Homeಮುಖಪುಟ'ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!' | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ...

‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

- Advertisement -
- Advertisement -

2023ರಲ್ಲಿ ಈಶಾನ್ಯ ಭಾರತದ ಕೇವಲ 38 ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯವು ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯ ಮುಂದೆ ಇತ್ತೀಚೆಗೆ ಮಂಡಿಸಿದ ವರದಿಯಲ್ಲಿ ಹೇಳಿಕೊಂಡಿದೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ. ಅದಾಗ್ಯೂ, ಈ ಅಂಕಿ ಅಂಶಗಳ ಬಗ್ಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ. 2023ರ ಮೇ 3 ರಿಂದ 2023 ಡಿಸೆಂಬರ್ 31ರ ನಡುವೆ ಮಣಿಪುರ ರಾಜ್ಯವೊಂದರಲ್ಲೆ ಒಟ್ಟು 160 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರವೆ ಸಂಸತ್ತಿನಲ್ಲಿ ಮಂಡಿಸಿತ್ತು. ಈಶಾನ್ಯ ಭಾರತದಲ್ಲಿ

ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಸ್ಥಾಯಿ ಸಮಿತಿ ಮುಂದೆ ವರದಿಯನ್ನು ಮಂಡಿಸಿದ್ದು, ಅವರು ಮೇ 2023 ರಲ್ಲಿ ಮಣಿಪುರದ ಮೈತೆಯಿ ಮತ್ತು ಕುಕಿ ಸಮುದಾಯಗಳ ನಡುವೆ ಸಂಭವಿಸಿದ ಜನಾಂಗೀಯ ಘರ್ಷಣೆಗಳ ಸಂಖ್ಯೆಯನ್ನು ಉಲ್ಲೇಖಿಸಲು ವಿಫಲರಾಗಿದ್ದಾರೆ. ಈ ವರೆಗೆ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 237 ಜನರನ್ನು ಕೊಲ್ಲಲ್ಪಟ್ಟಿದ್ದು, ಸುಮಾರು 59,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಗೊಂಡಿದ್ದಾರೆ. ಈಶಾನ್ಯ ಭಾರತದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2014 ರಿಂದ ಈಶಾನ್ಯದಲ್ಲಿ ನಾಗರಿಕ ಹತ್ಯೆಗಳಲ್ಲಿ 82% ಕಡಿಮೆಯಾಗಿದೆ, 212 ಸಾವುಗಳು ದಾಖಲಾಗಿವೆ ಎಂದು ಮೋಹನ್ ತಮ್ಮ ಪ್ರಸ್ತುತಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ಪ್ರಸ್ತುತಿಯನ್ನು ಪ್ರತಿಪಕ್ಷದ ಸಂಸದರು ತೀವ್ರವಾಗಿ ಟೀಕಿಸಿದ್ದಾರೆ. ಸ್ಥಾಯಿ ಸಮಿತಿಯ ಭಾಗವಾಗಿರುವ ಸಂಸದರೊಬ್ಬರು ಮಾತನಾಡಿ, “ಇದು ಲಜ್ಜೆಗೆಟ್ಟ ಲೋಪವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಣಿಪುರದ ಬಗ್ಗೆ ಮಾತನಾಡದೆ ಗೃಹ ಸಚಿವಾಲಯವು ಈಶಾನ್ಯ ಭಾರತದ ಬಗ್ಗೆ ಹೇಗೆ ಹೇಳುತ್ತದೆ? ಎಂದು ಅವರು ಕೇಳಿದ್ದಾರೆ.

“ಈಶಾನ್ಯ ಭಾರತದಲ್ಲಿ 2014ರಲ್ಲಿ 824 ಹಿಂಸಾಚಾರ ಘಟನೆಗಳು ನಡೆದಿದ್ದು, 2023 ರಲ್ಲಿ ಇದು 243 ಕ್ಕೆ ಅಂದರೆ 71% ರಷ್ಟು ಕಡಿಮೆಯಾಗಿದೆ” ಎಂದು ಗೃಹ ಸಚಿವಾಲಯವು ಹೇಳಿಕೊಂಡಿದೆ. ಜೊತೆಗೆ, ಭದ್ರತಾ ಸಿಬ್ಬಂದಿಯ ಸಾವಿನಲ್ಲಿ 60% ಇಳಿಕೆಯಾಗಿದೆ ಎಂದು ಅದು ಹೇಳಿದೆ. 2014 ರಲ್ಲಿ 20 ಸಿಬ್ಬಂದಿ ಸಾವಿಗೀಡಾಗಿದ್ದು, ಈ ಸಂಖ್ಯೆ 2023 ರಲ್ಲಿ 8 ಕ್ಕೆ ಇಳಿದಿದೆ ಎಂದು ಸಚಿವಾಲಯ ಹೇಳಿಕೊಂಡಿದೆ.

ಮಹಿಳಾ ಸುರಕ್ಷತೆಗಾಗಿ ಕೇಂದ್ರ ಸರ್ಕಾರದ ಉಪಕ್ರಮಗಳು ಚರ್ಚೆಗೆ ಬಂದಾಗ, ವಿರೋಧ ಪಕ್ಷದ ಸಂಸದರು ಮಣಿಪುರದ ವಿಷಯಕ್ಕೆ ಸಂವಾದವನ್ನು ತಿರುಗಿಸಿದ್ದಾರೆ. ಕಳೆದ ವಾರವಷ್ಟೇ ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಹತ್ಯೆಯ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದರೊಬ್ಬರು ಸಭೆಯಲ್ಲಿ ಮಾತನಾಡಿದ್ದಾರೆ ದಿ ಹಿಂದೂ ವರದಿ ಮಾಡಿದೆ.

ನವೆಂಬರ್ 7 ರಂದು, ಜಿರಿಬಾಮ್ ಜಿಲ್ಲೆಯ ಝೈರೋನ್ ಹ್ಮಾರ್ ಗ್ರಾಮದಲ್ಲಿ ಝೋಸಾಂಗ್ಕಿಮ್ ಎಂದು ಗುರುತಿಸಲ್ಪಟ್ಟ ಮಹಿಳೆಯನ್ನು ಶಂಕಿತ ಮೈತೇಯಿ ಉಗ್ರಗಾಮಿಗಳು ಕೊಂದಿದ್ದರು ಎಂದು ವರದಿಯಾಗಿದೆ. ಮೃತರು ಹ್ಮಾರ್ ಸಮುದಾಯಕ್ಕೆ ಸೇರಿದವರಾಗಿದ್ದು, ಕ್ರಿಶ್ಚಿಯನ್ ಮಿಷನರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಶಸ್ತ್ರಸಜ್ಜಿತ ಮೈತೇಯಿ ಗುಂಪಿನ ಅರಂಬೈ ತೆಂಗೋಲ್‌ನ ಸದಸ್ಯರು ಅವರನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದಾಗಿ ಎರಡು ದಿನಗಳ ನಂತರ, ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ಮೈತೇಯಿ ಸಮುದಾಯದ ಮಹಿಳಾ ರೈತರೊಬ್ಬರನ್ನು ಗುಂಡಿಕ್ಕಿ ಕೊಂದಿದ್ದರು. ಮೃತ ಮಹಿಳೆಯು ಇತರ ರೈತರೊಂದಿಗೆ ಸೈಟನ್ ಪ್ರದೇಶದಲ್ಲಿ ಭತ್ತದ ಗದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾಗ, ಉಗ್ರರು ಬೆಟ್ಟದ ಕಡೆಯಿಂದ ಗುಂಡಿನ ದಾಳಿ ನಡೆಸಿದ್ದರು.

ಇದನ್ನೂ ಓದಿ: FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...