Homeಕರ್ನಾಟಕಬಾಳೆಹಣ್ಣು ಅಥವಾ ಚಿಕ್ಕಿ ಅಲ್ಲ; ರಾಜ್ಯದ 80% ಮಕ್ಕಳ ಆಯ್ಕೆ ಮೊಟ್ಟೆ!

ಬಾಳೆಹಣ್ಣು ಅಥವಾ ಚಿಕ್ಕಿ ಅಲ್ಲ; ರಾಜ್ಯದ 80% ಮಕ್ಕಳ ಆಯ್ಕೆ ಮೊಟ್ಟೆ!

ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ ಮಾಹಿತಿ ಬಹಿರಂಗ

- Advertisement -
- Advertisement -

ಶಾಲೆಗಳಲ್ಲಿ ಅಕ್ಷರ ದಾಸೋಹದ ಯೋಜನೆಯ ಭಾಗವಾಗಿ ನೀಡುವ ಮೊಟ್ಟೆ ವಿತರಣೆ ಬಗ್ಗೆ ರಾಜ್ಯದಲ್ಲಿ ತೀವ್ರ ವಿವಾದವೇರ್ಪಟ್ಟಿತ್ತು. ರಾಜಕೀಯ ಮತ್ತು ಧಾರ್ಮಿಕ ಮುಖಂಡರಿಂದ ತೀವ್ರ ವಿವಾದಕ್ಕೊಳಗಾಗಿದ್ದ ವಿಚಾರವನ್ನು ರಾಜ್ಯದ ಮಕ್ಕಳೆ ಸ್ಪಷ್ಟಪಡಿಸಿದ್ದು, ಮಧ್ಯಾಹ್ನದ ಊಟದ ವೇಳೆಯಲ್ಲಿ ತಮಗೆ ಮೊಟ್ಟೆಯೆ ಬೇಕು ಎಂದು ಹೇಳಿದ್ದಾರೆ. 80% ದಷ್ಟು ಶಾಲಾ ಮಕ್ಕಳು ತಮಗೆ ಮೊಟ್ಟೆಯೆ ಬೇಕು ಎಂದು ಹೇಳಿದ್ದು, ಉಳಿದ ಮಕ್ಕಳು ಬಾಳೆಹಣ್ಣುಗಳು ಮತ್ತು ಚಿಕ್ಕಿಗಳನ್ನು ಆಯ್ಕೆ ಮಾಡಿದ್ದಾರೆ.

ಡಿಸೆಂಬರ್ 14 ರ ವೇಳೆಗೆ 1 ರಿಂದ 8 ನೇ ತರಗತಿಯ ಸರ್ಕಾರಿ ಶಾಲೆಗಳ 47.97 ಲಕ್ಷ ವಿದ್ಯಾರ್ಥಿಗಳ ಪೈಕಿ 38.37 ಲಕ್ಷ ವಿದ್ಯಾರ್ಥಿಗಳು ಮೊಟ್ಟೆಗೆ ಆದ್ಯತೆ ನೀಡಿದರೆ, 3.37 ಲಕ್ಷ ಮಕ್ಕಳು ಬಾಳೆಹಣ್ಣು ಮತ್ತು 2.27 ಲಕ್ಷ ಮಕ್ಕಳು ಚಿಕ್ಕಿಗೆ ಆದ್ಯತೆ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ ಮಾಹಿತಿ ಬಹಿರಂಗಪಡಿದೆ. ಈ ಅವಧಿಯಲ್ಲಿ ಉಳಿದ ಮಕ್ಕಳು ಗೈರುಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022ರ ಜುಲೈ ವೇಳೆಗೆ ಮಕ್ಕಳ ಆಹಾರದ ಭಾಗವಾಗಿ ಮೊಟ್ಟೆಗಳನ್ನು ಸೇರಿಸಿದ ನಂತರ ಒಳ್ಳೆಯ ಫಲಿತಾಂಶಗಳನ್ನು ಕಂಡು ಬಂದಿದೆ ಎಂದು ಪ್ರಾಯೋಗಿಕ ಅಧ್ಯಯನಗಳು ತಿಳಿಸಿದೆ. ಇದರ ನಂತರ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು 1 ರಿಂದ 8 ನೇ ತರಗತಿಯ ಮಕ್ಕಳು ಬಿಸಿಯೂಟದ ಜೊತೆಗೆ ಪೂರಕ ಪೋಷಣೆ ಕಾರ್ಯಕ್ರಮದ ಅಡಿಯಲ್ಲಿ ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿಗಳಲ್ಲಿ ಒಂದನ್ನು ಆಯ್ಕೆ ಮಾಡಬಹುದು ಎಂದು ಘೋಷಿಸಿತು.

ಈ ಪೂರಕ ಪೌಷ್ಟಿಕಾಂಶ ಆಹಾರವನ್ನು ಪ್ರಸ್ತುತ ಶೈಕ್ಷಣಿಕ ವರ್ಷ 2022- 23ರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವರ್ಷಕ್ಕೆ 46 ದಿನಗಳವರೆಗೆ ಒದಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ..

ರಾಜ್ಯಾದ್ಯಂತ ಮೊಟ್ಟೆ ಆಯ್ಕೆ ಮಾಡಿದ 38.37 ಲಕ್ಷ ವಿದ್ಯಾರ್ಥಿಗಳ ಪೈಕಿ ಹೆಚ್ಚಿನವರು (15.67 ಲಕ್ಷ) ವಿದ್ಯಾರ್ಥಿಗಳು ಬೆಳಗಾವಿ ವಿಭಾಗದವರಾಗಿದ್ದಾರೆ. ನಂತರದ ಸ್ಥಾನದಲ್ಲಿ ಬೆಂಗಳೂರು ವಿಭಾಗ (8.65 ಲಕ್ಷ), ಕಲಬುರ್ಗಿ ವಿಭಾಗ (8.33 ಲಕ್ಷ), ಮೈಸೂರು ವಿಭಾಗ (5.70 ಲಕ್ಷ) ಇದೆ.

ಸಂಡೇ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಅಪೌಷ್ಟಿಕತೆಯು ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂದು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ಜಿಲ್ಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ವಿಸ್ತರಿಸಿದ್ದೇವೆ. ಆಹಾರವು ಚರ್ಚಾಸ್ಪದ ವಿಷಯವಾಗಿದೆ ಮತ್ತು ಪ್ರತಿಯೊಬ್ಬರೂ ಅದರ ಬಗ್ಗೆ ತಮ್ಮದೇ ಆದ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಆದಾಗ್ಯೂ, ಪ್ರಾಯೋಗಿಕ ಅನುಷ್ಠಾನದ ನಂತರ ಕಲ್ಯಾಣ-ಕರ್ನಾಟಕ ಪ್ರದೇಶದಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದ ನಂತರ, ಇತರ ಜಿಲ್ಲೆಗಳಲ್ಲಿಯೂ ಅಪೌಷ್ಟಿಕತೆಯ ವಿರುದ್ಧ ಹೋರಾಡಲು ಬಿಸಿಯೂಟದಲ್ಲಿ ಮೊಟ್ಟೆಗಳನ್ನು ಸೇರಿಸಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್ 2021 ಮತ್ತು ಮಾರ್ಚ್ 2022 ರ ನಡುವೆ, ರಾಜ್ಯ ಸರ್ಕಾರವು ಬೀದರ್, ಕಲ್ಬುರ್ಗಿ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಒಳಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ-ಕರ್ನಾಟಕ ಪ್ರದೇಶದಲ್ಲಿ ಮಧ್ಯಾಹ್ನದ ಊಟ ಯೋಜನೆಯಡಿ ಮೊಟ್ಟೆಗಳನ್ನು ನೀಡಿ ಪ್ರಾಯೋಗಿಕ ಅಧ್ಯಯನವನ್ನು ನಡೆಸಿತು.

ಇದನ್ನೂ ಓದಿ: ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...