Homeಕರ್ನಾಟಕಬಾಳೆಹಣ್ಣು ಅಥವಾ ಚಿಕ್ಕಿ ಅಲ್ಲ; ರಾಜ್ಯದ 80% ಮಕ್ಕಳ ಆಯ್ಕೆ ಮೊಟ್ಟೆ!

ಬಾಳೆಹಣ್ಣು ಅಥವಾ ಚಿಕ್ಕಿ ಅಲ್ಲ; ರಾಜ್ಯದ 80% ಮಕ್ಕಳ ಆಯ್ಕೆ ಮೊಟ್ಟೆ!

ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ ಮಾಹಿತಿ ಬಹಿರಂಗ

- Advertisement -
- Advertisement -

ಶಾಲೆಗಳಲ್ಲಿ ಅಕ್ಷರ ದಾಸೋಹದ ಯೋಜನೆಯ ಭಾಗವಾಗಿ ನೀಡುವ ಮೊಟ್ಟೆ ವಿತರಣೆ ಬಗ್ಗೆ ರಾಜ್ಯದಲ್ಲಿ ತೀವ್ರ ವಿವಾದವೇರ್ಪಟ್ಟಿತ್ತು. ರಾಜಕೀಯ ಮತ್ತು ಧಾರ್ಮಿಕ ಮುಖಂಡರಿಂದ ತೀವ್ರ ವಿವಾದಕ್ಕೊಳಗಾಗಿದ್ದ ವಿಚಾರವನ್ನು ರಾಜ್ಯದ ಮಕ್ಕಳೆ ಸ್ಪಷ್ಟಪಡಿಸಿದ್ದು, ಮಧ್ಯಾಹ್ನದ ಊಟದ ವೇಳೆಯಲ್ಲಿ ತಮಗೆ ಮೊಟ್ಟೆಯೆ ಬೇಕು ಎಂದು ಹೇಳಿದ್ದಾರೆ. 80% ದಷ್ಟು ಶಾಲಾ ಮಕ್ಕಳು ತಮಗೆ ಮೊಟ್ಟೆಯೆ ಬೇಕು ಎಂದು ಹೇಳಿದ್ದು, ಉಳಿದ ಮಕ್ಕಳು ಬಾಳೆಹಣ್ಣುಗಳು ಮತ್ತು ಚಿಕ್ಕಿಗಳನ್ನು ಆಯ್ಕೆ ಮಾಡಿದ್ದಾರೆ.

ಡಿಸೆಂಬರ್ 14 ರ ವೇಳೆಗೆ 1 ರಿಂದ 8 ನೇ ತರಗತಿಯ ಸರ್ಕಾರಿ ಶಾಲೆಗಳ 47.97 ಲಕ್ಷ ವಿದ್ಯಾರ್ಥಿಗಳ ಪೈಕಿ 38.37 ಲಕ್ಷ ವಿದ್ಯಾರ್ಥಿಗಳು ಮೊಟ್ಟೆಗೆ ಆದ್ಯತೆ ನೀಡಿದರೆ, 3.37 ಲಕ್ಷ ಮಕ್ಕಳು ಬಾಳೆಹಣ್ಣು ಮತ್ತು 2.27 ಲಕ್ಷ ಮಕ್ಕಳು ಚಿಕ್ಕಿಗೆ ಆದ್ಯತೆ ನೀಡಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ ಮಾಹಿತಿ ಬಹಿರಂಗಪಡಿದೆ. ಈ ಅವಧಿಯಲ್ಲಿ ಉಳಿದ ಮಕ್ಕಳು ಗೈರುಹಾಜರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2022ರ ಜುಲೈ ವೇಳೆಗೆ ಮಕ್ಕಳ ಆಹಾರದ ಭಾಗವಾಗಿ ಮೊಟ್ಟೆಗಳನ್ನು ಸೇರಿಸಿದ ನಂತರ ಒಳ್ಳೆಯ ಫಲಿತಾಂಶಗಳನ್ನು ಕಂಡು ಬಂದಿದೆ ಎಂದು ಪ್ರಾಯೋಗಿಕ ಅಧ್ಯಯನಗಳು ತಿಳಿಸಿದೆ. ಇದರ ನಂತರ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು 1 ರಿಂದ 8 ನೇ ತರಗತಿಯ ಮಕ್ಕಳು ಬಿಸಿಯೂಟದ ಜೊತೆಗೆ ಪೂರಕ ಪೋಷಣೆ ಕಾರ್ಯಕ್ರಮದ ಅಡಿಯಲ್ಲಿ ಮೊಟ್ಟೆ, ಬಾಳೆಹಣ್ಣು ಮತ್ತು ಚಿಕ್ಕಿಗಳಲ್ಲಿ ಒಂದನ್ನು ಆಯ್ಕೆ ಮಾಡಬಹುದು ಎಂದು ಘೋಷಿಸಿತು.

ಈ ಪೂರಕ ಪೌಷ್ಟಿಕಾಂಶ ಆಹಾರವನ್ನು ಪ್ರಸ್ತುತ ಶೈಕ್ಷಣಿಕ ವರ್ಷ 2022- 23ರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವರ್ಷಕ್ಕೆ 46 ದಿನಗಳವರೆಗೆ ಒದಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ..

ರಾಜ್ಯಾದ್ಯಂತ ಮೊಟ್ಟೆ ಆಯ್ಕೆ ಮಾಡಿದ 38.37 ಲಕ್ಷ ವಿದ್ಯಾರ್ಥಿಗಳ ಪೈಕಿ ಹೆಚ್ಚಿನವರು (15.67 ಲಕ್ಷ) ವಿದ್ಯಾರ್ಥಿಗಳು ಬೆಳಗಾವಿ ವಿಭಾಗದವರಾಗಿದ್ದಾರೆ. ನಂತರದ ಸ್ಥಾನದಲ್ಲಿ ಬೆಂಗಳೂರು ವಿಭಾಗ (8.65 ಲಕ್ಷ), ಕಲಬುರ್ಗಿ ವಿಭಾಗ (8.33 ಲಕ್ಷ), ಮೈಸೂರು ವಿಭಾಗ (5.70 ಲಕ್ಷ) ಇದೆ.

ಸಂಡೇ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, “ಅಪೌಷ್ಟಿಕತೆಯು ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂದು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ಜಿಲ್ಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ವಿಸ್ತರಿಸಿದ್ದೇವೆ. ಆಹಾರವು ಚರ್ಚಾಸ್ಪದ ವಿಷಯವಾಗಿದೆ ಮತ್ತು ಪ್ರತಿಯೊಬ್ಬರೂ ಅದರ ಬಗ್ಗೆ ತಮ್ಮದೇ ಆದ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಆದಾಗ್ಯೂ, ಪ್ರಾಯೋಗಿಕ ಅನುಷ್ಠಾನದ ನಂತರ ಕಲ್ಯಾಣ-ಕರ್ನಾಟಕ ಪ್ರದೇಶದಿಂದ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಪಡೆದ ನಂತರ, ಇತರ ಜಿಲ್ಲೆಗಳಲ್ಲಿಯೂ ಅಪೌಷ್ಟಿಕತೆಯ ವಿರುದ್ಧ ಹೋರಾಡಲು ಬಿಸಿಯೂಟದಲ್ಲಿ ಮೊಟ್ಟೆಗಳನ್ನು ಸೇರಿಸಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್ 2021 ಮತ್ತು ಮಾರ್ಚ್ 2022 ರ ನಡುವೆ, ರಾಜ್ಯ ಸರ್ಕಾರವು ಬೀದರ್, ಕಲ್ಬುರ್ಗಿ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಒಳಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ-ಕರ್ನಾಟಕ ಪ್ರದೇಶದಲ್ಲಿ ಮಧ್ಯಾಹ್ನದ ಊಟ ಯೋಜನೆಯಡಿ ಮೊಟ್ಟೆಗಳನ್ನು ನೀಡಿ ಪ್ರಾಯೋಗಿಕ ಅಧ್ಯಯನವನ್ನು ನಡೆಸಿತು.

ಇದನ್ನೂ ಓದಿ: ಸರ್ಕಾರ v/s ರಾಜ್ಯಪಾಲ | ಚೆನ್ನೈ ಗಣರಾಜ್ಯೋತ್ಸವ ಪರೇಡ್‌ ಮುಂಚೂಣಿಯಲ್ಲಿ ‘ತಮಿಳುನಾಡು ಚಿರಾಯುವಾಗಲಿ’ ಟ್ಯಾಬ್ಲೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...