Homeಮುಖಪುಟಪ್ಯಾಲೆಸ್ತೀನ್ ಒಂದು ರಾಷ್ಟ್ರವೆಂದು ಮಾನ್ಯ ಮಾಡಿದ ನಾರ್ವೆ, ಸ್ಪೇನ್, ಐರ್ಲೆಂಡ್

ಪ್ಯಾಲೆಸ್ತೀನ್ ಒಂದು ರಾಷ್ಟ್ರವೆಂದು ಮಾನ್ಯ ಮಾಡಿದ ನಾರ್ವೆ, ಸ್ಪೇನ್, ಐರ್ಲೆಂಡ್

ಐತಿಹಾಸಿಕ ನಿರ್ಧಾರದ ಬೆನ್ನಲ್ಲೇ ನಾರ್ವೆ, ಐರ್ಲೆಂಡ್‌ನಿಂದ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡ ಇಸ್ರೇಲ್

- Advertisement -
- Advertisement -

ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ದೇಶಗಳು ಪ್ಯಾಲೆಸ್ತೀನ್ ಅನ್ನು ‘ಪ್ರತ್ಯೇಖ ರಾಷ್ಟ್ರ’ ಎಂದು ಘೋಷಿಗಳು ನಿರ್ಧರಿಸಿವೆ. ಮೇ 28ರಿಂದ ಅಧಿಕೃತ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ.

ಇದು ಇಸ್ರೇಲ್ ವಿರುದ್ದ ಅಥವಾ ಹಮಾಸ್ ಪರವಾದ ನಿರ್ಧಾರವಲ್ಲ. ಇದು ‘ಶಾಂತಿಯ ಪರ’ವಾದ ನಿರ್ಧಾರ ಎಂದು ಸ್ಪೇನ್‌ ಹೇಳಿದೆ.

“ದ್ವಿರಾಷ್ಟ್ರ ಪರಿಹಾರ ಇಸ್ರೇಲ್‌ನ ಹಿತಾಸಕ್ತಿಯಲ್ಲಿದೆ” ಎಂದು ನಾರ್ವೆಯ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಬುಧವಾರ ಹೇಳಿದ್ದಾರೆ. ಮೇ 28ರಿಂದ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ಸಿಗಲಿದೆ. ದ್ವಿರಾಷ್ಟ್ರ ಪರಿಹಾರವಲ್ಲದೆ ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸದು ಎಂದಿದ್ದಾರೆ.

ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಖ ರಾಷ್ಟ್ರ ಎಂದು ಘೋಷಿಸುವುದು ಕ್ರೂರ ಆಕ್ರಮಣದಲ್ಲಿ ತಮ್ಮದೆಲ್ಲವನ್ನು ಕಳೆದುಕೊಂಡಿರುವ ಅಮಾಯಕ ಜನರನ್ನು ಬೆಂಬಲಿಸುವ ಕ್ರಮ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಾರ್ವೆಯ ನಿರ್ಧಾರದ ಬೆನ್ನಲ್ಲೇ ಐರ್ಲೆಂಡ್ ಪ್ರಧಾನಿ ಸೈಮನ್ ಹ್ಯಾರಿಸ್ ಅವರು ತಮ್ಮ ದೇಶ ಕೂಡ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸಲಿದೆ ಎಂದಿದ್ದಾರೆ.

“ಇಂದು ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ದೇಶವೆಂದು ಗುರುತಿಸಲು ನಿರ್ಧರಿಸಿದ್ದೇವೆ. ನಾವು ಪ್ರತಿಯೊಬ್ಬರೂ ಈ ನಿರ್ಧಾರವನ್ನು ಜಾರಿಗೆ ತರಲು ಅಗತ್ಯವಿರುವ ಎಲ್ಲಾ ರಾಷ್ಟ್ರೀಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹ್ಯಾರಿಸ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸ್ಪೇನ್‌ ಪ್ರಧಾನಿ ಪೆಡ್ರೊ ಸ್ಯಾಂಚೆಝ್ ಅವರು, ನಮ್ಮ ದೇಶದ ಮಂತ್ರಿ ಮಂಡಲ (ಸರ್ಕಾರ) ಮೇ 28ರಿಂದ ಜಾರಿಗೆ ಬರುವಂತೆ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಸ್ಪ್ಯಾನಿಷ್ ಸಂಸತ್ತಿನಲ್ಲಿ ಮಾತನಾಡಿದ ಸ್ಯಾಂಚೆಝ್, “ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾದಲ್ಲಿ ವಿನಾಶಕಾರಿ ಆಕ್ರಮಣ ನಡೆಸುವ ಮೂಲಕ ದ್ವಿರಾಷ್ಟ್ರ ಪರಿಹಾರವನ್ನು ಅಪಾಯದಲ್ಲಿರಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಮಾಲ್ಟಾ ಮತ್ತು ಸ್ಲೊವೇನಿಯಾ ಕೂಡ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ದೇಶವೆಂದು ಘೋಷಿಸುವ ಸಾಧ್ಯತೆ ಇದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐರ್ಲೆಂಡ್, ಸ್ಪೇನ್ ಮತ್ತು ನಾರ್ವೆಯ ನಾಯಕರು ಇತರ ರಾಷ್ಟ್ರಗಳು ಕೂಡ ತಮ್ಮಂತೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿದ್ದಾರೆ.

ರಾಯಭಾರಿಗಳನ್ನು ವಾಪಸ್ ಕರೆಸಿದ ಇಸ್ರೇಲ್ :

ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲು ನಿರ್ಧರಿಸಿದ ಬೆನ್ನಲ್ಲೇ ಇಸ್ರೇಲ್ ಐರ್ಲೆಂಡ್ ಮತ್ತು ನಾರ್ವೆಯಿಂದ ತನ್ನ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ.

“ಐರ್ಲೆಂಡ್ ಮತ್ತು ನಾರ್ವೆಯ ನಿರ್ಧಾರ ನೋಡಿ ಇಸ್ರೇಲ್ ಸುಮ್ಮನೆ ಕೂರುವುದಿಲ್ಲ ಎಂದು ತೀಕ್ಷ್ಣವಾದ ಸಂದೇಶವನ್ನು ನೀಡಲು ಬಯಸುತ್ತೇನೆ. ಸ್ವೇನ್‌ನಿಂದ ಕೂಡ ರಾಯಭಾರಿಯನ್ನು ವಾಪಸ್ ಕರೆಸಿಕೊಳ್ಳುತ್ತೇವೆ” ಎಂದು ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡುವುದು ‘ಭಯೋತ್ಪಾದನೆಗೆ ನೀಡುವ ಬಹುಮಾನ’. ಇದು ಗಾಝಾದಲ್ಲಿ ನಡೆಯುತ್ತಿರುವ ಯುದ್ಧವನ್ನು ಸಂಧಾನದ ಮೂಲಕ ಕೊನೆಗೊಳಿಸುವ ಪ್ರಯತ್ನಕ್ಕೆ ಅಡ್ಡಿಯಾಗಲಿದೆ ಎಂದು ಕಾಟ್ಜ್ ವಿರೋಧ ವ್ಯಕ್ತಪಡಿಸಿದ್ದಾರೆ.

ಮೂರು ರಾಷ್ಟ್ರಗಳ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ‘ಪ್ಯಾಲೆಸ್ಟೀನಿಯನ್ ಲಿಬರೇಶನ್ ಆರ್ಗನೈಸೇಶನ್ (ಪಿಎಲ್‌ಒ) ನ ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಹುಸೇನ್ ಅಲ್-ಶೇಖ್ ” ಸಂಕಟ, ನೋವು, ಉದ್ಯೋಗ, ವರ್ಣಭೇದ ನೀತಿ, ಕೊಲೆ, ದಬ್ಬಾಳಿಕೆ, ನಿಂದನೆ ಮತ್ತು ವಿನಾಶಕ್ಕೆ ಒಳಗಾದ ಪ್ಯಾಲೆಸ್ತೀನ್ ಜನರ ಪ್ರತ್ಯೇಕ ರಾಷ್ಟ್ರ ಹೋರಾಟದ ಸುದೀರ್ಘ ದಶಕಗಳ ನಂತರ ಸತ್ಯ ಮತ್ತು ನ್ಯಾಯದ ವಿಚಾರದಲ್ಲಿ ಜಗತ್ತು ಜಯಗಳಿಸುವ ಐತಿಹಾಸಿಕ ಕ್ಷಣವಾಗಿದೆ ಇದು” ಎಂದಿದ್ದಾರೆ.

ಹಮಾಸ್ ಮೂರು ಯುರೋಪಿಯನ್ ರಾಷ್ಟ್ರಗಳ ನಿರ್ಧಾರವನ್ನು “ಪ್ರಮುಖ ಹೆಜ್ಜೆ” ಎಂದು ಕರೆದಿದೆ.

ಇದನ್ನೂ ಓದಿ : ವಿಧಿ 370 ರದ್ದತಿ ಎತ್ತಿಹಿಡಿದ ಸುಪ್ರೀಂಕೋರ್ಟ್‌ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಿದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...