Homeಮುಖಪುಟಪ್ಯಾಲೆಸ್ತೀನ್ ಒಂದು ರಾಷ್ಟ್ರವೆಂದು ಮಾನ್ಯ ಮಾಡಿದ ನಾರ್ವೆ, ಸ್ಪೇನ್, ಐರ್ಲೆಂಡ್

ಪ್ಯಾಲೆಸ್ತೀನ್ ಒಂದು ರಾಷ್ಟ್ರವೆಂದು ಮಾನ್ಯ ಮಾಡಿದ ನಾರ್ವೆ, ಸ್ಪೇನ್, ಐರ್ಲೆಂಡ್

ಐತಿಹಾಸಿಕ ನಿರ್ಧಾರದ ಬೆನ್ನಲ್ಲೇ ನಾರ್ವೆ, ಐರ್ಲೆಂಡ್‌ನಿಂದ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡ ಇಸ್ರೇಲ್

- Advertisement -
- Advertisement -

ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ದೇಶಗಳು ಪ್ಯಾಲೆಸ್ತೀನ್ ಅನ್ನು ‘ಪ್ರತ್ಯೇಖ ರಾಷ್ಟ್ರ’ ಎಂದು ಘೋಷಿಗಳು ನಿರ್ಧರಿಸಿವೆ. ಮೇ 28ರಿಂದ ಅಧಿಕೃತ ಘೋಷಣೆ ಹೊರ ಬೀಳುವ ಸಾಧ್ಯತೆ ಇದೆ.

ಇದು ಇಸ್ರೇಲ್ ವಿರುದ್ದ ಅಥವಾ ಹಮಾಸ್ ಪರವಾದ ನಿರ್ಧಾರವಲ್ಲ. ಇದು ‘ಶಾಂತಿಯ ಪರ’ವಾದ ನಿರ್ಧಾರ ಎಂದು ಸ್ಪೇನ್‌ ಹೇಳಿದೆ.

“ದ್ವಿರಾಷ್ಟ್ರ ಪರಿಹಾರ ಇಸ್ರೇಲ್‌ನ ಹಿತಾಸಕ್ತಿಯಲ್ಲಿದೆ” ಎಂದು ನಾರ್ವೆಯ ಪ್ರಧಾನಿ ಜೊನಾಸ್ ಗಹರ್ ಸ್ಟೋರ್ ಬುಧವಾರ ಹೇಳಿದ್ದಾರೆ. ಮೇ 28ರಿಂದ ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಮಾನ್ಯತೆ ಸಿಗಲಿದೆ. ದ್ವಿರಾಷ್ಟ್ರ ಪರಿಹಾರವಲ್ಲದೆ ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸದು ಎಂದಿದ್ದಾರೆ.

ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಖ ರಾಷ್ಟ್ರ ಎಂದು ಘೋಷಿಸುವುದು ಕ್ರೂರ ಆಕ್ರಮಣದಲ್ಲಿ ತಮ್ಮದೆಲ್ಲವನ್ನು ಕಳೆದುಕೊಂಡಿರುವ ಅಮಾಯಕ ಜನರನ್ನು ಬೆಂಬಲಿಸುವ ಕ್ರಮ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಾರ್ವೆಯ ನಿರ್ಧಾರದ ಬೆನ್ನಲ್ಲೇ ಐರ್ಲೆಂಡ್ ಪ್ರಧಾನಿ ಸೈಮನ್ ಹ್ಯಾರಿಸ್ ಅವರು ತಮ್ಮ ದೇಶ ಕೂಡ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರ ಎಂದು ಪರಿಗಣಿಸಲಿದೆ ಎಂದಿದ್ದಾರೆ.

“ಇಂದು ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ದೇಶವೆಂದು ಗುರುತಿಸಲು ನಿರ್ಧರಿಸಿದ್ದೇವೆ. ನಾವು ಪ್ರತಿಯೊಬ್ಬರೂ ಈ ನಿರ್ಧಾರವನ್ನು ಜಾರಿಗೆ ತರಲು ಅಗತ್ಯವಿರುವ ಎಲ್ಲಾ ರಾಷ್ಟ್ರೀಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹ್ಯಾರಿಸ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸ್ಪೇನ್‌ ಪ್ರಧಾನಿ ಪೆಡ್ರೊ ಸ್ಯಾಂಚೆಝ್ ಅವರು, ನಮ್ಮ ದೇಶದ ಮಂತ್ರಿ ಮಂಡಲ (ಸರ್ಕಾರ) ಮೇ 28ರಿಂದ ಜಾರಿಗೆ ಬರುವಂತೆ ಪ್ಯಾಲೆಸ್ತೀನ್ ಅನ್ನು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಸ್ಪ್ಯಾನಿಷ್ ಸಂಸತ್ತಿನಲ್ಲಿ ಮಾತನಾಡಿದ ಸ್ಯಾಂಚೆಝ್, “ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಗಾಝಾದಲ್ಲಿ ವಿನಾಶಕಾರಿ ಆಕ್ರಮಣ ನಡೆಸುವ ಮೂಲಕ ದ್ವಿರಾಷ್ಟ್ರ ಪರಿಹಾರವನ್ನು ಅಪಾಯದಲ್ಲಿರಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಮಾಲ್ಟಾ ಮತ್ತು ಸ್ಲೊವೇನಿಯಾ ಕೂಡ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ದೇಶವೆಂದು ಘೋಷಿಸುವ ಸಾಧ್ಯತೆ ಇದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐರ್ಲೆಂಡ್, ಸ್ಪೇನ್ ಮತ್ತು ನಾರ್ವೆಯ ನಾಯಕರು ಇತರ ರಾಷ್ಟ್ರಗಳು ಕೂಡ ತಮ್ಮಂತೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿದ್ದಾರೆ.

ರಾಯಭಾರಿಗಳನ್ನು ವಾಪಸ್ ಕರೆಸಿದ ಇಸ್ರೇಲ್ :

ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲು ನಿರ್ಧರಿಸಿದ ಬೆನ್ನಲ್ಲೇ ಇಸ್ರೇಲ್ ಐರ್ಲೆಂಡ್ ಮತ್ತು ನಾರ್ವೆಯಿಂದ ತನ್ನ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ.

“ಐರ್ಲೆಂಡ್ ಮತ್ತು ನಾರ್ವೆಯ ನಿರ್ಧಾರ ನೋಡಿ ಇಸ್ರೇಲ್ ಸುಮ್ಮನೆ ಕೂರುವುದಿಲ್ಲ ಎಂದು ತೀಕ್ಷ್ಣವಾದ ಸಂದೇಶವನ್ನು ನೀಡಲು ಬಯಸುತ್ತೇನೆ. ಸ್ವೇನ್‌ನಿಂದ ಕೂಡ ರಾಯಭಾರಿಯನ್ನು ವಾಪಸ್ ಕರೆಸಿಕೊಳ್ಳುತ್ತೇವೆ” ಎಂದು ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.

ಪ್ಯಾಲೆಸ್ತೀನ್‌ಗೆ ಪ್ರತ್ಯೇಕ ರಾಷ್ಟ್ರದ ಸ್ಥಾನಮಾನ ನೀಡುವುದು ‘ಭಯೋತ್ಪಾದನೆಗೆ ನೀಡುವ ಬಹುಮಾನ’. ಇದು ಗಾಝಾದಲ್ಲಿ ನಡೆಯುತ್ತಿರುವ ಯುದ್ಧವನ್ನು ಸಂಧಾನದ ಮೂಲಕ ಕೊನೆಗೊಳಿಸುವ ಪ್ರಯತ್ನಕ್ಕೆ ಅಡ್ಡಿಯಾಗಲಿದೆ ಎಂದು ಕಾಟ್ಜ್ ವಿರೋಧ ವ್ಯಕ್ತಪಡಿಸಿದ್ದಾರೆ.

ಮೂರು ರಾಷ್ಟ್ರಗಳ ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ‘ಪ್ಯಾಲೆಸ್ಟೀನಿಯನ್ ಲಿಬರೇಶನ್ ಆರ್ಗನೈಸೇಶನ್ (ಪಿಎಲ್‌ಒ) ನ ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಹುಸೇನ್ ಅಲ್-ಶೇಖ್ ” ಸಂಕಟ, ನೋವು, ಉದ್ಯೋಗ, ವರ್ಣಭೇದ ನೀತಿ, ಕೊಲೆ, ದಬ್ಬಾಳಿಕೆ, ನಿಂದನೆ ಮತ್ತು ವಿನಾಶಕ್ಕೆ ಒಳಗಾದ ಪ್ಯಾಲೆಸ್ತೀನ್ ಜನರ ಪ್ರತ್ಯೇಕ ರಾಷ್ಟ್ರ ಹೋರಾಟದ ಸುದೀರ್ಘ ದಶಕಗಳ ನಂತರ ಸತ್ಯ ಮತ್ತು ನ್ಯಾಯದ ವಿಚಾರದಲ್ಲಿ ಜಗತ್ತು ಜಯಗಳಿಸುವ ಐತಿಹಾಸಿಕ ಕ್ಷಣವಾಗಿದೆ ಇದು” ಎಂದಿದ್ದಾರೆ.

ಹಮಾಸ್ ಮೂರು ಯುರೋಪಿಯನ್ ರಾಷ್ಟ್ರಗಳ ನಿರ್ಧಾರವನ್ನು “ಪ್ರಮುಖ ಹೆಜ್ಜೆ” ಎಂದು ಕರೆದಿದೆ.

ಇದನ್ನೂ ಓದಿ : ವಿಧಿ 370 ರದ್ದತಿ ಎತ್ತಿಹಿಡಿದ ಸುಪ್ರೀಂಕೋರ್ಟ್‌ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಿದ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...