Homeಅಂತರಾಷ್ಟ್ರೀಯಗಾಝಾ ನೆರವಿಗೆ ಉತ್ತರ ಆಫ್ರೀಕಾ ದೇಶಗಳ ಜನರ ಕಾಲ್ನಡಿಗೆ ರ‍್ಯಾಲಿ | ತಡೆದ ಈಜಿಫ್ಟ್‌

ಗಾಝಾ ನೆರವಿಗೆ ಉತ್ತರ ಆಫ್ರೀಕಾ ದೇಶಗಳ ಜನರ ಕಾಲ್ನಡಿಗೆ ರ‍್ಯಾಲಿ | ತಡೆದ ಈಜಿಫ್ಟ್‌

- Advertisement -
- Advertisement -

ಪ್ಯಾಲೆಸ್ತೀನ್ ಮೇಲಿನ ಇಸ್ರೇಲ್‌ ದಿಗ್ಬಂಧನವನ್ನು ಪ್ರತಿಭಟಿಸಿ ಮತ್ತು ಪ್ಯಾಲೆಸ್ತೀನಿ ಜನರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಉತ್ತರ ಆಫ್ರಿಕಾದ ದೇಶಗಳ ಸುಮಾರು 2,000 ಹೋರಾಟಗಾರರ ”ಸುಮುದ್ ಕ್ಯಾನ್ವಾಯ್” ಎಂದು ಕರೆಯಲ್ಪಡುವ ರ‍್ಯಾಲಿಯನ್ನು ಈಜಿಫ್ಟ್‌ ಅಧಿಕಾರಿಗಳು ತಡೆದಿದ್ದಾರೆ ಎಂದು ಗುರುವಾರ ವರದಿಯಾಗಿದೆ. ರ‍್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ ಹಲವಾರು ವ್ಯಕ್ತಿಗಳನ್ನು ಈಜಿಪ್ಟ್ ಅಧಿಕಾರಿಗಳು ತಡೆದು ಕೈರೋ ವಿಮಾನ ನಿಲ್ದಾಣದಿಂದ ಅವರನ್ನು ಹಿಂದಿರುಗಿಸಿದ್ದು, ಆದರೆ ಈಗಾಗಲೇ ಈಜಿಪ್ಟ್ ಪ್ರದೇಶವನ್ನು ಪ್ರವೇಶಿಸಿದ್ದ ಇತರರನ್ನು ಗಡೀಪಾರು ಮಾಡಲಾಯಿತು ಎಂದು ಸ್ವತಂತ್ರ ಮಾಧ್ಯಮವಾದ ಮಾಡಾ ಮಸ್ರ್ ಹೇಳಿದೆ. ಗಾಝಾ ನೆರವಿಗೆ ಉತ್ತರ

ಪ್ಯಾಲೆಸ್ತೀನ್ ಮೇಲಿನ ಇಸ್ರೇಲ್‌ ದಿಗ್ಬಂಧನವನ್ನು ಪ್ರತಿಭಟಿಸಿ ಮತ್ತು ಪ್ಯಾಲೆಸ್ತೀನಿ ಜನರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸುವ ಸಾಂಕೇತಿಕ ಪ್ರಯತ್ನದ ಭಾಗವಾಗಿ ಉತ್ತರ ಆಫ್ರಿಕಾದ ದೇಶಗಳಾದ ಟುನೀಶಿಯಾ, ಅಲ್ಜೀರಿಯಾ, ಮೊರಾಕೊ, ಮಾರಿಟಾನಿಯಾ ಮತ್ತು ಲಿಬಿಯಾದ ಸುಮಾರು 2,000 ಹೋರಾಟಗಾರರನ್ನು ಹೊತ್ತ ಬಸ್‌ಗಳು ಮತ್ತು ಕಾರುಗಳ ”ಸುಮುದ್ ಕ್ಯಾನ್ವಾಯ್” ಸೋಮವಾರದಂದು ಹೊರಟಿತ್ತು.

ಇಸ್ರೇಲ್ ಆಕ್ರಮಿತ ಫ್ಯಾಲೆಸ್ತೀನ್‌ನ ರಫಾ ಮತ್ತು ಗಾಝಾಗೆ ನೆರವು ತಲುಪಿಸುವಲ್ಲಿ ವಿಫಲವಾಗಿರುವುದನ್ನು ಪ್ರತಿಭಟಿಸುವ ಉದ್ದೇಶವನ್ನು ಹೊಂದಿರುವ ಉತ್ತರ ಆಫ್ರಿಕಾದ ದೇಶಗಳ ಸ್ವಯಂಸೇವಕರ ಈ ರ‍್ಯಾಲಿಗೆ ವಿಶ್ವದಾದ್ಯಂತ ಜನರ ಬೆಂಬಲ ವ್ಯಕ್ತವಾಗಿದೆ. ಇಸ್ರೇಲ್ ವಿರೋಧದ ಹೊರತಾಗಿಯೂ ರ‍್ಯಾಲಿಯು ಬುಧವಾರ ಲಿಬಿಯಾ ಪ್ರದೇಶವನ್ನು ಪ್ರವೇಶಿಸಿತು.

ಈ ಬಗ್ಗೆ ಬುಧವಾರ ಪ್ರತಿಕ್ರಿಯಿಸಿದ್ದ ಪ್ಯಾಲೆಸ್ತೀನ್ ಆಕ್ರಮಿತ ಇಸ್ರೇಲ್‌ನ ರಕ್ಷಣಾ ಸಚಿವ ಯೋವ್ ಗ್ಯಾಲಂಟ್, ರ‍್ಯಾಲಿಯು ಗಾಝಾ ತಲುಪುವುದನ್ನು ತಡೆಯುವಂತೆ ಈಜಿಪ್ಟ್ ಅಧಿಕಾರಿಗಳನ್ನು ಒತ್ತಾಯಿಸಿದ್ದು, “ಈ ಹೆಜ್ಜೆಯನ್ನು ಅನುಮತಿಸಲಾಗುವುದಿಲ್ಲ” ಎಂದು ಒತ್ತಿ ಹೇಳಿದ್ದಾರೆ.

 

View this post on Instagram

 

A post shared by PeaceBrands (@peacebrands)

ರ‍್ಯಾಲಿಯು ಜೂನ್ 12 ರೊಳಗೆ ಈಜಿಫ್ಟ್‌ನ ಕೈರೋ ತಲುಪಿ, ನಂತರ ಮರುದಿನ ಬಸ್ ಮೂಲಕ ಅಲ್-ಅರಿಶ್‌ಗೆ ಪ್ರತ್ಯೇಕ ಗುಂಪುಗಳಲ್ಲಿ ಪ್ರಯಾಣಿಸುವುದಾಗಿ ರ‍್ಯಾಲಿಯನ್ನು ಆಯೋಜಿಸಿದ್ದ ”ಗ್ಲೋಬಲ್ ಮಾರ್ಚ್ ಟು ಗಾಝಾ” ಹೇಳಿತ್ತು. ಅಲ್ಲಿಂದ ಭಾಗವಹಿಸುವವರು ರಫಾಗೆ 48 ಕಿಲೋಮೀಟರ್ ಮೆರವಣಿಗೆಯನ್ನು ಪ್ರಾರಂಭಿಸುತ್ತಾರೆ ಎಂದು ಅದು ಸೂಚಿಸಿದೆ. ಹೋರಾಟಗಾರರು ಜೂನ್ 15 ರಿಂದ 19 ರವರೆಗೆ ಸ್ವಲ್ಪ ಸಮಯ ಗಾಝಾದ ರಫಾದಲ್ಲಿ ಉಳಿದು ನಂತರ ಕೈರೋಗೆ ಹಿಂತಿರುಗಲು ಉದ್ದೇಶಿಸಿದ್ದು, ಅದಕ್ಕಾಗಿ ಈಜಿಪ್ಟ್ ಸರ್ಕಾರದಿಂದ ಅನುಮೋದನೆಗಾಗಿ ಕಾಯುತ್ತಿದ್ದಾರೆ ಎಂದು ತುರ್ಕಿಟುಡೆ ಹೇಳಿದೆ.

ಜೂನ್ 11 ರಂದು ಈಜಿಪ್ಟ್ ವಿದೇಶಾಂಗ ಸಚಿವಾಲಯವು, ಪ್ಯಾಲೆಸ್ತೀನಿ ಹಕ್ಕುಗಳನ್ನು ಬೆಂಬಲಿಸುವ ಮತ್ತು ಗಾಝಾದಲ್ಲಿ ಇಸ್ರೇಲಿ ಆಕ್ರಮಣವನ್ನು ಖಂಡಿಸುವ ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ನಿಲುವುಗಳನ್ನು ಸ್ವಾಗತಿಸುವ ಅಧಿಕೃತ ಹೇಳಿಕೆಯನ್ನು ನೀಡಿತು. ಅದಾಗ್ಯೂ, ಈಜಿಪ್ಟ್ ಸಾರ್ವಭೌಮತ್ವವನ್ನು ಗೌರವಿಸುವ ಮತ್ತು ಭದ್ರತಾ ಅವಶ್ಯಕತೆಗಳನ್ನು ಪರಿಗಣಿಸುವ ಸಂದರ್ಭದಲ್ಲಿ, ವಿಶೇಷವಾಗಿ ವಿದೇಶಿ ಸಂದರ್ಶಕರಿಗೆ, ರಫಾ ಕ್ರಾಸಿಂಗ್ ಮತ್ತು ಗಡಿ ಪ್ರದೇಶಕ್ಕೆ ಭೇಟಿ ನೀಡಲು ಪೂರ್ವಾನುಮೋದನೆಗಳನ್ನು ಪಡೆಯುವುದು ಮೂಲಭೂತ ಷರತ್ತು ಎಂದು ಹೇಳಿಕೆ ಒತ್ತಿಹೇಳಿತ್ತು.

ಹೇಳಿಕೆ ಬಿಡುಗಡೆಯಾದ ಸ್ವಲ್ಪ ಸಮಯದ ನಂತರ, ಈಜಿಪ್ಟ್ ಅಧಿಕಾರಿಗಳು ”ಸುಮುದ್ ಕ್ಯಾನ್ವಾಯ್”ನಲ್ಲಿ ಭಾಗವಹಿಸುವ ಹಲವಾರು ಹೋರಾಟಗಾರರನ್ನು ಗಡೀಪಾರು ಮಾಡಲು ಪ್ರಾರಂಭಿಸಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ದೇಶವನ್ನು ಪ್ರವೇಶಿಸಲು ಅಗತ್ಯ ದಾಖಲೆಗಳು ಮತ್ತು ಅಧಿಕೃತ ಪರವಾನಗಿಗಳ ಕೊರತೆಯ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಈಜಿಫ್ಟ್‌ ಸರ್ಕಾರ ತನ್ನನ್ನು ಸಮರ್ಥಿಸಿಕೊಂಡಿದೆ.

ರ‍್ಯಾಲಿಯಲ್ಲಿ ಭಾಗವಹಿಸುವವರು ಈಜಿಪ್ಟ್‌ಗೆ ಬರದಂತೆ ತಡೆಯಲು ಸಂಬಂಧಪಟ್ಟ ದೇಶಗಳಲ್ಲಿನ ಸಂಬಂಧಿತ ಅಧಿಕಾರಿಗಳೊಂದಿಗೆ ಸಂವಹನ ನಡೆಸಲು ಸರ್ಕಾರ ಪ್ರಯತ್ನಿಸಿದೆ ಎಂದು ಸರ್ಕಾರಿ ಮೂಲವೊಂದನ್ನು ಉಲ್ಲೇಖಿಸಿ ಮಡಾ ಮಾಸ್ರ್‌ ವರದಿ ಮಾಡಿದೆ. ಸಾರ್ವಭೌಮತ್ವ ಮತ್ತು ಭದ್ರತಾ ಕಾರಣಗಳಿಂದಾಗಿ ಅವರಲ್ಲಿ ಯಾರಿಗೂ ರಫಾಗೆ ಹೋಗಲು ಅವಕಾಶವಿರುವುದಿಲ್ಲ ಎಂದು ಮೂಲವು ಹೇಳಿದೆ. ಈಜಿಫ್ಟ್ ವಿದೇಶಾಂಗ ಸಚಿವಾಲಯದ ಹೇಳಿಕೆಗೆ ಮುಂಚೆಯೇ, ಕೈರೋ ವಿಮಾನ ನಿಲ್ದಾಣದ ಅಧಿಕಾರಿಗಳು ಸಂಭಾವ್ಯ ಭಾಗವಹಿಸುವವರಲ್ಲಿ ಕೆಲವರನ್ನು ಬಂಧಿಸಿ ಹಿಂದಿರುಗಿಸಲು ಪ್ರಾರಂಭಿಸಿದ್ದರು, ಆದರೆ ಈಗಾಗಲೇ ದೇಶದೊಳಗೆ ಇದ್ದ ಇತರರನ್ನು ಗಡೀಪಾರು ಮಾಡಲಾಯಿತು ಎಂದು ವರದಿ ಹೇಳಿದೆ.

ಈಜಿಪ್ಟ್ ಭದ್ರತಾ ಪಡೆಗಳು ಗುರುವಾರ ಬೆಳಿಗ್ಗೆಯಿಂದ ಕೈರೋ ವಿಮಾನ ನಿಲ್ದಾಣದಲ್ಲಿ ಮೂವರು ವಕೀಲರು ಸೇರಿದಂತೆ 40 ಅಲ್ಜೀರಿಯಾದ ನಾಗರಿಕರನ್ನು ಬಂಧಿಸಿವೆ ಎಂದು ಅಲ್ಜೀರಿಯಾದ ವಕೀಲರಾದ ಫಾತಿಹಾ ರೂಯಿಬಿ ಆರೋಪಿಸಿದ್ದಾರೆ. ಅದೇ ರೀತಿ, ಮೊರೊಕ್ಕೊದ ಹತ್ತುಕ್ಕೂ ಹೆಚ್ಚು ಹೋರಾಟಗಾರರನ್ನು ಗಡೀಪಾರು ಮಾಡಿದ್ದಾರೆ ಎಂದು ವರದಿಯಾಗಿದ್ದು, ಜೊತೆಗೆ ಹಲವಾರು ಟರ್ಕಿಶ್ ನಾಗರಿಕರನ್ನು ಗಡೀಪಾರು ಮಾಡಲಾಗಿದೆ ಎಂದು ಅದು ತಿಳಿಸಿದೆ.

ಈಜಿಪ್ಟ್ ಸಾರ್ವಭೌಮತ್ವಕ್ಕೆ ಗೌರವ: ಪುನರುಚ್ಚರಿಸಿದ ಸಂಘಟಕರು

ಈ ನಡುವೆ ಗುರುವಾರದ ಪತ್ರಿಕಾಗೋಷ್ಠಿಯಲ್ಲಿ, 35 ಕ್ಕೂ ಹೆಚ್ಚು ದೇಶಗಳಿಂದ ಸುಮಾರು 4,000 ಹೋರಾಟಗಾರರನ್ನು ಕಾಲ್ನಡಿಗೆಯಲ್ಲಿ ರಫಾ ಕ್ರಾಸಿಂಗ್‌ಗೆ ಕರೆತರುವುದು, ಗಾಝಾದ ಮೇಲಿನ ಯುದ್ಧವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸುವುದು ಮತ್ತು ಸಾವಿರಾರು ನೆರವು ಟ್ರಕ್‌ಗಳಿಗೆ ಪ್ರವೇಶವನ್ನು ಅನುಮತಿಸುವುದು ತಮ್ಮ ಗುರಿಯಾಗಿದೆ ಎಂದು ಪುನರುಚ್ಚರಿಸಿದ್ದಾರೆ. ಇಸ್ರೇಲ್ ಮೇಲೆ ನಿರ್ಬಂಧಗಳನ್ನು ವಿಧಿಸಲು ತಮ್ಮ ಸರ್ಕಾರಗಳ ಮೇಲೆ ಒತ್ತಡ ಹೇರುವ ಗುರಿಯನ್ನು ಸಹ ಅವರು ಹೊಂದಿದ್ದಾರೆ.

ಸಂಘಟಕರು ಈಜಿಪ್ಟ್‌ನ ಭದ್ರತಾ ಆತಂಕಗಳನ್ನ ಗೌರವಿಸುವುದಾಗಿ ಹೇಳಿದ್ದು, ತಮ್ಮ ಮೆರವಣಿಗೆಯು ಈಜಿಪ್ಟ್‌ಗೆ ಯಾವುದೇ ಬೆದರಿಕೆಯನ್ನುಂಟುಮಾಡುವುದಿಲ್ಲ ಮತ್ತು ಕದನ ವಿರಾಮಕ್ಕಾಗಿ ಈಜಿಫ್ಟ್‌ನ ನಿಲುವಿಗೆ ತಮ್ಮ ಪ್ರಯತ್ನಗಳು ಹೊಂದಿಕೆಯಾಗುತ್ತದೆ ಎಂದು ಸ್ಪಷ್ಟಪಡಿಸುವ ಅಧಿಕೃತ ಪತ್ರಗಳನ್ನು ಈಜಿಪ್ಟ್ ಸರ್ಕಾರಕ್ಕೆ ಕಳುಹಿಸಿದ್ದೇವೆ ಎಂದು ಒತ್ತಿ ಹೇಳಿದ್ದಾರೆ. ಈಜಿಪ್ಟ್‌ನ ಆಂತರಿಕ ವಿಷಯಗಳಿಗೆ ಸಂಬಂಧಿಸಿ ಪ್ರತಿಕ್ರಿಯಿಸಿ, ಈಜಿಪ್ಟ್ ನಿಯೋಗಗಳನ್ನು ಮೆರವಣಿಗೆಯಿಂದ ಹೊರಗಿಡುವ ತಮ್ಮ ಬದ್ಧತೆಯನ್ನು ಅವರು ಒತ್ತಿ ಹೇಳಿದ್ದಾರೆ.

ಪಶ್ಚಿಮ ದೇಶಗಳ ಈ ಸುಮುದ್ ಕ್ಯಾನ್ವಾಯ್ ಸೋಮವಾರ ಟುನೀಶಿಯಾದ ರಾಜಧಾನಿಯಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿತು ಮತ್ತು ಮಂಗಳವಾರದ ವೇಳೆಗೆ ಲಿಬಿಯಾದ ನಗರವಾದ ಜಾವಿಯಾವನ್ನು ತಲುಪಿದೆ. ಈಜಿಫ್ಟ್‌ ಮತ್ತು ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್‌ನ ರಫಾ ಗಡಿಯ ಮೂಲಕ ಗಾಝಾ ತಲುಪುವ ಉದ್ದೇಶದಿಂದ ಹೊರಟಿರುವ ಈ ರ‍್ಯಾಲಿ ಲಿಬಿಯಾ ಮತ್ತು ಈಜಿಪ್ಟ್ ಮೂಲಕ ಮುಂದುವರಿಯುತ್ತದೆ ಎಂದು ಸಂಘಟಕರು ಹೇಳಿದ್ದರು.

ಜೂನ್‌ ಒಂದರಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಎಂಬ ಅಂತಾರಾಷ್ಟ್ರೀಯ ಹೋರಾಟಗಾರರ ಗುಂಪೊಂದು ಇಟಲಿಯ ಸಿಸಿಲಿಯ ಬಂದರಿನಿಂದ ಮೆಡಿಟರೇನಿಯನ್ ಸಮುದ್ರದಲ್ಲಿ ಗಾಝಾಕ್ಕೆ ಹಡಗಿನ ಮೂಲಕ ಹೊರಟಿತ್ತು. ಸುಮಾರು ಎಂಟು ದಿನಗಳ ಪ್ರಯಾಣದಲ್ಲಿ ಗಾಝಾ ತೀರಕ್ಕೆ 150 ಕಿ.ಮಿ. ದೂರದಲ್ಲಿ ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಇರುವಾಗ ಇಸ್ರೇಲ್ ಹಡಗು ಮತ್ತು ಅದರಲ್ಲಿದ್ದ ಹೋರಾಟಗಾರರನ್ನು ಅಪಹರಣ ಮಾಡಿ, ಇಸ್ರೇಲ್‌ಗೆ ಕೊಂಡೊಯ್ದು ಗಡಿಪಾರು ಮಾಡಿತ್ತು.

ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ, ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಹತ್ಯಾಕಾಂಡದಲ್ಲಿ ಕನಿಷ್ಠ 54,927 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 126,615 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7, 2023 ರಂದು ಹಮಾಸ್ ನೇತೃತ್ವದ ದಾಳಿಯ ಸಮಯದಲ್ಲಿ ಇಸ್ರೇಲ್‌ನಲ್ಲಿ ಅಂದಾಜು 1,139 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರನ್ನು ಸೆರೆಹಿಡಿಯಲಾಗಿದೆ. ಜೊತೆಗೆ ಗಾಝಾದ ಮೇಲೆ ದಿಗ್ಬಂಧನ ಹೇರಿರುವ ಇಸ್ರೇಲ್ ಕಳೆದ ಎರಡು ತಿಂಗಳಿನಿಂದ ಅಲ್ಲಿನ ಜನರಿಗೆ ಆಹಾರ, ವೈದ್ಯಕೀಯ ನೆರವುಗಳನ್ನು ನಿರಾಕರಿಸುತ್ತಿವೆ. ಸುಮಾರು 20 ಲಕ್ಷ ಜನರಿರುವ ಪ್ರದೇಶದಲ್ಲಿ ಲಕ್ಷಾಂತರ ಜನರು ಹಸಿವನ್ನು ಎದುರಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ಸಂಘಟನೆಗಳು ಎಚ್ಚರಿಸಿವೆ. ಗಾಝಾ ನೆರವಿಗೆ ಉತ್ತರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...