Homeಕರ್ನಾಟಕಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ಒಬ್ಬೇ ಒಬ್ಬ ಕನ್ನಡ ಸಾಧಕರ, ಹೋರಾಟಗಾರರ ಹೆಸರನ್ನು ಉತ್ತರ ಭಾರತದಲ್ಲಿನ ಯಾವುದಾದರೂ ರಾಜ್ಯಗಳಲ್ಲಿ ಯಾವುದಕ್ಕಾದರೂ ಇಟ್ಟಿರುವ ಉದಾಹರಣೆ ನಮಗೆ ಸಿಗಲು ಸಾಧ್ಯವೇ?

- Advertisement -
- Advertisement -

ಕರ್ನಾಟಕದಲ್ಲಿರುವ ಸಾರ್ವಜನಿಕ ಸ್ಥಳಗಳಿಗೆ ಕನ್ನಡೇತರ ವ್ಯಕ್ತಿಗಳ/ಸಾಧಕರ ಹೆಸರನ್ನು ನಾಮಕರಣ ಮಾಡುತ್ತಿರುವುದರ ವಿರುದ್ಧ, ಮೊದಲು ಕನ್ನಡದ ಅಸ್ಮಿತೆಗೆ ಪ್ರಾಧಾನ್ಯತೆ ಕೊಡಿ ರಾಜಕಾರಣಿಗಳೇ ಎಂಬ ಕೂಗು ಇತ್ತೀಚೆಗೆ ಹೆಚ್ಚಾಗಿ ಕೇಳಿಬರುತ್ತಿದೆ. ಕರ್ನಾಟಕದಲ್ಲಿ ಆಡಳಿತ ನಡೆಸುವ ಯಾವುದೇ ಪಕ್ಷಗಳೂ ಸಹ ಈ ನಡೆಯಿಂದ ಹೊರತಾಗಿಲ್ಲ. ಉತ್ತರ ಭಾರತದ ಸಂಸ್ಕೃತಿ, ಭಾಷೆ, ನಾಯಕರನ್ನು ಕನ್ನಡಿಗರ ಮೇಲೆ ಹೇರುವ ಪ್ರಯತ್ನ ಮೊದಲಿನಿಂದಲೂ ನಡೆಯುತ್ತಲೇ ಇದೆ. ಈಗ ಅದಕ್ಕೆ ನಾಗಾಲೋಟದ ವೇಗ ಸಿಕ್ಕಂತಾಗಿದೆ.

ಇತ್ತೀಚೆಗೆ ಬಿಜೆಪಿ ಸರ್ಕಾರವು ಯಲಹಂಕ ಮೇಲ್‌ಸೇತುವೆಗೆ ವಿ.ಡಿ.ಸಾವರ್ಕರ್ ಹೆಸರಿಡುವ ಮೂಲಕ ರಾಜ್ಯದ ಹಲವು ಸಾಧಕರಿಗೆ, ನಾಯಕರಿಗೆ ಅನ್ಯಾಯ ಮಾಡಿದೆ ಎಂದು ಹೋರಾಟಗಾರರು, ಪ್ರಗತಿಪರರು ದನಿಯೆತ್ತಿ ವಿರೋಧಿಸಿದ್ದಾರೆ.

ಇಂತಹ ಅನೇಕ ಕೆಲಸಗಳು ಸದ್ದಿಲ್ಲದೇ ನಡೆಯುತ್ತಿರುವುದು ನಮ್ಮ ರಾಜಕಾರಣಿಗಳ ಅಸ್ಮಿತೆ ಮತ್ತು ಸಿದ್ಧಾಂತವನ್ನು ಅನುಮಾನಿಸುವಂತೆ ಮಾಡುತ್ತಿದೆ. ಯಲಹಂಕ ಸೇತುವೆಗೆ ಉತ್ತರ ಭಾರತದ ನಾಯಕನ ಹೆಸರಿಟ್ಟಿರುವುದು ನಮ್ಮ ನಾಡಿನ ನಾಯಕರಿಗೆ ಬೆಲೆಯಿಲ್ಲ ಎಂಬುದನ್ನು  ತೋರಿಸುವಂತಿದೆ. ಇದಕ್ಕೆ ಇಂಬು ನೀಡುವಂತೆ ಇತ್ತೀಚೆಗೆ ಯಶವಂತಪುರದ ಮತ್ತೊಂದು ಸೇತುವೆಗೆ ದೀನ್ ದಯಾಳ್ ಉಪಾದ್ಯಾಯ ಅವರ ಹೆಸರನ್ನು ಇಟ್ಟಿದೆ. ತುಮಕೂರಿನ ಸೇತುವೆಯೊಂದಕ್ಕೆ ಸಾವರ್ಕರ್ ಹೆಸರಿಡಲಾಗಿದೆ. ಬೆಂಗಳೂರಿನ ವಿಜಯನಗರದ ಪಾರ್ಕ್‌ಗೆ ಶ್ಯಾಂ ಪ್ರಕಾಶ್ ಮುಖರ್ಜಿ ಹೆಸರಿಡಲಾಗಿದೆ. ಇದೀಗ ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಉತ್ತರ ಭಾರತೀಯರ ಹೆಸರಿಡಲು ಹುನ್ನಾರ ನಡೆಯುತ್ತಿದೆ.

ಒಬ್ಬೇ ಒಬ್ಬ ಕನ್ನಡ ಸಾಧಕರ, ಹೋರಾಟಗಾರರ ಹೆಸರನ್ನು ಉತ್ತರ ಭಾರತದಲ್ಲಿನ ಯಾವುದಾದರೂ ರಾಜ್ಯಗಳಲ್ಲಿ ಯಾವುದಕ್ಕಾದರೂ ಇಟ್ಟಿರುವ ಉದಾಹರಣೆ ನಮಗೆ ಸಿಗಲು ಸಾಧ್ಯವೇ? ಸಿಕ್ಕಿದರೂ ಅಲ್ಲಿ ನಮ್ಮವರೇ ಬಹುಸಂಖ್ಯಾತರಾಗಿದ್ದರೆ ಮಾತ್ರ ಸಾಧ್ಯ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ನಮ್ಮನ್ನಾಳುವ ಪಕ್ಷಗಳು ಬಹುತೇಕ ಉತ್ತರ ಭಾರತದ ಪ್ರಭಾವಿತ ಪಕ್ಷಗಳೇ ಆಗಿರುವುದೂ ಕೂಡ ಇದಕ್ಕೆ ಕಾರಣವಾಗಿರಬುಹುದು. ಏಕೆಂದರೆ ಹೆಚ್ಚಾಗಿ ಪ್ರಾದೇಶಿಕ ಪಕ್ಷಗಳಿರುವ ನಮ್ಮ ಪಕ್ಕದ ತಮಿಳುನಾಡಿನಲ್ಲಿ ಇಂತಹ ಹೇರಿಕೆಯೆ ಸಂಚುಗಳು ಫಲಿಸಲು ಸಾಧ್ಯವಿಲ್ಲ.

ಈ ಕುರಿತು ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿದ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷರಾದ ಹರೀಶ್ ಕುಮಾರ್, “ಈ ಹೇರಿಕೆಯ ವಿರುದ್ಧ ನಾವು ಮೊದಲಿನಿಂದಲೂ ದನಿಯೆತ್ತುತ್ತಿದ್ದೇವೆ. ನಮ್ಮ ರಾಜ್ಯದಲ್ಲಿ ನಮ್ಮ ನಾಯಕರ ಹೆಸರಿಡದೇ ಅನ್ಯ ನಾಯಕರ ಹೆಸರಿಡುವುದರಿಂದ ನಮ್ಮ ಮುಂದಿನ ಪೀಳಿಗೆಯವರಿಗೆ ನಾವು ತಲುಪಿಸುವ ಸಂದೇಶ ಎಂಥದ್ದು? ಮುಂದಿನ ಪೀಳಿಗೆಯ ಮಕ್ಕಳಿಗೆ ನಮ್ಮ ರಾಜ್ಯದಲ್ಲಿ ಸಾಧನೆ ಮಾಡಿದ ಯಾವುದೇ ನಾಯಕರಿಲ್ಲ ಎಂದೆಸುವುದರಲ್ಲಿ ಸಂದೇಹವಿಲ್ಲ. ಹಾಗಂತ, ಸಂಪೂರ್ಣ ನಮ್ಮವರೇ ಇರಬೇಕು ಎಂಬುದೇನೂ ಇಲ್ಲ. 95% ನಮ್ಮವರೇ ಇರಲಿ. ಉಳಿದ 5%  ಅನ್ಯ ನಾಯಕರ ಹೆಸರಿಡಲು ಅವಕಾಶ ಕೊಡೋಣ” ಎಂದು ಹೇಳಿದರು.

“ಹಿಂದಿ ಮತ್ತು ಉತ್ತರ ಭಾರತದ ನಾಯಕರ ಶ್ರೇಷ್ಟತೆಯ ಹೇರಿಕೆಯು ಒಂದು ರೀತಿಯ Slow Poison ಇದ್ದಂತೆ. ಈಗ ಒಂದೊಂದಾಗಿ ಆರಂಭಿಸಿ ಇನ್ನು 20 ವರ್ಷಗಳಲ್ಲಿ ಎಲ್ಲಿ ನೋಡಿದರೂ ಉತ್ತರ ಭಾರತದವರ ಹೆಸರು ಮತ್ತು ಹಿಂದಿಯೇ ಕಾಣಿಸುತ್ತದೆ. ಈಗ ನೋಡಿ ಯಲಹಂಕ ಸೇತುವೆಗೆ ಸಾವರ್ಕರ್ ಹೆಸರಿಟ್ಟಿದ್ದಾರೆ. ಆದರೆ ‘ಯಲಹಂಕ ನಾಡಪ್ರಭು ಎಂದೇ ಪ್ರಸಿದ್ಧಯಾಗಿದ್ದ ಕೆಂಪೇಗೌಡರ’ ಹೆಸರು ಇಡಲು ಸಾದ್ಯವಾಗಿಲ್ಲ. ಅದೂ ಹೋಗಲಿ, ಕುವೆಂಪು, ಬಸವಣ್ಣನಂತಹ ಎಷ್ಟು ಉನ್ನತ ಸಾಧಕರು ನಮ್ಮಲ್ಲಿಲ್ಲ? ಅವರನ್ನೆಲ್ಲ ಬಿಟ್ಟು ಇವರ ಹೆಸರನ್ನೇಕೆ ಇಟ್ಟಿದ್ದಾರೆ? ಉದ್ದೇಶ ಸ್ವಷ್ಟವಾಗಿದೆ, ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದಂತಹ ನಾಯಕರನ್ನು ಇಡೀ ದೇಶಕ್ಕೇ ಮಹಾನ್ ನಾಯಕರು ಎಂದು ಬಿಂಬಿಸುವ ಹುನ್ನಾರ ನಡೆಯುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷವೂ ಮಾಡಿಕೊಂಡೇ ಬಂದಿದೆ” ಎಂದು ಹೇಳಿದರು.

ಇದನ್ನೂ ಓದಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

“ಇಷ್ಟೆಲ್ಲಾ ಹೇಳಿದ ಮಾತ್ರಕ್ಕೆ ನಮಗೆ ಇನ್ನೊಂದು ಭಾಷೆಯ ಮೇಲೆ ಅಭಿಮಾನ ಇಲ್ಲವೆಂದು ಅರ್ಥವಲ್ಲ. ಕರ್ನಾಟಕದಲ್ಲಿ ಕನ್ನಡ, ಮಹಾರಾಷ್ಟ್ರದಲ್ಲಿ ಮರಾಠಿ, ತಮಿಳುನಾಡಿನಲ್ಲಿ ತಮಿಳು, ಹೀಗೆ ಆಯಾ ರಾಜ್ಯಗಳಲ್ಲಿ ಅದರದ್ದೇ ಆದ ಸ್ಥಳೀಯತೆಯೇ ಬೆಳೆಯಬೇಕು. ಆ ಮೂಲಕ ಭಾರತೀಯ ಒಕ್ಕೂಟ ವ್ಯವಸ್ಥೆಗೆ ಬದ್ಧವಾಗಿರುಬೇಕು. ಆದರೆ, ಇಂದು ಆಗುತ್ತಿರುವುದೇ ಬೇರೆ. ಇದರ ಹಿಂದೆ ದೊಡ್ಡ ರಾಜಕೀಯವೇ ಇದೆ. ಉತ್ತರ ಭಾರತದವರು ದಕ್ಷಿಣದವರಿಗಿಂತಲೂ ಶ್ರೇಷ್ಠರು ಎನ್ನುವ ಮೇಲರಿಮೆಯ ಭಾವವನ್ನು ಬಿತ್ತುತ್ತಾ ನಮ್ಮ ಬಗ್ಗೆ ಕೀಳರಿಮೆಯನ್ನು ರೂಢಿಸಿಕೊಂಡಿದ್ದಾರೆ” ಎಂದು ಆರೋಪಿಸಿದರು.

ಕನ್ನಡಪರ ಹೋರಾಟಗಾರರಾದ ಸಾ.ರಾ.ಸುದರ್ಶನ್ ಅವರನ್ನು ನಾನುಗೌರಿ.ಕಾಂ ಸಂಪರ್ಕಿಸಿದಾಗ, “ಬಿಜೆಪಿ ಪಕ್ಷದ ನಾಯಕರು ಸಂಪೂರ್ಣ ಅಧಿಕಾರ ಕಳೆದುಕೊಂಡು, ಕೇಂದ್ರದ ಮತ್ತು ಆರ್.ಎಸ್.ಎಸ್‌ನ ಕೈಗೊಂಬೆಗಳಾಗಿದ್ದಾರೆ. ಹಾಗಾಗಿ ನಾವು ಎಷ್ಟೇ ಪ್ರಯತ್ನಿಸಿದರೂ ಕನ್ನಡಪರ ಅಸ್ಮಿತೆಯನ್ನು ಉಳಿಸಲು ಇವರಿಂದ ಸಾಧ್ಯವಿಲ್ಲ. ಈಗ ವಿರೋಧಪಕ್ಷದಲ್ಲಿರುವವರು ತಾವು ಅಧಿಕಾರದಲ್ಲಿದ್ದಾಗಲೂ ಇಂತಹದ್ದೇ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಆದರೆ ಈಗ ಅವರೇ ವಿರೋಧಿಸುತ್ತಿದ್ದಾರೆ. ಇದು ನಮ್ಮಲ್ಲಿರುವ ದೊಡ್ಡ ವಿಪರ್ಯಾಸ” ಎಂದು ಹೇಳಿದರು.

ಬನವಾಸಿ ಬಳಗದ ಮುಖಂಡರಾದ ಆನಂದ್ ರವರನ್ನು ಮಾತನಾಡಿಸಿದಾಗ “ಊಟಕ್ಕೆ ಉಪ್ಪಿನಕಾಯಿ ಇದ್ದರೆ ಚೆನ್ನ. ಆದರೆ ಉಪ್ಪಿನಕಾಯಿಯೇ ಊಟವಾದರೆ? ಈಗ ಆಗುತ್ತಿರುವುದೂ ಅದೇ. ನಾಡು ಸಂಸ್ಕೃತಿಗೆ ಕೊಡುಗೆ ಕೊಟ್ಟ ಯಾರದೇ ಹೆಸರನ್ನಾದರೂ ಇಡಿ. ಆದರೆ ಅದೂ ಕೂಡ ನಿಯಮಿತವಾಗಿರಲಿ ಅಷ್ಟೆ. ಅದುಬಿಟ್ಟು ನಮ್ಮ ನಾಡಿಗೂ ಅವರಿಗೂ ಸಂಬಂಧವೇ ಇರದ ವ್ಯಕ್ತಿಯ ಹೆಸರಿಟ್ಟರೆ ಉಪಯೋಗವೇನು? ಪ್ರತಿಯೊಂದು ಪಕ್ಷವೂ ತನ್ನ ಸಿದ್ಧಾಂತಕ್ಕೆ ಅನುಗುಣವಾಗಿಯೇ ಹೆಸರಿಟ್ಟರೆ, ನಮ್ಮ ಕನ್ನಡದ ಅಸ್ಮಿತೆ ಉಳಿಯುವುದು ಯಾವಾಗ? ಕಾಂಗ್ರೆಸ್ ನವರು ಬಂದು ರಾಜೀವ್ ಗಾಂಧಿಯ ಹೆಸರೋ ಅಥವಾ ಇಂದಿರಾಗಾಂಧಿಯ ಹೆಸರನ್ನು ಇಟ್ಟರೂ ವಿರೋಧಿಸುತ್ತೇವೆ. ಬಿಜೆಪಿಯವರು ಬಂದು ವಾಜಪೇಯಿಯವರ ಹೆಸರು ಅಥವಾ ನಮ್ಮ ನಾಡಿನವರಲ್ಲದ ಯಾರದೇ ಹೆಸರಿಟ್ಟರೂ ವಿರೋಧಿಸುತ್ತೇವೆ” ಎಂದರು.


ಇದನ್ನೂ ಓದಿ: ಸ್ವಾತಂತ್ರ ಬಂತು ಸ್ವಾಯತ್ತತೆ ಹೋಯ್ತು : ಇದು ಕನ್ನಡಿಗರ ಕೂಗು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...