Homeಕರ್ನಾಟಕಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೇರೆ ಬೆನ್ನಿನ ಹಿಂದೆ ಬಿದ್ದಿದ್ದಾರೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಮೈಸೂರು ಭಾಗದ ಎರಡನೇ ಹಂತದ ಒಕ್ಕಲಿಗರ ನಾಯಕ ಡಿ.ಕೆ ಶಿವಕುಮಾರ್ ಉತ್ತರದ ಭಾಗದಲ್ಲಿ ಸಪೋರ್ಟ್ ಬೇಸ್ ರೆಡಿ ಮಾಡಿಕೊಳ್ಳುತ್ತಿದ್ದಾರಾ? ಕುಂದಗೋಳ ಉಪ ಚುನಾವಣೆ ಗೆಲ್ಲಿಸುವ ಜವಾಬ್ದಾರಿಯನ್ನು ಹೊತ್ತಿರುವ ಅವರು, ಇದು ತಮ್ಮದೇ ಚುನಾವಣೆ ಎಂಬಂತೆ ಸಕ್ರಿಯರಾಗಿದ್ದಾರೆ. ಈ ನಡುವೆ ನಿನ್ನೆ (ಬುಧವಾರ) ಅವರು, ಲಕ್ಷ್ನೇಶ್ವರ ಹತ್ತಿರದ ಮುಕ್ತಿಮಂದಿರಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಇದರ ಹಿಂದೆ ಪಂಚಾಚಾರ್ಯರ ಆಶಿರ್ವಾದವೂ ಇದೆಯಾ? ಯಡಿಯೂರಪ್ಪರಿಗೆ ಇದು ಆತಂಕದ ವಿಷಯವಾ? ತನ್ನ ಸ್ಪರ್ಧಿ ಎಂ.ಬಿ. ಪಾಟೀಲರಿಗೂ ಡಿಕೆಶಿ ಚಾಲೆಂಜ್ ಮಾಡ್ತಿದ್ದೀರಾ? ಧರ್ಮ, ಜಾತಿಗಳ ಹೆಸರಲ್ಲಿ ನಡೆಯುವ ಕ್ಷುಲ್ಲಕ ರಾಜಕೀಯದ ಒಂದು ಅಸಹ್ಯ ಝಲಕ್ ಇದು

ನೇರ ವಿಷಯಕ್ಕೆ ಬಂದರೆ, ಉತ್ರರ ಕರ್ನಾಟಕದಲ್ಲಿ ಒಂದು ಸಣ್ಣ ಸಪೋರ್ಟ್ ಬೇಸ್ ಸೃಷ್ಟಿಸಿಕೊಳ್ಳಲು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಯತ್ನಿಸುತ್ತಿರುವ ಎಲ್ಲ ಲಕ್ಷಣಗಳೂ ಅವರ ಇತ್ತೀಚಿನ ನಡೆಯಲ್ಲಿ ಕಂಡು ಬರುತ್ತಿವೆ.

ಕುಂದಗೋಳ ಕ್ಷೇತ್ರದ ಜವಾಬ್ದಾರಿ ಅವರ ಮೇಲಿದೆ. ಅದಕ್ಕೆ ಬೇಕಾದುದೆಲ್ಲವನ್ನೂ ಮಾಡುತ್ತಲೇ, ಇಲ್ಲಿ ಅವರು ಒಂದಿಷ್ಟು ‘ಭವಿಷ್ಯ ನಿರ್ಮಾಣ’ದ ಕೆಲಸದಲ್ಲೂ ನಿರತರಾಗಿದ್ದಾರೆ. ಇಲ್ಲಿನ ಹಲವಾರು ಲೋಕಲ್ ನಾಯಕರ ಜೊತೆ ಸೌಹಾರ್ದ ಸಂಬಂಧವನ್ನು ಕಟ್ಟಿಕೊಳ್ಳುತ್ತಲೇ, ಒಟ್ಟೂ ಈ ಭಾಗದಲ್ಲಿ ತಮ್ಮನ್ನು ಸಪೋರ್ಟ್ ಮಾಡುವ ಒಂದು ರಾಜಕೀಯ ಗುಂಪು ಮತ್ತು ಧಾರ್ಮಿಕ ನಾಯಕರ ಗುಂಪು ಇರಲೆಂದು ಅವರು ಕಾರ್ಯಾಚರಣೆ ನಡೆಸಿದ್ದು ಎದ್ದು ಕಾಣುತ್ತಿದೆ.

ಇದ್ಹೇಗೆ ಯಡಿಯೂರಪ್ಪ ಆತಂಕಕ್ಕೆ ಕಾರಣವಾಗುತ್ತದೆ? ಏಕೆಂದರೆ, ಯಡಿಯೂರಪ್ಪ  ಲಿಂಗಾಯತರ ಯಾವ ಪಂಗಡಗಳನ್ನು ನೆಚ್ಚಿದ್ದರೋ ಅದೇ ಪಂಗಡಗಳ ಹಿಂದೆ ಡಿ.ಕೆ ಶಿವಕುಮಾರ್ ಬಿದ್ದಂತಿದೆ. ಈಗ ಮುಕ್ತಿಮಂದಿರಕ್ಕೆ ಭೇಟಿ ಕೊಟ್ಟಾಗ ಅವರು ಹೇಳಿದ್ದು: ‘ನನಗೆ ಈ ದೇವರ ಮೇಲೆ, ದೇವಸ್ಥಾನದ ಮೇಲೆ ನಂಬಿಕೆಯಿದೆ’ ಎಂದು. ಯಾವ ದೇವರು? ಅವರಿಗೇ ಗೊತ್ತಿಲ್ಲ. ಭಕ್ತರಿಗೆ ಯಾವ ದೇವರಾದರೇನು ಎಂದು ಸುಮ್ಮನಾಗೋಣ.

ಇಲ್ಲಿ ಐತೆ ಪಾಲಿಟಿಕ್ಸ್!

ಆಟದ ಮಸಲತ್ತೇ ಇಲ್ಲಿದೆ. ಮೊನ್ನೆ ಮುಕ್ತಿಮಂದಿರಕ್ಕೆ ಡಿಕೆಶಿ ಭೇಟಿ ಕೊಟ್ಟರಲ್ಲ ಅದು ಪುಟ್ಟಾಪೂರಾ ಪಂಚಾಚಾರ್ಯರ ಅಂದರೆ ಕರ್ಮಠ ವೀರಶೈವರ/ಜಂಗಮರ ಮಂದಿರ. ಇದರ ಹಿಂದೆ ಇರುವುದು ಪಂಚಾಚಾರ್ಯ ಜಗದ್ಗುರು ರಂಭಾಪುರಿ ಸ್ವಾಮೀಜಿ! ಯಡಿಯೂರಪ್ಪರ ಹಿಡನ್ ರಿಲಿಜಿಯಸ್ ಗುರು ಇವರು… ಅವರನ್ನೇ ಡಿಕೆಶಿ ಬುಟ್ಟಿಗೆ ಹಾಕಿಕೊಂಡರಾ ಎಂಬ ಪ್ರಶ್ನೆ ಭವಿಷ್ಯದ್ದು.

ಎಂ.ಬಿ. ಪಾಟೀಲ್ ವರ್ಸಸ್ ಡಿಕೆಶಿ?

ಇಲ್ಲಿ ವಿಚಿತ್ರ ಮತ್ತು ಅಸಹ್ಯದ ಧರ್ಮೋ-ರಾಜಕೀಯದ ವಿದ್ಯಮಾನ ಜರುಗುತ್ತಿವೆ. ಗೃಹ ಸಚಿವ ಎಂ.ಬಿ. ಪಾಟೀಲ್ ಲಿಂಗಾಯತ ಪ್ರತ್ಯೇಕ ಧರ್ಮದ ಪರ ಬಹಿರಂಗವಾಗಿ ನಿಂತಿದ್ದರು. ನಾಲ್ಕು ದಿನಗಳ ಹಿಂದೆ ಅವರು, ಪ್ರತ್ಯೇಕ ಧರ್ಮ ವಿರೋಧಿಸಿದ್ದ ಪಂಚಾಚಾರ್ಯರ ಶಾಖಾಮಠಕ್ಕೆ ಅಂದರೆ ಮುಕ್ತಿಮಂದಿರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಸ್ವಾಮಿ ಅವರನ್ನು ಸನ್ಮಾನವನ್ನೂ ಮಾಡಿತ್ತು. ವೀರಶೈವ ಮಹಾಸಭಾ ಆ ಸ್ವಾಮಿ ವಿರುದ್ಧ ಕಿಡಿ ಕಾರಿತ್ತು! ಆದಾದ ಎರಡೇ ದಿನಕ್ಕೆ ಅಲ್ಲಿ ಡಿ.ಕೆ ಶಿವಕುಮಾರರಿಂದ ಭಕ್ತಿಪೂರ್ವಕ ಪೂಜೆ!

ಡಿಕೇಶಿ, ರಂಭಾಪುರಿ ದೋಸ್ತಿ

ಇದೆಲ್ಲ ಬಿಡಿ, ರಾಜಕಾರಣಕ್ಕೆ ಬರೋಣ.. ಕೇವಲ ನೂರಾರು ಕೋಟಿ ವ್ಯಯಿಸಿ ಬಿಟ್ಟರೆ ಸಿಎಂ ಆಗಲ್ಲ ಎಂದು ಡಿ.ಕೆ ಶಿವಕುಮಾರ್‍ಗೆ ಈಗ ಅರಿವಾದಂತಿದೆ. ಈಗಲ್ಲ, ಮುಂದಿನ ಚುನಾವಣೆ ವೇಳೆಗೆ ರಾಜ್ಯದಾದ್ಯಂತ ಸಪೋರ್ಟ್ ಬೇಸ್ ಹೊಂದಲು ಅವರು ಪ್ರಯತ್ನ ಪಡುತ್ತಿದ್ದಾರೆ. 

ಆರು ತಿಂಗಳ ಹಿಂದೆ  ಇದೇ ಲಕ್ಷ್ಮೇಶ್ವರದಲ್ಲಿ ರಂಭಾಪುರಿ ‘ಜಗದ್ಗುರು’ವಿನ ಸಮಾರಂಭದಲ್ಲಿ  ಭಾವಹಿಸಿದ್ದ ಡಿ.ಕೆ. ಶಿವಕುಮಾರ್, ‘ಪ್ರತ್ಯೇಕ ಧರ್ಮ ಬೆಂಬಲಿಸಿದ್ದು ಕಾಂಗ್ರೆಸ್‍ನ ತಪ್ಪು’ ಎಂದಿದ್ದರು. ಆಗ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ತರಾಟೆಗೆ ತೆಗೆದುಕೊಂಡ ಮೇಲೆ ವಿಷಾದ ವ್ಯಕ್ತಪಡಿಸಿದ್ದರು.

ತಿಂಗಳ ಹಿಂದಷ್ಟೇ ಡಿಕೆಶಿ ಲಿಂಗಾಯತ ಧರ್ಮದ ಬಗ್ಗೆ ಎಲ್ಲೊ ಮಾತಾಡಿದ್ದನ್ನು ಪ್ರಸ್ತಾಪಿಸಿದ್ದ ಗೃಹ ಸಚಿವ ‘ಅಂವಂಗೇನು ಗೊತ್ತು ಬಸವ ಧರ್ಮ, ಮೂರ್ಖ’ ಎಂದು ಡಿಕೆಶಿಯನ್ನು ಏಕವಚನದಲ್ಲಿ ಬೈದಿದ್ದರು. ಬಹುಶಃ ಇದು, ಎರಡನೇ ಹಂತದ ನಾಯಕರಲ್ಲಿ ಮುಖ್ಯಮಂತ್ರಿಯಾಗುವ ಹಂಬಲವುಳ್ಳವರ ಜಿದ್ದಾಜಿದ್ದಿಯೇ?
ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೆನ್ನಿನ ಹಿಂದೆ ಬಿದ್ದಿರುವಾಗ, ಡಿಕೆಶಿ ಮತ್ತು ಎಂಬಿ ಪಾಟೀಲ್ ಕೂಡ ತಮ್ಮ ಬೇಸ್ ಅಲುಗಾಡಿಸುತ್ತಿದ್ದಾರೆಯೇ ಎಂಬ ಭಯ ಅವರಲ್ಲಿ ಕಾಡುತ್ತಿದೆಯೇ?
ಇನ್ನು ಬಾದಮಿಯಿಂದ ಸ್ಪರ್ಧಿಸಿ ಗೆದ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಉತ್ತರ ಕರ್ನಾಟಕಕ್ಕೂ ಲೀಡರ್ ಆಗುವ ಪಯಣದ ಹಾದಿಯಲ್ಲಿ ಅರ್ಧ ಸಾಗಿ ಆಗಿದೆ ಎಂದೇ ಹೇಳುತ್ತಿದ್ದಾರೆ. ಮುಖ್ಯವಾಗಿ ಅಹಿಂದ ಜೊತೆಗೆ ಎಲ್ಲಾ ಸಮುದಾಯದ ಜನರ ಮೇಲೂ ಪ್ರಭಾವ ಬೀರಲು ಅವರು ಶುರುವಚ್ಚಿಕೊಂಡಿದ್ದಾರೆ. ಕೊಪ್ಪಳದಲ್ಲಿ ಕುರುಬ ಸಮುದಾಯದವರಿಗೆ ಟಿಕೆಟ್ ನೀಡಿ ಶತಯಗತಾಯ ಗೆಲ್ಲಿಸಲು ಶ್ರಮ ಹಾಕಿದ್ದಾರೆ. ಇನ್ನೊಂದು ಕಡೆ ಸಿದ್ದರಾಮಯ್ಯನವರ ಕ್ಯಾಂಡಿಡೇಟ್ ಬಾಗಲಕೋಟೆಯ ಆಕ್ಟಿವ್ ಹುಡುಗಿ ವೀಣಾ ಕಾಶೆಪ್ಪನವರ್ ಈಗಾಗಲೇ ಗೆದ್ದಾಗಿದೆ ಎಂದು ಹೇಳಲಾಗುತ್ತಿದೆ.
ಇದೆಲ್ಲಾ ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...