Homeಕರ್ನಾಟಕಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೇರೆ ಬೆನ್ನಿನ ಹಿಂದೆ ಬಿದ್ದಿದ್ದಾರೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಮೈಸೂರು ಭಾಗದ ಎರಡನೇ ಹಂತದ ಒಕ್ಕಲಿಗರ ನಾಯಕ ಡಿ.ಕೆ ಶಿವಕುಮಾರ್ ಉತ್ತರದ ಭಾಗದಲ್ಲಿ ಸಪೋರ್ಟ್ ಬೇಸ್ ರೆಡಿ ಮಾಡಿಕೊಳ್ಳುತ್ತಿದ್ದಾರಾ? ಕುಂದಗೋಳ ಉಪ ಚುನಾವಣೆ ಗೆಲ್ಲಿಸುವ ಜವಾಬ್ದಾರಿಯನ್ನು ಹೊತ್ತಿರುವ ಅವರು, ಇದು ತಮ್ಮದೇ ಚುನಾವಣೆ ಎಂಬಂತೆ ಸಕ್ರಿಯರಾಗಿದ್ದಾರೆ. ಈ ನಡುವೆ ನಿನ್ನೆ (ಬುಧವಾರ) ಅವರು, ಲಕ್ಷ್ನೇಶ್ವರ ಹತ್ತಿರದ ಮುಕ್ತಿಮಂದಿರಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಇದರ ಹಿಂದೆ ಪಂಚಾಚಾರ್ಯರ ಆಶಿರ್ವಾದವೂ ಇದೆಯಾ? ಯಡಿಯೂರಪ್ಪರಿಗೆ ಇದು ಆತಂಕದ ವಿಷಯವಾ? ತನ್ನ ಸ್ಪರ್ಧಿ ಎಂ.ಬಿ. ಪಾಟೀಲರಿಗೂ ಡಿಕೆಶಿ ಚಾಲೆಂಜ್ ಮಾಡ್ತಿದ್ದೀರಾ? ಧರ್ಮ, ಜಾತಿಗಳ ಹೆಸರಲ್ಲಿ ನಡೆಯುವ ಕ್ಷುಲ್ಲಕ ರಾಜಕೀಯದ ಒಂದು ಅಸಹ್ಯ ಝಲಕ್ ಇದು

ನೇರ ವಿಷಯಕ್ಕೆ ಬಂದರೆ, ಉತ್ರರ ಕರ್ನಾಟಕದಲ್ಲಿ ಒಂದು ಸಣ್ಣ ಸಪೋರ್ಟ್ ಬೇಸ್ ಸೃಷ್ಟಿಸಿಕೊಳ್ಳಲು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಯತ್ನಿಸುತ್ತಿರುವ ಎಲ್ಲ ಲಕ್ಷಣಗಳೂ ಅವರ ಇತ್ತೀಚಿನ ನಡೆಯಲ್ಲಿ ಕಂಡು ಬರುತ್ತಿವೆ.

ಕುಂದಗೋಳ ಕ್ಷೇತ್ರದ ಜವಾಬ್ದಾರಿ ಅವರ ಮೇಲಿದೆ. ಅದಕ್ಕೆ ಬೇಕಾದುದೆಲ್ಲವನ್ನೂ ಮಾಡುತ್ತಲೇ, ಇಲ್ಲಿ ಅವರು ಒಂದಿಷ್ಟು ‘ಭವಿಷ್ಯ ನಿರ್ಮಾಣ’ದ ಕೆಲಸದಲ್ಲೂ ನಿರತರಾಗಿದ್ದಾರೆ. ಇಲ್ಲಿನ ಹಲವಾರು ಲೋಕಲ್ ನಾಯಕರ ಜೊತೆ ಸೌಹಾರ್ದ ಸಂಬಂಧವನ್ನು ಕಟ್ಟಿಕೊಳ್ಳುತ್ತಲೇ, ಒಟ್ಟೂ ಈ ಭಾಗದಲ್ಲಿ ತಮ್ಮನ್ನು ಸಪೋರ್ಟ್ ಮಾಡುವ ಒಂದು ರಾಜಕೀಯ ಗುಂಪು ಮತ್ತು ಧಾರ್ಮಿಕ ನಾಯಕರ ಗುಂಪು ಇರಲೆಂದು ಅವರು ಕಾರ್ಯಾಚರಣೆ ನಡೆಸಿದ್ದು ಎದ್ದು ಕಾಣುತ್ತಿದೆ.

ಇದ್ಹೇಗೆ ಯಡಿಯೂರಪ್ಪ ಆತಂಕಕ್ಕೆ ಕಾರಣವಾಗುತ್ತದೆ? ಏಕೆಂದರೆ, ಯಡಿಯೂರಪ್ಪ  ಲಿಂಗಾಯತರ ಯಾವ ಪಂಗಡಗಳನ್ನು ನೆಚ್ಚಿದ್ದರೋ ಅದೇ ಪಂಗಡಗಳ ಹಿಂದೆ ಡಿ.ಕೆ ಶಿವಕುಮಾರ್ ಬಿದ್ದಂತಿದೆ. ಈಗ ಮುಕ್ತಿಮಂದಿರಕ್ಕೆ ಭೇಟಿ ಕೊಟ್ಟಾಗ ಅವರು ಹೇಳಿದ್ದು: ‘ನನಗೆ ಈ ದೇವರ ಮೇಲೆ, ದೇವಸ್ಥಾನದ ಮೇಲೆ ನಂಬಿಕೆಯಿದೆ’ ಎಂದು. ಯಾವ ದೇವರು? ಅವರಿಗೇ ಗೊತ್ತಿಲ್ಲ. ಭಕ್ತರಿಗೆ ಯಾವ ದೇವರಾದರೇನು ಎಂದು ಸುಮ್ಮನಾಗೋಣ.

ಇಲ್ಲಿ ಐತೆ ಪಾಲಿಟಿಕ್ಸ್!

ಆಟದ ಮಸಲತ್ತೇ ಇಲ್ಲಿದೆ. ಮೊನ್ನೆ ಮುಕ್ತಿಮಂದಿರಕ್ಕೆ ಡಿಕೆಶಿ ಭೇಟಿ ಕೊಟ್ಟರಲ್ಲ ಅದು ಪುಟ್ಟಾಪೂರಾ ಪಂಚಾಚಾರ್ಯರ ಅಂದರೆ ಕರ್ಮಠ ವೀರಶೈವರ/ಜಂಗಮರ ಮಂದಿರ. ಇದರ ಹಿಂದೆ ಇರುವುದು ಪಂಚಾಚಾರ್ಯ ಜಗದ್ಗುರು ರಂಭಾಪುರಿ ಸ್ವಾಮೀಜಿ! ಯಡಿಯೂರಪ್ಪರ ಹಿಡನ್ ರಿಲಿಜಿಯಸ್ ಗುರು ಇವರು… ಅವರನ್ನೇ ಡಿಕೆಶಿ ಬುಟ್ಟಿಗೆ ಹಾಕಿಕೊಂಡರಾ ಎಂಬ ಪ್ರಶ್ನೆ ಭವಿಷ್ಯದ್ದು.

ಎಂ.ಬಿ. ಪಾಟೀಲ್ ವರ್ಸಸ್ ಡಿಕೆಶಿ?

ಇಲ್ಲಿ ವಿಚಿತ್ರ ಮತ್ತು ಅಸಹ್ಯದ ಧರ್ಮೋ-ರಾಜಕೀಯದ ವಿದ್ಯಮಾನ ಜರುಗುತ್ತಿವೆ. ಗೃಹ ಸಚಿವ ಎಂ.ಬಿ. ಪಾಟೀಲ್ ಲಿಂಗಾಯತ ಪ್ರತ್ಯೇಕ ಧರ್ಮದ ಪರ ಬಹಿರಂಗವಾಗಿ ನಿಂತಿದ್ದರು. ನಾಲ್ಕು ದಿನಗಳ ಹಿಂದೆ ಅವರು, ಪ್ರತ್ಯೇಕ ಧರ್ಮ ವಿರೋಧಿಸಿದ್ದ ಪಂಚಾಚಾರ್ಯರ ಶಾಖಾಮಠಕ್ಕೆ ಅಂದರೆ ಮುಕ್ತಿಮಂದಿರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಸ್ವಾಮಿ ಅವರನ್ನು ಸನ್ಮಾನವನ್ನೂ ಮಾಡಿತ್ತು. ವೀರಶೈವ ಮಹಾಸಭಾ ಆ ಸ್ವಾಮಿ ವಿರುದ್ಧ ಕಿಡಿ ಕಾರಿತ್ತು! ಆದಾದ ಎರಡೇ ದಿನಕ್ಕೆ ಅಲ್ಲಿ ಡಿ.ಕೆ ಶಿವಕುಮಾರರಿಂದ ಭಕ್ತಿಪೂರ್ವಕ ಪೂಜೆ!

ಡಿಕೇಶಿ, ರಂಭಾಪುರಿ ದೋಸ್ತಿ

ಇದೆಲ್ಲ ಬಿಡಿ, ರಾಜಕಾರಣಕ್ಕೆ ಬರೋಣ.. ಕೇವಲ ನೂರಾರು ಕೋಟಿ ವ್ಯಯಿಸಿ ಬಿಟ್ಟರೆ ಸಿಎಂ ಆಗಲ್ಲ ಎಂದು ಡಿ.ಕೆ ಶಿವಕುಮಾರ್‍ಗೆ ಈಗ ಅರಿವಾದಂತಿದೆ. ಈಗಲ್ಲ, ಮುಂದಿನ ಚುನಾವಣೆ ವೇಳೆಗೆ ರಾಜ್ಯದಾದ್ಯಂತ ಸಪೋರ್ಟ್ ಬೇಸ್ ಹೊಂದಲು ಅವರು ಪ್ರಯತ್ನ ಪಡುತ್ತಿದ್ದಾರೆ. 

ಆರು ತಿಂಗಳ ಹಿಂದೆ  ಇದೇ ಲಕ್ಷ್ಮೇಶ್ವರದಲ್ಲಿ ರಂಭಾಪುರಿ ‘ಜಗದ್ಗುರು’ವಿನ ಸಮಾರಂಭದಲ್ಲಿ  ಭಾವಹಿಸಿದ್ದ ಡಿ.ಕೆ. ಶಿವಕುಮಾರ್, ‘ಪ್ರತ್ಯೇಕ ಧರ್ಮ ಬೆಂಬಲಿಸಿದ್ದು ಕಾಂಗ್ರೆಸ್‍ನ ತಪ್ಪು’ ಎಂದಿದ್ದರು. ಆಗ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ತರಾಟೆಗೆ ತೆಗೆದುಕೊಂಡ ಮೇಲೆ ವಿಷಾದ ವ್ಯಕ್ತಪಡಿಸಿದ್ದರು.

ತಿಂಗಳ ಹಿಂದಷ್ಟೇ ಡಿಕೆಶಿ ಲಿಂಗಾಯತ ಧರ್ಮದ ಬಗ್ಗೆ ಎಲ್ಲೊ ಮಾತಾಡಿದ್ದನ್ನು ಪ್ರಸ್ತಾಪಿಸಿದ್ದ ಗೃಹ ಸಚಿವ ‘ಅಂವಂಗೇನು ಗೊತ್ತು ಬಸವ ಧರ್ಮ, ಮೂರ್ಖ’ ಎಂದು ಡಿಕೆಶಿಯನ್ನು ಏಕವಚನದಲ್ಲಿ ಬೈದಿದ್ದರು. ಬಹುಶಃ ಇದು, ಎರಡನೇ ಹಂತದ ನಾಯಕರಲ್ಲಿ ಮುಖ್ಯಮಂತ್ರಿಯಾಗುವ ಹಂಬಲವುಳ್ಳವರ ಜಿದ್ದಾಜಿದ್ದಿಯೇ?
ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೆನ್ನಿನ ಹಿಂದೆ ಬಿದ್ದಿರುವಾಗ, ಡಿಕೆಶಿ ಮತ್ತು ಎಂಬಿ ಪಾಟೀಲ್ ಕೂಡ ತಮ್ಮ ಬೇಸ್ ಅಲುಗಾಡಿಸುತ್ತಿದ್ದಾರೆಯೇ ಎಂಬ ಭಯ ಅವರಲ್ಲಿ ಕಾಡುತ್ತಿದೆಯೇ?
ಇನ್ನು ಬಾದಮಿಯಿಂದ ಸ್ಪರ್ಧಿಸಿ ಗೆದ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಉತ್ತರ ಕರ್ನಾಟಕಕ್ಕೂ ಲೀಡರ್ ಆಗುವ ಪಯಣದ ಹಾದಿಯಲ್ಲಿ ಅರ್ಧ ಸಾಗಿ ಆಗಿದೆ ಎಂದೇ ಹೇಳುತ್ತಿದ್ದಾರೆ. ಮುಖ್ಯವಾಗಿ ಅಹಿಂದ ಜೊತೆಗೆ ಎಲ್ಲಾ ಸಮುದಾಯದ ಜನರ ಮೇಲೂ ಪ್ರಭಾವ ಬೀರಲು ಅವರು ಶುರುವಚ್ಚಿಕೊಂಡಿದ್ದಾರೆ. ಕೊಪ್ಪಳದಲ್ಲಿ ಕುರುಬ ಸಮುದಾಯದವರಿಗೆ ಟಿಕೆಟ್ ನೀಡಿ ಶತಯಗತಾಯ ಗೆಲ್ಲಿಸಲು ಶ್ರಮ ಹಾಕಿದ್ದಾರೆ. ಇನ್ನೊಂದು ಕಡೆ ಸಿದ್ದರಾಮಯ್ಯನವರ ಕ್ಯಾಂಡಿಡೇಟ್ ಬಾಗಲಕೋಟೆಯ ಆಕ್ಟಿವ್ ಹುಡುಗಿ ವೀಣಾ ಕಾಶೆಪ್ಪನವರ್ ಈಗಾಗಲೇ ಗೆದ್ದಾಗಿದೆ ಎಂದು ಹೇಳಲಾಗುತ್ತಿದೆ.
ಇದೆಲ್ಲಾ ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...