Homeಕರ್ನಾಟಕಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೇರೆ ಬೆನ್ನಿನ ಹಿಂದೆ ಬಿದ್ದಿದ್ದಾರೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಮೈಸೂರು ಭಾಗದ ಎರಡನೇ ಹಂತದ ಒಕ್ಕಲಿಗರ ನಾಯಕ ಡಿ.ಕೆ ಶಿವಕುಮಾರ್ ಉತ್ತರದ ಭಾಗದಲ್ಲಿ ಸಪೋರ್ಟ್ ಬೇಸ್ ರೆಡಿ ಮಾಡಿಕೊಳ್ಳುತ್ತಿದ್ದಾರಾ? ಕುಂದಗೋಳ ಉಪ ಚುನಾವಣೆ ಗೆಲ್ಲಿಸುವ ಜವಾಬ್ದಾರಿಯನ್ನು ಹೊತ್ತಿರುವ ಅವರು, ಇದು ತಮ್ಮದೇ ಚುನಾವಣೆ ಎಂಬಂತೆ ಸಕ್ರಿಯರಾಗಿದ್ದಾರೆ. ಈ ನಡುವೆ ನಿನ್ನೆ (ಬುಧವಾರ) ಅವರು, ಲಕ್ಷ್ನೇಶ್ವರ ಹತ್ತಿರದ ಮುಕ್ತಿಮಂದಿರಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಇದರ ಹಿಂದೆ ಪಂಚಾಚಾರ್ಯರ ಆಶಿರ್ವಾದವೂ ಇದೆಯಾ? ಯಡಿಯೂರಪ್ಪರಿಗೆ ಇದು ಆತಂಕದ ವಿಷಯವಾ? ತನ್ನ ಸ್ಪರ್ಧಿ ಎಂ.ಬಿ. ಪಾಟೀಲರಿಗೂ ಡಿಕೆಶಿ ಚಾಲೆಂಜ್ ಮಾಡ್ತಿದ್ದೀರಾ? ಧರ್ಮ, ಜಾತಿಗಳ ಹೆಸರಲ್ಲಿ ನಡೆಯುವ ಕ್ಷುಲ್ಲಕ ರಾಜಕೀಯದ ಒಂದು ಅಸಹ್ಯ ಝಲಕ್ ಇದು

ನೇರ ವಿಷಯಕ್ಕೆ ಬಂದರೆ, ಉತ್ರರ ಕರ್ನಾಟಕದಲ್ಲಿ ಒಂದು ಸಣ್ಣ ಸಪೋರ್ಟ್ ಬೇಸ್ ಸೃಷ್ಟಿಸಿಕೊಳ್ಳಲು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಯತ್ನಿಸುತ್ತಿರುವ ಎಲ್ಲ ಲಕ್ಷಣಗಳೂ ಅವರ ಇತ್ತೀಚಿನ ನಡೆಯಲ್ಲಿ ಕಂಡು ಬರುತ್ತಿವೆ.

ಕುಂದಗೋಳ ಕ್ಷೇತ್ರದ ಜವಾಬ್ದಾರಿ ಅವರ ಮೇಲಿದೆ. ಅದಕ್ಕೆ ಬೇಕಾದುದೆಲ್ಲವನ್ನೂ ಮಾಡುತ್ತಲೇ, ಇಲ್ಲಿ ಅವರು ಒಂದಿಷ್ಟು ‘ಭವಿಷ್ಯ ನಿರ್ಮಾಣ’ದ ಕೆಲಸದಲ್ಲೂ ನಿರತರಾಗಿದ್ದಾರೆ. ಇಲ್ಲಿನ ಹಲವಾರು ಲೋಕಲ್ ನಾಯಕರ ಜೊತೆ ಸೌಹಾರ್ದ ಸಂಬಂಧವನ್ನು ಕಟ್ಟಿಕೊಳ್ಳುತ್ತಲೇ, ಒಟ್ಟೂ ಈ ಭಾಗದಲ್ಲಿ ತಮ್ಮನ್ನು ಸಪೋರ್ಟ್ ಮಾಡುವ ಒಂದು ರಾಜಕೀಯ ಗುಂಪು ಮತ್ತು ಧಾರ್ಮಿಕ ನಾಯಕರ ಗುಂಪು ಇರಲೆಂದು ಅವರು ಕಾರ್ಯಾಚರಣೆ ನಡೆಸಿದ್ದು ಎದ್ದು ಕಾಣುತ್ತಿದೆ.

ಇದ್ಹೇಗೆ ಯಡಿಯೂರಪ್ಪ ಆತಂಕಕ್ಕೆ ಕಾರಣವಾಗುತ್ತದೆ? ಏಕೆಂದರೆ, ಯಡಿಯೂರಪ್ಪ  ಲಿಂಗಾಯತರ ಯಾವ ಪಂಗಡಗಳನ್ನು ನೆಚ್ಚಿದ್ದರೋ ಅದೇ ಪಂಗಡಗಳ ಹಿಂದೆ ಡಿ.ಕೆ ಶಿವಕುಮಾರ್ ಬಿದ್ದಂತಿದೆ. ಈಗ ಮುಕ್ತಿಮಂದಿರಕ್ಕೆ ಭೇಟಿ ಕೊಟ್ಟಾಗ ಅವರು ಹೇಳಿದ್ದು: ‘ನನಗೆ ಈ ದೇವರ ಮೇಲೆ, ದೇವಸ್ಥಾನದ ಮೇಲೆ ನಂಬಿಕೆಯಿದೆ’ ಎಂದು. ಯಾವ ದೇವರು? ಅವರಿಗೇ ಗೊತ್ತಿಲ್ಲ. ಭಕ್ತರಿಗೆ ಯಾವ ದೇವರಾದರೇನು ಎಂದು ಸುಮ್ಮನಾಗೋಣ.

ಇಲ್ಲಿ ಐತೆ ಪಾಲಿಟಿಕ್ಸ್!

ಆಟದ ಮಸಲತ್ತೇ ಇಲ್ಲಿದೆ. ಮೊನ್ನೆ ಮುಕ್ತಿಮಂದಿರಕ್ಕೆ ಡಿಕೆಶಿ ಭೇಟಿ ಕೊಟ್ಟರಲ್ಲ ಅದು ಪುಟ್ಟಾಪೂರಾ ಪಂಚಾಚಾರ್ಯರ ಅಂದರೆ ಕರ್ಮಠ ವೀರಶೈವರ/ಜಂಗಮರ ಮಂದಿರ. ಇದರ ಹಿಂದೆ ಇರುವುದು ಪಂಚಾಚಾರ್ಯ ಜಗದ್ಗುರು ರಂಭಾಪುರಿ ಸ್ವಾಮೀಜಿ! ಯಡಿಯೂರಪ್ಪರ ಹಿಡನ್ ರಿಲಿಜಿಯಸ್ ಗುರು ಇವರು… ಅವರನ್ನೇ ಡಿಕೆಶಿ ಬುಟ್ಟಿಗೆ ಹಾಕಿಕೊಂಡರಾ ಎಂಬ ಪ್ರಶ್ನೆ ಭವಿಷ್ಯದ್ದು.

ಎಂ.ಬಿ. ಪಾಟೀಲ್ ವರ್ಸಸ್ ಡಿಕೆಶಿ?

ಇಲ್ಲಿ ವಿಚಿತ್ರ ಮತ್ತು ಅಸಹ್ಯದ ಧರ್ಮೋ-ರಾಜಕೀಯದ ವಿದ್ಯಮಾನ ಜರುಗುತ್ತಿವೆ. ಗೃಹ ಸಚಿವ ಎಂ.ಬಿ. ಪಾಟೀಲ್ ಲಿಂಗಾಯತ ಪ್ರತ್ಯೇಕ ಧರ್ಮದ ಪರ ಬಹಿರಂಗವಾಗಿ ನಿಂತಿದ್ದರು. ನಾಲ್ಕು ದಿನಗಳ ಹಿಂದೆ ಅವರು, ಪ್ರತ್ಯೇಕ ಧರ್ಮ ವಿರೋಧಿಸಿದ್ದ ಪಂಚಾಚಾರ್ಯರ ಶಾಖಾಮಠಕ್ಕೆ ಅಂದರೆ ಮುಕ್ತಿಮಂದಿರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಸ್ವಾಮಿ ಅವರನ್ನು ಸನ್ಮಾನವನ್ನೂ ಮಾಡಿತ್ತು. ವೀರಶೈವ ಮಹಾಸಭಾ ಆ ಸ್ವಾಮಿ ವಿರುದ್ಧ ಕಿಡಿ ಕಾರಿತ್ತು! ಆದಾದ ಎರಡೇ ದಿನಕ್ಕೆ ಅಲ್ಲಿ ಡಿ.ಕೆ ಶಿವಕುಮಾರರಿಂದ ಭಕ್ತಿಪೂರ್ವಕ ಪೂಜೆ!

ಡಿಕೇಶಿ, ರಂಭಾಪುರಿ ದೋಸ್ತಿ

ಇದೆಲ್ಲ ಬಿಡಿ, ರಾಜಕಾರಣಕ್ಕೆ ಬರೋಣ.. ಕೇವಲ ನೂರಾರು ಕೋಟಿ ವ್ಯಯಿಸಿ ಬಿಟ್ಟರೆ ಸಿಎಂ ಆಗಲ್ಲ ಎಂದು ಡಿ.ಕೆ ಶಿವಕುಮಾರ್‍ಗೆ ಈಗ ಅರಿವಾದಂತಿದೆ. ಈಗಲ್ಲ, ಮುಂದಿನ ಚುನಾವಣೆ ವೇಳೆಗೆ ರಾಜ್ಯದಾದ್ಯಂತ ಸಪೋರ್ಟ್ ಬೇಸ್ ಹೊಂದಲು ಅವರು ಪ್ರಯತ್ನ ಪಡುತ್ತಿದ್ದಾರೆ. 

ಆರು ತಿಂಗಳ ಹಿಂದೆ  ಇದೇ ಲಕ್ಷ್ಮೇಶ್ವರದಲ್ಲಿ ರಂಭಾಪುರಿ ‘ಜಗದ್ಗುರು’ವಿನ ಸಮಾರಂಭದಲ್ಲಿ  ಭಾವಹಿಸಿದ್ದ ಡಿ.ಕೆ. ಶಿವಕುಮಾರ್, ‘ಪ್ರತ್ಯೇಕ ಧರ್ಮ ಬೆಂಬಲಿಸಿದ್ದು ಕಾಂಗ್ರೆಸ್‍ನ ತಪ್ಪು’ ಎಂದಿದ್ದರು. ಆಗ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ತರಾಟೆಗೆ ತೆಗೆದುಕೊಂಡ ಮೇಲೆ ವಿಷಾದ ವ್ಯಕ್ತಪಡಿಸಿದ್ದರು.

ತಿಂಗಳ ಹಿಂದಷ್ಟೇ ಡಿಕೆಶಿ ಲಿಂಗಾಯತ ಧರ್ಮದ ಬಗ್ಗೆ ಎಲ್ಲೊ ಮಾತಾಡಿದ್ದನ್ನು ಪ್ರಸ್ತಾಪಿಸಿದ್ದ ಗೃಹ ಸಚಿವ ‘ಅಂವಂಗೇನು ಗೊತ್ತು ಬಸವ ಧರ್ಮ, ಮೂರ್ಖ’ ಎಂದು ಡಿಕೆಶಿಯನ್ನು ಏಕವಚನದಲ್ಲಿ ಬೈದಿದ್ದರು. ಬಹುಶಃ ಇದು, ಎರಡನೇ ಹಂತದ ನಾಯಕರಲ್ಲಿ ಮುಖ್ಯಮಂತ್ರಿಯಾಗುವ ಹಂಬಲವುಳ್ಳವರ ಜಿದ್ದಾಜಿದ್ದಿಯೇ?
ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೆನ್ನಿನ ಹಿಂದೆ ಬಿದ್ದಿರುವಾಗ, ಡಿಕೆಶಿ ಮತ್ತು ಎಂಬಿ ಪಾಟೀಲ್ ಕೂಡ ತಮ್ಮ ಬೇಸ್ ಅಲುಗಾಡಿಸುತ್ತಿದ್ದಾರೆಯೇ ಎಂಬ ಭಯ ಅವರಲ್ಲಿ ಕಾಡುತ್ತಿದೆಯೇ?
ಇನ್ನು ಬಾದಮಿಯಿಂದ ಸ್ಪರ್ಧಿಸಿ ಗೆದ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಉತ್ತರ ಕರ್ನಾಟಕಕ್ಕೂ ಲೀಡರ್ ಆಗುವ ಪಯಣದ ಹಾದಿಯಲ್ಲಿ ಅರ್ಧ ಸಾಗಿ ಆಗಿದೆ ಎಂದೇ ಹೇಳುತ್ತಿದ್ದಾರೆ. ಮುಖ್ಯವಾಗಿ ಅಹಿಂದ ಜೊತೆಗೆ ಎಲ್ಲಾ ಸಮುದಾಯದ ಜನರ ಮೇಲೂ ಪ್ರಭಾವ ಬೀರಲು ಅವರು ಶುರುವಚ್ಚಿಕೊಂಡಿದ್ದಾರೆ. ಕೊಪ್ಪಳದಲ್ಲಿ ಕುರುಬ ಸಮುದಾಯದವರಿಗೆ ಟಿಕೆಟ್ ನೀಡಿ ಶತಯಗತಾಯ ಗೆಲ್ಲಿಸಲು ಶ್ರಮ ಹಾಕಿದ್ದಾರೆ. ಇನ್ನೊಂದು ಕಡೆ ಸಿದ್ದರಾಮಯ್ಯನವರ ಕ್ಯಾಂಡಿಡೇಟ್ ಬಾಗಲಕೋಟೆಯ ಆಕ್ಟಿವ್ ಹುಡುಗಿ ವೀಣಾ ಕಾಶೆಪ್ಪನವರ್ ಈಗಾಗಲೇ ಗೆದ್ದಾಗಿದೆ ಎಂದು ಹೇಳಲಾಗುತ್ತಿದೆ.
ಇದೆಲ್ಲಾ ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...