Homeಮುಖಪುಟಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ

ಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ

- Advertisement -
- Advertisement -

ಸರ್ಕಾರಿ ಬಸ್ಸೊಂದರಿಂದ ‘ಮಣಿಪುರ’ಎಂಬ ಹೆಸರನ್ನು ತೆಗೆದು ಹಾಕಿದ್ದನ್ನು ಖಂಡಿಸಿ ಮೈತೇಯಿ ಸಂಘಟನೆಯಾದ ಕೋ- ಆರ್ಡಿನೇಟಿಂಗ್ ಕಮಿಟಿ ಆನ್ ಮಣಿಪುರ್ ಇಂಟಗ್ರಿಟಿ (ಕೊಕೊಮಿ) ಕರೆ ನೀಡಿರುವ 48 ಗಂಟೆಗಳ ರಾಜ್ಯವ್ಯಾಪಿ ಬಂದ್‌ನಿಂದಾಗಿ ಮಣಿಪುರದ ಐದು ಜಿಲ್ಲೆಗಳಲ್ಲಿ ಸತತ ಎರಡನೇ ದಿನವಾದ ಶುಕ್ರವಾರವೂ (ಮೇ.23) ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

ವ್ಯಾಪಾರ ಸಂಸ್ಥೆಗಳು, ಸರ್ಕಾರಿ, ಖಾಸಗಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಉಖ್ರುಲ್ ಜಿಲ್ಲೆಯ ‘ಶಿರುಯಿ ಲಿಲಿ’ ಉತ್ಸವಕ್ಕೆ ಪ್ರಯಾಣಿಸುವವರಿಗೆ ಮತ್ತು ವೈದ್ಯಕೀಯ ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ, ಖಾಸಗಿ ವಾಹನಗಳ ಸಂಚಾರವನ್ನೂ ನಿರ್ಬಂಧಿಸಲಾಗಿದೆ.

ಬಿಷ್ಣುಪುರ ಮತ್ತು ತೌಬಲ್ ಜಿಲ್ಲೆಗಳಲ್ಲಿ ಬಂದ್ ಬೆಂಬಲಿಸಿ ಮಹಿಳೆಯರು ಕೇಂದ್ರ ಭದ್ರತಾ ಪಡೆ ವಾಹನಗಳನ್ನು ತಡೆದು ‘ಮಣಿಪುರ/ಕಾಂಗ್ಲೇಪಾಕ್’ ಎಂಬ ಸ್ಟಿಕರ್ ಅನ್ನು ಅವುಗಳ ವಿಂಡ್‌ಶೀಲ್ಡ್‌ಗಳಿಗೆ ಅಂಟಿಸಿಸಿದ್ದಾರೆ. ಕಾಂಗ್ಲೇಪಾಕ್ ಎಂಬುವುದು ಮಣಿಪುರದ ಐತಿಹಾಸಿಕ ಹೆಸರನ್ನು ಸೂಚಿಸುತ್ತದೆ.

ಶುಕ್ರವಾರ ಮುಂಜಾನೆ, ಇಂಫಾಲ್ ಪೂರ್ವ ಜಿಲ್ಲೆಯ ಆಂಡ್ರೊ ಪಾರ್ಕಿಂಗ್, ಕೊಂಗ್ಬಾ ಮತ್ತು ಖುರೈ ಪ್ರದೇಶಗಳಲ್ಲಿನ ರಸ್ತೆಬದಿಯ ತರಕಾರಿ ಮಾರಾಟಗಾರರಿಗೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ವ್ಯಾಪಾರ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಉರಿಪೋಕ್, ಸಿಂಗ್ಜಮೈ ಮತ್ತು ಕ್ವಾಕಿಥೆಲ್‌ನಲ್ಲಿಯೂ ಸಂಪೂರ್ಣ ಬಂದ್ ಪರಿಸ್ಥಿತಿಯಿದೆ ಎಂದು ವರದಿ ಹೇಳಿದೆ.

ಗುರುವಾರ ರಾತ್ರಿ 2 ಕಿಲೋಮೀಟರ್ ಪಂಜಿನ ಮೆರವಣಿಗೆ ನಡೆಸಿದ ಬಂದ್ ಪ್ರತಿಭಟನಾಕಾರರು “ಮಣಿಪುರವನ್ನು ಅಳಿಸಿಹಾಕಲು ಸಾಧ್ಯವಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಭದ್ರತಾ ದೃಷ್ಟಿಯಿಂದ ರಾಜಭವನಕ್ಕೆ ಹೋಗುವ ಆಯಕಟ್ಟಿನ ಸ್ಥಳಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಸಾಗಿಸುತ್ತಿದ್ದ ಬಸ್‌ನಲ್ಲಿದ್ದ ‘ಮಣಿಪುರ’ ರಾಜ್ಯದ ಹೆಸರನ್ನು ಭದ್ರತಾ ಸಿಬ್ಬಂದಿ ತೆಗೆದು ಹಾಕಿದ್ದಾರೆ ಎಂಬ ಆರೋಪದ ಬಗ್ಗೆ ರಾಜ್ಯ ಸರ್ಕಾರ ಬುಧವಾರ ತನಿಖೆ ಆರಂಭಿಸಿದೆ.

ಮಂಗಳವಾರ ಉಖ್ರುಲ್ ಜಿಲ್ಲಾ ಪ್ರವಾಸೋದ್ಯಮ ಉತ್ಸವಕ್ಕೆ ಅಥವಾ ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಅನ್ನು ತಡೆದ ಭದ್ರತಾ ಪಡೆಗಳು ಮಣಿಪುರ ಹೆಸರಿಗೆ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಡಿಐಪಿಆರ್ ಸಿಬ್ಬಂದಿ ವಿಂಡ್‌ಸ್ಕ್ರೀನ್‌ನಲ್ಲಿದ್ದ ರಾಜ್ಯದ ಹೆಸರನ್ನು ಬಿಳಿ ಕಾಗದದಿಂದ ಮರೆಮಾಡಬೇಕಾಯಿತು ಎಂದು ವರದಿಗಳು ಹೇಳಿವೆ.

ಈ ಬಗ್ಗೆ ತನಿಖೆ ಮಾಡಲು ರಾಜ್ಯ ಸರ್ಕಾರ ಇಬ್ಬರು ಸದಸ್ಯರ ಸಮಿತಿ ರಚಿಸಿದೆ. ಏನು ತಪ್ಪಾಗಿದೆ ಎಂಬುವುದರ ಬಗ್ಗೆ ಸಮಿತಿ ತನಿಖೆ ಮಾಡುತ್ತದೆ ಮತ್ತು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ಶಿಫಾರಸ್ಸುಗಳನ್ನು ನೀಡಲಿದೆ ಎಂದು ಸರ್ಕಾರ ಹೇಳಿದೆ.

ಆಯುಕ್ತರ ಎನ್. ಅಶೋಕ್ ಕುಮಾರ್ ಮತ್ತು ಕಾರ್ಯದರ್ಶಿ ಟಿ ಕಿರಣ್‌ಕುಮಾರ್ ಸಿಂಗ್ ಅವರನ್ನೊಳಗೊಂಡ ಸಮಿತಿಯು 15 ದಿನಗಳಲ್ಲಿ ತನಿಖಾ ವರದಿ ಸಲ್ಲಿಸಲಿದೆ.

ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರ ಕ್ಷಮೆಯಾಚನೆ ಮತ್ತು ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್, ಡಿಜಿಪಿ ರಾಜೀವ್ ಸಿಂಗ್ ಹಾಗೂ ಮುಖ್ಯ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿಂಗ್ ಅವರ ರಾಜೀನಾಮೆಗೆ ಒತ್ತಾಯಿಸಿ ಕೊಕೊಮಿ ಸಂಘಟನೆ ಬುಧವಾರ ಮಧ್ಯರಾತ್ರಿಯಿಂದ 48 ಗಂಟೆಗಳ ಸಾರ್ವತ್ರಿಕ ಮುಷ್ಕರವನ್ನು ಪ್ರಾರಂಭಿಸಿದೆ.

“ರಾಜ್ಯದ ಬಸ್‌ನಿಂದ ಮಣಿಪುರ ಹೆಸರನ್ನು ತೆಗೆದುಹಾಕಿದ ಕ್ರಮ ಮಣಿಪುರ ವಿರೋಧಿ ನಡೆಯಾಗಿದೆ. ಇದು ಮಣಿಪುರದ ಕಲ್ಪನೆ, ಐತಿಹಾಸಿಕ ಮತ್ತು ಸಾಂಸ್ಕೃತಿಕ ಗುರುತಿನ ಪ್ರಶ್ನೆಯಾಗಿದೆ” ಎಂದು ಕೊಕೊಮಿ ಸಂಚಾಲಕ ಖುರೈಜಮ್ ಅಥೌಬಾ ಹೇಳಿದ್ದಾರೆ.

“ಯಾರ ಅದೇಶ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಣಿಪುರದ ಜನರಿಗೆ ಗೊತ್ತಾಗಬೇಕು. 48 ಗಂಟೆಗಳ ಒಳಗೆ ಸಾರ್ವಜನಿಕರಿಗೆ ಇದನ್ನು ಸ್ಪಷ್ಟಪಡಿಸಬೇಕು” ಎಂದು ಅಥೌಬಾ ಆಗ್ರಹಿಸಿದ್ದಾರೆ.

ಮಣಿಪುರದಲ್ಲಿ ಎರಡು ವರ್ಷಗಳ ನಂತರ ಶಿರುಯಿ ಲಿಲಿ ಉತ್ಸವ ಪುನರಾರಂಭಗೊಂಡಿದೆ. ಎನ್ ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಹಿಂಸಾತ್ಮಕ ಘರ್ಷಣೆಗಳಿಗೆ ಸಾಕ್ಷಿಯಾದ ರಾಜ್ಯ ಈಗ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

2,000 ಸರಕಾರಿ ಬಂದೂಕುಗಳ ಲೂಟಿ ಪ್ರಕರಣದಲ್ಲಿ ನಕ್ಸಲ್ ಬಸವರಾಜ್ ಭಾಗಿಯಾಗಿದ್ದ: ಬಸ್ತಾರ್ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...