಹಿಂದೂ ಧರ್ಮಕ್ಕೆ ಜೋಡಿಸಿದರು. ಹಿಂದೂ ಧರ್ಮದಲ್ಲಿ ಪ್ರತಿಪಾದಿಸದಿರುವ ಅನೇಕ ಒಳ್ಳೆಯ ಅಂಶಗಳು ಇತರ ಧರ್ಮಗಳಲ್ಲಿರುವುದನ್ನು ಅರಿತು ಅವನ್ನು ಹಿಂದೂ ಧರ್ಮಕ್ಕೆ ಅಳವಡಿಸಲು ಮುಂದಾದರು. ಪೂಜ್ಯ ವಿನೋಬಾ ಭಾವೆಯವರು ಬೈಬಲ್ ಕುರಾನ್‍ಗಳಲ್ಲಿರುವ ಮೌಲಿಕ ತತ್ವಗಳನ್ನು ಆಯ್ದು ಕಲೆ ಹಾಕಿ ‘ಎಸೆನ್ಸ್ ಆಫ್ ಇಸ್ಲಾಂ, ಎಸೆನ್ಸ್ ಆಫ್ ಕ್ರಿಶ್ಚಿಯಾನಿಟಿ’ ಶೀರ್ಷಿಕೆಯು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಮತ ಧರ್ಮಗಳ ಹೊಂದಾಣಿಕೆಯ ಕೆಲಸ ಇದು.

ಹಿಂದೂ ಮತಾಂಧ ಸಂಸ್ಥೆಗಳವರು ಈ ಲೋಕ ಕಲ್ಯಾಣದ ಕೆಲಸ ಮಾಡುವ ಬದಲು, ಮತಧರ್ಮಗಳನ್ನು ಒಡೆಯುವ, ಆ ಮೂಲಕ ಮುಗ್ಧ ಹಿಂದೂಗಳ ಭಾವನೆಗಳನ್ನು ಕೆರಳಿಸಿ ಅನ್ಯ ಧರ್ಮೀಯರನ್ನು ಶತ್ರುಗಳಂತೆ ಕಾಣಲು ಕೈ ಜೋಡಿಸುತ್ತಾರೆ. ಕೃಷ್ಣ ಗೋಕುಲಕ್ಕೆ ಬೆಂಕಿ ಬಿದ್ದಾಗ ಗೋವರ್ಧನ ಪರ್ವತವನ್ನು ಮೇಲೆತ್ತಿ ಅದರ ತಳಗೆ ಗೋಕುಲದವರನ್ನೆಲ್ಲಾ ಇಟ್ಟು ಕಾಪಾಡಿದನಂತೆ. ಆದರೆ ಹಿಂದೂತ್ವ ಪ್ರತಿಪಾದಕರು ಸಮಾಜಕ್ಕೆ ಸಂದರ್ಭ ಒದಗಿದಾಗಲೆಲ್ಲ ಬೆಂಕಿ ಹಾಕುವ ತಯಾರಿಯಲ್ಲಿರುವವರೇ!

ಎಲ್ಲಾ ಮತ ಧರ್ಮಗಳಲ್ಲಿ ಕೆಲವು ಲೋಪ ದೋಷಗಳು ಇದ್ದೇ ಇವೆ. ಹಿಂದೂ ಧರ್ಮ ಇದಕ್ಕೆ ಹೊರತಲ್ಲ. ಹಿಂದೂ ಧರ್ಮದಲ್ಲಿ ಜಾತೀಯತೆ, ಶ್ರೇಣೀಕೃತ ಜಾತಿ ವ್ಯವಸ್ಥೆ, ಅಸ್ಪೃಶ್ಯತೆ, ಹೆಣ್ಣಿನ ಬಗೆಗೆ ತಾರತಮ್ಯ, ಹೀಗೆ ಹತ್ತಾರು ಲೋಪದೋಷಗಳಿವೆ.

ಅದರ ಜೊತೆಗೆ ಹಿಂದೂ ಮತಾಂಧತೆ, ಅನ್ಯ ಧರ್ಮೀಯರ ವಿಚಾರದಲ್ಲಿ ಕ್ರೌರ್ಯ, ಅಸಹನೆ, ವೈಚಾರಿಕ ಭಿನ್ನಾಭಿಪ್ರಾಯ ಉಳ್ಳವರನ್ನು, ಹಿಂದುತ್ವ ಪ್ರತಿಪಾದಕರನ್ನು ಪ್ರಶ್ನಿಸುವವರನ್ನು ವ್ಯವಸ್ಥಿತವಾಗಿ ಕೊಲೆ ಮಾಡುವುದು, ಸೆರೆಮನೆಗೆ ದೂಡುವುದು, ಖಟ್ಲೆಗಳನ್ನು ಹಾಕುವುದು ಅವ್ಯಾಹತವಾಗಿ ನಡೆದಿದೆ. ಇಷ್ಟೆಲ್ಲಾ ಅನಾಹುತ ಹಿಂದುತ್ವ ಪ್ರತಿಪಾದಕರಿಂದ ಮೇಲಿಂದ ಮೇಲೆ ನಡೆಯುತ್ತಿದ್ದರೂ, ಪ್ರಧಾನಿ ಮೋದಿಯವರು ಒಂದು ಸಾರಿಯೂ ಈ ಕುರಿತು ಪ್ರಸ್ತಾಪಿಸಿದ್ದೇ ಇಲ್ಲ. ಇಷ್ಟೇ ಅಲ್ಲ, ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಅವರೂ ಅಮಿತ್ ಷಾರವರು ಕೂಡಿಕೊಂಡು ವ್ಯವಸ್ಥಿತವಾಗಿ ಮುಸ್ಲಿಮರ ಸಾಲ್ಗೊಲೆ ಮಾಡಿಸಿದ್ದೂ ಜಗಜ್ಜಾಹೀರಾಗಿದೆ. ಬೇಲಿಯೇ ಎದ್ದು ಹೊಲ ಮೇಯುವ ಪರಿಸ್ಥಿತಿ ಸೃಷ್ಟಿಯಾಗಿದೆ.

ಈ ಎಲ್ಲ ಪಿಡುಗುಗಳಿಂದ ಹಿಂದೂ ಮತವನ್ನು ಪಾರು ಮಾಡಲೇಬೇಕಾದ್ದು ಮತದಾರರ ಆದ್ಯ ಕರ್ತವ್ಯವಾಗಿದೆ. ಆಸ್ಟ್ರೇಲಿಯಾ ಪ್ರಜೆಯೊಬ್ಬ ನ್ಯೂಜಿಲೆಂಡಿನಲ್ಲಿ ನೌಕರಿ ಮಾಡುತ್ತಿದ್ದು, ಕಳೆದ ಶುಕ್ರವಾರ 2 ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ 50 ಮುಸ್ಲಿಂ ಮುಗ್ಧರನ್ನು ಬಂದೂಕಿನಿಂದ ಹೊಡೆದು ಕೊಂದಿದ್ದಾನೆ. ಅವನು ಇವರನ್ನು ಏಕೆ ಕೊಂದನೆಂಬುದಕ್ಕೆ, ಬಿಳಿಯರಿಗೆ ಮಾತ್ರ ಈ ದೇಶ ಇರುವುದು ಎಂದು ಹೇಳಿದ್ದಾನೆ.

ಭಾರತದಲ್ಲಿ ಆರ್‍ಎಸ್‍ಎಸ್, ಬಿಜೆಪಿ, ಮೋದಿ ಹೇಳುವುದೂ ಇದನ್ನೇ. ಭಾರತ ಹಿಂದೂಗಳ ರಾಷ್ಟ್ರ, ಇಲ್ಲಿ ಬೇರೆಯವರಿಗೆ ಇರಲು ಅವಕಾಶವಿಲ್ಲ, ಇದ್ದರೂ ಅವರು 2ನೇ ದರ್ಜೆಯ ಪ್ರಜೆಗಳಾಗಿ ಇರಬೇಕು.

ಈ ವಿಚಿತ್ರ ನಿಲುವಿನ ಕೊಲೆಗಡುಕ ಜನ ಅಲ್ಲೊಬ್ಬರು ಇಲ್ಲೊಬ್ಬರು ಇದ್ದರೆ, ಭಾರತದಲ್ಲಿ ಇಂತಹ ತಲೆ ಕೆಟ್ಟವರ ಸಂಘಟನೆಗಳೇ ಇವೆ. ರಾಜಕೀಯದಲ್ಲಿ ವಿಷ ಸೇರಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...