Homeಕರ್ನಾಟಕಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೇರೆ ಬೆನ್ನಿನ ಹಿಂದೆ ಬಿದ್ದಿದ್ದಾರೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಮೈಸೂರು ಭಾಗದ ಎರಡನೇ ಹಂತದ ಒಕ್ಕಲಿಗರ ನಾಯಕ ಡಿ.ಕೆ ಶಿವಕುಮಾರ್ ಉತ್ತರದ ಭಾಗದಲ್ಲಿ ಸಪೋರ್ಟ್ ಬೇಸ್ ರೆಡಿ ಮಾಡಿಕೊಳ್ಳುತ್ತಿದ್ದಾರಾ? ಕುಂದಗೋಳ ಉಪ ಚುನಾವಣೆ ಗೆಲ್ಲಿಸುವ ಜವಾಬ್ದಾರಿಯನ್ನು ಹೊತ್ತಿರುವ ಅವರು, ಇದು ತಮ್ಮದೇ ಚುನಾವಣೆ ಎಂಬಂತೆ ಸಕ್ರಿಯರಾಗಿದ್ದಾರೆ. ಈ ನಡುವೆ ನಿನ್ನೆ (ಬುಧವಾರ) ಅವರು, ಲಕ್ಷ್ನೇಶ್ವರ ಹತ್ತಿರದ ಮುಕ್ತಿಮಂದಿರಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಇದರ ಹಿಂದೆ ಪಂಚಾಚಾರ್ಯರ ಆಶಿರ್ವಾದವೂ ಇದೆಯಾ? ಯಡಿಯೂರಪ್ಪರಿಗೆ ಇದು ಆತಂಕದ ವಿಷಯವಾ? ತನ್ನ ಸ್ಪರ್ಧಿ ಎಂ.ಬಿ. ಪಾಟೀಲರಿಗೂ ಡಿಕೆಶಿ ಚಾಲೆಂಜ್ ಮಾಡ್ತಿದ್ದೀರಾ? ಧರ್ಮ, ಜಾತಿಗಳ ಹೆಸರಲ್ಲಿ ನಡೆಯುವ ಕ್ಷುಲ್ಲಕ ರಾಜಕೀಯದ ಒಂದು ಅಸಹ್ಯ ಝಲಕ್ ಇದು

ನೇರ ವಿಷಯಕ್ಕೆ ಬಂದರೆ, ಉತ್ರರ ಕರ್ನಾಟಕದಲ್ಲಿ ಒಂದು ಸಣ್ಣ ಸಪೋರ್ಟ್ ಬೇಸ್ ಸೃಷ್ಟಿಸಿಕೊಳ್ಳಲು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಯತ್ನಿಸುತ್ತಿರುವ ಎಲ್ಲ ಲಕ್ಷಣಗಳೂ ಅವರ ಇತ್ತೀಚಿನ ನಡೆಯಲ್ಲಿ ಕಂಡು ಬರುತ್ತಿವೆ.

ಕುಂದಗೋಳ ಕ್ಷೇತ್ರದ ಜವಾಬ್ದಾರಿ ಅವರ ಮೇಲಿದೆ. ಅದಕ್ಕೆ ಬೇಕಾದುದೆಲ್ಲವನ್ನೂ ಮಾಡುತ್ತಲೇ, ಇಲ್ಲಿ ಅವರು ಒಂದಿಷ್ಟು ‘ಭವಿಷ್ಯ ನಿರ್ಮಾಣ’ದ ಕೆಲಸದಲ್ಲೂ ನಿರತರಾಗಿದ್ದಾರೆ. ಇಲ್ಲಿನ ಹಲವಾರು ಲೋಕಲ್ ನಾಯಕರ ಜೊತೆ ಸೌಹಾರ್ದ ಸಂಬಂಧವನ್ನು ಕಟ್ಟಿಕೊಳ್ಳುತ್ತಲೇ, ಒಟ್ಟೂ ಈ ಭಾಗದಲ್ಲಿ ತಮ್ಮನ್ನು ಸಪೋರ್ಟ್ ಮಾಡುವ ಒಂದು ರಾಜಕೀಯ ಗುಂಪು ಮತ್ತು ಧಾರ್ಮಿಕ ನಾಯಕರ ಗುಂಪು ಇರಲೆಂದು ಅವರು ಕಾರ್ಯಾಚರಣೆ ನಡೆಸಿದ್ದು ಎದ್ದು ಕಾಣುತ್ತಿದೆ.

ಇದ್ಹೇಗೆ ಯಡಿಯೂರಪ್ಪ ಆತಂಕಕ್ಕೆ ಕಾರಣವಾಗುತ್ತದೆ? ಏಕೆಂದರೆ, ಯಡಿಯೂರಪ್ಪ  ಲಿಂಗಾಯತರ ಯಾವ ಪಂಗಡಗಳನ್ನು ನೆಚ್ಚಿದ್ದರೋ ಅದೇ ಪಂಗಡಗಳ ಹಿಂದೆ ಡಿ.ಕೆ ಶಿವಕುಮಾರ್ ಬಿದ್ದಂತಿದೆ. ಈಗ ಮುಕ್ತಿಮಂದಿರಕ್ಕೆ ಭೇಟಿ ಕೊಟ್ಟಾಗ ಅವರು ಹೇಳಿದ್ದು: ‘ನನಗೆ ಈ ದೇವರ ಮೇಲೆ, ದೇವಸ್ಥಾನದ ಮೇಲೆ ನಂಬಿಕೆಯಿದೆ’ ಎಂದು. ಯಾವ ದೇವರು? ಅವರಿಗೇ ಗೊತ್ತಿಲ್ಲ. ಭಕ್ತರಿಗೆ ಯಾವ ದೇವರಾದರೇನು ಎಂದು ಸುಮ್ಮನಾಗೋಣ.

ಇಲ್ಲಿ ಐತೆ ಪಾಲಿಟಿಕ್ಸ್!

ಆಟದ ಮಸಲತ್ತೇ ಇಲ್ಲಿದೆ. ಮೊನ್ನೆ ಮುಕ್ತಿಮಂದಿರಕ್ಕೆ ಡಿಕೆಶಿ ಭೇಟಿ ಕೊಟ್ಟರಲ್ಲ ಅದು ಪುಟ್ಟಾಪೂರಾ ಪಂಚಾಚಾರ್ಯರ ಅಂದರೆ ಕರ್ಮಠ ವೀರಶೈವರ/ಜಂಗಮರ ಮಂದಿರ. ಇದರ ಹಿಂದೆ ಇರುವುದು ಪಂಚಾಚಾರ್ಯ ಜಗದ್ಗುರು ರಂಭಾಪುರಿ ಸ್ವಾಮೀಜಿ! ಯಡಿಯೂರಪ್ಪರ ಹಿಡನ್ ರಿಲಿಜಿಯಸ್ ಗುರು ಇವರು… ಅವರನ್ನೇ ಡಿಕೆಶಿ ಬುಟ್ಟಿಗೆ ಹಾಕಿಕೊಂಡರಾ ಎಂಬ ಪ್ರಶ್ನೆ ಭವಿಷ್ಯದ್ದು.

ಎಂ.ಬಿ. ಪಾಟೀಲ್ ವರ್ಸಸ್ ಡಿಕೆಶಿ?

ಇಲ್ಲಿ ವಿಚಿತ್ರ ಮತ್ತು ಅಸಹ್ಯದ ಧರ್ಮೋ-ರಾಜಕೀಯದ ವಿದ್ಯಮಾನ ಜರುಗುತ್ತಿವೆ. ಗೃಹ ಸಚಿವ ಎಂ.ಬಿ. ಪಾಟೀಲ್ ಲಿಂಗಾಯತ ಪ್ರತ್ಯೇಕ ಧರ್ಮದ ಪರ ಬಹಿರಂಗವಾಗಿ ನಿಂತಿದ್ದರು. ನಾಲ್ಕು ದಿನಗಳ ಹಿಂದೆ ಅವರು, ಪ್ರತ್ಯೇಕ ಧರ್ಮ ವಿರೋಧಿಸಿದ್ದ ಪಂಚಾಚಾರ್ಯರ ಶಾಖಾಮಠಕ್ಕೆ ಅಂದರೆ ಮುಕ್ತಿಮಂದಿರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಸ್ವಾಮಿ ಅವರನ್ನು ಸನ್ಮಾನವನ್ನೂ ಮಾಡಿತ್ತು. ವೀರಶೈವ ಮಹಾಸಭಾ ಆ ಸ್ವಾಮಿ ವಿರುದ್ಧ ಕಿಡಿ ಕಾರಿತ್ತು! ಆದಾದ ಎರಡೇ ದಿನಕ್ಕೆ ಅಲ್ಲಿ ಡಿ.ಕೆ ಶಿವಕುಮಾರರಿಂದ ಭಕ್ತಿಪೂರ್ವಕ ಪೂಜೆ!

ಡಿಕೇಶಿ, ರಂಭಾಪುರಿ ದೋಸ್ತಿ

ಇದೆಲ್ಲ ಬಿಡಿ, ರಾಜಕಾರಣಕ್ಕೆ ಬರೋಣ.. ಕೇವಲ ನೂರಾರು ಕೋಟಿ ವ್ಯಯಿಸಿ ಬಿಟ್ಟರೆ ಸಿಎಂ ಆಗಲ್ಲ ಎಂದು ಡಿ.ಕೆ ಶಿವಕುಮಾರ್‍ಗೆ ಈಗ ಅರಿವಾದಂತಿದೆ. ಈಗಲ್ಲ, ಮುಂದಿನ ಚುನಾವಣೆ ವೇಳೆಗೆ ರಾಜ್ಯದಾದ್ಯಂತ ಸಪೋರ್ಟ್ ಬೇಸ್ ಹೊಂದಲು ಅವರು ಪ್ರಯತ್ನ ಪಡುತ್ತಿದ್ದಾರೆ. 

ಆರು ತಿಂಗಳ ಹಿಂದೆ  ಇದೇ ಲಕ್ಷ್ಮೇಶ್ವರದಲ್ಲಿ ರಂಭಾಪುರಿ ‘ಜಗದ್ಗುರು’ವಿನ ಸಮಾರಂಭದಲ್ಲಿ  ಭಾವಹಿಸಿದ್ದ ಡಿ.ಕೆ. ಶಿವಕುಮಾರ್, ‘ಪ್ರತ್ಯೇಕ ಧರ್ಮ ಬೆಂಬಲಿಸಿದ್ದು ಕಾಂಗ್ರೆಸ್‍ನ ತಪ್ಪು’ ಎಂದಿದ್ದರು. ಆಗ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ತರಾಟೆಗೆ ತೆಗೆದುಕೊಂಡ ಮೇಲೆ ವಿಷಾದ ವ್ಯಕ್ತಪಡಿಸಿದ್ದರು.

ತಿಂಗಳ ಹಿಂದಷ್ಟೇ ಡಿಕೆಶಿ ಲಿಂಗಾಯತ ಧರ್ಮದ ಬಗ್ಗೆ ಎಲ್ಲೊ ಮಾತಾಡಿದ್ದನ್ನು ಪ್ರಸ್ತಾಪಿಸಿದ್ದ ಗೃಹ ಸಚಿವ ‘ಅಂವಂಗೇನು ಗೊತ್ತು ಬಸವ ಧರ್ಮ, ಮೂರ್ಖ’ ಎಂದು ಡಿಕೆಶಿಯನ್ನು ಏಕವಚನದಲ್ಲಿ ಬೈದಿದ್ದರು. ಬಹುಶಃ ಇದು, ಎರಡನೇ ಹಂತದ ನಾಯಕರಲ್ಲಿ ಮುಖ್ಯಮಂತ್ರಿಯಾಗುವ ಹಂಬಲವುಳ್ಳವರ ಜಿದ್ದಾಜಿದ್ದಿಯೇ?
ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೆನ್ನಿನ ಹಿಂದೆ ಬಿದ್ದಿರುವಾಗ, ಡಿಕೆಶಿ ಮತ್ತು ಎಂಬಿ ಪಾಟೀಲ್ ಕೂಡ ತಮ್ಮ ಬೇಸ್ ಅಲುಗಾಡಿಸುತ್ತಿದ್ದಾರೆಯೇ ಎಂಬ ಭಯ ಅವರಲ್ಲಿ ಕಾಡುತ್ತಿದೆಯೇ?
ಇನ್ನು ಬಾದಮಿಯಿಂದ ಸ್ಪರ್ಧಿಸಿ ಗೆದ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಉತ್ತರ ಕರ್ನಾಟಕಕ್ಕೂ ಲೀಡರ್ ಆಗುವ ಪಯಣದ ಹಾದಿಯಲ್ಲಿ ಅರ್ಧ ಸಾಗಿ ಆಗಿದೆ ಎಂದೇ ಹೇಳುತ್ತಿದ್ದಾರೆ. ಮುಖ್ಯವಾಗಿ ಅಹಿಂದ ಜೊತೆಗೆ ಎಲ್ಲಾ ಸಮುದಾಯದ ಜನರ ಮೇಲೂ ಪ್ರಭಾವ ಬೀರಲು ಅವರು ಶುರುವಚ್ಚಿಕೊಂಡಿದ್ದಾರೆ. ಕೊಪ್ಪಳದಲ್ಲಿ ಕುರುಬ ಸಮುದಾಯದವರಿಗೆ ಟಿಕೆಟ್ ನೀಡಿ ಶತಯಗತಾಯ ಗೆಲ್ಲಿಸಲು ಶ್ರಮ ಹಾಕಿದ್ದಾರೆ. ಇನ್ನೊಂದು ಕಡೆ ಸಿದ್ದರಾಮಯ್ಯನವರ ಕ್ಯಾಂಡಿಡೇಟ್ ಬಾಗಲಕೋಟೆಯ ಆಕ್ಟಿವ್ ಹುಡುಗಿ ವೀಣಾ ಕಾಶೆಪ್ಪನವರ್ ಈಗಾಗಲೇ ಗೆದ್ದಾಗಿದೆ ಎಂದು ಹೇಳಲಾಗುತ್ತಿದೆ.
ಇದೆಲ್ಲಾ ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...