Homeಮುಖಪುಟಪ್ಯಾಲೆಸ್ತೀನ್ ಒಂದು ರಾಷ್ಟ್ರವೆಂದು ಮಾನ್ಯ ಮಾಡಿದ ನಾರ್ವೆ, ಸ್ಪೇನ್, ಐರ್ಲೆಂಡ್

ಪ್ಯಾಲೆಸ್ತೀನ್ ಒಂದು ರಾಷ್ಟ್ರವೆಂದು ಮಾನ್ಯ ಮಾಡಿದ ನಾರ್ವೆ, ಸ್ಪೇನ್, ಐರ್ಲೆಂಡ್

ಐತಿಹಾಸಿಕ ನಿರ್ಧಾರದ ಬೆನ್ನಲ್ಲೇ ನಾರ್ವೆ, ಐರ್ಲೆಂಡ್‌ನಿಂದ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡ ಇಸ್ರೇಲ್

- Advertisement -
- Advertisement -

ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ದೇಶಗಳು ಪ್ಯಾಲೆಸ್ತೀನ್ ಅನ್ನು ‘ಪ್ರತ್ಯೇಖ ರಾಷ್ಟ್ರ’ ಎಂದು ಘೋಷಿಗಳು ನಿರ್ಧರಿಸಿವೆ. ಮೇ 28ರಿಂದ ಅಧಿಕೃತ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ.

ಇದು ಇಸ್ರೇಲ್ ವಿರುದ್ದ ಅಥವಾ ಹಮಾಸ್ ಪರವಾದ ನಿರ್ಧಾರವಲ್ಲ. ಇದು ‘ಶಾಂತಿಯ ಪರ’ವಾದ ನಿರ್ಧಾರ ಎಂದು ಸ್ಪೇನ್‌ ಹೇಳಿದೆ.

“ದ್ವಿರಾಷ್ಟ್ರ ಪರಿಹಾರ ಇಸ್ರೇಲ್‌ನ ಹಿತಾಸಕ್ತಿಯಲ್ಲಿದೆ” ಎಂದು ನಾರ್ವೆಯ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಬುಧವಾರ ಹೇಳಿದ್ದಾರೆ. ಮೇ 28ರಿಂದ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ಸಿಗಲಿದೆ. ದ್ವಿರಾಷ್ಟ್ರ ಪರಿಹಾರವಲ್ಲದೆ ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸದು ಎಂದಿದ್ದಾರೆ.

ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಖ ರಾಷ್ಟ್ರ ಎಂದು ಘೋಷಿಸುವುದು ಕ್ರೂರ ಆಕ್ರಮಣದಲ್ಲಿ ತಮ್ಮದೆಲ್ಲವನ್ನು ಕಳೆದುಕೊಂಡಿರುವ ಅಮಾಯಕ ಜನರನ್ನು ಬೆಂಬಲಿಸುವ ಕ್ರಮ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಾರ್ವೆಯ ನಿರ್ಧಾರದ ಬೆನ್ನಲ್ಲೇ ಐರ್ಲೆಂಡ್ ಪ್ರಧಾನಿ ಸೈಮನ್ ಹ್ಯಾರಿಸ್ ಅವರು ತಮ್ಮ ದೇಶ ಕೂಡ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸಲಿದೆ ಎಂದಿದ್ದಾರೆ.

“ಇಂದು ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ದೇಶವೆಂದು ಗುರುತಿಸಲು ನಿರ್ಧರಿಸಿದ್ದೇವೆ. ನಾವು ಪ್ರತಿಯೊಬ್ಬರೂ ಈ ನಿರ್ಧಾರವನ್ನು ಜಾರಿಗೆ ತರಲು ಅಗತ್ಯವಿರುವ ಎಲ್ಲಾ ರಾಷ್ಟ್ರೀಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹ್ಯಾರಿಸ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸ್ಪೇನ್‌ ಪ್ರಧಾನಿ ಪೆಡ್ರೊ ಸ್ಯಾಂಚೆಝ್ ಅವರು, ನಮ್ಮ ದೇಶದ ಮಂತ್ರಿ ಮಂಡಲ (ಸರ್ಕಾರ) ಮೇ 28ರಿಂದ ಜಾರಿಗೆ ಬರುವಂತೆ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಸ್ಪ್ಯಾನಿಷ್ ಸಂಸತ್ತಿನಲ್ಲಿ ಮಾತನಾಡಿದ ಸ್ಯಾಂಚೆಝ್, “ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾದಲ್ಲಿ ವಿನಾಶಕಾರಿ ಆಕ್ರಮಣ ನಡೆಸುವ ಮೂಲಕ ದ್ವಿರಾಷ್ಟ್ರ ಪರಿಹಾರವನ್ನು ಅಪಾಯದಲ್ಲಿರಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಮಾಲ್ಟಾ ಮತ್ತು ಸ್ಲೊವೇನಿಯಾ ಕೂಡ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ದೇಶವೆಂದು ಘೋಷಿಸುವ ಸಾಧ್ಯತೆ ಇದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐರ್ಲೆಂಡ್, ಸ್ಪೇನ್ ಮತ್ತು ನಾರ್ವೆಯ ನಾಯಕರು ಇತರ ರಾಷ್ಟ್ರಗಳು ಕೂಡ ತಮ್ಮಂತೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿದ್ದಾರೆ.

ರಾಯಭಾರಿಗಳನ್ನು ವಾಪಸ್ ಕರೆಸಿದ ಇಸ್ರೇಲ್ :

ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲು ನಿರ್ಧರಿಸಿದ ಬೆನ್ನಲ್ಲೇ ಇಸ್ರೇಲ್ ಐರ್ಲೆಂಡ್ ಮತ್ತು ನಾರ್ವೆಯಿಂದ ತನ್ನ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ.

“ಐರ್ಲೆಂಡ್ ಮತ್ತು ನಾರ್ವೆಯ ನಿರ್ಧಾರ ನೋಡಿ ಇಸ್ರೇಲ್ ಸುಮ್ಮನೆ ಕೂರುವುದಿಲ್ಲ ಎಂದು ತೀಕ್ಷ್ಣವಾದ ಸಂದೇಶವನ್ನು ನೀಡಲು ಬಯಸುತ್ತೇನೆ. ಸ್ವೇನ್‌ನಿಂದ ಕೂಡ ರಾಯಭಾರಿಯನ್ನು ವಾಪಸ್ ಕರೆಸಿಕೊಳ್ಳುತ್ತೇವೆ” ಎಂದು ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡುವುದು ‘ಭಯೋತ್ಪಾದನೆಗೆ ನೀಡುವ ಬಹುಮಾನ’. ಇದು ಗಾಝಾದಲ್ಲಿ ನಡೆಯುತ್ತಿರುವ ಯುದ್ಧವನ್ನು ಸಂಧಾನದ ಮೂಲಕ ಕೊನೆಗೊಳಿಸುವ ಪ್ರಯತ್ನಕ್ಕೆ ಅಡ್ಡಿಯಾಗಲಿದೆ ಎಂದು ಕಾಟ್ಜ್ ವಿರೋಧ ವ್ಯಕ್ತಪಡಿಸಿದ್ದಾರೆ.

ಮೂರು ರಾಷ್ಟ್ರಗಳ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ‘ಪ್ಯಾಲೆಸ್ಟೀನಿಯನ್ ಲಿಬರೇಶನ್ ಆರ್ಗನೈಸೇಶನ್ (ಪಿಎಲ್‌ಒ) ನ ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಹುಸೇನ್ ಅಲ್-ಶೇಖ್ ” ಸಂಕಟ, ನೋವು, ಉದ್ಯೋಗ, ವರ್ಣಭೇದ ನೀತಿ, ಕೊಲೆ, ದಬ್ಬಾಳಿಕೆ, ನಿಂದನೆ ಮತ್ತು ವಿನಾಶಕ್ಕೆ ಒಳಗಾದ ಪ್ಯಾಲೆಸ್ತೀನ್ ಜನರ ಪ್ರತ್ಯೇಕ ರಾಷ್ಟ್ರ ಹೋರಾಟದ ಸುದೀರ್ಘ ದಶಕಗಳ ನಂತರ ಸತ್ಯ ಮತ್ತು ನ್ಯಾಯದ ವಿಚಾರದಲ್ಲಿ ಜಗತ್ತು ಜಯಗಳಿಸುವ ಐತಿಹಾಸಿಕ ಕ್ಷಣವಾಗಿದೆ ಇದು” ಎಂದಿದ್ದಾರೆ.

ಹಮಾಸ್ ಮೂರು ಯುರೋಪಿಯನ್ ರಾಷ್ಟ್ರಗಳ ನಿರ್ಧಾರವನ್ನು “ಪ್ರಮುಖ ಹೆಜ್ಜೆ” ಎಂದು ಕರೆದಿದೆ.

ಇದನ್ನೂ ಓದಿ : ವಿಧಿ 370 ರದ್ದತಿ ಎತ್ತಿಹಿಡಿದ ಸುಪ್ರೀಂಕೋರ್ಟ್‌ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಿದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...