Homeಮುಖಪುಟ'ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!' | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ...

‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

- Advertisement -
- Advertisement -

2023ರಲ್ಲಿ ಈಶಾನ್ಯ ಭಾರತದ ಕೇವಲ 38 ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯವು ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯ ಮುಂದೆ ಇತ್ತೀಚೆಗೆ ಮಂಡಿಸಿದ ವರದಿಯಲ್ಲಿ ಹೇಳಿಕೊಂಡಿದೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ. ಅದಾಗ್ಯೂ, ಈ ಅಂಕಿ ಅಂಶಗಳ ಬಗ್ಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ. 2023ರ ಮೇ 3 ರಿಂದ 2023 ಡಿಸೆಂಬರ್ 31ರ ನಡುವೆ ಮಣಿಪುರ ರಾಜ್ಯವೊಂದರಲ್ಲೆ ಒಟ್ಟು 160 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರವೆ ಸಂಸತ್ತಿನಲ್ಲಿ ಮಂಡಿಸಿತ್ತು. ಈಶಾನ್ಯ ಭಾರತದಲ್ಲಿ

ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಸ್ಥಾಯಿ ಸಮಿತಿ ಮುಂದೆ ವರದಿಯನ್ನು ಮಂಡಿಸಿದ್ದು, ಅವರು ಮೇ 2023 ರಲ್ಲಿ ಮಣಿಪುರದ ಮೈತೆಯಿ ಮತ್ತು ಕುಕಿ ಸಮುದಾಯಗಳ ನಡುವೆ ಸಂಭವಿಸಿದ ಜನಾಂಗೀಯ ಘರ್ಷಣೆಗಳ ಸಂಖ್ಯೆಯನ್ನು ಉಲ್ಲೇಖಿಸಲು ವಿಫಲರಾಗಿದ್ದಾರೆ. ಈ ವರೆಗೆ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 237 ಜನರನ್ನು ಕೊಲ್ಲಲ್ಪಟ್ಟಿದ್ದು, ಸುಮಾರು 59,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಗೊಂಡಿದ್ದಾರೆ. ಈಶಾನ್ಯ ಭಾರತದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2014 ರಿಂದ ಈಶಾನ್ಯದಲ್ಲಿ ನಾಗರಿಕ ಹತ್ಯೆಗಳಲ್ಲಿ 82% ಕಡಿಮೆಯಾಗಿದೆ, 212 ಸಾವುಗಳು ದಾಖಲಾಗಿವೆ ಎಂದು ಮೋಹನ್ ತಮ್ಮ ಪ್ರಸ್ತುತಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ಪ್ರಸ್ತುತಿಯನ್ನು ಪ್ರತಿಪಕ್ಷದ ಸಂಸದರು ತೀವ್ರವಾಗಿ ಟೀಕಿಸಿದ್ದಾರೆ. ಸ್ಥಾಯಿ ಸಮಿತಿಯ ಭಾಗವಾಗಿರುವ ಸಂಸದರೊಬ್ಬರು ಮಾತನಾಡಿ, “ಇದು ಲಜ್ಜೆಗೆಟ್ಟ ಲೋಪವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಣಿಪುರದ ಬಗ್ಗೆ ಮಾತನಾಡದೆ ಗೃಹ ಸಚಿವಾಲಯವು ಈಶಾನ್ಯ ಭಾರತದ ಬಗ್ಗೆ ಹೇಗೆ ಹೇಳುತ್ತದೆ? ಎಂದು ಅವರು ಕೇಳಿದ್ದಾರೆ.

“ಈಶಾನ್ಯ ಭಾರತದಲ್ಲಿ 2014ರಲ್ಲಿ 824 ಹಿಂಸಾಚಾರ ಘಟನೆಗಳು ನಡೆದಿದ್ದು, 2023 ರಲ್ಲಿ ಇದು 243 ಕ್ಕೆ ಅಂದರೆ 71% ರಷ್ಟು ಕಡಿಮೆಯಾಗಿದೆ” ಎಂದು ಗೃಹ ಸಚಿವಾಲಯವು ಹೇಳಿಕೊಂಡಿದೆ. ಜೊತೆಗೆ, ಭದ್ರತಾ ಸಿಬ್ಬಂದಿಯ ಸಾವಿನಲ್ಲಿ 60% ಇಳಿಕೆಯಾಗಿದೆ ಎಂದು ಅದು ಹೇಳಿದೆ. 2014 ರಲ್ಲಿ 20 ಸಿಬ್ಬಂದಿ ಸಾವಿಗೀಡಾಗಿದ್ದು, ಈ ಸಂಖ್ಯೆ 2023 ರಲ್ಲಿ 8 ಕ್ಕೆ ಇಳಿದಿದೆ ಎಂದು ಸಚಿವಾಲಯ ಹೇಳಿಕೊಂಡಿದೆ.

ಮಹಿಳಾ ಸುರಕ್ಷತೆಗಾಗಿ ಕೇಂದ್ರ ಸರ್ಕಾರದ ಉಪಕ್ರಮಗಳು ಚರ್ಚೆಗೆ ಬಂದಾಗ, ವಿರೋಧ ಪಕ್ಷದ ಸಂಸದರು ಮಣಿಪುರದ ವಿಷಯಕ್ಕೆ ಸಂವಾದವನ್ನು ತಿರುಗಿಸಿದ್ದಾರೆ. ಕಳೆದ ವಾರವಷ್ಟೇ ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಹತ್ಯೆಯ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದರೊಬ್ಬರು ಸಭೆಯಲ್ಲಿ ಮಾತನಾಡಿದ್ದಾರೆ ದಿ ಹಿಂದೂ ವರದಿ ಮಾಡಿದೆ.

ನವೆಂಬರ್ 7 ರಂದು, ಜಿರಿಬಾಮ್ ಜಿಲ್ಲೆಯ ಝೈರೋನ್ ಹ್ಮಾರ್ ಗ್ರಾಮದಲ್ಲಿ ಝೋಸಾಂಗ್ಕಿಮ್ ಎಂದು ಗುರುತಿಸಲ್ಪಟ್ಟ ಮಹಿಳೆಯನ್ನು ಶಂಕಿತ ಮೈತೇಯಿ ಉಗ್ರಗಾಮಿಗಳು ಕೊಂದಿದ್ದರು ಎಂದು ವರದಿಯಾಗಿದೆ. ಮೃತರು ಹ್ಮಾರ್ ಸಮುದಾಯಕ್ಕೆ ಸೇರಿದವರಾಗಿದ್ದು, ಕ್ರಿಶ್ಚಿಯನ್ ಮಿಷನರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಶಸ್ತ್ರಸಜ್ಜಿತ ಮೈತೇಯಿ ಗುಂಪಿನ ಅರಂಬೈ ತೆಂಗೋಲ್‌ನ ಸದಸ್ಯರು ಅವರನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದಾಗಿ ಎರಡು ದಿನಗಳ ನಂತರ, ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ಮೈತೇಯಿ ಸಮುದಾಯದ ಮಹಿಳಾ ರೈತರೊಬ್ಬರನ್ನು ಗುಂಡಿಕ್ಕಿ ಕೊಂದಿದ್ದರು. ಮೃತ ಮಹಿಳೆಯು ಇತರ ರೈತರೊಂದಿಗೆ ಸೈಟನ್ ಪ್ರದೇಶದಲ್ಲಿ ಭತ್ತದ ಗದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾಗ, ಉಗ್ರರು ಬೆಟ್ಟದ ಕಡೆಯಿಂದ ಗುಂಡಿನ ದಾಳಿ ನಡೆಸಿದ್ದರು.

ಇದನ್ನೂ ಓದಿ: FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...