Homeಮುಖಪುಟನೆರೆಯ ಹೊರೆ: ನೆಮ್ಮದಿಯಲ್ಲಿ ಒಂದೂ ಊರಿಲ್ಲ, ಆರು ತಿಂಗಳಾದರೂ ಸೂರಿಲ್ಲ

ನೆರೆಯ ಹೊರೆ: ನೆಮ್ಮದಿಯಲ್ಲಿ ಒಂದೂ ಊರಿಲ್ಲ, ಆರು ತಿಂಗಳಾದರೂ ಸೂರಿಲ್ಲ

- Advertisement -
- Advertisement -

ಗದಗ: ‘ಕರೆಕ್ಟ್ ಅಂದ್ರ ಕರೆಕ್ಟ್’ ಎಂದು ಅಳತೆಪಟ್ಟಿ ಹಿಡಿದು ಮನೆ ಕಾಮಗಾರಿಯನ್ನು ಅಳೆದವರಂತೆ ಆಡುತ್ತಿರುವ ಜಿಲ್ಲೆಯ ಆಡಳಿತಶಾಹಿ, ನೆರೆ ಪ್ರವಾಹ ಬಂದು ಏಳು ತಿಂಗಳಾಗುತ್ತ ಬಂದರೂ ಮನೆ ನಿರ್ಮಾಣಕ್ಕೆ ಅಥವಾ ರಿಪೇರಿಗೆ ಎರಡನೇ ಕಂತಿನ ಹಣ ನೀಡಲು ತಯಾರಿಲ್ಲ. ಆರು ತಿಂಗಳಾದರೂ ಹಲವಾರು ಊರುಗಳ ನೂರಾರು ಕುಟುಂಬಗಳು ಸುಭದ್ರ ಸೂರಿಲ್ಲದೇ ಜೀವನ ನಡೆಸುತ್ತಿವೆ.

ಈ ಕಡೆ ಜಮೀನಿನಲ್ಲಾದ ಕೊರೆತ, ರಸ್ತೆ ಸೇರಿದಂತೆ ಒಂದಿಲ್ಲೊಂದು ಸಮಸ್ಯೆ ಇದ್ದೇ ಇದೆ. ಹೀಗಾಗಿ ಮಲಪ್ರಭೆ, ಬೆಣ್ಣೆಹಳ್ಳ ತಣ್ಣಗಾಗಿ ಒಣಗಿದರೂ, ನಮ್ಮ ಅಧಿಕಾರಿಗಳ ಒಣ ಉಸಾಬರಿ ಮಾತ್ರ ನಿಂತಿಲ್ಲ.

ಗಣಿ, ಭೂವಿಜ್ಞಾನ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲರ ನರಗುಂದ ಕ್ಷೇತ್ರ ನೆರೆಪ್ರವಾಹಕ್ಕೆ ಸಿಕ್ಕು ನಜ್ಜುಗುಜ್ಜಾಗಿದೆ. ಆದರೆ ಪಾಟೀಲರು ಇದರ ಬಗ್ಗೆ ತೆಲೆ ಕೆಡಿಸಿಕೊಂಡಿಲ್ಲ. ಪರಿಹಾರ ತಂದಿದ್ದಿನಲ್ಲ ಎಂದು ಮನೆಯಿಂದ ತಂದವರಂತೆ ಮಾತಾಡುತ್ತಾರೆ ಹೊರತು, ಆ ಪರಿಹಾರ ಸಂತ್ರಸ್ತರಿಗೆ ತಲುಪಿತೋ ಇಲ್ಲವೋ ಎಂಬ ಬಗ್ಗೆ ಕಾಳಜಿಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೆ ತಾವು ಗಣಿ ಸಚಿವ ಎಂಬುದು ಇಂಪಾರ್ಟೆಂಟ್, ಅದಕ್ಕೇ ಅವರು ಜಿಲ್ಲೆಯ ಜೀವನಾಡಿ ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಹೊಂಚು ಹಾಕಿ ಕುಳಿತಿರುವ ಬಲ್ಡೊಟಾ ಮತ್ತು ಪೊಸ್ಕೊಗಳಂತಹ ಕಂಪನಿಗಳ ಬಗ್ಗೆ ಸಾಫ್ಟ್‌ ಕಾರ್ನರ್ ಹೊಂದಿದ್ದಾರೆ. ಗಣಿ ಖಾತೆ ನಿಭಾಯಿಸಬೇಕಲ್ಲ, ಪಾಪ, ಅವರಿಗೆ ಜಿಲ್ಲಾ ಉಸ್ತುವಾರಿ ಮಾಡಕು ಟೈಮ್ ಇಲ್ಲವಂತೆ.

 

ತಮ್ಮ ಹಕ್ಕಿನ ಹಣಕ್ಕೆ ಕಾದವರ ಎದುರು ಅಧಿಕಾರಿಗಳು ತಾಂತ್ರಿಕ ತೊಂದರೆ, ಮೆಜರ್‌ಮೆಂಟು, ಫ್ಲಿಂಥು, ನಿಯಮ ಎನ್ನುವುದಿದೆಯಲ್ಲ, ಅದಂತೂ ಬದುಕುವ ಹಕ್ಕಿನ ಮೇಲೆ ದಾಳಿ ಮಾಡಿದಂತೆ.

ಜಿಲ್ಲೆಯ ನೆರೆಪೀಡಿತ ತಾಲೂಕುಗಳಾದ ನರಗುಂದ ಮತ್ತು ರೋಣಗಳಲ್ಲಿ ಅಧಿಕಾರಶಾಹಿಯ ‘ಕಂತಿನ ಲೆಕ್ಕಕ್ಕೆ’ ಹೈರಾಣಾದವರು ಡಿಸಿಯವರಿಗೆ ದೂರು ತಲುಪಿಸಿದರೂ ಪ್ರಯೋಜನವಾಗಿಲ್ಲ.

ಅಂತೂ ಇಂತೂ ಪರಿಹಾರ ಬಂತು!
ಆರಂಭದಲ್ಲಿ ಈ ಸರ್ಕಾರದಿಂದ ನೆರೆ ಪರಿಹಾರ ಸಿಗುವುದೋ ಇಲ್ಲವೋ ಎಂಬ ಅನುಮಾನ, ಆತಂಕಗಳಿದ್ದವು. ಆದರೂ ಅಂತೂ ಇಂತೂ ಪರಿಹಾರ ಬಂತು. ಆದರೀಗ ಮುಳ್ಳಾಗಿರುವುದು ಕಂತು!

ಕೊಣ್ಣೂರು, ವಾಸನ, ಬೂದಿಹಾಳ, ಮೆಣಸಗಿ.. ಹೀಗೆ ನೆರೆಪೀಡಿತ ಯಾವ ಊರಿಗೆ ಹೋದರೂ ಜನರ ಗೋಳು ನಿಂತೇ ಇಲ್ಲ. ಮನೆ ನಿರ್ಮಾಣಕ್ಕೆ ಹಣ ನೀಡುವಾಗಲೇ ಗ್ರೇಡುಗಳ ಹೆಸರಿನಲ್ಲಿ ನಿಯಮಗಳ ಗೋಡೆಗಳು ಎದ್ದವು. ಮನೆ ಯಾವ ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದನ್ನು ವಿಂಗಡಿಸಲು ಎ, ಬಿ, ಮತ್ತು ಸಿ ಎಂದು ಮೂರು ಗ್ರೇಡ್‌ಗಳನ್ನು ಮಾಡಲಾಯಿತು. ಸಂಪೂರ್ಣ ಮನೆ ನೆಲಸಮವಾಗಿದ್ದರೆ ‘ಎ’ ಗ್ರೇಡ್‌ನಲ್ಲಿ ಅದಕ್ಕೆ ಪೂರ್ಣ ಪರಿಹಾರ, ಶೇ.50ರಷ್ಟು ಹಾನಿಯಾಗಿದ್ದರೆ ಅದಕ್ಕೆ ‘ಬಿ’ ಗ್ರೇಡ್‌ನಲ್ಲಿ ಶೇ.50 ಪರಿಹಾರ ಮತ್ತು ಶೇ.25ರಿಂದ 30ರಷ್ಟು ಹಾನಿಯಾಗಿದ್ದರೆ ‘ಸಿ’ ಗ್ರೇಡ್‌ನಲ್ಲಿ 25-30 ಸಾವಿರ ರೂ ನೀಡುವ ನಿಯಮ ಮಾಡಲಾಯಿತು.

ಮೊದಲನೆಯ ಕಂತೇನೋ ಬಂತು. ಆದರೆ ಇನ್ನು ಎಷ್ಟೋ ಜನರಿಗೆ ಎರಡನೇ ಕಂತು ಬರದೇ ಮನೆಗಳೆಲ್ಲ ಅರ್ಧಂಬರ್ಧ ರಿಪೇರಿಯಾಗಿ ನಿಂತಿವೆ. ಜಿಲ್ಲಾಧಿಕಾರಿ ಖಾತೆಯಲ್ಲಿ ಇನ್ನೂ 20 ಕೋಟಿ ರೂ ಉಳಿದಿದೆ. ಮೊದಲನೇ ಕಂತಿನ ಹಣದಲ್ಲಿ ಇಂತಿಷ್ಟು ಕಾಮಗಾರಿಯಾಗಿದ್ದರೆ ಮಾತ್ರ ಎರಡನೇ ಕಂತು ಎಂದು ಕ್ರೂರತನ ತೋರಲಾಗುತ್ತಿದೆ.

ಇವರು ನಿಯಮ ಮಾಡಿದ್ದು ಆರು ತಿಂಗಳ ಹಿಂದೆ. ಪ್ರತಿ ತಿಂಗಳೂ ಸಿಮೆಂಟ್, ಕಲ್ಲು, ಕಬ್ಬಿಣ, ನಿರ್ಮಾಣದ ಕೂಲಿ ಏರುತ್ತಲೇ ಇರುವಾಗ ಇವರು ಹೇಳಿದಷ್ಟು ಎತ್ತರಕ್ಕೆ ಮನೆ ತಂದು ನಿಲ್ಲಿಸಿದರಷ್ಟೇ ಇನ್ನೊಂದು ಕಂತು ಎನ್ನುವುದು ಅವೈಜ್ಞಾನಿಕ ಮತ್ತು ಹೊಣೆಗೇಡಿತನ.

ಕೊಣ್ಣೂರು ಗ್ರಾಮದಲ್ಲಿ ಸುಮಾರು 50 ಕ್ಕೂ ಹೆಚ್ಚು ಸಿ ಗ್ರೇಡ್ ಫಲಾನುಭವಿಗಳಿಗೆ ಒಂದನೆಯ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಆದರೆ ಎರಡನೇ ಕಂತು ಮರೀಚಿಕೆಯಾಗಿದೆ. ಹೀಗಾಗಿ ಫಲಾನುಭವಿಗಳ ಮನೆಗಳು ಅಪೂರ್ಣವಾಗಿವೆ. ಮನೆಗಳನ್ನು ಪೂರ್ಣ ಮಾಡಬೇಕೆಂದರೆ, ಲೋಕದಲ್ಲಿಲ್ಲದ ನಿಯಮ ತೋರಿಸುವ ಅಧಿಕಾರಿಗಳು ನಿರಾಶೆ ಮೂಡಿಸುತ್ತಿದ್ದಾರೆ. ಇಂತಹ ಆಪತ್ತಿನ ಸಮಯದಲ್ಲಿ ಮಧ್ಯಸ್ಥಿಕೆ ವಹಿಸಬೇಕಾದ ಜನಪ್ರತಿನಿಧಿಗಳು ಹತ್ತಿರ ಸುಳಿಯುತ್ತಿಲ್ಲ.

ನೆರೆಪ್ರವಾಹಕ್ಕೂ ಮುನ್ನ ನೆಮ್ಮದಿ ಹಾಗೂ ಸ್ವಾಭಿಮಾನದಿಂದ ಬದುಕು ಸಾಗಿಸುತ್ತಿದ್ದ ತಮ್ಮದೇ ತೆರಿಗೆ ಹಣಕ್ಕೆ ‘ಕಂತು’ ಎಂಬ ಹಾಳೆ ಸುತ್ತಿ ಭಿಕ್ಷೆಯಂತೆ ನೀಡುತ್ತಿರುವುದನ್ನು ಕಂಡು ಅಸಮಾಧಾನಗೊಂಡಿದ್ದಾರೆ.

ಮಾರ್ಚ್‌ನಲ್ಲೇನಾದರೂ ಅಕಾಲಿಕ ಮಳೆ ಸುರಿದರೆ ಈಗ ಮತ್ತೆ ಮನೆ ತುಂಬ ನೀರು ನಿಲ್ಲಲಿದೆ. ಇದ್ಯಾವುದರ ಪರಿವೆಯೂ ಇಲ್ಲದ ಜಿಲ್ಲಾಡಳಿತ ಫ್ಲಿಂಥು, ಜಿಪಿಎಸ್ಸು ಅಂತೆಲ್ಲ ಮಾತಾಡುತ್ತ ಕುಳಿತಿದೆ.

ಸಚಿವ ಸಿ.ಸಿ ಪಾಟೀಲ್‌

ರೋಣ ಮತ್ತು ನರಗುಂದದ ಎಲ್ಲ ಹಂತಗಳ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಜನರ ಪರವಾಗಿ ಧ್ವನಿ ಎತ್ತುವುದು ಈಗ ಅನಿವಾರ್ಯ. ಅವರನ್ನು ಆರಿಸಿದ್ದು ಇನ್ನೇತಕ್ಕೆ?


ಸರ್ವೆ ನಂ. 703 ಮತ್ತು 705ರಲ್ಲಿ 15*20 ವಿಸ್ತೀರ್ಣದ ನನ್ನ ಎರಡು ಮನೆ ಇದ್ದವು. 703ರ ಮನೆ ಪೂರ್ತಿ ಬಿದ್ದಿದ್ದರೆ, 705ರ ಮನೆ ಭಾಗಶ: ಬಿದ್ದಿತ್ತು. ಸರ್ವೆ ಮಾಡಲು ಬಂದವರಿಗೆ 705ರ ಮನೆ ಬೇಡ, ಪೂರ್ತಿ ಬಿದ್ದ 703ರ ಮನೆ ಪರಿಗಣಿಸಿ ಎಂದೆ. ಎರಡನ್ನೂ ಸರ್ವೇ ಮಾಡಿಕೊಂಡು ಹೋಗಿ, ಭಾಗಶ: ಬಿದ್ದ ಮನೆ ಆಯ್ಕೆ ಮಾಡಿದ್ದಾರೆ. ಈ ಕುರಿತು ಡಿಸಿವರೆಗೆ ದೂರು ಕೊಟ್ಟರೂ ಸರಿಪಡಿಸಿಲ್ಲ.
-ವೀರಪ್ಪ ದ್ಯಾವಣ್ಣವರ, ಕೊಣ್ಣೂರು


ನನ್ನ ಹೊಲ, ಮನೆ ಎರಡೂ ಹಾನಿಯಾಗಿವೆ. ಭಾಗಶ: ಹಾನಿ ಎಂದು ಮೊದಲ ಕಂತು 25 ಸಾವಿರ ರೂ. ನೀಡಿದರು. 6 ತಿಂಗಳಾದರೂ 2ನೇ ಕಂತು ನೀಡುತ್ತಿಲ್ಲ. ತಹಸೀಲ್ದಾರ್, ಡಿಸಿ ಗಮನಕ್ಕೂ ತಂದರೂ ಪ್ರಯೋಜನವಾಗಿಲ್ಲ.
– ಕೃಷ್ಣಪ್ಪ, ವಾಸನ

ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ನೆರೆ ಪರಿಹಾರಕ್ಕೆ 57 ಕೋಟಿ ರೂ. ಖರ್ಚು ಮಾಡಿದ್ದೇವೆ. ಇನ್ನೂ 20 ಕೋಟಿ ರೂ ಇದೆ. ಆದರೆ ಮನೆ ನಿರ್ಮಾಣ ಅಥವಾ ರಿಪೇರಿಗೆ ಮೊದಲ ಕಂತು ಪಡೆದ ಬಹುತೇಕರು ಅದನ್ನು ಪೂರ್ಣಗೊಳಿಸಿಲ್ಲ. ಫ್ಲಿಂಥ್‌ವರೆಗೂ ಬಂದರೆ 2ನೇ ಕಂತು ಬಿಡುಗಡೆ ಮಾಡುತ್ತೇವೆ, ಅವರೇ ಅವಸರ ಮಾಡುತ್ತಿಲ್ಲ. 10 ಕೋಟಿ ರೂ ಬೆಳೆ ಪರಿಹಾರ ನೇರವಾಗಿ ರೈತರ ಖಾತೆಗೆ ಹೋಗಿದೆ. ಕೆಲವು ತಾಂತ್ರಿಕ ಸಮಸ್ಯೆಯಿಂದ ಕೆಲವರಿಗೆ ತಲುಪಿಲ್ಲ. ಸರಿಪಡಿಸುತ್ತೇವೆ.
-ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...