Homeಕರ್ನಾಟಕಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೇರೆ ಬೆನ್ನಿನ ಹಿಂದೆ ಬಿದ್ದಿದ್ದಾರೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಮೈಸೂರು ಭಾಗದ ಎರಡನೇ ಹಂತದ ಒಕ್ಕಲಿಗರ ನಾಯಕ ಡಿ.ಕೆ ಶಿವಕುಮಾರ್ ಉತ್ತರದ ಭಾಗದಲ್ಲಿ ಸಪೋರ್ಟ್ ಬೇಸ್ ರೆಡಿ ಮಾಡಿಕೊಳ್ಳುತ್ತಿದ್ದಾರಾ? ಕುಂದಗೋಳ ಉಪ ಚುನಾವಣೆ ಗೆಲ್ಲಿಸುವ ಜವಾಬ್ದಾರಿಯನ್ನು ಹೊತ್ತಿರುವ ಅವರು, ಇದು ತಮ್ಮದೇ ಚುನಾವಣೆ ಎಂಬಂತೆ ಸಕ್ರಿಯರಾಗಿದ್ದಾರೆ. ಈ ನಡುವೆ ನಿನ್ನೆ (ಬುಧವಾರ) ಅವರು, ಲಕ್ಷ್ನೇಶ್ವರ ಹತ್ತಿರದ ಮುಕ್ತಿಮಂದಿರಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಇದರ ಹಿಂದೆ ಪಂಚಾಚಾರ್ಯರ ಆಶಿರ್ವಾದವೂ ಇದೆಯಾ? ಯಡಿಯೂರಪ್ಪರಿಗೆ ಇದು ಆತಂಕದ ವಿಷಯವಾ? ತನ್ನ ಸ್ಪರ್ಧಿ ಎಂ.ಬಿ. ಪಾಟೀಲರಿಗೂ ಡಿಕೆಶಿ ಚಾಲೆಂಜ್ ಮಾಡ್ತಿದ್ದೀರಾ? ಧರ್ಮ, ಜಾತಿಗಳ ಹೆಸರಲ್ಲಿ ನಡೆಯುವ ಕ್ಷುಲ್ಲಕ ರಾಜಕೀಯದ ಒಂದು ಅಸಹ್ಯ ಝಲಕ್ ಇದು

ನೇರ ವಿಷಯಕ್ಕೆ ಬಂದರೆ, ಉತ್ರರ ಕರ್ನಾಟಕದಲ್ಲಿ ಒಂದು ಸಣ್ಣ ಸಪೋರ್ಟ್ ಬೇಸ್ ಸೃಷ್ಟಿಸಿಕೊಳ್ಳಲು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಯತ್ನಿಸುತ್ತಿರುವ ಎಲ್ಲ ಲಕ್ಷಣಗಳೂ ಅವರ ಇತ್ತೀಚಿನ ನಡೆಯಲ್ಲಿ ಕಂಡು ಬರುತ್ತಿವೆ.

ಕುಂದಗೋಳ ಕ್ಷೇತ್ರದ ಜವಾಬ್ದಾರಿ ಅವರ ಮೇಲಿದೆ. ಅದಕ್ಕೆ ಬೇಕಾದುದೆಲ್ಲವನ್ನೂ ಮಾಡುತ್ತಲೇ, ಇಲ್ಲಿ ಅವರು ಒಂದಿಷ್ಟು ‘ಭವಿಷ್ಯ ನಿರ್ಮಾಣ’ದ ಕೆಲಸದಲ್ಲೂ ನಿರತರಾಗಿದ್ದಾರೆ. ಇಲ್ಲಿನ ಹಲವಾರು ಲೋಕಲ್ ನಾಯಕರ ಜೊತೆ ಸೌಹಾರ್ದ ಸಂಬಂಧವನ್ನು ಕಟ್ಟಿಕೊಳ್ಳುತ್ತಲೇ, ಒಟ್ಟೂ ಈ ಭಾಗದಲ್ಲಿ ತಮ್ಮನ್ನು ಸಪೋರ್ಟ್ ಮಾಡುವ ಒಂದು ರಾಜಕೀಯ ಗುಂಪು ಮತ್ತು ಧಾರ್ಮಿಕ ನಾಯಕರ ಗುಂಪು ಇರಲೆಂದು ಅವರು ಕಾರ್ಯಾಚರಣೆ ನಡೆಸಿದ್ದು ಎದ್ದು ಕಾಣುತ್ತಿದೆ.

ಇದ್ಹೇಗೆ ಯಡಿಯೂರಪ್ಪ ಆತಂಕಕ್ಕೆ ಕಾರಣವಾಗುತ್ತದೆ? ಏಕೆಂದರೆ, ಯಡಿಯೂರಪ್ಪ  ಲಿಂಗಾಯತರ ಯಾವ ಪಂಗಡಗಳನ್ನು ನೆಚ್ಚಿದ್ದರೋ ಅದೇ ಪಂಗಡಗಳ ಹಿಂದೆ ಡಿ.ಕೆ ಶಿವಕುಮಾರ್ ಬಿದ್ದಂತಿದೆ. ಈಗ ಮುಕ್ತಿಮಂದಿರಕ್ಕೆ ಭೇಟಿ ಕೊಟ್ಟಾಗ ಅವರು ಹೇಳಿದ್ದು: ‘ನನಗೆ ಈ ದೇವರ ಮೇಲೆ, ದೇವಸ್ಥಾನದ ಮೇಲೆ ನಂಬಿಕೆಯಿದೆ’ ಎಂದು. ಯಾವ ದೇವರು? ಅವರಿಗೇ ಗೊತ್ತಿಲ್ಲ. ಭಕ್ತರಿಗೆ ಯಾವ ದೇವರಾದರೇನು ಎಂದು ಸುಮ್ಮನಾಗೋಣ.

ಇಲ್ಲಿ ಐತೆ ಪಾಲಿಟಿಕ್ಸ್!

ಆಟದ ಮಸಲತ್ತೇ ಇಲ್ಲಿದೆ. ಮೊನ್ನೆ ಮುಕ್ತಿಮಂದಿರಕ್ಕೆ ಡಿಕೆಶಿ ಭೇಟಿ ಕೊಟ್ಟರಲ್ಲ ಅದು ಪುಟ್ಟಾಪೂರಾ ಪಂಚಾಚಾರ್ಯರ ಅಂದರೆ ಕರ್ಮಠ ವೀರಶೈವರ/ಜಂಗಮರ ಮಂದಿರ. ಇದರ ಹಿಂದೆ ಇರುವುದು ಪಂಚಾಚಾರ್ಯ ಜಗದ್ಗುರು ರಂಭಾಪುರಿ ಸ್ವಾಮೀಜಿ! ಯಡಿಯೂರಪ್ಪರ ಹಿಡನ್ ರಿಲಿಜಿಯಸ್ ಗುರು ಇವರು… ಅವರನ್ನೇ ಡಿಕೆಶಿ ಬುಟ್ಟಿಗೆ ಹಾಕಿಕೊಂಡರಾ ಎಂಬ ಪ್ರಶ್ನೆ ಭವಿಷ್ಯದ್ದು.

ಎಂ.ಬಿ. ಪಾಟೀಲ್ ವರ್ಸಸ್ ಡಿಕೆಶಿ?

ಇಲ್ಲಿ ವಿಚಿತ್ರ ಮತ್ತು ಅಸಹ್ಯದ ಧರ್ಮೋ-ರಾಜಕೀಯದ ವಿದ್ಯಮಾನ ಜರುಗುತ್ತಿವೆ. ಗೃಹ ಸಚಿವ ಎಂ.ಬಿ. ಪಾಟೀಲ್ ಲಿಂಗಾಯತ ಪ್ರತ್ಯೇಕ ಧರ್ಮದ ಪರ ಬಹಿರಂಗವಾಗಿ ನಿಂತಿದ್ದರು. ನಾಲ್ಕು ದಿನಗಳ ಹಿಂದೆ ಅವರು, ಪ್ರತ್ಯೇಕ ಧರ್ಮ ವಿರೋಧಿಸಿದ್ದ ಪಂಚಾಚಾರ್ಯರ ಶಾಖಾಮಠಕ್ಕೆ ಅಂದರೆ ಮುಕ್ತಿಮಂದಿರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಸ್ವಾಮಿ ಅವರನ್ನು ಸನ್ಮಾನವನ್ನೂ ಮಾಡಿತ್ತು. ವೀರಶೈವ ಮಹಾಸಭಾ ಆ ಸ್ವಾಮಿ ವಿರುದ್ಧ ಕಿಡಿ ಕಾರಿತ್ತು! ಆದಾದ ಎರಡೇ ದಿನಕ್ಕೆ ಅಲ್ಲಿ ಡಿ.ಕೆ ಶಿವಕುಮಾರರಿಂದ ಭಕ್ತಿಪೂರ್ವಕ ಪೂಜೆ!

ಡಿಕೇಶಿ, ರಂಭಾಪುರಿ ದೋಸ್ತಿ

ಇದೆಲ್ಲ ಬಿಡಿ, ರಾಜಕಾರಣಕ್ಕೆ ಬರೋಣ.. ಕೇವಲ ನೂರಾರು ಕೋಟಿ ವ್ಯಯಿಸಿ ಬಿಟ್ಟರೆ ಸಿಎಂ ಆಗಲ್ಲ ಎಂದು ಡಿ.ಕೆ ಶಿವಕುಮಾರ್‍ಗೆ ಈಗ ಅರಿವಾದಂತಿದೆ. ಈಗಲ್ಲ, ಮುಂದಿನ ಚುನಾವಣೆ ವೇಳೆಗೆ ರಾಜ್ಯದಾದ್ಯಂತ ಸಪೋರ್ಟ್ ಬೇಸ್ ಹೊಂದಲು ಅವರು ಪ್ರಯತ್ನ ಪಡುತ್ತಿದ್ದಾರೆ. 

ಆರು ತಿಂಗಳ ಹಿಂದೆ  ಇದೇ ಲಕ್ಷ್ಮೇಶ್ವರದಲ್ಲಿ ರಂಭಾಪುರಿ ‘ಜಗದ್ಗುರು’ವಿನ ಸಮಾರಂಭದಲ್ಲಿ  ಭಾವಹಿಸಿದ್ದ ಡಿ.ಕೆ. ಶಿವಕುಮಾರ್, ‘ಪ್ರತ್ಯೇಕ ಧರ್ಮ ಬೆಂಬಲಿಸಿದ್ದು ಕಾಂಗ್ರೆಸ್‍ನ ತಪ್ಪು’ ಎಂದಿದ್ದರು. ಆಗ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ತರಾಟೆಗೆ ತೆಗೆದುಕೊಂಡ ಮೇಲೆ ವಿಷಾದ ವ್ಯಕ್ತಪಡಿಸಿದ್ದರು.

ತಿಂಗಳ ಹಿಂದಷ್ಟೇ ಡಿಕೆಶಿ ಲಿಂಗಾಯತ ಧರ್ಮದ ಬಗ್ಗೆ ಎಲ್ಲೊ ಮಾತಾಡಿದ್ದನ್ನು ಪ್ರಸ್ತಾಪಿಸಿದ್ದ ಗೃಹ ಸಚಿವ ‘ಅಂವಂಗೇನು ಗೊತ್ತು ಬಸವ ಧರ್ಮ, ಮೂರ್ಖ’ ಎಂದು ಡಿಕೆಶಿಯನ್ನು ಏಕವಚನದಲ್ಲಿ ಬೈದಿದ್ದರು. ಬಹುಶಃ ಇದು, ಎರಡನೇ ಹಂತದ ನಾಯಕರಲ್ಲಿ ಮುಖ್ಯಮಂತ್ರಿಯಾಗುವ ಹಂಬಲವುಳ್ಳವರ ಜಿದ್ದಾಜಿದ್ದಿಯೇ?
ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೆನ್ನಿನ ಹಿಂದೆ ಬಿದ್ದಿರುವಾಗ, ಡಿಕೆಶಿ ಮತ್ತು ಎಂಬಿ ಪಾಟೀಲ್ ಕೂಡ ತಮ್ಮ ಬೇಸ್ ಅಲುಗಾಡಿಸುತ್ತಿದ್ದಾರೆಯೇ ಎಂಬ ಭಯ ಅವರಲ್ಲಿ ಕಾಡುತ್ತಿದೆಯೇ?
ಇನ್ನು ಬಾದಮಿಯಿಂದ ಸ್ಪರ್ಧಿಸಿ ಗೆದ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಉತ್ತರ ಕರ್ನಾಟಕಕ್ಕೂ ಲೀಡರ್ ಆಗುವ ಪಯಣದ ಹಾದಿಯಲ್ಲಿ ಅರ್ಧ ಸಾಗಿ ಆಗಿದೆ ಎಂದೇ ಹೇಳುತ್ತಿದ್ದಾರೆ. ಮುಖ್ಯವಾಗಿ ಅಹಿಂದ ಜೊತೆಗೆ ಎಲ್ಲಾ ಸಮುದಾಯದ ಜನರ ಮೇಲೂ ಪ್ರಭಾವ ಬೀರಲು ಅವರು ಶುರುವಚ್ಚಿಕೊಂಡಿದ್ದಾರೆ. ಕೊಪ್ಪಳದಲ್ಲಿ ಕುರುಬ ಸಮುದಾಯದವರಿಗೆ ಟಿಕೆಟ್ ನೀಡಿ ಶತಯಗತಾಯ ಗೆಲ್ಲಿಸಲು ಶ್ರಮ ಹಾಕಿದ್ದಾರೆ. ಇನ್ನೊಂದು ಕಡೆ ಸಿದ್ದರಾಮಯ್ಯನವರ ಕ್ಯಾಂಡಿಡೇಟ್ ಬಾಗಲಕೋಟೆಯ ಆಕ್ಟಿವ್ ಹುಡುಗಿ ವೀಣಾ ಕಾಶೆಪ್ಪನವರ್ ಈಗಾಗಲೇ ಗೆದ್ದಾಗಿದೆ ಎಂದು ಹೇಳಲಾಗುತ್ತಿದೆ.
ಇದೆಲ್ಲಾ ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...