Homeಮುಖಪುಟ'ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!' | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ...

‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

- Advertisement -
- Advertisement -

2023ರಲ್ಲಿ ಈಶಾನ್ಯ ಭಾರತದ ಕೇವಲ 38 ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯವು ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯ ಮುಂದೆ ಇತ್ತೀಚೆಗೆ ಮಂಡಿಸಿದ ವರದಿಯಲ್ಲಿ ಹೇಳಿಕೊಂಡಿದೆ ಎಂದು ದಿ ಹಿಂದೂ ಮಂಗಳವಾರ ವರದಿ ಮಾಡಿದೆ. ಅದಾಗ್ಯೂ, ಈ ಅಂಕಿ ಅಂಶಗಳ ಬಗ್ಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ. 2023ರ ಮೇ 3 ರಿಂದ 2023 ಡಿಸೆಂಬರ್ 31ರ ನಡುವೆ ಮಣಿಪುರ ರಾಜ್ಯವೊಂದರಲ್ಲೆ ಒಟ್ಟು 160 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರವೆ ಸಂಸತ್ತಿನಲ್ಲಿ ಮಂಡಿಸಿತ್ತು. ಈಶಾನ್ಯ ಭಾರತದಲ್ಲಿ

ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಸ್ಥಾಯಿ ಸಮಿತಿ ಮುಂದೆ ವರದಿಯನ್ನು ಮಂಡಿಸಿದ್ದು, ಅವರು ಮೇ 2023 ರಲ್ಲಿ ಮಣಿಪುರದ ಮೈತೆಯಿ ಮತ್ತು ಕುಕಿ ಸಮುದಾಯಗಳ ನಡುವೆ ಸಂಭವಿಸಿದ ಜನಾಂಗೀಯ ಘರ್ಷಣೆಗಳ ಸಂಖ್ಯೆಯನ್ನು ಉಲ್ಲೇಖಿಸಲು ವಿಫಲರಾಗಿದ್ದಾರೆ. ಈ ವರೆಗೆ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 237 ಜನರನ್ನು ಕೊಲ್ಲಲ್ಪಟ್ಟಿದ್ದು, ಸುಮಾರು 59,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಗೊಂಡಿದ್ದಾರೆ. ಈಶಾನ್ಯ ಭಾರತದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2014 ರಿಂದ ಈಶಾನ್ಯದಲ್ಲಿ ನಾಗರಿಕ ಹತ್ಯೆಗಳಲ್ಲಿ 82% ಕಡಿಮೆಯಾಗಿದೆ, 212 ಸಾವುಗಳು ದಾಖಲಾಗಿವೆ ಎಂದು ಮೋಹನ್ ತಮ್ಮ ಪ್ರಸ್ತುತಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಈ ಪ್ರಸ್ತುತಿಯನ್ನು ಪ್ರತಿಪಕ್ಷದ ಸಂಸದರು ತೀವ್ರವಾಗಿ ಟೀಕಿಸಿದ್ದಾರೆ. ಸ್ಥಾಯಿ ಸಮಿತಿಯ ಭಾಗವಾಗಿರುವ ಸಂಸದರೊಬ್ಬರು ಮಾತನಾಡಿ, “ಇದು ಲಜ್ಜೆಗೆಟ್ಟ ಲೋಪವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಣಿಪುರದ ಬಗ್ಗೆ ಮಾತನಾಡದೆ ಗೃಹ ಸಚಿವಾಲಯವು ಈಶಾನ್ಯ ಭಾರತದ ಬಗ್ಗೆ ಹೇಗೆ ಹೇಳುತ್ತದೆ? ಎಂದು ಅವರು ಕೇಳಿದ್ದಾರೆ.

“ಈಶಾನ್ಯ ಭಾರತದಲ್ಲಿ 2014ರಲ್ಲಿ 824 ಹಿಂಸಾಚಾರ ಘಟನೆಗಳು ನಡೆದಿದ್ದು, 2023 ರಲ್ಲಿ ಇದು 243 ಕ್ಕೆ ಅಂದರೆ 71% ರಷ್ಟು ಕಡಿಮೆಯಾಗಿದೆ” ಎಂದು ಗೃಹ ಸಚಿವಾಲಯವು ಹೇಳಿಕೊಂಡಿದೆ. ಜೊತೆಗೆ, ಭದ್ರತಾ ಸಿಬ್ಬಂದಿಯ ಸಾವಿನಲ್ಲಿ 60% ಇಳಿಕೆಯಾಗಿದೆ ಎಂದು ಅದು ಹೇಳಿದೆ. 2014 ರಲ್ಲಿ 20 ಸಿಬ್ಬಂದಿ ಸಾವಿಗೀಡಾಗಿದ್ದು, ಈ ಸಂಖ್ಯೆ 2023 ರಲ್ಲಿ 8 ಕ್ಕೆ ಇಳಿದಿದೆ ಎಂದು ಸಚಿವಾಲಯ ಹೇಳಿಕೊಂಡಿದೆ.

ಮಹಿಳಾ ಸುರಕ್ಷತೆಗಾಗಿ ಕೇಂದ್ರ ಸರ್ಕಾರದ ಉಪಕ್ರಮಗಳು ಚರ್ಚೆಗೆ ಬಂದಾಗ, ವಿರೋಧ ಪಕ್ಷದ ಸಂಸದರು ಮಣಿಪುರದ ವಿಷಯಕ್ಕೆ ಸಂವಾದವನ್ನು ತಿರುಗಿಸಿದ್ದಾರೆ. ಕಳೆದ ವಾರವಷ್ಟೇ ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯರ ಹತ್ಯೆಯ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದರೊಬ್ಬರು ಸಭೆಯಲ್ಲಿ ಮಾತನಾಡಿದ್ದಾರೆ ದಿ ಹಿಂದೂ ವರದಿ ಮಾಡಿದೆ.

ನವೆಂಬರ್ 7 ರಂದು, ಜಿರಿಬಾಮ್ ಜಿಲ್ಲೆಯ ಝೈರೋನ್ ಹ್ಮಾರ್ ಗ್ರಾಮದಲ್ಲಿ ಝೋಸಾಂಗ್ಕಿಮ್ ಎಂದು ಗುರುತಿಸಲ್ಪಟ್ಟ ಮಹಿಳೆಯನ್ನು ಶಂಕಿತ ಮೈತೇಯಿ ಉಗ್ರಗಾಮಿಗಳು ಕೊಂದಿದ್ದರು ಎಂದು ವರದಿಯಾಗಿದೆ. ಮೃತರು ಹ್ಮಾರ್ ಸಮುದಾಯಕ್ಕೆ ಸೇರಿದವರಾಗಿದ್ದು, ಕ್ರಿಶ್ಚಿಯನ್ ಮಿಷನರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಶಸ್ತ್ರಸಜ್ಜಿತ ಮೈತೇಯಿ ಗುಂಪಿನ ಅರಂಬೈ ತೆಂಗೋಲ್‌ನ ಸದಸ್ಯರು ಅವರನ್ನು ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಅಸ್ಸಾಂ ರೈಫಲ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅದಾಗಿ ಎರಡು ದಿನಗಳ ನಂತರ, ಬಿಷ್ಣುಪುರ್ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ಮೈತೇಯಿ ಸಮುದಾಯದ ಮಹಿಳಾ ರೈತರೊಬ್ಬರನ್ನು ಗುಂಡಿಕ್ಕಿ ಕೊಂದಿದ್ದರು. ಮೃತ ಮಹಿಳೆಯು ಇತರ ರೈತರೊಂದಿಗೆ ಸೈಟನ್ ಪ್ರದೇಶದಲ್ಲಿ ಭತ್ತದ ಗದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾಗ, ಉಗ್ರರು ಬೆಟ್ಟದ ಕಡೆಯಿಂದ ಗುಂಡಿನ ದಾಳಿ ನಡೆಸಿದ್ದರು.

ಇದನ್ನೂ ಓದಿ: FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

FACT CHECK | ಹಿಂದೂ ಸಾಧುಗಳ ವೇಷದಲ್ಲಿ ಭಿಕ್ಷೆ ಬೇಡಿದ ಮುಸಲ್ಮಾನರು ಎಂದು ಸುಳ್ಳು ಸುದ್ದಿ ಹಬ್ಬಿದ ಮಾಧ್ಯಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...