Homeಕರ್ನಾಟಕಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಪಂಚಾಚಾರ್ಯರು ಇಟ್ಟ ಬತ್ತಿ, ಯಡ್ಡಿಗೆ ಕಸಿವಿಸಿ : ಎಂ.ಬಿ. ಪಾಟೀಲ್, ಡಿಕೆಶಿ ನಡುವೆ ಪೈಪೋಟಿ

ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೇರೆ ಬೆನ್ನಿನ ಹಿಂದೆ ಬಿದ್ದಿದ್ದಾರೆ.

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಮೈಸೂರು ಭಾಗದ ಎರಡನೇ ಹಂತದ ಒಕ್ಕಲಿಗರ ನಾಯಕ ಡಿ.ಕೆ ಶಿವಕುಮಾರ್ ಉತ್ತರದ ಭಾಗದಲ್ಲಿ ಸಪೋರ್ಟ್ ಬೇಸ್ ರೆಡಿ ಮಾಡಿಕೊಳ್ಳುತ್ತಿದ್ದಾರಾ? ಕುಂದಗೋಳ ಉಪ ಚುನಾವಣೆ ಗೆಲ್ಲಿಸುವ ಜವಾಬ್ದಾರಿಯನ್ನು ಹೊತ್ತಿರುವ ಅವರು, ಇದು ತಮ್ಮದೇ ಚುನಾವಣೆ ಎಂಬಂತೆ ಸಕ್ರಿಯರಾಗಿದ್ದಾರೆ. ಈ ನಡುವೆ ನಿನ್ನೆ (ಬುಧವಾರ) ಅವರು, ಲಕ್ಷ್ನೇಶ್ವರ ಹತ್ತಿರದ ಮುಕ್ತಿಮಂದಿರಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ. ಇದರ ಹಿಂದೆ ಪಂಚಾಚಾರ್ಯರ ಆಶಿರ್ವಾದವೂ ಇದೆಯಾ? ಯಡಿಯೂರಪ್ಪರಿಗೆ ಇದು ಆತಂಕದ ವಿಷಯವಾ? ತನ್ನ ಸ್ಪರ್ಧಿ ಎಂ.ಬಿ. ಪಾಟೀಲರಿಗೂ ಡಿಕೆಶಿ ಚಾಲೆಂಜ್ ಮಾಡ್ತಿದ್ದೀರಾ? ಧರ್ಮ, ಜಾತಿಗಳ ಹೆಸರಲ್ಲಿ ನಡೆಯುವ ಕ್ಷುಲ್ಲಕ ರಾಜಕೀಯದ ಒಂದು ಅಸಹ್ಯ ಝಲಕ್ ಇದು

ನೇರ ವಿಷಯಕ್ಕೆ ಬಂದರೆ, ಉತ್ರರ ಕರ್ನಾಟಕದಲ್ಲಿ ಒಂದು ಸಣ್ಣ ಸಪೋರ್ಟ್ ಬೇಸ್ ಸೃಷ್ಟಿಸಿಕೊಳ್ಳಲು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಯತ್ನಿಸುತ್ತಿರುವ ಎಲ್ಲ ಲಕ್ಷಣಗಳೂ ಅವರ ಇತ್ತೀಚಿನ ನಡೆಯಲ್ಲಿ ಕಂಡು ಬರುತ್ತಿವೆ.

ಕುಂದಗೋಳ ಕ್ಷೇತ್ರದ ಜವಾಬ್ದಾರಿ ಅವರ ಮೇಲಿದೆ. ಅದಕ್ಕೆ ಬೇಕಾದುದೆಲ್ಲವನ್ನೂ ಮಾಡುತ್ತಲೇ, ಇಲ್ಲಿ ಅವರು ಒಂದಿಷ್ಟು ‘ಭವಿಷ್ಯ ನಿರ್ಮಾಣ’ದ ಕೆಲಸದಲ್ಲೂ ನಿರತರಾಗಿದ್ದಾರೆ. ಇಲ್ಲಿನ ಹಲವಾರು ಲೋಕಲ್ ನಾಯಕರ ಜೊತೆ ಸೌಹಾರ್ದ ಸಂಬಂಧವನ್ನು ಕಟ್ಟಿಕೊಳ್ಳುತ್ತಲೇ, ಒಟ್ಟೂ ಈ ಭಾಗದಲ್ಲಿ ತಮ್ಮನ್ನು ಸಪೋರ್ಟ್ ಮಾಡುವ ಒಂದು ರಾಜಕೀಯ ಗುಂಪು ಮತ್ತು ಧಾರ್ಮಿಕ ನಾಯಕರ ಗುಂಪು ಇರಲೆಂದು ಅವರು ಕಾರ್ಯಾಚರಣೆ ನಡೆಸಿದ್ದು ಎದ್ದು ಕಾಣುತ್ತಿದೆ.

ಇದ್ಹೇಗೆ ಯಡಿಯೂರಪ್ಪ ಆತಂಕಕ್ಕೆ ಕಾರಣವಾಗುತ್ತದೆ? ಏಕೆಂದರೆ, ಯಡಿಯೂರಪ್ಪ  ಲಿಂಗಾಯತರ ಯಾವ ಪಂಗಡಗಳನ್ನು ನೆಚ್ಚಿದ್ದರೋ ಅದೇ ಪಂಗಡಗಳ ಹಿಂದೆ ಡಿ.ಕೆ ಶಿವಕುಮಾರ್ ಬಿದ್ದಂತಿದೆ. ಈಗ ಮುಕ್ತಿಮಂದಿರಕ್ಕೆ ಭೇಟಿ ಕೊಟ್ಟಾಗ ಅವರು ಹೇಳಿದ್ದು: ‘ನನಗೆ ಈ ದೇವರ ಮೇಲೆ, ದೇವಸ್ಥಾನದ ಮೇಲೆ ನಂಬಿಕೆಯಿದೆ’ ಎಂದು. ಯಾವ ದೇವರು? ಅವರಿಗೇ ಗೊತ್ತಿಲ್ಲ. ಭಕ್ತರಿಗೆ ಯಾವ ದೇವರಾದರೇನು ಎಂದು ಸುಮ್ಮನಾಗೋಣ.

ಇಲ್ಲಿ ಐತೆ ಪಾಲಿಟಿಕ್ಸ್!

ಆಟದ ಮಸಲತ್ತೇ ಇಲ್ಲಿದೆ. ಮೊನ್ನೆ ಮುಕ್ತಿಮಂದಿರಕ್ಕೆ ಡಿಕೆಶಿ ಭೇಟಿ ಕೊಟ್ಟರಲ್ಲ ಅದು ಪುಟ್ಟಾಪೂರಾ ಪಂಚಾಚಾರ್ಯರ ಅಂದರೆ ಕರ್ಮಠ ವೀರಶೈವರ/ಜಂಗಮರ ಮಂದಿರ. ಇದರ ಹಿಂದೆ ಇರುವುದು ಪಂಚಾಚಾರ್ಯ ಜಗದ್ಗುರು ರಂಭಾಪುರಿ ಸ್ವಾಮೀಜಿ! ಯಡಿಯೂರಪ್ಪರ ಹಿಡನ್ ರಿಲಿಜಿಯಸ್ ಗುರು ಇವರು… ಅವರನ್ನೇ ಡಿಕೆಶಿ ಬುಟ್ಟಿಗೆ ಹಾಕಿಕೊಂಡರಾ ಎಂಬ ಪ್ರಶ್ನೆ ಭವಿಷ್ಯದ್ದು.

ಎಂ.ಬಿ. ಪಾಟೀಲ್ ವರ್ಸಸ್ ಡಿಕೆಶಿ?

ಇಲ್ಲಿ ವಿಚಿತ್ರ ಮತ್ತು ಅಸಹ್ಯದ ಧರ್ಮೋ-ರಾಜಕೀಯದ ವಿದ್ಯಮಾನ ಜರುಗುತ್ತಿವೆ. ಗೃಹ ಸಚಿವ ಎಂ.ಬಿ. ಪಾಟೀಲ್ ಲಿಂಗಾಯತ ಪ್ರತ್ಯೇಕ ಧರ್ಮದ ಪರ ಬಹಿರಂಗವಾಗಿ ನಿಂತಿದ್ದರು. ನಾಲ್ಕು ದಿನಗಳ ಹಿಂದೆ ಅವರು, ಪ್ರತ್ಯೇಕ ಧರ್ಮ ವಿರೋಧಿಸಿದ್ದ ಪಂಚಾಚಾರ್ಯರ ಶಾಖಾಮಠಕ್ಕೆ ಅಂದರೆ ಮುಕ್ತಿಮಂದಿರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಸ್ವಾಮಿ ಅವರನ್ನು ಸನ್ಮಾನವನ್ನೂ ಮಾಡಿತ್ತು. ವೀರಶೈವ ಮಹಾಸಭಾ ಆ ಸ್ವಾಮಿ ವಿರುದ್ಧ ಕಿಡಿ ಕಾರಿತ್ತು! ಆದಾದ ಎರಡೇ ದಿನಕ್ಕೆ ಅಲ್ಲಿ ಡಿ.ಕೆ ಶಿವಕುಮಾರರಿಂದ ಭಕ್ತಿಪೂರ್ವಕ ಪೂಜೆ!

ಡಿಕೇಶಿ, ರಂಭಾಪುರಿ ದೋಸ್ತಿ

ಇದೆಲ್ಲ ಬಿಡಿ, ರಾಜಕಾರಣಕ್ಕೆ ಬರೋಣ.. ಕೇವಲ ನೂರಾರು ಕೋಟಿ ವ್ಯಯಿಸಿ ಬಿಟ್ಟರೆ ಸಿಎಂ ಆಗಲ್ಲ ಎಂದು ಡಿ.ಕೆ ಶಿವಕುಮಾರ್‍ಗೆ ಈಗ ಅರಿವಾದಂತಿದೆ. ಈಗಲ್ಲ, ಮುಂದಿನ ಚುನಾವಣೆ ವೇಳೆಗೆ ರಾಜ್ಯದಾದ್ಯಂತ ಸಪೋರ್ಟ್ ಬೇಸ್ ಹೊಂದಲು ಅವರು ಪ್ರಯತ್ನ ಪಡುತ್ತಿದ್ದಾರೆ. 

ಆರು ತಿಂಗಳ ಹಿಂದೆ  ಇದೇ ಲಕ್ಷ್ಮೇಶ್ವರದಲ್ಲಿ ರಂಭಾಪುರಿ ‘ಜಗದ್ಗುರು’ವಿನ ಸಮಾರಂಭದಲ್ಲಿ  ಭಾವಹಿಸಿದ್ದ ಡಿ.ಕೆ. ಶಿವಕುಮಾರ್, ‘ಪ್ರತ್ಯೇಕ ಧರ್ಮ ಬೆಂಬಲಿಸಿದ್ದು ಕಾಂಗ್ರೆಸ್‍ನ ತಪ್ಪು’ ಎಂದಿದ್ದರು. ಆಗ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ತರಾಟೆಗೆ ತೆಗೆದುಕೊಂಡ ಮೇಲೆ ವಿಷಾದ ವ್ಯಕ್ತಪಡಿಸಿದ್ದರು.

ತಿಂಗಳ ಹಿಂದಷ್ಟೇ ಡಿಕೆಶಿ ಲಿಂಗಾಯತ ಧರ್ಮದ ಬಗ್ಗೆ ಎಲ್ಲೊ ಮಾತಾಡಿದ್ದನ್ನು ಪ್ರಸ್ತಾಪಿಸಿದ್ದ ಗೃಹ ಸಚಿವ ‘ಅಂವಂಗೇನು ಗೊತ್ತು ಬಸವ ಧರ್ಮ, ಮೂರ್ಖ’ ಎಂದು ಡಿಕೆಶಿಯನ್ನು ಏಕವಚನದಲ್ಲಿ ಬೈದಿದ್ದರು. ಬಹುಶಃ ಇದು, ಎರಡನೇ ಹಂತದ ನಾಯಕರಲ್ಲಿ ಮುಖ್ಯಮಂತ್ರಿಯಾಗುವ ಹಂಬಲವುಳ್ಳವರ ಜಿದ್ದಾಜಿದ್ದಿಯೇ?
ಧರ್ಮದ ಹೆಸರಲ್ಲಿ ರಾಜಕೀಯ ಮಾಡಿದ ಯಡಿಯೂರಪ್ಪರಿಗೆ ಇದು ಆತಂಕ ತಂದಿರಬಹುದೇ? ಯಾಕೆಂದರೆ, ಜನರಿಗೆ ಗೊತ್ತೇ ಇಲ್ಲದ ಸಂತೋಷ್‍ಜೀ ಎಂಬ ಆರ್‍ಎಸ್‍ಎಸ್ ಕುಳ ಬೆನ್ನಿನ ಹಿಂದೆ ಬಿದ್ದಿರುವಾಗ, ಡಿಕೆಶಿ ಮತ್ತು ಎಂಬಿ ಪಾಟೀಲ್ ಕೂಡ ತಮ್ಮ ಬೇಸ್ ಅಲುಗಾಡಿಸುತ್ತಿದ್ದಾರೆಯೇ ಎಂಬ ಭಯ ಅವರಲ್ಲಿ ಕಾಡುತ್ತಿದೆಯೇ?
ಇನ್ನು ಬಾದಮಿಯಿಂದ ಸ್ಪರ್ಧಿಸಿ ಗೆದ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಉತ್ತರ ಕರ್ನಾಟಕಕ್ಕೂ ಲೀಡರ್ ಆಗುವ ಪಯಣದ ಹಾದಿಯಲ್ಲಿ ಅರ್ಧ ಸಾಗಿ ಆಗಿದೆ ಎಂದೇ ಹೇಳುತ್ತಿದ್ದಾರೆ. ಮುಖ್ಯವಾಗಿ ಅಹಿಂದ ಜೊತೆಗೆ ಎಲ್ಲಾ ಸಮುದಾಯದ ಜನರ ಮೇಲೂ ಪ್ರಭಾವ ಬೀರಲು ಅವರು ಶುರುವಚ್ಚಿಕೊಂಡಿದ್ದಾರೆ. ಕೊಪ್ಪಳದಲ್ಲಿ ಕುರುಬ ಸಮುದಾಯದವರಿಗೆ ಟಿಕೆಟ್ ನೀಡಿ ಶತಯಗತಾಯ ಗೆಲ್ಲಿಸಲು ಶ್ರಮ ಹಾಕಿದ್ದಾರೆ. ಇನ್ನೊಂದು ಕಡೆ ಸಿದ್ದರಾಮಯ್ಯನವರ ಕ್ಯಾಂಡಿಡೇಟ್ ಬಾಗಲಕೋಟೆಯ ಆಕ್ಟಿವ್ ಹುಡುಗಿ ವೀಣಾ ಕಾಶೆಪ್ಪನವರ್ ಈಗಾಗಲೇ ಗೆದ್ದಾಗಿದೆ ಎಂದು ಹೇಳಲಾಗುತ್ತಿದೆ.
ಇದೆಲ್ಲಾ ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...