Homeಮುಖಪುಟನೆರೆಯ ಹೊರೆ: ನೆಮ್ಮದಿಯಲ್ಲಿ ಒಂದೂ ಊರಿಲ್ಲ, ಆರು ತಿಂಗಳಾದರೂ ಸೂರಿಲ್ಲ

ನೆರೆಯ ಹೊರೆ: ನೆಮ್ಮದಿಯಲ್ಲಿ ಒಂದೂ ಊರಿಲ್ಲ, ಆರು ತಿಂಗಳಾದರೂ ಸೂರಿಲ್ಲ

- Advertisement -
- Advertisement -

ಗದಗ: ‘ಕರೆಕ್ಟ್ ಅಂದ್ರ ಕರೆಕ್ಟ್’ ಎಂದು ಅಳತೆಪಟ್ಟಿ ಹಿಡಿದು ಮನೆ ಕಾಮಗಾರಿಯನ್ನು ಅಳೆದವರಂತೆ ಆಡುತ್ತಿರುವ ಜಿಲ್ಲೆಯ ಆಡಳಿತಶಾಹಿ, ನೆರೆ ಪ್ರವಾಹ ಬಂದು ಏಳು ತಿಂಗಳಾಗುತ್ತ ಬಂದರೂ ಮನೆ ನಿರ್ಮಾಣಕ್ಕೆ ಅಥವಾ ರಿಪೇರಿಗೆ ಎರಡನೇ ಕಂತಿನ ಹಣ ನೀಡಲು ತಯಾರಿಲ್ಲ. ಆರು ತಿಂಗಳಾದರೂ ಹಲವಾರು ಊರುಗಳ ನೂರಾರು ಕುಟುಂಬಗಳು ಸುಭದ್ರ ಸೂರಿಲ್ಲದೇ ಜೀವನ ನಡೆಸುತ್ತಿವೆ.

ಈ ಕಡೆ ಜಮೀನಿನಲ್ಲಾದ ಕೊರೆತ, ರಸ್ತೆ ಸೇರಿದಂತೆ ಒಂದಿಲ್ಲೊಂದು ಸಮಸ್ಯೆ ಇದ್ದೇ ಇದೆ. ಹೀಗಾಗಿ ಮಲಪ್ರಭೆ, ಬೆಣ್ಣೆಹಳ್ಳ ತಣ್ಣಗಾಗಿ ಒಣಗಿದರೂ, ನಮ್ಮ ಅಧಿಕಾರಿಗಳ ಒಣ ಉಸಾಬರಿ ಮಾತ್ರ ನಿಂತಿಲ್ಲ.

ಗಣಿ, ಭೂವಿಜ್ಞಾನ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರ ನರಗುಂದ ಕ್ಷೇತ್ರ ನೆರೆಪ್ರವಾಹಕ್ಕೆ ಸಿಕ್ಕು ನಜ್ಜುಗುಜ್ಜಾಗಿದೆ. ಆದರೆ ಪಾಟೀಲರು ಇದರ ಬಗ್ಗೆ ತೆಲೆ ಕೆಡಿಸಿಕೊಂಡಿಲ್ಲ. ಪರಿಹಾರ ತಂದಿದ್ದಿನಲ್ಲ ಎಂದು ಮನೆಯಿಂದ ತಂದವರಂತೆ ಮಾತಾಡುತ್ತಾರೆ ಹೊರತು, ಆ ಪರಿಹಾರ ಸಂತ್ರಸ್ತರಿಗೆ ತಲುಪಿತೋ ಇಲ್ಲವೋ ಎಂಬ ಬಗ್ಗೆ ಕಾಳಜಿಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೆ ತಾವು ಗಣಿ ಸಚಿವ ಎಂಬುದು ಇಂಪಾರ್ಟೆಂಟ್, ಅದಕ್ಕೇ ಅವರು ಜಿಲ್ಲೆಯ ಜೀವನಾಡಿ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಹೊಂಚು ಹಾಕಿ ಕುಳಿತಿರುವ ಬಲ್ಡೊಟಾ ಮತ್ತು ಪೊಸ್ಕೊಗಳಂತಹ ಕಂಪನಿಗಳ ಬಗ್ಗೆ ಸಾಫ್ಟ್‌ ಕಾರ್ನರ್ ಹೊಂದಿದ್ದಾರೆ. ಗಣಿ ಖಾತೆ ನಿಭಾಯಿಸಬೇಕಲ್ಲ, ಪಾಪ, ಅವರಿಗೆ ಜಿಲ್ಲಾ ಉಸ್ತುವಾರಿ ಮಾಡಕು ಟೈಮ್ ಇಲ್ಲವಂತೆ.

 

ತಮ್ಮ ಹಕ್ಕಿನ ಹಣಕ್ಕೆ ಕಾದವರ ಎದುರು ಅಧಿಕಾರಿಗಳು ತಾಂತ್ರಿಕ ತೊಂದರೆ, ಮೆಜರ್‌ಮೆಂಟು, ಫ್ಲಿಂಥು, ನಿಯಮ ಎನ್ನುವುದಿದೆಯಲ್ಲ, ಅದಂತೂ ಬದುಕುವ ಹಕ್ಕಿನ ಮೇಲೆ ದಾಳಿ ಮಾಡಿದಂತೆ.

ಜಿಲ್ಲೆಯ ನೆರೆಪೀಡಿತ ತಾಲೂಕುಗಳಾದ ನರಗುಂದ ಮತ್ತು ರೋಣಗಳಲ್ಲಿ ಅಧಿಕಾರಶಾಹಿಯ ‘ಕಂತಿನ ಲೆಕ್ಕಕ್ಕೆ’ ಹೈರಾಣಾದವರು ಡಿಸಿಯವರಿಗೆ ದೂರು ತಲುಪಿಸಿದರೂ ಪ್ರಯೋಜನವಾಗಿಲ್ಲ.

ಅಂತೂ ಇಂತೂ ಪರಿಹಾರ ಬಂತು!
ಆರಂಭದಲ್ಲಿ ಈ ಸರ್ಕಾರದಿಂದ ನೆರೆ ಪರಿಹಾರ ಸಿಗುವುದೋ ಇಲ್ಲವೋ ಎಂಬ ಅನುಮಾನ, ಆತಂಕಗಳಿದ್ದವು. ಆದರೂ ಅಂತೂ ಇಂತೂ ಪರಿಹಾರ ಬಂತು. ಆದರೀಗ ಮುಳ್ಳಾಗಿರುವುದು ಕಂತು!

ಕೊಣ್ಣೂರು, ವಾಸನ, ಬೂದಿಹಾಳ, ಮೆಣಸಗಿ.. ಹೀಗೆ ನೆರೆಪೀಡಿತ ಯಾವ ಊರಿಗೆ ಹೋದರೂ ಜನರ ಗೋಳು ನಿಂತೇ ಇಲ್ಲ. ಮನೆ ನಿರ್ಮಾಣಕ್ಕೆ ಹಣ ನೀಡುವಾಗಲೇ ಗ್ರೇಡುಗಳ ಹೆಸರಿನಲ್ಲಿ ನಿಯಮಗಳ ಗೋಡೆಗಳು ಎದ್ದವು. ಮನೆ ಯಾವ ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದನ್ನು ವಿಂಗಡಿಸಲು ಎ, ಬಿ, ಮತ್ತು ಸಿ ಎಂದು ಮೂರು ಗ್ರೇಡ್‌ಗಳನ್ನು ಮಾಡಲಾಯಿತು. ಸಂಪೂರ್ಣ ಮನೆ ನೆಲಸಮವಾಗಿದ್ದರೆ ‘ಎ’ ಗ್ರೇಡ್‌ನಲ್ಲಿ ಅದಕ್ಕೆ ಪೂರ್ಣ ಪರಿಹಾರ, ಶೇ.50ರಷ್ಟು ಹಾನಿಯಾಗಿದ್ದರೆ ಅದಕ್ಕೆ ‘ಬಿ’ ಗ್ರೇಡ್‌ನಲ್ಲಿ ಶೇ.50 ಪರಿಹಾರ ಮತ್ತು ಶೇ.25ರಿಂದ 30ರಷ್ಟು ಹಾನಿಯಾಗಿದ್ದರೆ ‘ಸಿ’ ಗ್ರೇಡ್‌ನಲ್ಲಿ 25-30 ಸಾವಿರ ರೂ ನೀಡುವ ನಿಯಮ ಮಾಡಲಾಯಿತು.

ಮೊದಲನೆಯ ಕಂತೇನೋ ಬಂತು. ಆದರೆ ಇನ್ನು ಎಷ್ಟೋ ಜನರಿಗೆ ಎರಡನೇ ಕಂತು ಬರದೇ ಮನೆಗಳೆಲ್ಲ ಅರ್ಧಂಬರ್ಧ ರಿಪೇರಿಯಾಗಿ ನಿಂತಿವೆ. ಜಿಲ್ಲಾಧಿಕಾರಿ ಖಾತೆಯಲ್ಲಿ ಇನ್ನೂ 20 ಕೋಟಿ ರೂ ಉಳಿದಿದೆ. ಮೊದಲನೇ ಕಂತಿನ ಹಣದಲ್ಲಿ ಇಂತಿಷ್ಟು ಕಾಮಗಾರಿಯಾಗಿದ್ದರೆ ಮಾತ್ರ ಎರಡನೇ ಕಂತು ಎಂದು ಕ್ರೂರತನ ತೋರಲಾಗುತ್ತಿದೆ.

ಇವರು ನಿಯಮ ಮಾಡಿದ್ದು ಆರು ತಿಂಗಳ ಹಿಂದೆ. ಪ್ರತಿ ತಿಂಗಳೂ ಸಿಮೆಂಟ್, ಕಲ್ಲು, ಕಬ್ಬಿಣ, ನಿರ್ಮಾಣದ ಕೂಲಿ ಏರುತ್ತಲೇ ಇರುವಾಗ ಇವರು ಹೇಳಿದಷ್ಟು ಎತ್ತರಕ್ಕೆ ಮನೆ ತಂದು ನಿಲ್ಲಿಸಿದರಷ್ಟೇ ಇನ್ನೊಂದು ಕಂತು ಎನ್ನುವುದು ಅವೈಜ್ಞಾನಿಕ ಮತ್ತು ಹೊಣೆಗೇಡಿತನ.

ಕೊಣ್ಣೂರು ಗ್ರಾಮದಲ್ಲಿ ಸುಮಾರು 50 ಕ್ಕೂ ಹೆಚ್ಚು ಸಿ ಗ್ರೇಡ್ ಫಲಾನುಭವಿಗಳಿಗೆ ಒಂದನೆಯ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಆದರೆ ಎರಡನೇ ಕಂತು ಮರೀಚಿಕೆಯಾಗಿದೆ. ಹೀಗಾಗಿ ಫಲಾನುಭವಿಗಳ ಮನೆಗಳು ಅಪೂರ್ಣವಾಗಿವೆ. ಮನೆಗಳನ್ನು ಪೂರ್ಣ ಮಾಡಬೇಕೆಂದರೆ, ಲೋಕದಲ್ಲಿಲ್ಲದ ನಿಯಮ ತೋರಿಸುವ ಅಧಿಕಾರಿಗಳು ನಿರಾಶೆ ಮೂಡಿಸುತ್ತಿದ್ದಾರೆ. ಇಂತಹ ಆಪತ್ತಿನ ಸಮಯದಲ್ಲಿ ಮಧ್ಯಸ್ಥಿಕೆ ವಹಿಸಬೇಕಾದ ಜನಪ್ರತಿನಿಧಿಗಳು ಹತ್ತಿರ ಸುಳಿಯುತ್ತಿಲ್ಲ.

ನೆರೆಪ್ರವಾಹಕ್ಕೂ ಮುನ್ನ ನೆಮ್ಮದಿ ಹಾಗೂ ಸ್ವಾಭಿಮಾನದಿಂದ ಬದುಕು ಸಾಗಿಸುತ್ತಿದ್ದ ತಮ್ಮದೇ ತೆರಿಗೆ ಹಣಕ್ಕೆ ‘ಕಂತು’ ಎಂಬ ಹಾಳೆ ಸುತ್ತಿ ಭಿಕ್ಷೆಯಂತೆ ನೀಡುತ್ತಿರುವುದನ್ನು ಕಂಡು ಅಸಮಾಧಾನಗೊಂಡಿದ್ದಾರೆ.

ಮಾರ್ಚ್‌ನಲ್ಲೇನಾದರೂ ಅಕಾಲಿಕ ಮಳೆ ಸುರಿದರೆ ಈಗ ಮತ್ತೆ ಮನೆ ತುಂಬ ನೀರು ನಿಲ್ಲಲಿದೆ. ಇದ್ಯಾವುದರ ಪರಿವೆಯೂ ಇಲ್ಲದ ಜಿಲ್ಲಾಡಳಿತ ಫ್ಲಿಂಥು, ಜಿಪಿಎಸ್ಸು ಅಂತೆಲ್ಲ ಮಾತಾಡುತ್ತ ಕುಳಿತಿದೆ.

ಸಚಿವ ಸಿ.ಸಿ ಪಾಟೀಲ್‌

ರೋಣ ಮತ್ತು ನರಗುಂದದ ಎಲ್ಲ ಹಂತಗಳ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಜನರ ಪರವಾಗಿ ಧ್ವನಿ ಎತ್ತುವುದು ಈಗ ಅನಿವಾರ್ಯ. ಅವರನ್ನು ಆರಿಸಿದ್ದು ಇನ್ನೇತಕ್ಕೆ?


ಸರ್ವೆ ನಂ. 703 ಮತ್ತು 705ರಲ್ಲಿ 15*20 ವಿಸ್ತೀರ್ಣದ ನನ್ನ ಎರಡು ಮನೆ ಇದ್ದವು. 703ರ ಮನೆ ಪೂರ್ತಿ ಬಿದ್ದಿದ್ದರೆ, 705ರ ಮನೆ ಭಾಗಶ: ಬಿದ್ದಿತ್ತು. ಸರ್ವೆ ಮಾಡಲು ಬಂದವರಿಗೆ 705ರ ಮನೆ ಬೇಡ, ಪೂರ್ತಿ ಬಿದ್ದ 703ರ ಮನೆ ಪರಿಗಣಿಸಿ ಎಂದೆ. ಎರಡನ್ನೂ ಸರ್ವೇ ಮಾಡಿಕೊಂಡು ಹೋಗಿ, ಭಾಗಶ: ಬಿದ್ದ ಮನೆ ಆಯ್ಕೆ ಮಾಡಿದ್ದಾರೆ. ಈ ಕುರಿತು ಡಿಸಿವರೆಗೆ ದೂರು ಕೊಟ್ಟರೂ ಸರಿಪಡಿಸಿಲ್ಲ.
-ವೀರಪ್ಪ ದ್ಯಾವಣ್ಣವರ, ಕೊಣ್ಣೂರು


ನನ್ನ ಹೊಲ, ಮನೆ ಎರಡೂ ಹಾನಿಯಾಗಿವೆ. ಭಾಗಶ: ಹಾನಿ ಎಂದು ಮೊದಲ ಕಂತು 25 ಸಾವಿರ ರೂ. ನೀಡಿದರು. 6 ತಿಂಗಳಾದರೂ 2ನೇ ಕಂತು ನೀಡುತ್ತಿಲ್ಲ. ತಹಸೀಲ್ದಾರ್, ಡಿಸಿ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ.
– ಕೃಷ್ಣಪ್ಪ, ವಾಸನ

ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ನೆರೆ ಪರಿಹಾರಕ್ಕೆ 57 ಕೋಟಿ ರೂ. ಖರ್ಚು ಮಾಡಿದ್ದೇವೆ. ಇನ್ನೂ 20 ಕೋಟಿ ರೂ ಇದೆ. ಆದರೆ ಮನೆ ನಿರ್ಮಾಣ ಅಥವಾ ರಿಪೇರಿಗೆ ಮೊದಲ ಕಂತು ಪಡೆದ ಬಹುತೇಕರು ಅದನ್ನು ಪೂರ್ಣಗೊಳಿಸಿಲ್ಲ. ಫ್ಲಿಂಥ್‌ವರೆಗೂ ಬಂದರೆ 2ನೇ ಕಂತು ಬಿಡುಗಡೆ ಮಾಡುತ್ತೇವೆ, ಅವರೇ ಅವಸರ ಮಾಡುತ್ತಿಲ್ಲ. 10 ಕೋಟಿ ರೂ ಬೆಳೆ ಪರಿಹಾರ ನೇರವಾಗಿ ರೈತರ ಖಾತೆಗೆ ಹೋಗಿದೆ. ಕೆಲವು ತಾಂತ್ರಿಕ ಸಮಸ್ಯೆಯಿಂದ ಕೆಲವರಿಗೆ ತಲುಪಿಲ್ಲ. ಸರಿಪಡಿಸುತ್ತೇವೆ.
-ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...