Homeಮುಖಪುಟಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ

ಮಣಿಪುರ| 48 ಗಂಟೆಗಳ ಬಂದ್ ಕರೆ ಕೊಟ್ಟ ಮೈತೇಯಿ ಗುಂಪು; ಜನಜೀವನ ಅಸ್ತವ್ಯಸ್ತ

- Advertisement -
- Advertisement -

ಸರ್ಕಾರಿ ಬಸ್ಸೊಂದರಿಂದ ‘ಮಣಿಪುರ’ಎಂಬ ಹೆಸರನ್ನು ತೆಗೆದು ಹಾಕಿದ್ದನ್ನು ಖಂಡಿಸಿ ಮೈತೇಯಿ ಸಂಘಟನೆಯಾದ ಕೋ- ಆರ್ಡಿನೇಟಿಂಗ್ ಕಮಿಟಿ ಆನ್ ಮಣಿಪುರ್ ಇಂಟಗ್ರಿಟಿ (ಕೊಕೊಮಿ) ಕರೆ ನೀಡಿರುವ 48 ಗಂಟೆಗಳ ರಾಜ್ಯವ್ಯಾಪಿ ಬಂದ್‌ನಿಂದಾಗಿ ಮಣಿಪುರದ ಐದು ಜಿಲ್ಲೆಗಳಲ್ಲಿ ಸತತ ಎರಡನೇ ದಿನವಾದ ಶುಕ್ರವಾರವೂ (ಮೇ.23) ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ.

ವ್ಯಾಪಾರ ಸಂಸ್ಥೆಗಳು, ಸರ್ಕಾರಿ, ಖಾಸಗಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಉಖ್ರುಲ್ ಜಿಲ್ಲೆಯ ‘ಶಿರುಯಿ ಲಿಲಿ’ ಉತ್ಸವಕ್ಕೆ ಪ್ರಯಾಣಿಸುವವರಿಗೆ ಮತ್ತು ವೈದ್ಯಕೀಯ ತುರ್ತು ಪರಿಸ್ಥಿತಿಗಳನ್ನು ಹೊರತುಪಡಿಸಿ, ಖಾಸಗಿ ವಾಹನಗಳ ಸಂಚಾರವನ್ನೂ ನಿರ್ಬಂಧಿಸಲಾಗಿದೆ.

ಬಿಷ್ಣುಪುರ ಮತ್ತು ತೌಬಲ್ ಜಿಲ್ಲೆಗಳಲ್ಲಿ ಬಂದ್ ಬೆಂಬಲಿಸಿ ಮಹಿಳೆಯರು ಕೇಂದ್ರ ಭದ್ರತಾ ಪಡೆ ವಾಹನಗಳನ್ನು ತಡೆದು ‘ಮಣಿಪುರ/ಕಾಂಗ್ಲೇಪಾಕ್’ ಎಂಬ ಸ್ಟಿಕರ್ ಅನ್ನು ಅವುಗಳ ವಿಂಡ್‌ಶೀಲ್ಡ್‌ಗಳಿಗೆ ಅಂಟಿಸಿಸಿದ್ದಾರೆ. ಕಾಂಗ್ಲೇಪಾಕ್ ಎಂಬುವುದು ಮಣಿಪುರದ ಐತಿಹಾಸಿಕ ಹೆಸರನ್ನು ಸೂಚಿಸುತ್ತದೆ.

ಶುಕ್ರವಾರ ಮುಂಜಾನೆ, ಇಂಫಾಲ್ ಪೂರ್ವ ಜಿಲ್ಲೆಯ ಆಂಡ್ರೊ ಪಾರ್ಕಿಂಗ್, ಕೊಂಗ್ಬಾ ಮತ್ತು ಖುರೈ ಪ್ರದೇಶಗಳಲ್ಲಿನ ರಸ್ತೆಬದಿಯ ತರಕಾರಿ ಮಾರಾಟಗಾರರಿಗೆ ಪ್ರತಿಭಟನಾಕಾರರು ಅಡ್ಡಿಪಡಿಸಿದ್ದಾರೆ. ವ್ಯಾಪಾರ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಉರಿಪೋಕ್, ಸಿಂಗ್ಜಮೈ ಮತ್ತು ಕ್ವಾಕಿಥೆಲ್‌ನಲ್ಲಿಯೂ ಸಂಪೂರ್ಣ ಬಂದ್ ಪರಿಸ್ಥಿತಿಯಿದೆ ಎಂದು ವರದಿ ಹೇಳಿದೆ.

ಗುರುವಾರ ರಾತ್ರಿ 2 ಕಿಲೋಮೀಟರ್ ಪಂಜಿನ ಮೆರವಣಿಗೆ ನಡೆಸಿದ ಬಂದ್ ಪ್ರತಿಭಟನಾಕಾರರು “ಮಣಿಪುರವನ್ನು ಅಳಿಸಿಹಾಕಲು ಸಾಧ್ಯವಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಭದ್ರತಾ ದೃಷ್ಟಿಯಿಂದ ರಾಜಭವನಕ್ಕೆ ಹೋಗುವ ಆಯಕಟ್ಟಿನ ಸ್ಥಳಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಸಾಗಿಸುತ್ತಿದ್ದ ಬಸ್‌ನಲ್ಲಿದ್ದ ‘ಮಣಿಪುರ’ ರಾಜ್ಯದ ಹೆಸರನ್ನು ಭದ್ರತಾ ಸಿಬ್ಬಂದಿ ತೆಗೆದು ಹಾಕಿದ್ದಾರೆ ಎಂಬ ಆರೋಪದ ಬಗ್ಗೆ ರಾಜ್ಯ ಸರ್ಕಾರ ಬುಧವಾರ ತನಿಖೆ ಆರಂಭಿಸಿದೆ.

ಮಂಗಳವಾರ ಉಖ್ರುಲ್ ಜಿಲ್ಲಾ ಪ್ರವಾಸೋದ್ಯಮ ಉತ್ಸವಕ್ಕೆ ಅಥವಾ ಶಿರುಯಿ ಲಿಲಿ ಉತ್ಸವಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಅನ್ನು ತಡೆದ ಭದ್ರತಾ ಪಡೆಗಳು ಮಣಿಪುರ ಹೆಸರಿಗೆ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಡಿಐಪಿಆರ್ ಸಿಬ್ಬಂದಿ ವಿಂಡ್‌ಸ್ಕ್ರೀನ್‌ನಲ್ಲಿದ್ದ ರಾಜ್ಯದ ಹೆಸರನ್ನು ಬಿಳಿ ಕಾಗದದಿಂದ ಮರೆಮಾಡಬೇಕಾಯಿತು ಎಂದು ವರದಿಗಳು ಹೇಳಿವೆ.

ಈ ಬಗ್ಗೆ ತನಿಖೆ ಮಾಡಲು ರಾಜ್ಯ ಸರ್ಕಾರ ಇಬ್ಬರು ಸದಸ್ಯರ ಸಮಿತಿ ರಚಿಸಿದೆ. ಏನು ತಪ್ಪಾಗಿದೆ ಎಂಬುವುದರ ಬಗ್ಗೆ ಸಮಿತಿ ತನಿಖೆ ಮಾಡುತ್ತದೆ ಮತ್ತು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ಶಿಫಾರಸ್ಸುಗಳನ್ನು ನೀಡಲಿದೆ ಎಂದು ಸರ್ಕಾರ ಹೇಳಿದೆ.

ಆಯುಕ್ತರ ಎನ್. ಅಶೋಕ್ ಕುಮಾರ್ ಮತ್ತು ಕಾರ್ಯದರ್ಶಿ ಟಿ ಕಿರಣ್‌ಕುಮಾರ್ ಸಿಂಗ್ ಅವರನ್ನೊಳಗೊಂಡ ಸಮಿತಿಯು 15 ದಿನಗಳಲ್ಲಿ ತನಿಖಾ ವರದಿ ಸಲ್ಲಿಸಲಿದೆ.

ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರ ಕ್ಷಮೆಯಾಚನೆ ಮತ್ತು ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್, ಡಿಜಿಪಿ ರಾಜೀವ್ ಸಿಂಗ್ ಹಾಗೂ ಮುಖ್ಯ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಸಿಂಗ್ ಅವರ ರಾಜೀನಾಮೆಗೆ ಒತ್ತಾಯಿಸಿ ಕೊಕೊಮಿ ಸಂಘಟನೆ ಬುಧವಾರ ಮಧ್ಯರಾತ್ರಿಯಿಂದ 48 ಗಂಟೆಗಳ ಸಾರ್ವತ್ರಿಕ ಮುಷ್ಕರವನ್ನು ಪ್ರಾರಂಭಿಸಿದೆ.

“ರಾಜ್ಯದ ಬಸ್‌ನಿಂದ ಮಣಿಪುರ ಹೆಸರನ್ನು ತೆಗೆದುಹಾಕಿದ ಕ್ರಮ ಮಣಿಪುರ ವಿರೋಧಿ ನಡೆಯಾಗಿದೆ. ಇದು ಮಣಿಪುರದ ಕಲ್ಪನೆ, ಐತಿಹಾಸಿಕ ಮತ್ತು ಸಾಂಸ್ಕೃತಿಕ ಗುರುತಿನ ಪ್ರಶ್ನೆಯಾಗಿದೆ” ಎಂದು ಕೊಕೊಮಿ ಸಂಚಾಲಕ ಖುರೈಜಮ್ ಅಥೌಬಾ ಹೇಳಿದ್ದಾರೆ.

“ಯಾರ ಅದೇಶ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಣಿಪುರದ ಜನರಿಗೆ ಗೊತ್ತಾಗಬೇಕು. 48 ಗಂಟೆಗಳ ಒಳಗೆ ಸಾರ್ವಜನಿಕರಿಗೆ ಇದನ್ನು ಸ್ಪಷ್ಟಪಡಿಸಬೇಕು” ಎಂದು ಅಥೌಬಾ ಆಗ್ರಹಿಸಿದ್ದಾರೆ.

ಮಣಿಪುರದಲ್ಲಿ ಎರಡು ವರ್ಷಗಳ ನಂತರ ಶಿರುಯಿ ಲಿಲಿ ಉತ್ಸವ ಪುನರಾರಂಭಗೊಂಡಿದೆ. ಎನ್ ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಹಿಂಸಾತ್ಮಕ ಘರ್ಷಣೆಗಳಿಗೆ ಸಾಕ್ಷಿಯಾದ ರಾಜ್ಯ ಈಗ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

2,000 ಸರಕಾರಿ ಬಂದೂಕುಗಳ ಲೂಟಿ ಪ್ರಕರಣದಲ್ಲಿ ನಕ್ಸಲ್ ಬಸವರಾಜ್ ಭಾಗಿಯಾಗಿದ್ದ: ಬಸ್ತಾರ್ ಪೊಲೀಸ್ ಮಹಾನಿರ್ದೇಶಕ ಪಿ.ಸುಂದರರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...