Homeಮುಖಪುಟ'ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!' | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ...

‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

- Advertisement -
- Advertisement -

2023ರಲ್ಲಿ ಈಶಾನ್ಯ ಭಾರತದ ಕೇವಲ 38 ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯವು ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯ ಮುಂದೆ ಇತ್ತೀಚೆಗೆ ಮಂಡಿಸಿದ ವರದಿಯಲ್ಲಿ ಹೇಳಿಕೊಂಡಿದೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ. ಅದಾಗ್ಯೂ, ಈ ಅಂಕಿ ಅಂಶಗಳ ಬಗ್ಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ. 2023ರ ಮೇ 3 ರಿಂದ 2023 ಡಿಸೆಂಬರ್ 31ರ ನಡುವೆ ಮಣಿಪುರ ರಾಜ್ಯವೊಂದರಲ್ಲೆ ಒಟ್ಟು 160 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರವೆ ಸಂಸತ್ತಿನಲ್ಲಿ ಮಂಡಿಸಿತ್ತು. ಈಶಾನ್ಯ ಭಾರತದಲ್ಲಿ

ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಸ್ಥಾಯಿ ಸಮಿತಿ ಮುಂದೆ ವರದಿಯನ್ನು ಮಂಡಿಸಿದ್ದು, ಅವರು ಮೇ 2023 ರಲ್ಲಿ ಮಣಿಪುರದ ಮೈತೆಯಿ ಮತ್ತು ಕುಕಿ ಸಮುದಾಯಗಳ ನಡುವೆ ಸಂಭವಿಸಿದ ಜನಾಂಗೀಯ ಘರ್ಷಣೆಗಳ ಸಂಖ್ಯೆಯನ್ನು ಉಲ್ಲೇಖಿಸಲು ವಿಫಲರಾಗಿದ್ದಾರೆ. ಈ ವರೆಗೆ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 237 ಜನರನ್ನು ಕೊಲ್ಲಲ್ಪಟ್ಟಿದ್ದು, ಸುಮಾರು 59,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಗೊಂಡಿದ್ದಾರೆ. ಈಶಾನ್ಯ ಭಾರತದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2014 ರಿಂದ ಈಶಾನ್ಯದಲ್ಲಿ ನಾಗರಿಕ ಹತ್ಯೆಗಳಲ್ಲಿ 82% ಕಡಿಮೆಯಾಗಿದೆ, 212 ಸಾವುಗಳು ದಾಖಲಾಗಿವೆ ಎಂದು ಮೋಹನ್ ತಮ್ಮ ಪ್ರಸ್ತುತಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ಪ್ರಸ್ತುತಿಯನ್ನು ಪ್ರತಿಪಕ್ಷದ ಸಂಸದರು ತೀವ್ರವಾಗಿ ಟೀಕಿಸಿದ್ದಾರೆ. ಸ್ಥಾಯಿ ಸಮಿತಿಯ ಭಾಗವಾಗಿರುವ ಸಂಸದರೊಬ್ಬರು ಮಾತನಾಡಿ, “ಇದು ಲಜ್ಜೆಗೆಟ್ಟ ಲೋಪವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಣಿಪುರದ ಬಗ್ಗೆ ಮಾತನಾಡದೆ ಗೃಹ ಸಚಿವಾಲಯವು ಈಶಾನ್ಯ ಭಾರತದ ಬಗ್ಗೆ ಹೇಗೆ ಹೇಳುತ್ತದೆ? ಎಂದು ಅವರು ಕೇಳಿದ್ದಾರೆ.

“ಈಶಾನ್ಯ ಭಾರತದಲ್ಲಿ 2014ರಲ್ಲಿ 824 ಹಿಂಸಾಚಾರ ಘಟನೆಗಳು ನಡೆದಿದ್ದು, 2023 ರಲ್ಲಿ ಇದು 243 ಕ್ಕೆ ಅಂದರೆ 71% ರಷ್ಟು ಕಡಿಮೆಯಾಗಿದೆ” ಎಂದು ಗೃಹ ಸಚಿವಾಲಯವು ಹೇಳಿಕೊಂಡಿದೆ. ಜೊತೆಗೆ, ಭದ್ರತಾ ಸಿಬ್ಬಂದಿಯ ಸಾವಿನಲ್ಲಿ 60% ಇಳಿಕೆಯಾಗಿದೆ ಎಂದು ಅದು ಹೇಳಿದೆ. 2014 ರಲ್ಲಿ 20 ಸಿಬ್ಬಂದಿ ಸಾವಿಗೀಡಾಗಿದ್ದು, ಈ ಸಂಖ್ಯೆ 2023 ರಲ್ಲಿ 8 ಕ್ಕೆ ಇಳಿದಿದೆ ಎಂದು ಸಚಿವಾಲಯ ಹೇಳಿಕೊಂಡಿದೆ.

ಮಹಿಳಾ ಸುರಕ್ಷತೆಗಾಗಿ ಕೇಂದ್ರ ಸರ್ಕಾರದ ಉಪಕ್ರಮಗಳು ಚರ್ಚೆಗೆ ಬಂದಾಗ, ವಿರೋಧ ಪಕ್ಷದ ಸಂಸದರು ಮಣಿಪುರದ ವಿಷಯಕ್ಕೆ ಸಂವಾದವನ್ನು ತಿರುಗಿಸಿದ್ದಾರೆ. ಕಳೆದ ವಾರವಷ್ಟೇ ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಹತ್ಯೆಯ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದರೊಬ್ಬರು ಸಭೆಯಲ್ಲಿ ಮಾತನಾಡಿದ್ದಾರೆ ದಿ ಹಿಂದೂ ವರದಿ ಮಾಡಿದೆ.

ನವೆಂಬರ್ 7 ರಂದು, ಜಿರಿಬಾಮ್ ಜಿಲ್ಲೆಯ ಝೈರೋನ್ ಹ್ಮಾರ್ ಗ್ರಾಮದಲ್ಲಿ ಝೋಸಾಂಗ್ಕಿಮ್ ಎಂದು ಗುರುತಿಸಲ್ಪಟ್ಟ ಮಹಿಳೆಯನ್ನು ಶಂಕಿತ ಮೈತೇಯಿ ಉಗ್ರಗಾಮಿಗಳು ಕೊಂದಿದ್ದರು ಎಂದು ವರದಿಯಾಗಿದೆ. ಮೃತರು ಹ್ಮಾರ್ ಸಮುದಾಯಕ್ಕೆ ಸೇರಿದವರಾಗಿದ್ದು, ಕ್ರಿಶ್ಚಿಯನ್ ಮಿಷನರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಶಸ್ತ್ರಸಜ್ಜಿತ ಮೈತೇಯಿ ಗುಂಪಿನ ಅರಂಬೈ ತೆಂಗೋಲ್‌ನ ಸದಸ್ಯರು ಅವರನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದಾಗಿ ಎರಡು ದಿನಗಳ ನಂತರ, ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ಮೈತೇಯಿ ಸಮುದಾಯದ ಮಹಿಳಾ ರೈತರೊಬ್ಬರನ್ನು ಗುಂಡಿಕ್ಕಿ ಕೊಂದಿದ್ದರು. ಮೃತ ಮಹಿಳೆಯು ಇತರ ರೈತರೊಂದಿಗೆ ಸೈಟನ್ ಪ್ರದೇಶದಲ್ಲಿ ಭತ್ತದ ಗದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾಗ, ಉಗ್ರರು ಬೆಟ್ಟದ ಕಡೆಯಿಂದ ಗುಂಡಿನ ದಾಳಿ ನಡೆಸಿದ್ದರು.

ಇದನ್ನೂ ಓದಿ: FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...